Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸಿಲೋನ್ ಮಾಸ್ಟರ್ಸ್ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ 2026ರಲ್ಲಿ ಭಾರತ ದೇಶದಿಂದ ಪ್ರತಿನಿಧಿಸಿದ ಉಡುಪಿ ಜಿಲ್ಲೆಯ ಕೋಡಿ ಕನ್ಯಾಣದ ನಿವಾಸಿ, ನಂಜುಂಡ ಎಫ್.ಸಿ.ಎ. ಅವರು 60+ ವಯೋಮಿತಿ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲಿ ಚಾಂಪಿಯನ್ ಆಗಿ ಚಿನ್ನದ ಪದಕವನ್ನು ಪಡೆದು ಮತ್ತು ಮಿಕ್ಸೆಡ್ ಡಬಲ್ಸ್‌ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ಬೆಂಗಳೂರಿನಲ್ಲಿ ನಂಜುಂಡ ಅಂಡ್ ಕಂಪನಿಯನ್ನು ಹುಟ್ಟು ಹಾಕಿ ಇದರ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸೇವೆ ನಿರ್ವಹಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ರಾಜ್ಯದ ಸಾಕಷ್ಟು ಸಿಎ ಇಂಟರ್ಮೀಡಿಯಟ್, ಸಿಎ ಫೈನಲ್ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಅವರಿಗೆ ಉದ್ಯೋಗ ಕಲ್ಪಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (MAHE) ಮಣಿಪಾಲ ಇದರ ತಂತ್ರಜ್ಞಾನ ಹಾಗೂ ವಿಜ್ಞಾನ ವಿಭಾಗದ ಸಹ ಉಪ ಕುಲಪತಿಯಾಗಿ (Pro Vice Chancellor – Technology & Science) ಡಾ. ಕರುಣಾಕರ್‌ ಕೋಟೆಗಾರ್‌ ಅವರನ್ನು ನೇಮಕ ಮಾಡಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯ ಜೈಪುರದ ಪ್ರೋ-ಪ್ರೆಸಿಡೆಂಟ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು, 2026ರ ಜುಲೈ 01ರಿಂದ ಸಹ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ ಮಣಿಪಾಲ್ ಸಮೂಹ ಸಂಸ್ಥೆಗಳ ಸಲಹಾ ಮಂಡಳಿಯಲ್ಲಿ ಸ್ಥಾನಪಡೆಯಲಿದ್ದಾರೆ. ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಉಪ ಕುಲಪತಿಯಾಗಿ ನೇಮಕಗೊಂಡಿರುವ ಡಾ. ಕೋಟೆಗಾರ್ ಅವರು ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತದಲ್ಲಿ 29ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಮಾರ್ಚ್ 1998 ರಿಂದ ಅವರು ಮಣಿಪಾಲ್ ಸಮೂಹ ಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಎಂಐಟಿ ಮಣಿಪಾಲದ (MIT Manipal) ‘ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್’ ವಿಭಾಗದಲ್ಲಿ ಪ್ರೊಫೆಸರ್ ಆಗಿ ಹಾಗೂ ಮಾಹೆಯ (MAHE) ‘ಅಂತರರಾಷ್ಟ್ರೀಯ ಸಹಯೋಗ’ ವಿಭಾಗದ…

Read More

ಕುಂದಾಪ್ರ ಡಾಟ್‌  ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್‌ ಕುಮಾರ್‌ ಶಿರೂರು ಹಾಗೂ ಕಾರ್ಯದರ್ಶಿಯಾಗಿ ಮಣಿಕಂಠ ದೇವಾಡಿಗ ಆಯ್ಕೆಯಾಗಿದ್ದಾರೆ. 2026-27ನೇ ಸಾಲಿನ ನೂತನ ಅಧ್ಯಕ್ಷರ ಪದಪ್ರದಾನ ಸಮಾರಂಭವು ಜುಲೈ 08ರ ಬುಧವಾರ ಬೈಂದೂರಿನ ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶೈಕ್ಷಣಿಕ ಸಂಸ್ಥೆಗಳ ಅದರಲ್ಲೂ ಸರಕಾರಿ ಶಾಲೆಗಳ ಉನ್ನತಿಗೆ ದಾನಿಗಳ ಸಹಕಾರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಗುರುವಾರ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ದಾನಿಗಳ ನೆರವಿನಿಂದ ನೀಡಲಾದ ಅಕ್ಷರ ರಥ ವಾಹನವನ್ನು ಲೋಕಾರ್ಪಣಾ ಸಮಾರಂಭದಲ್ಲಿ ಮಾತನಾಡಿ, ತಾವು ಕಲಿತ ಸರಕಾರಿ ಶಾಲೆಗಳ ಬಗ್ಗೆ ಶಾಲಾ ಹಳೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ವಹಿಸಿ ಅದರ ಉಳಿವಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ವಾಹನಕ್ಕೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ನೆರವೆರಿಸಲಾಯಿತು. ಶಾಲಾ ವಾಹನದ ಕೀ ಅನ್ನು ಶಾಲಾ ಆಡಳಿತ ಮಂಡಳಿಗೆ ದಾನಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಸಭೆಯಲ್ಲಿ ದಾನಿಗಳಾದ ಮೇಬಿಲ್ ಥಾಮಸ್ ಡಿಸಿಲ್ವ,ಐರಿನ್ ಲೂಹಿಸ್, ಬಾಬು ಕುಂದರ್,ರಾಮದೇವ್ ಹಂದೆ,ಸವಿತಾ ಸೂಡಾ,ಅನ್ಯೋನ್ಯತಾ ವಾಹನ ಸಂಘ ಸಾಸ್ತಾನ ಇದರ ಉಪಾಧ್ಯಕ್ಷ ಉದಯ್ ಬಿ,ಪವಿತ್ರಾ ಇವರುಗಳ ಸಹಕಾರವನ್ನು ಸ್ಮರಿಸಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿ ಸಮವಸ್ತ್ರ ಕೊಡುಗೆಯಾಗಿ ನೀಡಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಕೋಣಿಯ ಮಾನಸ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭ ಶಾಲೆಯ ವಿಶೇಷ ಚೇತನ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮವನ್ನು, ಆಟೋಟಗಳನ್ನು ವಿದ್ಯಾರ್ಥಿಗಳು ನಡೆಸಿದರು. ವಿಶೇಷ ಚೇತನ ವಿದ್ಯಾರ್ಥಿಗಳು ತಮ್ಮ ವಿವಿಧ ಪ್ರತಿಭೆಯನ್ನು ತೋರ್ಪಡಿಸಿದರು. ಈ ಸಂದರ್ಭ ಕೋಣಿಯ ಮಾನಸ ಜ್ಯೋತಿ ಟ್ರಸ್ಟ್ ಕೃಷ್ಣ ಶೋಭಾ ಮಧ್ಯಸ್ಥ, ಚೇತನ ಹಾಗೂ ಸಂಸ್ಥೆಯ ಮತ್ತಿತರ ಸಿಬ್ಬಂದಿಗಳು, ಕಾಲೇಜಿನ ಡೀನ್ ಅಕಾಡೆಮಿಕ್ ಗಿರಿರಾಜ್ ಭಟ್ ನೆಂಪು, ಸಹಾಯಕ ಪ್ರಾಧ್ಯಾಪಕ ಮಹೇಶ್ ಪೂಜಾರಿ, ಕಂಪ್ಯೂಟರ್ ಪ್ರೋಗ್ರಾಮರ್ ಆಕಾಶ್ ಭಂಡಾರಿ, ಮಂಜುನಾಥ್ ಕುಲಾಲ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಲಯದ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ, ವಿದ್ಯಾರ್ಥಿ ಸಂಸತ್ ಉದ್ಘಾಟನೆ, ಎಸ್.ಡಿ.ಎಂ.ಸಿ ಖಾಲಿಯಾದ ಸ್ಥಾನಗಳಿಗೆ ಆಯ್ಕೆ ಕಾರ್ಯಕ್ರಮ ಬುಧವಾರ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಪ್ರೇಮ ಎಸ್. ನಾಯ್ಕ್ ವಹಿಸಿದ್ದರು. ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಮೊಬೈಲ್ ಬಿಡಿ ಪುಸ್ತಕ ಹಿಡಿ” ಕಾರ್ಯಕ್ರಮದ ಅಂಗವಾಗಿ ಕನ್ನಡ, ಇಂಗ್ಲಿಷ್ ಸ್ಪಷ್ಟವಾದ ಓದುವಿಕೆ, ಗಣಿತದ ಲೆಕ್ಕಾಚಾರವನ್ನು ಪೋಷಕರ ಎದುರು ಮಾಡಿ ತೋರಿಸಲಾಯಿತು. ವಿದ್ಯಾರ್ಥಿ ಸಂಸತ್ ಉದ್ಘಾಟನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಪ್ರಮಾಣವಚನವನ್ನು ಸಹ ಶಿಕ್ಷರಾದ ಉದಯ್ ಬೋಧಿಸಿದರು. ಪೋಷಕರ ಸಭೆಯಲ್ಲಿ ಖಾಲಿ ಆಗಿರುವ ಎಸ್.ಡಿ.ಎಂ.ಸಿ ಸದಸ್ಯರ ನೇಮಕ ಮಾಡಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸುಬ್ಬಯ್ಯ ನಾಯ್ಕ್, ಉಪಾಧ್ಯಕ್ಷರನ್ನಾಗಿ ನಾಗರತ್ನ ಶೆಟ್ಟಿ ಆಯ್ಕೆಯಾದರು. ಈ ಹಿಂದಿನ ಎಸ್.ಡಿ.ಎಂ.ಸಿ ಅಧ್ಯಕ್ಷರು ಪುಷ್ಪ ನೀಡಿ ಸ್ವಾಗತಿಸಿದರು. ಪೋಷಕರಿಗೆ 2026-27ನೇ ಸಾಲಿನ ಮಕ್ಕಳಿಗೆ ಕಲಿಕೆ ಬಗ್ಗೆ ಹಾಗೂ ವಾಹನ ಸುರಕ್ಷತೆ ಬಗ್ಗೆ ಮಾಹಿತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ವೈದ್ಯ ದಿನಾಚರಣೆ ಪ್ರಯುಕ್ತ ಮೊಗವೀರ ಯುವ ಸಂಘಟನೆ ರಿ. ಉಡುಪಿ, ಕುಂದಾಪುರ ಘಟಕದ ವತಿಯಿಂದ ಕುಂದಾಪುರದ ಹೆಸರಾಂತ ವೈದ್ಯರಾದ ಡಾ. ಉಮೇಶ್ ಪುತ್ರನ್(MBBS, MD, PGDHA) ಅವರನ್ನು ಹಾಗೂ ಕುಂದಾಪುರದ ಪ್ರಸಿದ್ಧ ವೈದ್ಯರಾಗಿರುವ ಡಾ. ನಾಗೇಶ್ (MBBS, MD, gen med ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಘಟಕದ ಅಧ್ಯಕ್ಷರಾಗಿರುವ ನಾಗೇಶ ಹಳ್ನಾಡು , ಕಾರ್ಯದರ್ಶಿ ಮಾಧವ,ಪೂರ್ವ ಅಧ್ಯಕ್ಷರಾಗಿರುವ ಪ್ರಕಾಶ ಆನಗಳ್ಳಿ, ಸುರೇಶ್ ವಿಠಲವಾಡಿ, ಉಡುಪಿ ಜಿಲ್ಲಾ ಅಧ್ಯಕ್ಷರಾಗಿರುವ ರವೀಶ್ ಕೊರವಾಡಿ, ಕಾರ್ಯದರ್ಶಿ ಶೇಖರ್ ತೋಳಾರ್, ಪೂರ್ವ ಜಿಲ್ಲಾಧ್ಯಕ್ಷರಾಗಿರುವ ರಾಜೇಂದ್ರ ಹಿರಿಯಡ್ಕ, ಮತ್ತು ಕುಂದಾಪುರ ಘಟಕದ ಪದಾಧಿಕಾರಿಗಳಾಗಿರುವ ಮಧುಕರ್ ಟಿ.ಕೆ., ದಿನೇಶ್ ಪುತ್ರನ್ ವಿಠಲವಾಡಿ, ವಿಜಯಕುಮಾರ್, ಸಂತೋಷ್ ಮದ್ದುಗುಡ್ಡೆ, ಶಾಂತ ಪುತ್ರನ್, ಕಿರಣ್ ಹಲ್ನಾಡ್, ಪ್ರವೀಣ್ ಬಂಗೇರ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: “ಲೋಕ ದೃಷ್ಟಿ ಸಾಹಿತ್ಯದ ಮೂಲ ಸೆಲೆ. ಜೀವನಾನುಭವದಿಂದ ಲೋಕದೃಷ್ಟಿಯನ್ನು ಸಾಧ್ಯವಾಗಿಸಿಕೊಳ್ಳಬಹುದು. ಭಾಷೆ ಎಂಬುದು ಸಮೂಹದಿಂದ ಸಿದ್ಧಿಯಾಗುತ್ತದೆ. ಬದುಕನ್ನು ಪ್ರತಿಫಲಿಸಿದಾಗ ಯಾವುದೇ ಸಾಹಿತ್ಯವು ಮೌಲ್ಯಯುತವಾಗುತ್ತದೆ. ಹೆಚ್ಚಿನ ಓದು ನಮ್ಮ ಮನಸ್ಸುಗಳನ್ನು ಅರಳಿಸುತ್ತದೆ. ಕಲ್ಪನೆಗಳನ್ನು ಗರಿಗೆದರಿಸಿಕೊಂಡಾಗ ಸಾಹಿತ್ಯ ರಚನೆ ಸಾಧ್ಯ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರೂಪಿಸಿಕೊಳ್ಳುವುದಕ್ಕೆ ಬರವಣಿಗೆ ಸಶಕ್ತ ಮಾಧ್ಯಮವಾಗಿದೆ” ಎಂದು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಹೇಳಿದರು. ಅವರು ಬುಧವಾರ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಸಂಪಾದಕ ಮಂಡಳಿಯ ಸದಸ್ಯ ನಾರಾಯಣ ಇ. ನಾಯ್ಕ್, ವಿದ್ಯಾರ್ಥಿನಿ ತನಿಷಾ ಉಪಸ್ಥಿತರಿದ್ದರು. ನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭೂಮಿಕ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತ ಆಚಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೃಷಿ ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿ ಎರಡು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುಂದಬಾರಂದಾಡಿ ಗ್ರಾಮದಿಂದ ಬುಧವಾರ ವರದಿಯಾಗಿದೆ. ಕುಂದಬಾರಂದಾಡಿ ಗ್ರಾಮದ ಮಕ್ಕಿಮನೆ ನಿವಾಸಿ ವಸಂತ ಬಂಗೇರ (56) ಮೃತಪಟ್ಟ ವ್ಯಕ್ತಿ. ಜೂ. 29ರಂದು ಬೆಳಗ್ಗೆ ದೇವಲ್ಕುಂದಕ್ಕೆ ಕೃಷಿ ಕೆಲಸಕ್ಕೆಂದು ತೆರಳಿದ್ದ ಅವರು ಮನೆಗೆ ಮರಳಿರಲಿಲ್ಲ. ಕುಟುಂಬದವರು ವಿವಿಧೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬುಧವಾರ ಬೆಳಗ್ಗೆ ದೇವಲ್ಕುಂದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಬಾವಿಯ ಸಮೀಪದ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಸಂಶಯಿಸಲಾಗಿದೆ. ಮೃತರ ಸಂಬಂಧಿ ದಿವ್ಯಶ್ರೀ ನೀಡಿದ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪತ್ರಿಕೆಗಳು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು ಮತ್ತು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ “ಪತ್ರಿಕಾ ದಿನಾಚರಣೆ” ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಪತ್ರಿಕೆಗಳು ಆರಂಭವಾದಾಗಿನಿಂದ ಸಾಮಾಜಿಕ ಜಾಗೃತಿ ಜೊತೆಗೆ ಅಭಿವೃದ್ಧಿಪರ ಚಿಂತನೆ ಹುಟ್ಟುಹಾಕುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಐತಿಹಾಸಿಕ ಹಿನ್ನೆಲೆಯಲ್ಲಿ  ಪತ್ರಿಕೆಗಳು ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿತ್ತು. ಜನರಲ್ಲಿ ಸ್ವಾತಂತ್ರ್ಯದ ಅದಮ್ಯತೆಯನ್ನು ಹುಟ್ಟು ಹಾಕಿತ್ತು. ಪ್ರಸ್ತುತ  ಸಾಮಾಜಿಕ ಮಾಧ್ಯಮಗಳ ನಡುವೆ ಪತ್ರಿಕೆಗಳು ತಮ್ಮ ಸತ್ಯಾಸತ್ಯತೆ ಕಾಪಾಡಿಕೊಂಡು ಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಅವರು ಮಾತನಾಡಿ, ಪತ್ರಿಕೆಗಳ ನಮ್ಮಲ್ಲಿ ಜ್ಞಾನ ಮತ್ತು ವಿಮರ್ಶೆಯ ಗುಣಗಳನ್ನು ಬೆಳೆಸಿಕೊಳ್ಳಲು ನೆರವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಉಪಸ್ಥಿತರಿದ್ದ ಪತ್ರಿಕೋದ್ಯಮ…

Read More