Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಬುಧವಾರ ನಡೆದ ಉಡುಪಿ ಜಿಲ್ಲಾ  ಮಟ್ಟದ ಕ್ರೀಡಾಕೂಟ – 2025ರ ಗುಂಡು ಎಸೆತ ಸ್ಪರ್ಧೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ  ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಗಳಿಸಿದ್ದಾನೆ. ಈ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಯು ಕಾಳವಾರ ಭಾಸ್ಕರ ರಾಮ ಗಾಣಿಗ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ಪ್ರೌಢ ಶಾಲೆ ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ಅವರು ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮರವಂತೆಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ರಾಜು ಮೊಗವೀರ (46) ಎಂದು ಗುರುತಿಸಲಾಗಿದೆ. ಮರವಂತೆ ಗ್ರಾಮದ ನಿರೋಣಿ ಐಸ್‌ ಪ್ಲಾಂಟ್‌ ಎದುರು ತನ್ನ ಹೆಂಡತಿಗಾಗಿ ಕಾಯುತ್ತಿರುವಾಗ ಸಂಜೆ ಹೊತ್ತಿಗೆ ಕುಂದಾಪುರ ಬೈಂದೂರು ಕಡೆಗೆ ತಮ್ಮ ಮನೆಗೆ ನಡೆದುಕೊಂಡು ಹೋಗಲು ರಸ್ತೆಯ ಅಂಚಿನಲ್ಲಿ ಬರುತ್ತಿರುವಾಗ ಅವರ ಎದುರುಗಡೆ ಮೋಟಾರ್‌ ಸೈಕಲ್‌ ಸವಾರ ಅಕ್ಷಯ್‌ ಅತಿವೇಗ ಹಾಗೂ ಅಜಾಗುರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಜು ಮೊಗವೀರರವರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಮುಖಕ್ಕೆ ರಕ್ತಗಾಯವಾಗಿದ್ದು, ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಇಲ್ಲಿನ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು. ಅದ್ದೂರಿಯ ಪುರ ಮೆರವಣಿಗೆ:ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ.ಮೀ ಅಂತರದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನವರೆಗೆ ಪುರಮೆರವಣಿಗೆಯನ್ನು ನಡೆಸಲಾಯಿತು. ಯಕ್ಷಗಾನ, ಹುಲಿವೇಷ, ಟ್ಯಾಬ್ಲೋ ಗಳು, ಕಳಶಧಾರಿಗಳು, ಚಂಡೆ ಮತ್ತು ವಿವಿಧವಾದ್ಯವೃಂದಗಳು ಜನಮನ ಸೂರೆಗೊಂಡವು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶೇಖರ ಖಾರ್ವಿ ಧ್ವಜರೋಹಣಗೈದರು. ಇದೇ ಸಂದರ್ಭದಲ್ಲಿ ಬೈಂದೂರು, ಕಾರ್ಕಳ, ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ತಾಲ್ಲೂಕಿನ ಕ್ರೀಡಾಪಟುಗಳ ಪಥ ಸಂಚಲನ ಆಕರ್ಷಕವಾಗಿದ್ದು, ಉದ್ಯಮಿಗಳಾದ ಸುರೇಶ ಕಾಂಚನ್ ಕ್ರೀಡಾಪಟುಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಡ್ಯ ಜಿಲ್ಲೆಯ ಶ್ರಿ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ಅವರ ಪುತ್ರಿ. ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ (SGFI) ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಆದಿಚುಂಚನಗಿರಿಯಲ್ಲಿ ಇತ್ತೀಚೆಗೆ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಕೊಡಲ್ಪಡುವ 2025-26ನೇ ಸಾಲಿನ ಸಂಗೀತ ಕ್ಷೇತ್ರದಲ್ಲಿನ ಅಸಾಧಾರಣ ಸಾಧನೆಗಾಗಿ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಮ್ ಜಿ. ಎನ್. ಪೂಜಾರಿಗೆ ನೀಡಿ ಗೌರವಿಸಲಾಯಿತು. ಅವರು ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಅವರ ಪುತ್ರ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಿಂದ ಕುಂದಾಪುರಕ್ಕೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಪ್ರಯಾಣಿಕೆ 15 ಲಕ್ಷ ರೂ.ಗಳ ಬೆಳ್ಳಿ ಗಟ್ಟಿ ಹಾಗೂ 3 ಲಕ್ಷ ರೂ. ನಗದು ಕಳವಾದ ಬಗ್ಗೆ ವರದಿಯಾಗಿದೆ. ಹಂಗಳೂರು ಸಂಜಯಗಾಂಧಿ ರಸ್ತೆ ನಿವಾಸಿ ಎನ್. ಕೃಷ್ಣಮೂರ್ತಿ ಶೇಟ್ ಅವರು ಹಾಗೂ ಪತ್ನಿ ಬೆಂಗಳೂರಿನ ಜ್ಯುವೆಲರಿಯಲ್ಲಿ ತಲಾ 10 ಕೆಜಿಯ ಎರಡು ಬೆಳ್ಳಿಯ ಗಟ್ಟಿ ಖರೀದಿಸಿ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ವೊಲ್ಲೊ ಬಸ್‌ನಲ್ಲಿ ಕುಂದಾಪುರಕ್ಕೆ ಹೊರಟಿದ್ದರು. 10 ಕೆಜಿ ಬೆಳ್ಳಿಯ ಗಟ್ಟಿಯ ಒಂದು ಪ್ಯಾಕೆಟನ್ನು ಕಾಲಿನ ಬಳಿ, ಇನ್ನೊಂದು 10 ಕೆಜಿ ಬೆಳ್ಳಿಯ ಗಟ್ಟಿಯ ಪ್ಯಾಕೆಟ್ ಹಾಗೂ 3 ಲಕ್ಷ ರೂ. ನಗದನ್ನು ಬ್ಯಾಗ್ನಲ್ಲಿ ಹಾಕಿ ಕೋಟ್ನ ಮೇಲ್ಬಾಗದ ಲಗೇಜ್ ಕಂಪಾರ್ಟ್ ಮೆಂಟ್ನಲ್ಲಿ ಇಟ್ಟಿದ್ದರು. ಬೆಳಗ್ಗೆ ಲಗೇಜ್ ಬ್ಯಾಗನ್ನು ನೋಡಿದಾಗ ಜಿಪ್ ತೆರೆದಿದ್ದು 10 ಕೆಜಿ ಬೆಳ್ಳಿಯ ಗಟ್ಟಿ ಹಾಗೂ 3 ಲಕ್ಷ ನಗದು ಹಣ ಕಳವಾಗಿತ್ತು. 10 ಕೆಜಿ ಬೆಳ್ಳಿಯ ಗಟ್ಟಿ ಅಂದಾಜು ಮೌಲ್ಯ 15,39,655…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೊಡೇರಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿನ ಬಂದರಿಗೆ ಮೂಲಸೌಕರ್ಯ ಕಲ್ಪಿಸುವಂತೆ ವಿಜಯ ಕರ್ನಾಟಕ ನ.2ರಂದು ವಿಶೇಷ ವರದಿ ಪ್ರಕಟಿಸಿತ್ತು. ಕರಾವಳಿಯ ಮೂರು ಜಿಲ್ಲೆಯ ವ್ಯಾಪ್ತಿಯ ಅತಿ ಹೆಚ್ಚು ನಾಡದೋಣಿಗಳನ್ನು ಹೊಂದಿರುವ ಈ ಬಂದರು ಮೂಲ ಸೌಕರ್ಯದ ಕೊರತೆಯಿಂದಾಗಿ ಮೀನುಗಾರರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಮೀನುಗಾರ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಚರ್ಚಿಸಿ, ಕೊಡೇರಿ ಮತ್ತು ಉಪ್ಪುಂದ ಭಾಗದ ಮೀನುಗಾರರು ಸಂಘಟಿತರಾಗಿ ಸಮನ್ವಯ ಸಾಧಿಸಿಕೊಂಡಾಗ ಬಂದರು ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಎರಡು ಭಾಗದ ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಉಪ್ಪುಂದ ರಾಣಿ ಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ ಮಾತನಾಡಿ, ಬಂದರಿನ ಅಭಿವೃದ್ಧಿಗೆ ಈಗಾಗಲೇ 70 ಕೋಟಿ ರೂ. ಗೂ ಹೆಚ್ಚು ವೆಚ್ಚ ಮಾಡಲಾಗಿದ್ದರೂ ಮೀನುಗಾರಿಕೆಗೆ ಅನುಕೂಲವಾಗಿಲ್ಲ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ಭಾರತದ ರಾಷ್ಟೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅವರು ನವೆಂಬರ್ 15ರಿಂದ 25ರ ವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.   ಧನಲಕ್ಷ್ಮಿ, ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿದ್ದಾರೆ. ಧನಲಕ್ಷ್ಮಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯೊಂದಿಗೆ ಡಿಪ್ಲೋಮಾ ಕೋರ್ಸಗಳನ್ನು ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ಪಡೆದಿದ್ದಾರೆ. ಅವರು ಜೂನಿಯರ್ ನ್ಯಾಷನಲ್, ಸೀನಿಯರ್ ನ್ಯಾಷನಲ್ ಹಾಗೂ ಫೆಡರೇಷನ್ ಕಪ್‌ನಲ್ಲಿ ಒಟ್ಟು 12 ಬಾರಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಈಗಾಗಲೇ ಸೀನಿಯರ್ ಹಾಗೂ ಜೂನಿಯರ್ ವಿಭಾಗದಲ್ಲಿ 4 ಬಾರಿ ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಭಾಗವಹಿಸಿರುತ್ತಾರೆ. ಪ್ರಸ್ತುತ ಗುಜರಾತಿನ ಗಾಂಧಿನಗರದಲ್ಲಿರುವ ಸಾಯ್ ಸೆಂಟರ್‌ನಲ್ಲಿ ಅಂತಿಮ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಕರ್ನಾಟಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್, ಇಂಟರಮೀಡಿಯಟ್ ಗ್ರೂಪ್ -I ಮತ್ತು ಗ್ರೂಪ್ II ಹಾಗೂ ಫೈನಲ್ ಗ್ರೂಪ್ I, ಗ್ರೂಪ್ II ರ ಸೆಪ್ಟೆಂಬರ್ 2025 ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ರಕ್ಷಾ ಎಸ್. ನಾಯಕ್ ಸಿಎ ಫೌಂಡೇಶನ್‌ನಲ್ಲಿ, ವಿಶ್ಮಿತಾ ಆಚಾರಿ ಸಿಎ ಇಂಟರ್ಮೀಡಿಯಟ್ ಗ್ರೂಪ್ I ರಲ್ಲಿ, ಪ್ರಜ್ವಲ್ ಸುಂದರ ನಾಯಕ್ ಮತ್ತು ಯಶಸ್ ಕೆ. ಇಂಟರ್ಮೀಡಿಯಟ್ ಗ್ರೂಪ್ II ರಲ್ಲಿ ಹಾಗೂ ರಕ್ಷಿತ ಸಿಎ ಫೈನಲ್ ಗ್ರೂಪ್ I ಮತ್ತು II ರಲ್ಲಿ ಉತ್ತೀರ್ಣರಾಗಿದ್ದಾರೆ. ಡಾl ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ನಡೆಸುವ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಸ್ಥಾಪನೆಯ 550ನೇ ವರ್ಷದ ಆಚರಣೆಯ ಅಂಗವಾಗಿ ಹಮ್ಮಿಕೊಂಡ 550 ಕೋಟಿ ಶ್ರೀ ರಾಮ ಜಪ ಯಜ್ಞ ಪೂರ್ಣಗೊಂಡಿದ್ದು, ಇದರ ಅಂಗವಾಗಿ ಶ್ರೀ ಮಠದ ಶ್ರೀರಾಮ ದಿಗ್ವಿಜಯ ರಥ ಯಾತ್ರೆ ದೇಶದ ಪ್ರಮುಖ ಕ್ಷೇತ್ರಗಳಲ್ಲಿ ಸಂಚರಿಸುತ್ತಿದೆ. ಕುಂದಾಪುರಕ್ಕೆ ಶ್ರೀ ರಾಮ ದಿಗ್ವಿಜಯ ರಥ ಯಾತ್ರೆ ನವೆಂಬರ್ 14 ರಂದು ಸಿದ್ಧಾಪುರದಿಂದ ಆಗಮಿಸಲಿದೆ. ಈ ಸಂಬಂಧ ಸಂಜೆ 5 ಗಂಟೆಗೆ ಕುಂದಾಪುರ ಸರಕಾರಿ ಪ. ಪೂ ಕಾಲೇಜಿನಿಂದ ಪುರಸಭೆ ಮುಖ್ಯ ರಸ್ತೆಯಲ್ಲಿ ಶ್ರೀರಾಮ ದಿಗ್ವಿಜಯ ರಥವನ್ನು ಸ್ವಾಗತಿಸಿ, ಪುರಮೆರವಣಿಗೆಯಲ್ಲಿ ಕರೆ ತರಲಾಗುತ್ತದೆ. ಹೊಸ ಬಸ್ ಸ್ಟ್ಯಾಂಡ್ ಬಳಿ ತಿರುಗಿ ಮುಖ್ಯ ರಸ್ತೆಯಲ್ಲಿ ಶ್ರೀ ರಾಮ ಜಪ ಕೇಂದ್ರ ಶ್ರೀ ವಿಠಲ ದೇವಸ್ಥಾನಕ್ಕೆ ಶ್ರೀ ರಾಮ ದಿಗ್ವಿಜಯ ರಥ ಬರಲಿದೆ. ಹಿಮಾಲಯದ ಬದರಿಕಾಶ್ರಮದಿಂದ ಪ್ರಾರಂಭಗೊಂಡ ಶ್ರೀ ರಾಮ ದಿಗ್ವಿಜಯ ರಥ ಯಾತ್ರೆಗೆ ಸಮಾಜ ಬಾಂಧವರಿಂದ ಎಲ್ಲಾ…

Read More