Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟತಟ್ಟು, ಹಾಜಿ ಅಬ್ದುಲ್ಲ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕೋಟ ರೋಟರಿ ಕ್ಲಬ್, ಉಸಿರು ಕೋಟ ಸಾರಥ್ಯದಲ್ಲಿ ಕೊಡಮಾಡುವ ಡಾ. ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗ:ಸಾರಿಕಾ ಶ್ರೀಧರ ಎಸ್. ಐತಾಳ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾಪುರ), ರಾಜೀವ ಶೆಟ್ಟಿ ಎಂ. ( ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆಟ್ಟಿನಹೊಳೆ ಬೈಂದೂರು), ರೇಖಾ ಪ್ರಭಾಕರ್ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಲಿಗ್ಗೇರಿ), ಸಾರಿಕಾ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಬೈಂದೂರು), ಮಂಜುಳಾ ಜಯಕರ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರು), ಶೈಲಾ ಜಾಯ್ಸ್ ಲೂಯಿಸ್ (ಎಸ್‌ಎಂಎಸ್ ಆಂಗ್ಲಮಾಧ್ಯಮ ಶಾಲೆ ಬ್ರಹ್ಮಾವರ), ಶಾರದಾ (ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಬೆಳೆ), ಕೃಷ್ಣ ನಾಯ್ಕ್‌ (ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರ್ವಾಶೆ ಮೈನ್), ಶಂಕರ ಪೂಜಾರಿ (ಸರಕಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ವರ್ಗಗಳ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ, ಹಾಸ್ಟೆಲ್ ಸಮಸ್ಯೆಗಳ ಕುರಿತು ಇಲ್ಲಿನ “ಪ್ರಜಾ ಸೌಧ” ದಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಅವರು ಮಾತನಾಡಿ, ಪ್ರಸ್ತುತ ಬೈಂದೂರು ವಿಧಾನ ಸಭಾ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್ ಗಳು ಹಾಗೂ ವಸತಿ ನಿಲಯಗಳಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಆದರೆ ಕುಂದಾಪುರ ಹಾಗೂ ಉಡುಪಿ ಭಾಗಗಳಲ್ಲಿನ ಹಾಸ್ಟೆಲ್ ಗಳಲ್ಲಿ ಅರ್ಜಿ ಹಾಕಿರುವ ಎಲ್ಲಾ ಗ್ರಾಮೀಣ ಭಾಗದ ಬಡ ಕುಟುಂಬಗಳ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಹಾಗೂ ವಿದ್ಯಾರ್ಥಿಗಳು ಹಾಸ್ಟೆಲ್ ವಂಚಿತರಾಗುತ್ತಿರುವ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ನಿರಂತರ ತರುವ ವ್ಯವಸ್ಥೆಗಳಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊಸ ಹಾಸ್ಟೆಲ್ ಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಮೊಬೈಲ್‌ ರಿಟೈಲರ್ಸ್‌ ಅಸೋಸಿಯೇಶನ್‌ (UMRA) ಮೊಬೈಲ್‌ ಗ್ರಾಹಕರಿಗಾಗಿ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದು, ಪ್ರತಿ ಮೊಬೈಲ್‌ ಖರೀದಿಯೊಂದಿಗೆ ಲಕ್ಕಿ ಕೂಪನ್‌ ನೀಡಲಾಗುತ್ತಿದೆ. 2025ರ ಅಕ್ಟೋಬರ್‌ 01ರಿಂದ 2026ರ ಜನವರಿ 10ರ ತನಕ UMRA ಮೊಬೈಲ್‌ ಉತ್ಸವ ನಡೆಯಲಿದ್ದು, ನಿಮ್ಮ ಸ್ಥಳೀಯ ಮೊಬೈಲ್‌ ಶಾಪ್‌ನಲ್ಲಿ ನಿಮ್ಮಿಷ್ಟದ ಮೊಬೈಲ್‌ ಖರೀದಿಸಿ ಆಕರ್ಷಕ ಬಹುಮಾನಗಳನ್ನು ಗೆಲ್ಲಬಹುದಾಗಿದೆ. ಬಂಪರ್‌ ಬಹುಮಾನವಾಗಿ 5 ಬೈಕ್‌, 10 ಟಿವಿ, ಗೋಲ್ಡ್‌ – ಸಿಲ್ವರ್‌ ಕಾಯಿನ್‌, ವಾಷಿಂಗ್‌ ಮಷಿನ್‌ ಹಾಗೂ ಸಾವಿರಾರು ಉಡುಗೊರೆಗಳನ್ನು ಗೆಲ್ಲುವ ಅವಕಾಶವಿದೆ. ಜನವರಿ 18ರಂದು ಡ್ರಾ ನಡೆಯಲಿದೆ. ಬೈಂದೂರಿನಲ್ಲಿ ಪೊಲೀಸ್‌ ಸ್ಟೇಷನ್‌ ಎದುರು, ಬಸ್‌ ನಿಲ್ದಾಣ ಹಾಗೂ ಬಂಕೇಶ್ವರ ರಸ್ತೆಯಲ್ಲಿರುವ “ಪ್ರೀತಿ ಮೊಬೈಲ್ಸ್”ನಲ್ಲಿಯೇ ನಿಮ್ಮ ಮೊಬೈಲ್‌ ಖರೀದಿಸಿ ಲಕ್ಕಿ ಕೂಪನ್‌ ಪಡೆದುಕೊಳ್ಳಬಹುದಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆಸಿಇಟಿ ಮತ್ತು ಎನ್‌ಇಇಟಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆದು ವೈಯುಕ್ತಿಕ‌ ಆಯ್ಕೆಯ‌ ಕಾಲೇಜುಗಳನ್ನು ಉನ್ನತ ವ್ಯಾಸಂಗಕ್ಕೆ ಆಯ್ದುಕೊಳ್ಳುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ ಎಂದು ಬೆಳ್ಮಣ್ಣಿನ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ. ವಸಂತ್ ಆಚಾರ್ಯ ಹೇಳಿದರು. ಅವರು ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗ ಆಯೋಜಿಸಿದ ‘ ಕೆಮಿವರ್ಸ್’ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ವ್ಯಾಪಕ ಪಠ್ಯಕ್ರಮವಿರುವ ರಸಾಯನ ಶಾಸ್ತ್ರ ವಿಷಯದಲ್ಲಿ ಹೆಚ್ಚು ಒತ್ತು ನೀಡುವ ಓರ್ಗಾನಿಕ್ ರಿಯಾಕ್ಷನ್ ಗಳಂಥ ಕೆಲವು ಅಧ್ಯಾಯಗಳು ವಿದ್ಯಾರ್ಥಿಗಳಿಗೆ ಬಹುಬೇಡಿಕೆಯ ರಾಸಾಯನಿಕ ಉತ್ಪಾದನಾ ಕ್ಷೇತ್ರದಲ್ಲಿ ಬೇಡಿಕೆಯಲ್ಲಿರುವ ಉದ್ಯೋಗ ಪಡೆಯುವಲ್ಲಿ ಸಹಾಯಕವಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸ ಕಾರ್ಯಕ್ರಮದ ಬಳಿಕ ನಡೆದ ಸಂವಾದ ಮತ್ತು‌ ಅಭಿಪ್ರಾಯ ಹಂಚಿಕೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಶೈನೋಲ್, ಅಮೂಲ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು. ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟದಲ್ಲಿ ಭಾಗವಹಿಸಿ. ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಸರ್ವತೋಮುಖ ವಿಕಸನ ಸಾಧ್ಯ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ ಅಧ್ಯಯನಕ್ಕೆ ಮಾತ್ರ ಸೀಮಿತವಾಗಬಾರದು ಕ್ರೀಡೆಯಲ್ಲಿ ಸಾಧನೆ ಮಾಡಬಹುದೆಂದು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆ ಕುಂದಾಪುರ – ಸರಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ 14 ಹಾಗೂ 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಕ್ರಿಕೆಟ್ ಪಂದ್ಯಾಟ 2025 ಇದರ ಕ್ರೀಡಾಕೂಟ  ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳು ಸತ್ಯನಾರಾಯಣ ಜಿ., ಜಿಲ್ಲೆಯ ಎಲ್ಲಾ ಕ್ಷೇತ್ರ  ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕ ಲೋಕೇಶ್.ಸಿ.,‌ ಶಿಕ್ಷಕರಾದ ಅಬ್ದುಲ್ ರವೂಫ್, ದೈಹಿಕ ಶಿಕ್ಷಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮತ್ತು ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸೃಜನ್ ಮತ್ತು ಶ್ರಾವ್ಯ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವರಾಹಿ ಯೋಜನೆ ವೈಫಲ್ಯ ಮತ್ತು ಭ್ರಷ್ಟಾಚಾರದ ತನಿಖೆಗೆ ಎಸ್‌ ಐ ಟಿ ರಚನೆಯಾಗಲಿ ಎಂದು ಕುಂದಾಪುರದ ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ವರಾಹಿ ನೀರಾವರಿ ಯೋಜನೆಗೆ 1979ರಲ್ಲಿ ಅಂದಿನ ಮುಖ್ಯಮಂತ್ರಿ ದಿವಂಗತ ಗುಂಡೂರಾಯರು ಶಂಖುಸ್ಥಾಪನೆ ನೆರವೇರಿಸಿದರು. ಎಡದಂಡೆ, ಬಲದಂಡೆ ಹಾಗೂ ಏತ ನೀರಾವರಿ ಮೂರು ವಿಭಾಗಗಳನ್ನು ಒಳಗೊಂಡ ಬೈಂದೂರು, ಕುಂದಾಪುರ ಹಾಗೂ ಉಡುಪಿ ವಿಧಾನ ಸಭಾ ಕ್ಷೇತ್ರಗಳ ಸುಮಾರು ಹದಿನೆಂಟು ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರುಣಿಸುವ ಯೋಜನೆ, ಯೋಜನೆ ಪ್ರಾರಂಭವಾಗಿ ಐದು ದಶಕಗಳೇ ಕಳೆದರೂ ಎಡ ದಂಡೆ ಕಾಲುವೆ ಕಾಮಗಾರಿ ಬಹು ಭಾಗ ಮುಗಿದು ಒಂದಷ್ಟು ಹೆಕ್ಟೇರ್ ಕೃಷಿ ಭೂಮಿಗೆ ನೀರು ಹೋಗುತ್ತಿದೆ ಬಿಟ್ಟರೆ ಬಲದಂಡೆ ಕಾಮಗಾರಿ ಇಲ್ಲಿಯ ತನಕ ಪ್ರಾರಂಭ ವಾಗಲೇ ಇಲ್ಲಾ, ಇನ್ನು ಕುಂದಾಪುರ ಹಾಗೂ ಉಡುಪಿ ವಿಧಾನ ಸಭಾ ಕ್ಷೇತ್ರದ ಒಂದಷ್ಟು ಗ್ರಾಮಗಳಿಗೆ ನೀರುಣಿಸುವ ವರಾಹಿ ಏತ ನೀರಾವರಿ ಕಾಮಗಾರಿ ಪ್ರಾರಂಭವಾಗಿ ಐದು ವರ್ಷ ಕಳೆದರೂ ಇನ್ನೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ತೆಂಗಿನ ತೋಟದಲ್ಲಿ ಕಾಯಿ‌ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ಬುಧವಾರ ಸಂಭವಿಸಿದೆ. ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತ ದುರ್ದೈವಿ. ಈತ ಸಹೋದರಿ, ತಾಯಿಯನ್ನು ಅಗಲಿದ್ದಾನೆ. ಅವನು ಬುಧವಾರ ಮನೆ ಸಮೀಪದ ತೆಂಗಿನಕಾಯಿ ಗುತ್ತಿಗೆದಾರರ ಜತೆ ಅಚ್ಲಾಡಿಯ ತೋಟವೊಂದಕ್ಕೆ ಕೆಲಸಕ್ಕೆ ತೆರಳಿದ್ದು ಮರದಿಂದ ಕಾಯಿ ಕೊಯ್ದು ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಹಾಗೂ ಎಲ್ಲ ಕಡೆ ಹುಡಯಕಿದರು ಪತ್ತೆಯಾಗಿರಲಿಲ್ಲ. ಅನಂತರ ಗುರುವಾರ ಅಪರಾಹ್ನ ಕೈಲೇರಿ ಸಮೀಪ ತೋಡಿನಲ್ಲಿ ಈತನ ಶವ ಪತ್ತೆಯಾಗಿದೆ. ಬುಧವಾರ ವಿಫರೀತ ಮಳೆ ಇದ್ದ ಕಾರಣ ತೋಡು ತುಂಬಿ ಹರಿಯುತ್ತಿತ್ತು. ಈ ಭಾಗದಲ್ಲಿ ರಸ್ತೆ ಕೂಡ ಮಳೆಯಿಂದ ಕೆಸರುಮಯವಾಗಿದ್ದು ಸಂಚರಿಸಲು ಅಸಾಧ್ಯ ಸ್ಥಿತಿ ಇದೆ. ಹೀಗಾಗಿ ಕಾಯಿ ಕೊಯ್ದು ಟೆಂಪೋಗೆ ಸಾಗಿಸುತ್ತಿದ್ದ ಶರತ್ ಕಾಲು ಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಹೆಗ್ಡೆ ನಿರ್ದೇಶನದ ಕಿರುಚಿತ್ರ ‘ಮಾಯಾಚಕ್ರ’ದ ಪ್ರೀಮಿಯರ್ ಷೋ ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಕಾಲೇಜಿನ ಆಡಿಯೋ ವೀಡಿಯೋ ಥಿಯೇಟರ್‌ನಲ್ಲಿ ನಡೆಯಿತು. ಕಿರುಚಿತ್ರ ವೀಕ್ಷಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಗೌರವ್ ಹೆಗ್ಡೆ ಮತ್ತು ಅವರ ತಂಡದ ಚೊಚ್ಚಲ ಪ್ರಯತ್ನವನ್ನು ಶ್ಲಾಘಿಸಿದರು. ಎಳವೆಯಲ್ಲಿಯೇ ಇಂತಹ ಸೃಜನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು ಸಮಾಜಕ್ಕೆ ಪ್ರೇರಣಾದಾಯಕ. ತನಿಖಾ ಪತ್ರಿಕೋದ್ಯಮದ ಕಥಾಹಂದರ ಹೊಂದಿರುವ ಈ ಕಿರುಚಿತ್ರವು, ಪತ್ರಕರ್ತರು ವೃತ್ತಿ ಜೀವನದಲ್ಲಿ ಎದುರಿಸಬೇಕಾಗುವ ತೊಂದರೆಗಳು, ಸವಾಲುಗಳು ಮತ್ತು ಸಮಾಜದ ಒತ್ತಡಗಳ ನೈಜ ಚಿತ್ರಣವನ್ನು ನೀಡುತ್ತದೆ. ‘ಮಾಯಾಚಕ್ರ’ದ ಇನ್ನೊಂದು ವಿಶೇಷತೆ, ಚಿತ್ರದಲ್ಲಿ ಸ್ಥಳೀಯ ಸ್ಥಳಗಳು ಮತ್ತು ಪ್ರತಿಭೆಗಳನ್ನು ಬಳಸಿರುವುದು. ಈ ಮೂಲಕ ಗ್ರಾಮೀಣ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ, ಪ್ರತಿಭಾವಂತರಿಗೆ ತಮ್ಮ ನಟನಾ ಕೌಶಲ್ಯವನ್ನು ತೋರಿಸಲು ವೇದಿಕೆ ಒದಗಿಸಲಾಗಿದೆ ಎಂದರು. ಸಿನಿಮಾದ ನಿರ್ದೇಶಕ ಗೌರವ್ ಹೆಗ್ಡೆ ಮಾತನಾಡಿ, “ಈಗಿನ ರೀಲ್ಸ್ ಜಮಾನದಲ್ಲಿ ದೀರ್ಘ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಡಿ ಸಾಲ-ಸಹಾಯಧನ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಅರ್ಹ ಫಲಾನುಭವಿಗಳಿಂದ ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ:…

Read More