ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.30: ಸ್ನೇಹಿತರೊಂದಿಗೆ ಕಳೆದ ಭಾನುವಾರ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದ ಸಂದರ್ಭ ಕಾಲುಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದ ಭದ್ರಾವತಿಯ ಯುವಕ ಶರತ್ ಕುಮಾರನ [23] ಮೃತದೇಹ ಜಲಪಾತದ ಸುಮಾರು 100 ರಿಂದ 70ಮೀ ದೂರದಲ್ಲಿ ಪತ್ತೆಯಾಗಿದೆ. ಶರತ್ ಹಾಗೂ ಸ್ನೇಹಿತ ಗುರುರಾಜ ಜೊತೆಗೂಡಿ ಜು.23ರ ಭಾನುವಾರದಂದು ಭದ್ರಾವತಿಯಿಂದ ಕೊಲ್ಲೂರು ಗ್ರಾಮದ ಅರಶಿನಗುಂಡಿ ಜಲಪಾತ ನೋಡಲು ತೆರಳಿದ್ದರು. ಮಧ್ಯಾಹ್ನ 3-30ರ ಹೊತ್ತಿಗೆ ಜಲಪಾತ ಬಳಿ ವೀಡೀಯೋ ಮಾಡಲು ಹೇಳಿ ಬಂಡೆಯ ಮೇಲೆ ನಿಂತಿದ್ದ ಶರತ್, ಕಾಲು ಜಾರಿ ಸೌಪರ್ಣಿಕ ನದಿಗೆ ಬಿದ್ದಿದ್ದು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದನು. ಈ ಘಟನೆ ಸ್ನೇಹಿತನ ಮೊಬೈಲಿನಲ್ಲಿಯೂ ಸೆರೆಯಾಗಿತ್ತು. ಘಟನೆಯ ಮಾಹಿತಿ ದೊರೆತ ಬಳಿಕ, ಪ್ರಕರಣ ದಾಖಲಿಸಿಕೊಂಡು ಕಳೆದೊಂದು ವಾರದಿಂದ ಕೊಲ್ಲೂರು ಠಾಣೆಯ ಪೊಲೀಸ್ ತಂಡ, ಅರಣ್ಯ ಇಲಾಖೆ ಸಿಬ್ಬಂದಿಗಳು, ಉಡುಪಿಯ ಎಸ್ಡಿಆರ್ಎಫ್ ತಂಡ, ಕುಂದಾಪುರ ಹಾಗೂ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಇವರಿಗೆ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಸದಸ್ಯರು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೊಬೈಲ್ ಟೆಲಿಗ್ರಾಮ್ ಆ್ಯಪ್ ಮೂಲಕ ಆನ್ಲೈನ್ ಬುಕ್ಕಿಂಗ್ ಬ್ಯುಸಿನೆಸ್ ಹೆಸರಿನಲ್ಲಿ ವಂಚನೆ ಎಸಗಿದ ಪ್ರಕರಣವೊಂದು ಕೋಟ ವ್ಯಾಪ್ತಿಯಲ್ಲಿ ನಡೆದಿದೆ. ಶ್ರುತಿ ರಾಘವೇಂದ್ರ ಎಂಬ ಟೆಲಿಗ್ರಾಂ ಖಾತೆಯಿಂದ ಮೇಕ್ ಮೈ ಟ್ರಿಪ್ ಸಂದೇಶದಡಿ ಆನ್ಲೈನ್ ಬುಕ್ಕಿಂಗ್ ಬ್ಯುಸಿನೆಸ್ ಎಂದು ನಂಬಿ ಸೇರಿದ್ದ ಕಾರ್ಕಡ ನಿವಾಸಿ ಎಂ.ಎನ್.ರಾಜು (44) ಒಟ್ಟು 23 ಲಕ್ಷ ರೂ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೇಕ್ ಮೈ ಟ್ರಿಪ್ ಪ್ರೊಫೈಲ್ ಪೇಜ್ ಮೂಲಕ ಕಸ್ಟಮರ್ ಆನ್ ಲೈನ್ ಆಓರ್ಡರ್ ಮಾಡಿದ್ದನ್ನು ಬುಕ್ಕಿಂಗ್ ಮಾಡಿ ಅದರ ಮೊತ್ತವನ್ನು ಪಾವತಿಸಿದರೆ ಒಟ್ಟು ಹಣ ಹಾಗೂ ಕಮಿಷನ್ ಸಂದಾಯವಾಗುವ ವ್ಯವಹಾರ ಎಂದು ನಂಬಿಸಲಾಗಿದೆ. ಹಂತ ಹಂತವಾಗಿ ಅದಕ್ಕಾಗಿ ಹಣ ಪಾವತಿಸಿದ್ದು, 30ನೇ ಟಾಸ್ಕ್ ಪೂರ್ಣಗೊಂಡ ಬಳಿಕ ಹಣ ಹಿಂದಿರುಗಿಸುವಂತೆ ಸಂಬಂಧಿತರಿಗೆ ಸಂದೇಶ ಕಳಹಿಸಿದಾಗ, ಅವರು ಸರಕಾರದ ನಿಯಮಾನುಸಾರ ಈಗಾಗಲೆ ಪಾವತಿಸಿದ ಹಣದ ಅರ್ಧದಷ್ಟು 16,05,231 ರೂ. ಮೊತ್ತ ಪಾವತಿ ಮಾಡಬೇಕು. ಇಲ್ಲದಿದ್ದಲ್ಲಿ ಹೂಡಿಕೆ ಮಾಡಿದ ಹಣ ಲ್ಯಾಪ್ಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಯೋಧ ಟಿ.ದಿನಕರ ಶೆಣೈ ಅವರು ಕಾರ್ಗಿಲ್ ಕದನದ ಬಗ್ಗೆ ಹಾಗೂ ಕಾರ್ಗಿಲ್ ಪರಿಸ್ಥಿತಿ ಬಗ್ಗೆ ಮಾತನಾಡಿದರು. ಇದೇ ಸಂದರ್ಭ ನಿವೃತ್ತ ಯೋಧರಾದ ರತ್ನಾಕರ ಬೈಂದೂರು ಮತ್ತು ಟಿ.ದಿನಕರ ಶೆಣೈ ಅವರನ್ನು ಗೌರವಿಸಲಾಯಿತು. ಕಾರ್ಗಿಲ್ನಲ್ಲಿ ಹುತಾತ್ಮರಾದ ಯೋಧರಿಗಾಗಿ ದೀಪ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ಗಂಗೊಳ್ಳಿ ರೋಟರ್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಕ್ಷಮಾ, ರೋಟರಿ ಮತ್ತು ರೋಟರ್ಯಾಕ್ಟ್ ಸದಸ್ಯರು ಉಪಸ್ಥಿತರಿದ್ದರು. ಎಂ. ನಾಗೇಂದ್ರ ಪೈ ಸ್ವಾಗತಿಸಿದರು. ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕಾರ್ಯದರ್ಶಿ ಕೃಷ್ಣ ಪೂಜಾರಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಾವುದೇ ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕ ಅಧಿವೇಶನವೆಂದರೆ ಅದು ಬಜೆಟ್ ಅಧಿವೇಶನ. ಆದರೆ ಈ ಭಾರಿಯ ಬಜೆಟ್ ಅಧಿವೇಶನದಲ್ಲಿ ಉಡುಪಿ ಜಿಲ್ಲೆಯ ಶಾಸಕರುಗಳ ಸಾಧನೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ವಿರೋಧ ಪಕ್ಷದ ಶಾಸಕರಾದರೂ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರದ ಹಾಗೂ ಜಿಲ್ಲೆಯ ಅತೀ ಅವಶ್ಯಕತೆಗಳ ಬಗ್ಗೆ ಗಮನಕ್ಕೆ ತಂದು ಅದನ್ನು ಮುಖ್ಯಮಂತ್ರಿಗಳ ಬಜೆಟ್ ಮೇಲಿನ ವಂದನಾ ಭಾಷಣದಲ್ಲಿ ಸೇರಿಸುವಲ್ಲಿ ಶ್ರಮವಹಿಸುವುದು ಹಿಂದಿನಿಂದ ನಡೆದು ಬಂದ ಕ್ರಮ. ಆದರೆ ಜಿಲ್ಲೆಯ ಶಾಸಕರು ಬಜೆಟ್ ಅಧಿವೇಶನವನ್ನು ಕೇವಲ ಪ್ರಚಾರ ಹಾಗೂ ರಾಜಕಾರಣಕ್ಕೆ ಬಳಸಿಕೊಂಡದ್ದು ಅವರ ಕ್ಷೇತ್ರ ಹಾಗೂ ಜಿಲ್ಲೆಗೆ ಮಾಡಿದ ಅನ್ಯಾಯ. ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಸಕ್ರಿಯ ಭಾಗವಹಿಸುವುದರ ಮೂಲಕ ಸದನದ ನೀತಿ, ನಿಯಮಗಳನ್ನು ಕಲಿಯ ಬೇಕಾದ ನೂತನ ಶಾಸಕರುಗಳು ಅದನ್ನು ಮಾಡದೆ ಕಾಗದ ಪತ್ರಗಳನ್ನು ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ಪೀಠದ ಮೇಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ (Freshers day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ.ಡಾ|ಆದರ್ಶ ಹೆಬ್ಬಾರ್ ಅವರು ಮಾತನಾಡಿ ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಬ್ರಹ್ಮಣ್ಯರವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಛೇರಿಯಿಂದ ಮೂಲಕ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿ ತನಕ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಯಿತು. ಇದೇ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಪ್ರಕರಣದಲ್ಲಿ ಪಿಎಫ್ಐ ನಂಟು ಇದೆ. ಪಿಎಫ್ಐ ನಿಷೇಧದ ನಂತರ ಪಿಎಫ್ಐ ಮಹಿಳಾ ಘಟಕ ಸಕ್ರಿಯವಾಗಿರುವ ಬಗ್ಗೆ ಅನುಮಾನವಿದೆ. ಈ ವಿದ್ಯಾರ್ಥಿನಿಯರು ಈ ಕಾರ್ಯಾಚರಣೆಯ ಭಾಗವಾಗಿರಬಹುದು. ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯ ಮೇಲೆ ನನಗೆ ವಿಶ್ವಾಸವಿಲ್ಲ. ಪ್ರಕರಣವನ್ನು ಕೇಂದ್ರ ಸರ್ಕಾರಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸಂಸ್ಕಾರ, ಸಂಸ್ಕೃತಿ ಪಸರಿಸುವ ವಿಶಿಷ್ಟ ಕಲೆ ಯಕ್ಷಗಾನ, ಸರಿ ತಪ್ಪುಗಳ ತರ್ಕಿಸುವ ಶಕ್ತಿ, ಪದಭಂಡಾರ ನಮಗೆ ಶಾಲಾ ಪಠ್ಯದಿಂದ ದೊರೆತದ್ದಲ್ಲ. ಅದೆಲ್ಲವೂ ಯಕ್ಷಗಾನದಿಂದಲೇ ಪಡೆದದ್ದು ಎಂದು ಹಿರಿಯ ಅರ್ಥವಾದಿ ಜಬ್ಬಾರ್ ಸಮೋ ಹೇಳಿದರು. ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪೂರ್ಣರಾತ್ರಿ ತಾಳಮದ್ದಳೆ ಕಾರ್ಯಕ್ರಮದಲ್ಲಿ ಯಕ್ಷ ಸಂಕ್ರಾಂತಿ ವತಿಯಿಂದ ‘ಗುರು ಸಮ್ಮಾನ ಸ್ವೀಕರಿಸಿ ಅವರು ಮಾತಾನಾಡಿದರು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುಗಾಜ ಗಂಟಿಹೊಳೆ ಅವರನ್ನು ಸನ್ಮಾನಿಸಲಾಯಿತು. ರಂಗಕರ್ಮಿ ಸೇತುರಾಂ ಎಸ್ಎನ್, ಜಬ್ಬಾರ್ ಸಮೋ, ಟಿ. ಶಿವಾನಂದ ಶೆಟ್ಟಿ, ದೀಪಕ್ ಶೆಟ್ಟಿ ಬಾರ್ಕೂರು, ಗೋವಿಂದ ಬಾಬು ಪೂಜಾರಿ, ರಘುರಾಮ ಶೆಟ್ಟಿ ಎಳ್ಮುಡಿ, ಪ್ರವೀಣ್ ಕುಮಾರ್ ಶೆಟ್ಟಿ, ಅಶ್ವಥ್ ಹೆಗ್ಡೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ‘ಕೃಷ್ಣ ಸಂಧಾನ’ ಹಾಗೂ ಕರ್ಣಾರ್ಜುನ ಎಂಬ ಅಖ್ಯಾನಗಳ ಯಕ್ಷಗಾನ ತಾಳಮದ್ದಳೆ ಜರುಗಿತು. ತಾಳಮದ್ದಳೆಗಾಗಿ ಬೆಂಗಳೂರಿನಲ್ಲಿ ಸಭಾಂಗಣ ತುಂಬಿದ್ದು ವಿಶೇಷವಾಗಿತ್ತು. ಸಂಘಟಕ ನಾಗರಾಜ್ ಶೆಟ್ಟಿ ನೈಕಂಬ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ ನಂದ್ರೊಳ್ಳಿ ವಂದಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಾಲೇಜಿನಲ್ಲಿ ಖಾಸಗಿ ವೀಡಿಯೋ ಸೆರೆಯಾಗಿರುವ ಪ್ರಕರಣಕ್ಕೆ ಸಂಭಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಉಡುಪಿಯ ಖಾಸಗಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದು, ಈಗಲೇ ಏನನ್ನು ಹೇಳಲು ಸಾಧ್ಯವಿಲ್ಲ ಅಥವಾ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ವದಂತಿಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದರು. ಮಾಧ್ಯಮದವರಿಗೂ ಚಾಟಿ ಬೀಸಿದ ಖುಷ್ಬೂಅವರು, ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಇನ್ನು ನಮಗೆ ನಮ್ಮ ಕೆಲಸ ಮಾಡಲು ಬಿಡಿ. ಎನ್ ಸಿಡಬ್ಲ್ಯೂ ಪರವಾಗಿ ನಾನು ಬಂದಿದ್ದೇನೆ. ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಎಲ್ಲವನ್ನೂಮೊದಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ನಾಲ್ಕೈದು ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಅಪಾರ ಹಾನಿಯೂ ಸಂಭವಿಸುತ್ತಿದೆ. ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಗಾಳಿ ಮಳೆಗೆ ನೆಲಸಮವಾಗಿದೆ. ಗುರುವಾರ ಬೆಳಿಗ್ಗೆ ಸುರಿದ ಭಾರಿ ಗಾಳಿ ಮಳೆಗೆ ತಾರಾಪತಿ ಶಾಲೆಯ ಉತ್ತರ ದಿಕ್ಕಿನ ಕಟ್ಟಡದ ಹೆಂಚಿನ ಮೇಲ್ಛಾವಣಿ ನೆಲಸಮವಾಗಿದೆ. ಗೋಡೆಗಳು ಶಿಥಿಲಗೊಂಡಿದೆ. ಶಾಲೆಗೆ ರಜೆ ಇದ್ದುದರಿಂದ ಯಾವುದೇ ಅವಘಡ ಸಂಭವಿಸಿಲ್ಲ. ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಇಲಾಖೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಜಖಂಗೊಂಡ ಕಟ್ಟಡದಲ್ಲಿ ಒಟ್ಟು ಮೂರು ಕೊಠಡಿಗಳಿದ್ದು, ಅದರಲ್ಲಿ ಎರಡು ಕೊಠಡಿಗಳು ಉದುರಿಬಿದ್ದಿವೆ. ಶಾಲೆಯಲ್ಲಿ 120 ವಿದ್ಯಾರ್ಥಿಗಳು ಅಲ್ಲದೇ ಎಲ್ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳು ಇಲ್ಲಿಯೇ ವ್ಯಾಸಂಗ ಮಾಡುತ್ತಿರುವುದರಿಂದ, ಶಾಲೆಗೆ ತುರ್ತು ಕೊಠಡಿಯ ಅವಶ್ಯಕತೆ ಎದುರಾಗಿದೆ. ಜಿಲ್ಲಾಡಳಿತ ಹಾಗೂ ಬೈಂದೂರು ಶಾಸಕರು ಈ ಬಗ್ಗೆ ಗಮನ ಹರಿಸಿ ನೂತನ ಕಟ್ಟಡ ಒದಗಿಸಿಕೊಡುವಂತೆ ಶಾಲಾ ಎಸ್ಡಿಎಂಸಿ ಮನವಿ ಮಾಡಿಕೊಂಡಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ನಿವಾಸಿ, ಪ್ರಸ್ತುತ ಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿರುವ ನಮೀತಾ ವಿಯೊನ್ನಾ ಪಾಯಸ್ ಅವರ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನಿಸಿದೆ. ಅವರ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ವಿಷಯದಲ್ಲಿ ಪಿಎಚ್ಡಿ ಅಧ್ಯಯನ ನಡೆಸಿದ್ದರು. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ ಅವರು ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿದ್ದಾರೆ. ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜ್ ಹಾಗೂ ಪೂನಾದ ಸಾವಿತ್ರಿ ಬಾಯಿ ಪುಲೆ ವಿಶ್ವವಿದ್ಯಾಲಯದ ಪ್ರಾಕ್ತನ ವಿದ್ಯಾರ್ಥಿನಿಯಾಗಿರುವ ನಮೀತಾ, ಕುಂದಾಪುರದ ಪತ್ರಕರ್ತ, ಉದ್ಯಮಿ ವಿನಯ್ ಎ. ಪಾಯಸ್ ಹಾಗೂ ಜಸಿಂತಾ ವಿ. ಪಾಯಸ್ ಅವರ ಪುತ್ರಿಯಾಗಿದ್ದಾರೆ.
