Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಳ್ಳುತ್ತದೆ. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಕರಾವಳಿಯ ಕಂಬಳದಲ್ಲಿ ಬೈಂದೂರು ಬೊಳಂಬಳ್ಳಿಯ ಶ್ರೀರಾಮ್ ಚೈತ್ರ ಪರಮೇಶ್ವರ್ ಭಟ್ ಅವರ ಕಾಂತಾರ ಖ್ಯಾತಿಯ ಕೋಣಗಳು ಚಿನ್ನದ ಪದಕ ಪಡೆದುಕೊಂಡಿವೆ. ಬೆಂಗಳೂರು ಕಂಬಳದ ಕನೆಹಲಗೆ ವಿಭಾಗದಲ್ಲಿ 6.5 ಕೋಲು ನಿಶಾನೆಗೆ ನೀರು ಹಾಯಿಸಿರುವ ಕೋಣಗಳು ಚಿನ್ನದ ಪದಕವನ್ನು ಪಡೆದಿವೆ. ಕೋಣಗಳನ್ನು ಗಣೇಶ್ ಉಳ್ಳೂರು ಓಡಿಸಿದ್ದರು. ಅಪ್ಪು ಹಾಗೂ ಕಿಟ್ಟು ಹೆಸರಿನ ಈ ಕೋಣಗಳನ್ನು ಕಾಂತಾರ ಸಿನಿಮಾದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಓಡಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.25: ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಅವರು ಕಾನೂನುಬದ್ದವಾಗಿ ಕರ್ತವ್ಯನಿರ್ವಹಿಸಿದಕ್ಕೆ ಜಿಲ್ಲೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಎದುರೇ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರು, ಅಧಿಕಾರಿಗಳ ಆತ್ಮ ಸ್ಥೈರ್ಯ ಕುಸಿಯುವಂತೆ ತರಾಟೆಗೆ ತೆಗೆದುಕೊಂಡಿರುವುದು ಮತ್ತು ಈ ಕುರಿತು ಸಭೆಯಲ್ಲಿ ಅಧಿಕಾರಿಗೆ ಮಾತನಾಡಲು ಬಿಡದೆ ಇರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಆಡಳಿತದ 3 ವರ್ಷದ ಅವಧಿಯಲ್ಲಿ ಸುನೀಲ್ ಕುಮಾರವರು ಜಿಲ್ಲೆಯ ಆಯಕಟ್ಟಿನ ಸ್ಥಳಗಳಲ್ಲಿ ತನಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿರುಮವನ್ನು ಜಿಲ್ಲೆಯ ಜನತೆ ಮರೆತಿಲ್ಲ. ಸುನೀಲ್ ಕುಮಾರರ ಸಚಿವರಾಗಿದ್ದಾಗ ಪೋಲಿಸ್ ಠಾಣೆಗಳು ಮಟ್ಕಾ ಬಿಡ್ಡರ, ಕ್ಲಬ್ ಮಾಲಿಕರ ಮತ್ತು ಸಮಾಜಘಾತಕ ಶಕ್ತಿಗಳ ಹತೋಟಿಯಲ್ಲಿದ್ದು , ಸಜ್ಜನರು ಮತ್ತು ಬಡವರಿಗೆ ನ್ಯಾಯ ಸಿಗುತ್ತಿರಲಿಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಖುದ್ದು ದಕ್ಷ ಪೋಲಿಸ್ ಅಧಿಕಾರಿಯನ್ನು ಜಿಲ್ಲೆಗೆ ನೇಮಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಂದರು ಇಲಾಖೆ ಹಾಗೂ ಸಿ.ಆರ್.ಝಡ್ ನವರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ತ್ವರಿತವಾಗಿ ಗುಣಮಟ್ಟದೊಂದಿಗೆ ಕೈಗೊಳ್ಳುವುದರೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು. ಕೃಷಿ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವ ನ.23ರಿಂದ 30ರ ತನಕ ನಡೆಯಲಿದೆ. ನ.28ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವೈಭವದ ಮನ್ಮಹಾರಥೋತ್ಸವ ನೆರವೇರಲಿದೆ. ಉತ್ಸವದ ಮೊದಲನೇ ದಿನ ಸಾಂಪ್ರದಾಯಿಕ ವಿಧಿ-ವಿಧಾನದ ಮೂಲಕ ಧ್ವಜಮರವನ್ನು ತಂದು ನೆಡುವುದರ ಮೂಲಕ ಅಂಕುರಾರ್ಪಣೆಯೊಂದಿಗೆ ಆರಂಭಗೊಂಡಿತು. ಎರಡನೇ ದಿನ ಗಜಾರೋಹಣ ಉತ್ಸವ, ಯಾಗಶಾಲೆಯಲ್ಲಿ ಪುಣ್ಯಾಹ ಜಾತ್ರೋತ್ಸವ ವೈಭವ ಹೋಮ, ರಾತ್ರಿ ಸಲಾಂ ಮಂಗಳಾರತಿ ದಿನ ಗಜಾರೋಹಣ, ಅಶ್ವಾರೋಹಣ ನಡೆಯುತ್ತದೆ. ಮೂರನೆಯ ದಿನ ಅಶ್ವಾರೋಹಣ, ಓಲಗ ಮಂಟಪದಲ್ಲಿ ಪೂಜೆ ನಗರೋತ್ಸವ ನಡೆಯುತ್ತದೆ. ನಾಲ್ಕನೆಯ ದಿನ ಮಯೂರ ವಾಹನ ಉತ್ಸವ, ರಾತ್ರಿ ರಂಗಪೂಜೆ ನಡೆಯುತ್ತದೆ. ಐದನೆಯ ದಿನ ಪುಷ್ಪಕ ಸಿಂಹಾರೋಹಣ ಉತ್ಸವ, ರಂಗಪೂಜೆ ಜರುಗುತ್ತದೆ. ಈ ದಿವಸ ಅಮ್ಮನವರು ಮೂಲಸ್ಥಾನವಾದ ಸಮುದ್ರ ದಂಡೆಯ ದೇವಿಕೆರೆ ತೊಪ್ಪಲು ಕಟ್ಟೆಗೆ ತೆರಳುತ್ತಾರೆ. ಆರನೆಯ ದಿನ ಮನ್ಮಹಾರಥೋತ್ಸವ, ಏಳನೆಯ ದಿನ ಓಕುಳಿ ಮತ್ತು ಚೂರ್ಣೋತ್ಸವ ನಡೆಯುತ್ತದೆ. ಎಂಟನೇ ದಿನ ಧ್ವಜಾವರೋಹಣ, ಅಂಕುರ ಪ್ರಸಾದ ವಿನಿಯೋಗ ರಾತ್ರಿ ನಗರೋತ್ಸವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ನಿಸರ್ಗ, ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಣಕು ಸಂಸತ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಮತ್ತು ಉಪನ್ಯಾಸಕ ವೃಂದದವರು ಮತ್ತು ಇ ಎಲ್ ಸಿ ಕ್ಲಬಿನ ಮಾರ್ಗದರ್ಶಕ ಉಪನ್ಯಾಸಕಿ ಸಂಧ್ಯಾ ನಾಯಕ ಅಭಿನಂದಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ತೃತೀಯ ಮತ್ತು ದ್ವಿತೀಯ ಬಿಎ 29 ವಿದ್ಯಾರ್ಥಿಗಳಿಗೆ ಮೂರು ದಿನಗಳ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರವಾಸದಲ್ಲಿ ಸ್ಥಳಗಳಾದ ಮೈಸೂರು ಸೋಮನಾಥಪುರ ಶ್ರೀರಂಗಪಟ್ಟಣ ತಲಕಾಡು ಈ ಸ್ಥಳಗಳ ಐತಿಹಾಸಿಕ ವಿವರವನ್ನು ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮೋಹನ್ ಕುಮಾರ್ ಮಕ್ಕಳಿಗೆ ಮಾಹಿತಿ ನೀಡಿದರು. ಈ ತಂಡದಲ್ಲಿ ಉಪನ್ಯಾಸಕರಾದ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರಭಾಕರ್, ಜಲಕನ್ಯೆ ಹಾಗೂ ಶಾಮಲಾ ಅವರು ಉಪಸ್ಥಿತರಿದ್ದರು.

Read More

ಬೈಂದೂರು: ಕ್ರಿಕೆಟ್ ಅಕಾಡೆಮಿ ಸ್ಥಾಪಿಸುವ ವಿಚಾರದಲ್ಲಿ ಉಂಟಾದ ಆರ್ಥಿಕ ಗೊಂದಲದಿಂದಾಗಿ ಸರೀಗ್ ಎಂಬುವವರು ಕಣ್ಣೂರು ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ ಬಗ್ಗೆ ಓಂ ಭಾರತ್ ಇಂಡಿಯಾ ಕಂಪೆನಿಯ ಮ್ಯಾನೇಜಿಂಗ್ ಡೈರೆಕ್ಟರ್ ರಾಜೀವ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಓಂ ಭಾರತ್ ಇಂಡಿಯಾ ಎಂಬ ಸಂಸ್ಥೆಯಲ್ಲಿ ರಾಜೀವ್ ಕುಮಾರ್ ಮ್ಯಾನೇಜಿಂಗ್ ಪಾರ್ಟ್ನರ್ ಆಗಿದ್ದು, ಸಾಜು ಎಂಬುವವರು ಪಾರ್ಟ್ನರ್ ಆಗಿದ್ದಾರೆ. ಸರೀಗ್ ಎಂಬುವವರು ದೂರಿನಲ್ಲಿ ತಿಳಿಸಿದಂತೆ ಕ್ರಿಕೆಟ್ ಅಕಾಡೆಮಿ ಹೆಸರಿನಲ್ಲಿ ಯಾವುದೇ ಹಣ ಸ್ವೀಕರಿಸಿಲ್ಲ. ಬದಲಾಗಿ ವಿಲ್ಲಾ ನಿರ್ಮಿಸಿಕೊಡುವ ಯೋಜನೆಗೆ ಓಂ ಭಾರತ್ ಇಂಡಿಯಾ ಸಂಸ್ಥೆಯಲ್ಲಿ ಸರೀಗ್ ಎಂಬ ವ್ಯಕ್ತಿ ಹಣ ಹೂಡಿಕೆ ಮಾಡಿದ್ದರು. ಈ ಸಂಸ್ಥೆಯ ಮ್ಯಾನೇಜಿಂಗ್ ಪಾರ್ಟ್ನರ್ ರಾಜೀವ್ ಕುಮಾರ್ ಮತ್ತು ಸರೀಗ್ ಎಂಬ ವ್ಯಕ್ತಿಯ ನಡುವೆ ನಡೆದಿರುವ ವ್ಯವಹಾರದಲ್ಲಿ, ಉದ್ಯಮಿ ಕೆ. ವೆಂಕಟೇಶ್ ಕಿಣಿ ಹಾಗೂ ಕ್ರಿಕೆಟರ್ ಶ್ರೀಶಾಂತ್ ಅವರು ಇದ್ದಾರೆ ಎಂಬು ಬಿಂಬಿಸಿ ದೂರು ನೀಡಲಾಗಿದೆ. ಆದರೆ ಅವರಿಬ್ಬರೂ ಈ ವ್ಯವಹಾರದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಪಾಲುದಾರಿಕೆ ಅಥವಾ ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾಧ್ಯಕ್ಷರಾಗಿ ಮುಸ್ತಾಕ್ ಅಹ್ಮದ್ ಬೆಳ್ವೆ ಹಾಗೂ ಕಾರ್ಯದರ್ಶಿಯಾಗಿ ಝಹೀರ್ ನಾಖುದಾ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಮಹಾಸಭೆ ಉಡುಪಿಯ ಮಣಿಪಾಲ್ ಇನ್ ಹೋಟೆಲಿನಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಬೆಳ್ವೆ ಮುಸ್ತಾಕ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೌ ಫಝಲ್ ಅಹ್ಮದ್ ಕಂಡ್ಲೂರ್ ಇವರ ಕುರಾನ್ ಪಠಣ ದೊಂದಿಗೆ ಸಭೆ ಆರಂಭವಾಯಿತು. ಜಿಲ್ಲಾ ಅಧ್ಯಕ್ಷ ಮುಸ್ತಾಕ್ ಅಹ್ಮದ್ ಬೆಳ್ವೆ ಪ್ರಾಸ್ತಾವಿಕ ಹಾಗು ಬಂದಂತ ಅತಿಥಿಗಳನ್ನು ಸ್ವಾಗತಿಸಿದರು. ಮೌ ಝಮಿರ್ ಅಹ್ಮದ್ ರಷಾದಿ ವರದಿ ಮಂಡಿಸಿದರು. ಸಯ್ಯದ್ ಅಜ್ಮಲ್ ಲೆಕ್ಕ ಪತ್ರ ಮಂಡನೆ ಮಾಡಿದರು. ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪಡೆದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬ್ ಹಾಗು ಸಮಾಜ ಸೇವಕರಾದ ಡಾ ಮೊಹಮ್ಮದ್ ರಫೀಕ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಗ್ರಿಬ್ ನಮಾಜಿನ ನಂತರ 2024-25 ರ ಸಾಲಿನ ನೂತನ ಜಿಲ್ಲಾ ಅಧ್ಯಕ್ಷ ಹಾಗು ಇತರ ಪದಾಧಿಕಾರಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಪುರಾಣ ಪ್ರಸಿದ್ಧ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ನ.27ರಂದು ದೇವರ ಶ್ರೀಮನ್ಮಹಾರಥೋತ್ಸವ (ಕೊಡಿ ಹಬ್ಬ) ನ.27ರಂದು ನಡೆಯಲಿವೆ. ಕೋಡಿ ಹಬ್ಬದ ಪ್ರಯುಕ್ತ ನ.21ರಂದು ಧ್ವಜಾರೋಹಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ನ.24ರಂದು ರಂಗೋತ್ಸವ, ಶತರುದ್ರಾಭಿಷೇಕ, ಕುಂಜರವಾಹನೋತ್ಸವ, ನ.25ರಂದು ಅಶ್ವವಾಹನೋತ್ಸವ, ನ.26ರಂದು ಸಿಂಹವಾಹನೋತ್ಸವ, ನ.27ರಂದು ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀಮನ್ಮಹಾರಥೋತ್ಸವ, ನ.28ರಂದು ಚೂರ್ಣೋತ್ಸವ, ಅವಭೃತ ಸ್ನಾನ ಕಾರ್ಯಕ್ರಮ, ಸ್ಥಳೀಯ ವಿವಿಧ ಭಜನಾ ಮಂಡಳಿಗಳ ನೇತೃತ್ವದಲ್ಲಿ ಪ್ರತಿದಿನ ಸಂಜೆ 6 ಗಂಟೆಯಿಂದ ಭಜನೆ ಹಾಗೂ ಮಂಗಲೋತ್ಸವ ಕಾಠ್ಯಕ್ರಮ ಜರುಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮ:ನ.24ರಂದು ಪುತ್ತೂರು ಬಾಲವನ ಮಹಿಳಾ ಕಲಾವಿದರಿಂದ ವೀರಮಣಿ ಕಾಳಗ ಯಕ್ಷಗಾನ, ನ.25ರಂದು ಶಿವಾನಂದ ಸಂಗಡಿಗರಿಂದ ಗಾನೋಪಾಸನ, ನ.26ರಂದು ಬೆಂಗಳೂರು ಗೋಪಿ ಮತ್ತು ಬಳಗದವರಿಂದ ನಗೆ ಹಬ್ಬ ನ.27ರಂದು ಅರೆಹೊಳೆ ನಂದಗೋಕುಲ ಕಲಾವಿದರಿಂದ ನೃತ್ಯವರ್ಷಾ, ನ.28ರಂದು ವಿದುಷಿಭಾಗೀರಥಿ ಎಂ. ರಾವ್ ಅವರ ಶಿಷ್ಯರಿಂದ ನೃತ್ಯ ಸೌರಭ (ಚಿಣ್ಣರ ಚಿಲಿಪಿಲಿ) ಕಾರಕ್ರಮಗಳು ಪ್ರತಿದಿನ ರಾತ್ರಿ 8 ಗಂಟೆಯಿಂದ…

Read More