Author: ನ್ಯೂಸ್ ಬ್ಯೂರೋ

ಕುಂದಾಪುರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವು ನಾವುಂದದಲ್ಲಿ ಜೂನ್ 15ರಂದು ಬೆಳ್ಳಿಗೆ 10.30ಕ್ಕೆ ನಡೆಯಲಿದೆ. ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರಾದ ಹಾಗೂ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನವೀಕೃತ ಪ್ರಧಾನ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ವಹಿಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ, ಉಡುಪಿಯ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ಎಂ ಮಹೇಶ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಎಚ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಅವಧೂತ ವಿನಯ್ ಗುರೂಜಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್ ಕಾಂ ಲೇಖನಮಳೆ ಬರುವಾಗ ಮನಸ್ಸು ಮುದಗೊಳ್ಳುತ್ತದೆ. ಅದೆಷ್ಟು ತಿಂದ್ರೂ ತಿನ್ತಾ ಇರ್ಬೇಕು ಅನ್ಸುತ್ತೆ. ಮಳೆಗಾಲದಲ್ಲಿ ಹಸಿವು ಜಾಸ್ತಿ ಎಂದು ಹೆಚ್ಚಿನವರು ಹೇಳುತ್ತಾರೆ. ಅದು ನಿಜ ಕೂಡಾ ಹೌದು. ಹೀಗೆ ಮಳೆಗಾಲದಲ್ಲಿ ಹಸಿವು ಹೆಚ್ಚಾಗೋಕೆ ನಿರ್ದಿರ್ಷ್ಟ ಕಾರಣ ಕೂಡಾ ಇದೆ. ಮಳೆಗಾಲದಲ್ಲಿ ಸೋಂಕು, ಅಲರ್ಜಿ, ಜ್ವರ ಮೊದಲಾದ ಕಾಯಿಲೆಗಳು ವಕ್ಕರಿಸುತ್ತವೆ. ವಾತಾವರಣವೂ ತಂಪಿರುತ್ತದೆ. ಈ ಸಂದರ್ಭದಲ್ಲಿ ಶೀತದ ವಿರುದ್ಧ ಹೋರಾಡಲು ದೇಹವು ತಾಪಮಾನವನ್ನು ಹೆಚ್ಚಿಸಲು ಪ್ರಯತ್ನಿಸುತ್ತದೆ. ಇದು ಚಯಾಪಚಯ ದರವನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ತೆಗೆದುಕೊಳ್ಳುತ್ತದೆ. ಹೀಗಾಗಿ ಆಗಿಂದಾಗೆ ಹಸಿವಾದಂತೆ ಅನುಭವ ಆಗುತ್ತಿರುತ್ತದೆ. ಆಗಿಂದಾಗೆ ಹಸಿವಾದಾಗಲ್ಲೆಲ್ಲಾ ತಿನ್ನುವುದು ಉತ್ತಮ ಅಭ್ಯಾಸವಲ್ಲ. ಬದಲಿಗೆ ನಿರ್ಧಿಷ್ಟ ಪ್ರಮಾಣದಲ್ಲಿ ತಿನ್ನಿ. ಆದರೆ ಪೋಷಕಾಂಶಭರಿತ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವಂತೆ ಸೂಚಿಸಲಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ತಿನ್ನಿ:ಮಾನ್ಸೂನ್ ಮೆನುವು ಪೌಷ್ಟಿಕಾಂಶಯುಕ್ತವಾಗಿರಬೇಕು. ಮಳೆಗಾಲದಲ್ಲಿ ಒಣಗಿದ ಹಣ್ಣುಗಳು ಮತ್ತು ಬಿಸಿ ಸೂಪ್ಗಳು ಕಟ್ಟುನಿಟ್ಟಾಗಿರಬೇಕು. ಜೊತೆಗೆ, ಸಿಹಿತಿಂಡಿಗಳು, ಹಾಲಿನ ಉತ್ಪನ್ನಗಳು ಮತ್ತು ಎಣ್ಣೆ ಮತ್ತು ತುಪ್ಪದಲ್ಲಿ ಬೇಯಿಸಿದ ಆಹಾರವನ್ನು ಸಹ ಆನಂದಿಸಬಹುದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತು ಸಂಗ್ರಹಾಲಯದ ನೇತೃತ್ವದಲ್ಲಿ ವಿಶೇಷ ಸಂಚಾರಿ ಬಸ್ಸಿನಲ್ಲಿ ʼಮ್ಯೂಸಿಯಂ ಆನ್ ವ್ಹೀಲ್ʼ ಅಪರೂಪದ ವಸ್ತು ಸಂಗ್ರಹಾಲಯದ ಪ್ರದರ್ಶನ ವೀಕ್ಷಣೆಗೆ ಕರ್ನಾಟಕದ ಕರಾವಳಿಯ ಆಯ್ದ ಶಾಲೆಗಳ ಮಕ್ಕಳಿಗೆ ಜೂನ್ 12 ಮತ್ತು 13ರಂದು ಅವಕಾಶ ಮಾಡಿಕೊಡಲಾಗಿದ್ದು, ಬೈಂದೂರು ವಲಯದ 20 ಶಾಲೆಗಳ ವಿದ್ಯಾರ್ಥಿಗಳಿಗೆ ಈ ಪ್ರದರ್ಶನ ನಡೆಯಲಿದೆ. ಜೂನ್ 12ರ ಬೆಳಿಗ್ಗೆ 10 ಗಂಟಗೆ ಬೈಂದೂರು ಮಾದರಿ ಶಾಲೆಯ ಆರಂಭದ ಪ್ರದರ್ಶನ ಇರಲಿದ್ದು, ವಿದ್ಯಾರ್ಥಿಗಳೊಂದಿಗೆ ಸಾರ್ವಜನಿಕರಿಗೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದ ನಿರ್ವಹಣೆಯನ್ನು ಕುಂದ ಅಧ್ಯಯನ ಕೇಂದ್ರ ಉಪ್ಪುಂದದ ಸಂಚಾಲಕರಾದ ಗಣಪತಿ ಹೋಬಳಿದಾರ್ ಮಾಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಶಿಕ್ಷಣ ಸಂಯೋಜಕ, ಸಿ.ಆರ್.ಸಿಗಳು ಸಹಕಾರ ನೀಡಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾದ ಗಂಗೊಳ್ಳಿಯಲ್ಲಿ ನಿರಂತರ ವಿದ್ಯುತ್ ಕಡಿತ ವಿರೋಧಿಸಿ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಗಂಗೊಳ್ಳಿ ಮೆಸ್ಕಾಂ ಕಛೇರಿ ಎದುರು ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಕಳೆದ ಅನೇಕ ದಿನಗಳಿಂದ ಗಂಟೆಗಟ್ಟಲೆ ಹಗಲು ರಾತ್ರಿಯೆನ್ನದೆ ನಿರಂತರವಾಗಿ ವಿದ್ಯುತ್ ಕಡಿತ ಮಾಡುತ್ತಿದ್ದು, ಮೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡುವ ತನ ಮೆಸ್ಕಾಂ ಕಛೇರಿಯಿಂದ ತೆರಳುದಿಲ್ಲ ಎಂದು ಎಚ್ಚರಿಕೆ ನೀಡಿದ ಗ್ರಾಮಸ್ಥರು, ಸ್ಥಳೀಯ ವಿದ್ಯುತ್ ಕಡಿತ ಸಮಸ್ಯೆ ಬಗ್ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಸಂಪರ್ಕಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ತಲ್ಲೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಅವರನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ವಿದ್ಯುತ್ ಕಡಿತ ಸಮಸ್ಯೆ ಬಗೆಹರಿಸಲು ವಿಫಲವಾದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯ  ಚಿಕ್ಕ ಜಾಗದಲ್ಲೊಂದು ಒಳಾಂಗಣ ಮಳಿಗೆ. ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°c ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, 50ಕ್ಕೂ ಹೆಚ್ಚು ಅಂಗಡಿಗಳು, ಪ್ರತಿದಿನವೂ ಬಂದು ಆನಂದಿಸಿ, ಆಸ್ವಾದಿಸಿ, ಕೊಂಡು ತೆರಳುವ ಸಾವಿರಾರು ಜನರು. ಅಂದಹಾಗೇ ಇದು ನಡೆದಿದ್ದು  ಕತಾರಿನ ದೋಹಾದಲ್ಲಿರುವ  ಸೂಕ್ ವಾಕಿಫ್  ನಲ್ಲಿ ನಡೆದ ಮಾವಿನ ಮೇಳದಲ್ಲಿ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ  ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು  ಎಲ್ಲರ  ಇಂದ್ರಿಯಗಳನ್ನು ಆಕರ್ಷಿಸಿತು.ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ  ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು  ಇದ್ದವು, ಮತ್ತೊಂದೆಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ದುಬೈ:  ದುಬೈನಂತಹ ಮರುಭೂಮಿಯ ನಾಡಿನಲ್ಲಿ ಕಾಡು ಬೆಳೆಸಲು ಸಾಧ್ಯ ಎಂಬ ಸಂದೇಶ ವಿಶ್ವಕ್ಕೆ ನೀಡೋಣ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ, ಫಾರೆಸ್ಟರ್ ಕ್ರಿಯೇಟರ್ಸ್‌ನ ಸಂಸ್ಥಾಪಕ ಪರಿಸರ ತಜ್ಞ ಡಾ.ಆರ್.ಕೆ.ನಾಯರ್  ಅಭಿಪ್ರಾಯಪಟ್ಟರು. ಒಕ್ಕಲಿಗರ ಸಂಘ ದುಬೈ ಯುಎಇ ವತಿಯಿಂದ ದುಬೈನ ಹಿಲ್ಟನ್ ಹೋಟೆಲ್ ಸಭಾಂಗಣದಲ್ಲಿ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಯವರ ಆಶಿರ್ವಾದದೊಂದಿಗೆ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ತಾಯ್ನೆಲದ ಪರ ನಮ್ಮ ಜವಾಬ್ದಾರಿಗಳು’ ಎಂಬ ಧ್ಯೇಯೋದ್ದೇಶದೊಂದಿಗೆ ಒಕ್ಕಲಿಗರ ಸಂಘ ದುಬೈ ಯುಎಇ ಹಮ್ಮಿಕೊಂಡಿರುವ ‘ವಿಶ್ವ ಪರಿಸರ ದಿನಾಚರಣೆ’ ನಿಜಕ್ಕೂ ಶ್ಲಾಘನೀಯ. ದುಬೈನಂತಹ ಮರುಭೂಮಿಯ ನಾಡಿನಲ್ಲಿ ಕಾಡು ಬೆಳೆಸಲು ಸಾಧ್ಯ ಎಂಬ ಸಂದೇಶ ವಿಶ್ವಕ್ಕೆ ನೀಡೋಣ, ಒಕ್ಕಲಿಗರ ಸಂಘದ ಮೂಲಕವೇ ನಡೆಯಲಿ, ನನ್ನ ಸಂಪೂರ್ಣ ಮಾರ್ಗದರ್ಶನ, ಸಹಕಾರ ನಿಮ್ಮ ಜೊತೆ ಸದಾ ಇದೆ’ ಎಂದರು. ಕಾರ್ಯಕ್ರಮದ ಆಯೋಜಕರು, ಒಕ್ಕಲಿಗರ ಸಂಘ ದುಬೈ ಯುಎಇ ಅಧ್ಯಕ್ಷ ಕಿರಣ್ ಗೌಡ…

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಕಳೆದ 14 ವರ್ಷಗಳಿಂದ ಪಂಚಗಂಗಾವಳಿ ನದಿಯಲ್ಲಿ ಚಿಪ್ಪು ಸಂಗ್ರಹ ಮಾಡುತ್ತಿದ್ದ 51 ಅಡಿ ಉದ್ದ 10 ಅಡಿ ಅಗಲದ ಬೃಹತ್ ಹಾಯಿ ದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯ ಮಂಜೂಷಾದಲ್ಲಿ ಇಡುವ ಸಲುವಾಗಿ ರವಿವಾರ ಕೊಂಡೊಯ್ಯಲಾಯಿತು. ಜೈ ಜೈ ಬಾಲಾಜಿ ಹೆಸರಿನ ವೆಂಕಟೇಶ ಖಾರ್ವಿ ಮಾಲಕತ್ವದ ಈ ದೋಣಿ ಒಂದೇ ಮರದ ಹಲಗೆಯಿಂದ ತಯಾರಾಗಿದ್ದು, ಒಮ್ಮೆಗೆ ಒಂದೂ ಮುಕ್ಕಾಲು ಲಾರಿ ಲೋಡು ಚಿಪ್ಪು ಸಂಗ್ರಹ ಮಾಡುವಷ್ಟು ದೊಡ್ಡದಿದೆ. ಹಿಂದೆಲ್ಲ ಪಂಚಗಂಗಾವಳಿಯಲ್ಲಿ ಚಿಪ್ಪು ಸಂಗ್ರಹ ಮಾಡಿಯೇ ಸಂಪಾದನೆ ಮಾಡಿ ವಿದ್ಯಾಭ್ಯಾಸ ಮಾಡಿದವರು, ಸಂಸಾರ ತೂಗಿದವರು ಇದ್ದರು. ಈಗ ಕಡಿಮೆಯಾಗಿದೆ. 20ರಷ್ಟಿದ್ದ ಇಂತಹ ದೊಡ್ಡ ಗಾತ್ರದ ದೋಣಿಗಳ ಸಂಖ್ಯೆ ಒಂದಕ್ಕಿಳಿದಿದೆ. ಇನ್ನೂ 100 ವರ್ಷ ಕಾಲ ಬಾಳಿಕೆ ಬರುವ ದೋಣಿಯನ್ನು ಮುಂದಿನ ಪೀಳಿಗೆಗೆ ಮೀನುಗಾರಿಕೆ, ಚಿಪ್ಪು ಸಂಗ್ರಹ, ಕೊಂಕಣಿ ಖಾರ್ವಿ,ಸಮಾಜದ ಇತಿಹಾಸ ತಿಳಿಸುವ ಸಲುವಾಗಿ ಧರ್ಮಸ್ಥಳಕ್ಕೆ ನೀಡಲಾಗುತ್ತಿದೆ‌ ಎನ್ನುತ್ತಾರೆ ಈ ದೋಣಿಯ ಮಾಲಿಕರು. ಖಾರ್ವಿಕೇರಿ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ  ಐಐಟಿ, ಐಐಎಸ್‍ಟಿ,  ಐಐಎಸ್‍ಸಿ   ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಸುಜಿತ್ ಡಿ. ಕೆ,  ಕೆ. ಧ್ರುವ ಭಂಡಾರ್ಕರ್, ಅರ್ಜುನ್ ಇ ನಾಯಕ್, ಕಾರ್ತಿಕ್ ಎ. ಎಸ್, ಶಮಿತ್ ಎನ್ ಉನ್ನತ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಈ ಪೈಕಿ ಸಿದ್ದಾಂತ್ ಆರ್ ನಾಯ್ಕ್ 1565, ಸುಜಿತ್ ಡಿ ಕೆ  3648, ಅರ್ಜುನ್ ಇ ನಾಯಕ್ 3298, ಕೆ ಧ್ರುವ ಬಂಡಾರ್ಕರ್ 4260 ನೇ ಕೆಟಗರಿ ರ‍್ಯಾಂಕ್‌ ಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ. ಈ ಮೂಲಕ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ. ಸಂಸ್ಥೆಯು ಆರಂಭದ ವರ್ಷಗಳಲ್ಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರು ವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಶೈಕ್ಷಣಿಕ ಟ್ರಸ್ಟ್ ಶಂಕರನಾರಾಯಣ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ 2024-25ನೇ  ಸಾಲಿನ ಪೂರ್ವಪ್ರಾಥಮಿಕ ವಿಭಾಗದ ಪೂರ್ವಭಾವಿ ಸಭೆಯು ರೌಪಿಯ ಸಭಾಂಗಣದಲ್ಲಿ ನಡೆಯಿತು. ಸoಸ್ಥೆಯ ಆಡಳಿತಾಧಿಕಾರಿಗಳಾದ ಶಮಿತಾ ರಾವ್, ರೇನಿಟಾ ಲೋಬೊ ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಕುಸುಮಾ ಶೆಟ್ಟಿ ಜಂಟಿಯಾಗಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪಾಲಕರಿಗೆ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ದಾಖಲಾತಿ ವಯೋಮಿತಿ ಮತ್ತು ಇತರೇ ಇಲಾಖಾ ನಿಯಮಗಳ ಕುರಿತು ತಿಳಿಸಿದರು. ಪೂರ್ವಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕುಸುಮಾ ಶೆಟ್ಟಿ ಎಲ್.ಕೆ.ಜಿ ಮತ್ತು ಯು. ಕೆ. ಜಿ ತರಗತಿಯ ಶೈಕ್ಷಣಿಕ ವರ್ಷದ ಕ್ರಿಯಾಯೋಜನೆ, ವಾಹನ ಸೌಲಭ್ಯ, ಸಮವಸ್ತ್ರ, ಪಠ್ಯಪುಸ್ತಕ ಮತ್ತು ಇತರೇ ವಿಷಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಅಧ್ಯಕ್ಷಿಯ ಭಾಷಣದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ಮಾತಾನಾಡಿ, ನಾವು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದರಿಂದ ಈ ವರ್ಷ ವಿದ್ಯಾರ್ಥಿಗಳ…

Read More