Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳನ್ನು ತಡೆದು, ಇವುಗಳ ವಿರುದ್ದ ತ್ವರಿತಗತಿಯಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸೀ ವಿಜಲ್ (cVIGIL) ಆಪ್ ನ್ನು ಚುನಾವಣಾ ಆಯೋಗ ಬಿಡುಗಡೆಗೊಳಿಸಿದೆ. ಚುನಾವಣಾ ಸಮಯದಲ್ಲಿ ಮತದಾರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಅಮಿಷಗಳಾದ ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದ ಪೋಸ್ಟರ್ ಗಳು ಮತ್ತು ಬ್ಯಾನರ್ ಬಳಕೆ, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ ಹಾಗೂ ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿ ವಿಜಿಲ್ ಆಪ್ ನಲ್ಲಿ ಅದರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಜೆಸಿಐ ಬೈಂದೂರು ಸಿಟಿಯ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಕಾರ್ಯಕ್ರಮವು ದೊಂಬೆ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಇತ್ತೀಚಿಗೆ ನಡೆಯಿತು. ಈ ಕಾಯಕ್ರಮದ ಅಧ್ಯಕ್ಷತೆಯನ್ನು ಸಿಟಿ ಜೆಸಿಐ ಅಧ್ಯಕ್ಷ ನರೇಂದ್ರ ಶೇಟ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಜು ಡಿ., ಅಧ್ಯಕ್ಷರು ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ ಉಪ್ಪುಂದ ವಹಿಸಿ ಜೆಸಿಐ ಬಗ್ಗೆ ಮೆಚ್ಚುಗೆಯ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಆಗಿ ಸಮಾಜ ಸೇವಕಿ ಹಾಗೂ ಎಸ್.ಎಲ್.ಆರ್.ಎಂ ಘಟಕದ ಮೇಲ್ವಿಚಾರಕಿ ಸುನೀತಾ ಮರವಂತೆ ಹಾಗೂ ಪೌರಕಾರ್ಮಿಕ ಹರೀಶ ಗಣಪ ಕೊರಗ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅದ್ಯಕ್ಷೆ ಸವಿತಾ ದಿನೇಶ್ ಗಾಣಿಗ ಹಾಗೂ ಪೂರ್ವಧ್ಯಕ್ಷರು. ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಸತೀಶ್ ಎಂ ಧನ್ಯವಾದಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹೆತ್ತವರು ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರವಿರಾಜ್ ನಾಯಕ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವಂತಹ ನೆಲೆಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮನ್ನು ತಾವು ಮೊದಲು ಅರಿಯಬೇಕು. ತನ್ನಲ್ಲಿರುವ ಕೌಶಲಗಳನ್ನು ಗುರುತಿಸಿಕೊಳ್ಳಬೇಕು. ಜೊತೆಗೆ ಉತ್ತಮ ಅಂಕಗಳನ್ನು ಪಡೆಯುವುದು ತುಂಬಾ ಮುಖ್ಯ. ಅಲ್ಲದೆ ಸಾಮಾನ್ಯ ಜ್ಞಾನ ಅಷ್ಟೇ ಅಗತ್ಯ ಅಲ್ಲದೆ ಹೆತ್ತವರ ಜವಾಬ್ದಾರಿಯನ್ನು ನೆನಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಭಾವತಿ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಆದಂ ಗುಲ್ವಾಡಿ, ರಾಜೇಂದ್ರ ಉರಾಳ್ ಪ್ರಾಕ್ತನ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಲೇಜಿನ ಪ್ರಾಧ್ಯಾಪಕ ಪ್ರೊ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಎ.8: ಮೂಡ್ಲಕಟ್ಟೆ ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಇಸ್ರೋ ಮಾಜಿ ವಿಜ್ಞಾನಿ ಡಾ. ಕೆ. ಗಣೇಶ ರಾಜ್ ಅವರಿಂದ ಐ.ಎಂ. ಜಯರಾಮ ಶೆಟ್ಟಿ ಸ್ಮರಣಾರ್ಥ ಭೂಕಂಪ ಹಾಗೂ ಸಮಾಜದ ಮೇಲೆ ಅದರ ಪರಿಣಾಮ ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. ಈ ವೇಳೆ ಡಾ. ಕೆ. ಗಣೇಶ ರಾಜ್ ಅವರು ಮಾತನಾಡಿ, ಜಗತ್ತಿನ ವಿವಿಧೆಡೆ ನಡೆದ ದೊಡ್ಡ ಭೂಕಂಪಗಳು ಹಾಗೂ ಅವುಗಳಿಂದ ಸಮಾಜದ ಮೇಲೆ ಆದ ನಷ್ಟ ಮತ್ತು ದುಷ್ಪರಿಣಾಮಗಳನ್ನು ಬಗ್ಗೆ ಮಾತನಾಡಿದರು. ಪ್ರಾಕೃತಿಕವಾಗಿ ಸಂಭವಿಸುವ ಭೂಕಂಪನವನ್ನು ತಡೆಯಲಾಗದಿದ್ದರೂ, ಅದರಿಂದ ಆಗುವ ಪರಿಣಾಮಗಳ ತೀವ್ರತೆಯನ್ನು, ಕಟ್ಟಡಗಳನ್ನು ಸರಿಯಾಗಿ ಕಟ್ಟುವುದರ ಮೂಲಕ ಕಡಿಮೆಗೊಳಿಸಲು ಸಾಧ್ಯವಿದೆ ಎಂದರು. ಈ ದಿಸೆಯಲ್ಲಿ ಜಪಾನ್ ದೇಶದ ಮಾದರಿ ಅನುಕರಣೀಯ. ನಮ್ಮ ಕರವಾಳಿಯು ಸುರಕ್ಷಿತ ವಲಯದಲ್ಲಿರುವುದರಿಂದ ತುಂಬಾ ಚಿಂತಿಸುವ ಅಗತ್ಯವಿಲ್ಲ ಆದರೆ ಕಟ್ಟಡ ನಿರ್ಮಾಣ ಸಮಯದಲ್ಲಿ ಅಗತ್ಯಕ್ರಮಗಳನ್ನು ತೆಗೆದುಕೊಳ್ಳವುದು ಒಳ್ಳೆಯದು ಎಂದರು. ಐ.ಎಂ.ಜೆ ಸಂಸ್ಥೆಗಳ ಮುಖ್ಯಸ್ಥರಾದ ಸಿದ್ಧಾರ್ಥ ಜೆ.…

Read More

ಕುಂದಾಪ್ರ ಡಾಟ್ ಕಾಂ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕೂಸಳ್ಳಿ ಫಾಲ್ಸ್‌ನಲ್ಲಿ ಶುಕ್ರವಾರ ಸಂಜೆ ಈಜುವ ಸಂದರ್ಭ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತದೇಹ ಶನಿವಾರ ಪತ್ತೆಯಾಗಿದೆ. ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೋರ್ಸ್ ಕಲಿಯುತ್ತಿದ್ದ. ಶುಕ್ರವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರಾದ ಕಿರ್ತನ್ ದೇವಾಡಿಗ, ಅಕ್ಷಯ್ ಆಚಾರಿ, ಆಲ್ವಿನ್, ಧರಣ್, ರೆಯಾನ್ ಜೊತೆಗೆ ಗುರುವಾರ ಬೈಂದೂರಿಗೆ ಬಂದಿದ್ದು, ಅಕ್ಷಯ್ ಆಚಾರಿ ಮನೆಯಲ್ಲಿ ಎಲ್ಲರೂ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕಿನಲ್ಲಿ ಕೊಸಳ್ಳಿ ಫಾಲ್ಸ್‌ಗೆ ಹೋಗಿದ್ದರು. ಚಿರಾಂತ್ ಶೆಟ್ಟಿಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ಈಜಲು ನೀರಿಗಿಳಿದರೇ, ಉಳಿದವರು ದಡದಲ್ಲಿಯೇ ಕುಳಿತಿದ್ದರು. ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕೂಸಳ್ಳಿ ಫಾಲ್ಸ್‌ಗೆ ಸ್ನೇಹಿತರೊಂದಿಗೆ ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಈಜುವ ಸಂದರ್ಭ ಮುಳುಗಿ ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೋರ್ಸ್ ಕಲಿಯುತ್ತಿದ್ದ. ಶುಕ್ರವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರಾದ ಕಿರ್ತನ್ ದೇವಾಡಿಗ, ಅಕ್ಷಯ್ ಆಚಾರಿ, ಆಲ್ವಿನ್, ಧರಣ್, ರೆಯಾನ್ ಜೊತೆಗೆ ಗುರುವಾರ ಬೈಂದೂರಿಗೆ ಬಂದಿದ್ದು, ಅಕ್ಷಯ್ ಆಚಾರಿ ಮನೆಯಲ್ಲಿ ಎಲ್ಲರೂ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕಿನಲ್ಲಿ ಕೊಸಳ್ಳಿ ಫಾಲ್ಸ್‌ಗೆ ಹೋಗಿದ್ದರು. ಚಿರಾಂತ್ ಶೆಟ್ಟಿಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ಈಜಲು ನೀರಿಗಿಳಿದರೇ, ಉಳಿದವರು ದಡದಲ್ಲಿಯೇ ಕುಳಿತಿದ್ದರು. ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮೇ 10ರಂದು ದಿನಾಂಕ ನಿಗದಿಯಾಗಿದ್ದು, ವ್ಯವಸ್ಥಿತ ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮತದಾನದ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಪ್ಯಾರಾ ಮಿಲಿಟರಿ ತುಕಡಿಗಳು, ಸಿ.ಆರ್.ಪಿ.ಎಫ್, ಪೊಲೀಸರು, ಹೋಂ ಗಾರ್ಡ್ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದೆ. ಜನರಿಗೆ ನಿರ್ಭೀತ ಚುನಾವಣೆಯ ಸಂದೇಶ ಸಾರುವ ಸಲುವಾಗಿ ಚುನಾವಣೆಯ ಭದ್ರತೆಗಾಗಿ ನಿಯೋಜನೆಗೊಂಡಿರುವ ಪ್ಯಾರಾ ಮಿಲಿಟರಿ ತುಕಡಿಗಳು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಕುಂದಾಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕಂಡ್ಲೂರು ಹಾಗೂ ಬೈಂದೂರು ಠಾಣಾ ವ್ಯಾಪ್ತಿಯ ಬೈಂದೂರು ಮತ್ತು ಶಿರೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು. ಕಂಡ್ಲೂರು ಭಾಗದಲ್ಲಿ ನಡೆದ ಪಥ ಸಂಚಲನದ ವೇಳೆ ಕುಂದಾಪುರ ಗ್ರಾಮಾಂತರ ಪೊಲೀಸ್ ವೃತ್ತನಿರೀಕ್ಷಕ ಮಹಾಬಲೇಶ್ವರ ನಾಯ್ಕ್, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಗ್ರಾಮಾಂತರ ಠಾಣೆ ಪಿಎಸ್ಐ ಪವನ್ ನಾಯಕ್, ಕ್ರೈಂ ಪಿಎಸ್ಐ ನೂತನ, ಶಂಕರನಾರಾಯಣ ಪಿಎಸ್ಐ ಭರತ್, ಸುದರ್ಶನ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ತಲ್ಲೂರು ಉಪಕೇಂದ್ರದಿAದ ಹೊರಡುವ 11 ಕೆ.ವಿ ಹೆಮ್ಮಾಡಿ, ಗುಲ್ವಾಡಿ, ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಕೆಂಚನೂರು, ದೇವಲ್ಕುಂದ ಮತ್ತು ಸಬ್ಲಾಡಿ ಹಾಗೂ 33/11 ಕೆ.ವಿ ಗಂಗೊಳ್ಳಿ ಉಪಕೇಂದ್ರದಿAದ ಹೊರಡುವ 11 ಕೆ.ವಿ ಮುಳ್ಳಿಕಟ್ಟೆ, ತ್ರಾಸಿ, ಗಂಗೊಳ್ಳಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಲಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ತಲ್ಲೂರು, ಉಪ್ಪಿನಕುದ್ರು, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ ಹೆಮ್ಮಾಡಿ, ಕಟ್ಬೆಲ್ತೂರು ಮತ್ತು ದೇವಲ್ಕುಂದ, ಮುಳ್ಳಿಕಟ್ಟೆ, ಗಂಗೊಳ್ಳಿ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಏ.07: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಂಟೈನರ್, ಬೈಕ್ ಹಾಗೂ ನೀರಿನ ಟ್ಯಾಂಕರ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರರು ಇಬ್ಬರು ಸೇರಿದಂತೆ ನಾಲ್ಕು ಜನರು ಗಂಭೀರ ಗಾಯಗೊಂಡ ಘಟನೆ ತಲ್ಲೂರು ಸಮೀಪದ ಜಾಲಾಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಬೀಜಾಡಿ ನಿವಾಸಿ ಸಂಜೀವ ಮೊಗವೀರ ಹಾಗೂ ಅವರ ಪತ್ನಿ ರತ್ನಾ ಗಂಭೀರ ಗಾಯಗೊಂಡರೆ, ಲಾರಿಯಲ್ಲಿದ್ದ ಅನಾಜ್ ಹಾಗೂ ಶಾಜೀ ಗಾಯಗೊಂಡು ಆಸ್ಪತ್ರೆ ಸೇರಿದವರು. ಮಹಾರಾಷ್ಟ್ರದಿಂದ ಕರ್ಟನ್ ಬಾಕ್ಸ್ ಗಳನ್ನು ತುಂಬಿಸಿದ್ದ ಕಂಟೈನರ್ ಲಾರಿ ಕೇರಳ ಕಡೆಗೆ ತೆರಳುತ್ತಿತ್ತು. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಐ.ಆರ್.ಬಿ. ಕಂಪೆನಿಯ ನೀರಿನ ಟ್ಯಾಂಕರ್ ರಸ್ತೆ ನಡುವಿನ ಗಿಡಗಳಿಗೆ ನೀರು ಹಾಕುತ್ತಿತ್ತು. ಕಂಟೈನರ್ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದೇ ವೇಳೆ ಅದೇ ದಿಕ್ಕಿನಲ್ಲಿ ಸಂಜೀವ ಮೊಗವೀರ ವೀಗೋ ಬೈಕಿನಲ್ಲಿ ಪತ್ನಿ ರತ್ನಾ ಅವರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಏಪ್ರಿಲ್ 12 ರಂದು ಬೈಂದೂರು ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ…

Read More