Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡ ಗ್ರಾಮದ ವಿವಿದೆಡೆಗೆ ಸರಕಾರಿ ಬಸ್ಸು ಓಡಿಸಲು ಹಾಗೂ ಮರವಂತೆ ಮಹಾರಾಜ ಸ್ವಾಮಿ ಬಳಿ ಬಸ್ ನಿಲುಗಡೆಗೆ ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಪಡುಕೋಣೆ ಘಟಕ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಬೈಂದೂರು ತಾಲೂಕು ವತಿಯಿಂದ ನಾಡ ಗ್ರಾ.ಪಂ ಎದುರು ಪ್ರತಿಭಟನೆ ಜರುಗಿತು. ಈ ವೇಳೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಏಕಸ್ವಾಮ್ಯದಿಂದಾಗಿ ಸರಕಾರಿ ಬಸ್ಗಳ ಸಂಖ್ಯೆ ಕಡಿಮೆಯಿದೆ. ಖಾಸಗಿ ಬಸ್ ಮಾಲಕರು ಅವಿಭಜಿತ ದ.ಕ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ನಿಯಂತ್ರಿಸುತ್ತಿದ್ದಾರೆ. ನಾಡ-ಪಡುಕೋಣೆಯಲ್ಲಿ ಎದ್ದ ಸರಕಾರಿ ಬಸ್ ವಿಚಾರದ ಧ್ವನಿ ಇಡೀ ಕರಾವಳಿ ಹೆಣ್ಣುಮಕ್ಕಳ ಪರವಾದ ಧ್ವನಿಯಾಗಬೇಕು. ಇದು ಆರಂಭದ ಹೋರಾಟವಾಗಿದ್ದು ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಮುಂದೆ, ಆ ಬಳಿಕವೂ ಈಡೇರದಿದ್ದರೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ಕಚೇರಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದರ. ಸಾರಿಗೆ ಅವ್ಯವಸ್ಥೆಯ ವಿರುದ್ದ ಡಿವೈಎಫ್ಐ ಸಂಘಟನೆ ನಾಲ್ಕು ದಶಕಗಳಿಂದ ಹೋರಾಟಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ ಬಗ್ಗೆ ನಮ್ಮ ಚಿಂತನೆ ಜೀವನದಲ್ಲಿ ರೂಢಿಯಾದರೆ ಯಾವುದೇ ಸಿದ್ಧ ಚೌಕಟ್ಟನ್ನು ಮುರಿದು ಬೆಳೆಯಬಹುದು. ಸೃಜನಾತ್ಮಕ ಚಿಂತನೆ ವಿದ್ಯಾರ್ಥಿಗಳಿಗೆ ಅಗತ್ಯ ಎಂದು ಶಿಕ್ಷಣ ತಜ್ಞ, ನಿವೃತ್ತ ಪ್ರಾಂಶುಪಾಲ ಡಾ| ಎಂ. ಮಹಾಬಲೇಶ್ವರ ರಾವ್ ಹೇಳಿದರು. ಕುಂದಾಪುರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ, ಬೈಂದೂರು ವಕೀಲರ ಸಂಘ (ರಿ) ಬೈಂದೂರು ಹಾಗೂ ಅಭಿಯೋಗ ಇಲಾಖೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು. ಬೈಂದೂರು ನ್ಯಾಯಾಲಯದ ನ್ಯಾಯಾಧೀಶರಾದ ವಿದ್ಯಾ ಅವರು ಮಾತನಾಡಿ ಯೋಗಾಭ್ಯಾಸದಿಂದ ಆರೋಗ್ಯದ ವೃದ್ಧಿಯೊಂದಿಗೆ ಮನಸ್ಸಿನ ನಿಗ್ರಹ ಕೂಡ ಸಾಧ್ಯ ಎಂದರು. ಮುಖ್ಯ ಅತಿಥಿ ಹನುಮಂತ ಜಿ ಮಾತನಾಡಿ ಯೋಗದ ಪ್ರಾಮುಖ್ಯತೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ, ಸಹಾಯಕ ಅಭಿಯೋಜಕರಾದ ಇಂದಿರಾ ನಾಯ್ಕ, ಹಾಗೂ ಮುಖ್ಯ ಅತಿಥಿಯಾಗಿ ಯೋಗ ಪಟು ಹನುಮಂತ ಜಿ ಅವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಯೋಗ ಪಟು ಹನುಮಂತ ಜಿ ಅವರು ಯೋಗ ತರಬೇತಿ ನೀಡಿದರು. ಬೈಂದೂರು ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೂನ್ ತಿಂಗಳು ಮಗಿಯುತ್ತಾ ಬಂದರೂ ಕಣ್ಣಾಮುಚ್ಚಾಲೆಯಾಡುತ್ತಿದ್ದ ಮಳೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಕೆಲ ಹೊತ್ತು ಸುರಿದಿದೆ. ಮಳೆಯ ವಿಳಂಬದಿಂದಾಗಿ ಕಂಗಾಲಾಗಿದ್ದ ರೈತಾಪಿ ವರ್ಗ ಮತ್ತೆ ಕೃಷಿ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಜೂನ್ 1 ರಿಂದ ವಾಡಿಕೆಯಂತೆ 100ಮೀ. ಮೀ ಮಳೆಯಾಗಬೇಕಿದ್ದು, ಈತನಕ ಕೇವಲ 30ಮಿ.ಮೀ. ಮಳೆಯಾಗಿದೆ. ನೀರಿನ ಮೂಲಗಳು ಬತ್ತಿದ್ದು ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿತ್ತು. ಮಳೆಗಾಲ ಆರಂಭಗೊಂಡರೂ ನಿರೀಕ್ಷಿತ ಮಳೆಯಾಗದೇ ಇದ್ದುದರಿಂದ ಬೀಜ ಬಿತ್ತನೆಯೂ ಕಷ್ಟವಾಗಿತ್ತು. ಕೆಲವೆಡೆ ಕೃತಕ ನೀರಿನ ಮೂಲಗಳನ್ನು ಬಳಸಿ ಬಿತ್ತನೇ ಮಾಡಿದ್ದರೂ, ನಾಟಿ ಕಾರ್ಯಕ್ಕೆ ಮಳೆ ನಿರೀಕ್ಷೆಯಲ್ಲಿದ್ದರು. ಇದೀಗ ಮಳೆಯ ಛಾಯೆ ಕಾಣಿಸಿಕೊಂಡಿರುವುದು ರೈತರಲ್ಲಿ ಕೊಂಚ ನೆಮ್ಮದಿ ಕಾಣುವಂತಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪುಸ್ತಕ ಪ್ರೀತಿ ಬೆಳೆಸಿಕೊಳ್ಳುವ ಮುಖೇನ ಸ್ವತಂತ್ರ ಯೋಚನೆ ಹಾಗೂ ಯೋಜನೆಗಳಿಗೆ ಮುಂದಾಗ ಬೇಕು. ಆಗ ಮಾತ್ರ ತಮ್ಮದೇ ಆದ ಬದುಕು ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬಹುದು ಎಂದು ರೋಟರಿ ಕ್ಲಬ್ ಕುಂದಾಪುರದ ಡಿಸ್ಟಿಕ್ ಚೇರ್ಮನ್ ಆವರ್ಸೆ ಮುತ್ತಯ್ಯ ಶೆಟ್ಟಿ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯಕ್ಕೆ ಕುಂದಾಪುರದ ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ನೀಡಿದ ಸುಮಾರು 60 ಪುಸ್ತಕಗಳನ್ನು ಪಾಂಶುಪಾಲರಿಗೆ ಹಸ್ತಾಂತರಿಸಿ ಮಾತನಾಡಿದರು. ಈ ಸಂದರ್ಭ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ವೆಂಕಟೇಶ್ ನಾವುಂದ, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅತಿಥಿ ನೆಲೆಯ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಸಾಹಿತ್ಯದ ಓದು ವಿದ್ಯಾರ್ಥಿಗಳ ಬದುಕಿನಲ್ಲಿ ತಾಳ್ಮೆ, ಸಹನೆಯೊಂದಿಗೆ ಮಾನಸಿಕ ಖಿನ್ನತೆಯನ್ನು ದೂರ ಮಾಡುತ್ತದೆ ಎಂದರು. ಕಾಲೇಜಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಶಸ್ವಿ 12ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ನಿಮ್ಮ ’ಕುಂದಾಪ್ರ ಡಾಟ್ ಕಾಂ’, ಪ್ರಗತಿಯ ದೃಷ್ಟಿ, ಹೊಸ ಆಲೋಚನೆಗಳ ಸೃಷ್ಟಿಗೆ ವೇದಿಕೆ ಕಲ್ಪಿಸುವ ಆಶಯದೊಂದಿಗೆ ವಿಷನ್ ಬೈಂದೂರು ಎಂಬ ಕಾರ್ಯಕ್ರಮವನ್ನು ಜೂನ್.24ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಉಪ್ಪುಂದದ ನಂದನವನ – ದೇವಕಿ ಬಿ.ಆರ್. ಸಭಾಂಗಣದಲ್ಲಿ ಆಯೋಜಿಸಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಅಭಿವೃದ್ಧಿಯ ಕನಸು ಹೊತ್ತ ನಾಗರಿಕರೊಂದಿಗೆ ಮಾತು – ಚರ್ಚೆ – ಮಂಥನ ನಡೆಯಲಿದೆ. ಕಾರ್ಯಕ್ರಮವನ್ನು ಬೈಂದೂರಿನ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಅಭಿವೃದ್ಧಿಯ ಪರಿಕಲ್ಪನೆ ಎಂಬ ವಿಷಯದ ಬಗ್ಗೆ ರಾಜ್ಯ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹಾಗೂ ಅಭಿವೃದ್ಧಿ ಸಮಸ್ಯೆ ಮತ್ತು ಸವಾಲುಗಳು ಎಂಬ ವಿಷಯದ ಬಗ್ಗೆ ಕೇಂದ್ರ ರೈಲ್ವೆ ಬೋರ್ಡ್ ಮಾಜಿ ಸದಸ್ಯ ಕೆ. ವೆಂಕಟೇಶ್ ಕಿಣಿ ವಿಚಾರ ಮಂಡನೆ ಮಾಡಲಿದ್ದಾರೆ. ಬಳಿಕ ಬೈಂದೂರು ಶಾಸಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕಾರ್ಕಳ: ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವುದರ ಮೂಲಕ ಸಮಾಜಮುಖಿ ಚಿಂತನೆ ಹಾಗೂ ಶೈಕ್ಷಣಿಕ ಕ್ರಾಂತಿಯ ಮಹಾತ್ವಾಕಾಂಕ್ಷೆಯೊಂದಿಗೆ ಆರಂಭಿಸಲಾದ “ಕ್ರಿಯೇಟಿವ್‌ ನಿನಾದ”ದ ನಾಲ್ಕನೇ ಸಂಚಿಕೆ ಹಾಗೂ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು. ಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಕ್ರಿಯಾತ್ಮಕ ಮತ್ತು ಸೃಜನ ಶೀಲತೆಯನ್ನು ಒಂದುಗೂಡಿಸಿ ಹೊಸ ವಿಚಾರವಂತಿಕೆಗಳನ್ನು ಮೂಡಿಸುವ ಸಂಚಿಕೆ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಹಾರೈಸಿದರು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಒಂದೇ ಸೂರಿನಡಿ ಯಶಸ್ಸಿನ ಆಯ್ಕೆಗೆ ಕ್ರಿಯೇಟಿವ್‌ ಮುಂಚೂಣಿಯಲ್ಲಿದೆ ಎಂದು ಅಭಿಪ್ರಾಯ ಪಟ್ಟರು. ಸಂಸ್ಥಾಪಕರಾದ ಅಮೃತ್‌ ರೈ ಮಾತನಾಡಿ ಕ್ರಿಯಾಶೀಲ ವ್ಯಕ್ತಿತ್ವಗಳಿಗೆ ವಿಶೇಷ ಅಭಿವ್ಯಕ್ತಿ ನೀಡುವ ಮೂಲಕ ನಿನಾದ ಮುನ್ನಡಿಯಾಗಿದೆ. ಹೊಸ ಯೋಚನೆ, ಯೋಜನೆಗಳೊಂದಿಗೆ ಕಾರ್ಯ ಪ್ರವೃತ್ತರಾಗಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಅಶ್ವತ್ ಎಸ್‌. ಎಲ್‌, ಆದರ್ಶ ಎಂ. ಕೆ, ವಿಮಲ್ ರಾಜ್‌ ಹಾಗೂ “ನಿನಾದ” ಸಂಪಾದಕರಾದ ರಾಘವೇಂದ್ರ ರಾವ್‌, ಉಪನ್ಯಾಸಕರಾದ ವಿನಾಯಕ ಜೋಗ್‌, ರಾಜೇಶ್‌ ಶೆಟ್ಟಿ, ರಾಮಕೃಷ್ಣ ಹೆಗಡೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರಾಟೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗುತ್ತದೆ ಮತ್ತು ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಕರಾಟೆ ಕಲೆಯನ್ನು ಕಲಿಯಲು ಉತ್ಸಾಹ ತೋರಬೇಕು. ಇದರಿಂದ ನಮ್ಮಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕೋಡಿ ವಿಠಲ ಕಾಮತ್ ಹೇಳಿದರು. ಗಂಗೊಳ್ಳಿಯ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಗಂಗೊಳ್ಳಿಯಲ್ಲಿ ಕರಾಟೆ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಮ್ಮಾಡಿ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಹೆಮ್ಮಾಡಿ ಜನತಾ ಹೈಸ್ಕೂಲಿನ ಉಪನ್ಯಾಸಕ ಜಗದೀಶ ಶೆಟ್ಟಿ, ಉದ್ಯಮಿ ಸಂತೋಶ ಗುಡ್ರಿ ಶುಭ ಹಾರೈಸಿದರು. ಗಂಗೊಳ್ಳಿಯ ಮತ್ಸ್ಯೋದ್ಯಮಿ ರಾಘವೇಂದ್ರ ಖಾರ್ವಿ (ಇಂದ), ರಾಘವೇಂದ್ರ ಖಾರ್ವಿ, ವೆಂಕಟೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಕರಾಟೆ ಶಿಕ್ಷಕ ಅಕ್ಷಯ್ ಪೂಜಾರಿ ಸ್ವಾಗತಿಸಿದರು. ಶಿಕ್ಷಕ ಸಂತೋಷ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್. ಸೋಮವಾರ ಅಧಿಕಾರ ಸ್ವೀಕರಿಸಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಕೊರ್ಲಹಳ್ಳಿ ಅವರು ಹರೀಶ್ ಆರ್. ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ವಿನಯ್ ಕೊರ್ಲಹಳ್ಳಿ ಕುಂದಾಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕಡೂರು ಸಂಚಾರ ಠಾಣೆಯ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರ ಜೀವನವೇ ನಮಗೊಂದು ಪಾಠವಿದ್ದಂತೆ, ಅವರ ಬದುಕು ಬರಹವನ್ನು ಮುಂದಿನ ಜನಾಂಗಕ್ಕೆ ತಲುಪಿಸಲು ಕಾರಂತ ಥೀಮ್ ಸಹಕಾರಿ, ಅಲ್ಲದೇ ಮಕ್ಕಳಿಗಾಗಿ ಇಲ್ಲಿ ನಡೆಸುವ ಚಟುವಟಿಕೆಗಳು ಅನುಕರಣೀಯ ಎಂದು ಕಾರವಾರ ಸಹಾಯಕ ಆಯುಕ್ತರು ಜಯಲಕ್ಷ್ಮೀ ರಾಯಕೋಡ್ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ಕಿರು ಸಭಾಂಗಣ, ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಟ್ಕಳ ಸಹಾಯಕ ಆಯುಕ್ತರು ಮಮತಾ ದೇವಿ ಜಿ.ಎಸ್ ಮಾತನಾಡಿ ಸಾಹಿತ್ಯ ಕ್ಷೇತ್ರಕ್ಕೆ ಕಾರಂತರ ಕೊಡುಗೆ ಅಪಾರವಾದುದು, ಅವರ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹತ್ತಿರವಾಗಿದೆ, ಥೀಮ್ ಪಾರ್ಕ್ ಇನ್ನಷ್ಟು ಪ್ರಸಿದ್ಧಿ ಪಡೆಯಲಿ ಎಂದರು. ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಶ್ರೀ ಸುಬ್ರಾಯ ಆಚಾರ್ಯ, ಮಾಜಿ ಕುಂದಾಪುರ ತಾಲ್ಲೂಕು ಪಂಚಾಯತ್ ಸದಸ್ಯ ಶ್ರೀ ಕರಣ್ ಪೂಜಾರಿ, ಕೋಟ ಶ್ರೀನಿವಾಸ…

Read More