ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತರಾಖಂಡದ ಸಹಸ್ತ್ರ ತಾಲ್ (ಲೇಕ್) ಗೆ ಚಾರಣ ಹೋಗಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ರಾಜ್ಯದ 9 ಜನರು ಮೃತಪಟ್ಟಿದ್ದು, ಈ ಪೈಕಿ ಕುಂಭಾಶಿ ಮೂಲದ, ಬೆಂಗಳೂರು ವಾಸಿ ಪದ್ಮನಾಭ ಭಟ್ (50) ಅವರೂ ಇದ್ದಾರೆ. ಕುಂಭಾಶಿಯ ಕೊರವಡಿ ರಸ್ತೆಯ ಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಪದ್ಮನಾಭ ಅವರ ಹುಟ್ಟು, ವಿದ್ಯಾ ಭ್ಯಾಸ ಬೆಂಗಳೂರಿನಲ್ಲೇ ನಡೆದಿತ್ತು. ಸಿಎ ವ್ಯಾಸಂಗ ಮಾಡಿದ ಅನಂತರ ಖಾಸಗಿ ಕಂಪೆನಿಯೊಂದಕ್ಕೆ ಸೇರಿದ್ದು ಆ ಸಂಸ್ಥೆಯ ವತಿಯಿಂದ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿನ ಸಿಪಿಎ ತೇರ್ಗಡೆಯಾದರು. ಬೆಂಗಳೂರಿಗೆ ಮರಳಿದ ಬಳಿಕ ಖಾಸಗಿ ಕಂಪೆನಿ ಸೇವೆ ಯಲ್ಲಿ ಮುಂದುವರಿಸಿದ್ದರು. ಕುಂಭಾಶಿಯಲ್ಲಿ ಅವರ ಚಿಕ್ಕಪ್ಪನ ಕುಟುಂಬದವರು ವಾಸ್ತವ್ಯ ಇದ್ದಾರೆ. ಪದ್ಮನಾಭರಿಗೆ ಪ್ರವಾಸ, ಚಾರಣ ಇತ್ಯಾದಿ ಆಸಕ್ತಿ. ಆಗಾಗ ಸಹೋದ್ಯೋಗಿಗಳು, ಸ್ನೇಹಿತರೊಡನೆ ಪ್ರವಾಸ ಹೋಗುತ್ತಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಾಖಂಡದ ಉತ್ತರ ಕಾಶಿಯ ಬೆಟ್ಟ ಪ್ರದೇಶಕ್ಕೆ ಚಾರಣ ಹೋಗಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕಿನ ಶಿರೂರು ಸೇರಿದಂತೆ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ದುಷ್ಕರ್ಮಿಗಳಿಂದ ಜೀವ ಬೇದರಿಕೆ ಒಡ್ಡುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಮೋ ಬಳಗ ಬೈಂದೂರು ಬೈಂದೂರು ತಹಶಿಲ್ದಾರರು ಹಾಗೂ ಪೊಲೀಸರಲ್ಲಿ ಮನವಿ ಮಾಡಿದೆ. ಜೂನ್ 6ರ ಬೆಳಗಿನ ಜಾವ 4ಗಂಟೆಯ ವೇಳೆಯ ಶಿರೂರು ಪೇಟೆಯ ಮಂಜುನಾಥ ಹೋಟೆಲ್ ಎದುರಿನ ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ದುಷ್ಕರ್ಮಿಗಳು ಮಹೇಂದ್ರ ಎಸ್.ಯು.ವಿ ವಾಹನದಲ್ಲಿ ತೆರಳಿ ಕದ್ದೊಯ್ದಿದ್ದಾರೆ. ಇದನ್ನು ಪ್ರಶ್ನಿಸಿದ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಒಂದು ವಾರದ ಹಿಂದೆಯೂ ಶಿರೂರು ಮಾರ್ಕೆಟ್ ಅಂಡರ್ ಪಾಸ್ ಬಳಿ ವಾಹನದಲ್ಲಿ ಬಂದು ಗೋವುಗಳನ್ನು ಹೊತ್ತೊಯ್ದಿರುವ ಬಗ್ಗೆ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕೆಲ ಸಮಯದಿಂದ ಶಿರೂರು, ಬೈಂದೂರು, ಯಡ್ತರೆ, ಬಾಡ ಹಾಗೂ ಸೂರ್ಕುಂದ ಭಾಗಗಳಲ್ಲಿನ ಮನೆಯ ಕೊಟ್ಟಿಗೆಯಲ್ಲಿನ ದನಕರುಗಳ ಕಳವಾಗುತ್ತಿದ್ದು, ಕೃಷಿ ಹಾಗೂ ಹೈನುಗಾರಿಕೆಯನ್ನು ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಅಲ್ಲದೇ ದುಷ್ಕರ್ಮಿಗಳು ಘಟನೆಯನ್ನು ತಡೆಯಲು ಬರುವವರಿಗೂ ಬೆದರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2024 ರ ಸಾಲಿನ ನೀಟ್ ಪರೀಕ್ಷೆಯಲ್ಲಿ ಎಕ್ಸಲೆಂಟ್ ಪಿ.ಯು ಕಾಲೇಜಿನ ಹಲವು ವಿದ್ಯಾರ್ಥಿಗಳು ದೇಶದಲ್ಲಿಯೇ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಈ ಪೈಕಿ ಈಶಾ ಶೆಟ್ಟಿ 671 ಅಂಕಗಳನ್ನು ಪಡೆದು ಕಾಲೇಜಿಗೆ ಅತ್ಯಧಿಕ ಅಂಕಗಳಿಸಿ ಕೀರ್ತಿಯನ್ನು ತಂದಿರುತ್ತಾಳೆ. ನಾಗರಾಜ ಉಪ್ಪಾರ 635, ವಿನುತಾ 612, ಅನನ್ಯ ಉಡುಪ 608, ಎಮ್ ಸೃಜನ್ 592, ಸನ್ನಿಧಿ ಕುಲಾಲ್ 590, ವರುಣ್ ಕೆ.ಪಿ 585, ಶಶಾಂಕ್ ಶೆಟ್ಟಿ 585, ಆಶಿತಾ ಪಿ. 584, ನಿರ್ಮಿತಾ ಎನ್.ಡಿ 583, ರಿತಿಕಾ ಶೆಟ್ಟಿ 563, ರುಮೇಝ್ ಶೇಖ್ 560, ರಕ್ಷಾ ಆರ್. ಪೂಜಾರಿ 557, ನಿಶಾ 536, ಆಕಾಶ್ ಕೆ ಶೆಟ್ಟಿ 520, ಸಂಜನ್ ಕೆ 514 ಮತ್ತು ಸಮೃದ್ಧಿ 513 ಆಂಕಗಳನ್ನು ಪಡೆದು ಕುಂದಾಪುರ ತಾಲೂಕಿನಲ್ಲಿ ಎಕ್ಸಲೆಂಟ್ ಪಿ.ಯು ಕಾಲೇಜು ಪ್ರಥಮ ಸ್ಥಾನವನ್ನು ಗಳಿಸುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ► 2024ರ ಸಿಇಟಿ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರಣ್ಯಭೂಮಿಯ ಒತ್ತುವರಿ, ಅನಿಯಂತ್ರಿತ ವಾಹನ ಬಳಕೆ, ಪ್ಲಾಸ್ಟಿಕ್ ಮತ್ತು ರಾಸಾಯನಿಕ ತ್ಯಾಜ್ಯ ವಸ್ತುಗಳಿಂದ ಪರಿಸರವನ್ನು ಮಲೀನಗೊಳಿಸುವ ಕಾರ್ಯ ನಿತ್ಯ ನಿರಾತಂಕ ಎಲ್ಲೆಡೆಯೂ ನಡೆಯುತ್ತಿದೆ. ಅಪರಿಮಿತ ತ್ಯಾಜ್ಯಗಳಿಂದ ನಮ್ಮ ಪರಿಸರ ಕೆಟ್ಟು ಹೋಗುತ್ತಿದ್ದರೂ ನಾವು ಮಾತ್ರ ಇನ್ನೂ ಅಪೇಕ್ಷಿತ ಮಟ್ಟದಲ್ಲಿ ಈ ಕುರಿತು ಜಾಗರೂಕರಾಗಿಲ್ಲ ಜತೆಗೆ ಸಮಸ್ಯೆಯ ಗಂಭೀರತೆಯನ್ನೂ ಅರಿತಿಲ್ಲ ಎಂದು ಯುವ ಉದ್ಯಮಿ ಅನುದೀಪ್ ಹೆಗ್ದೆ ಹೇಳಿದರು. ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರದ ಕುರಿತು ಉಪನ್ಯಾಸ ನೀಡಿದರು. ಕ್ಷೇತ್ರದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ನೋಟ್ಬುಕ್ಗಳನ್ನು ವಿತರಿಸಿ ಮಾತನಾಡಿದ ಲಾವಣ್ಯ ಅಧ್ಯಕ್ಷ ನರಸಿಂಹ ಬಿ. ನಾಯಕ್, ಮನುಷ್ಯರಲ್ಲಿ ಪರಿಪೂರ್ಣತೆಯನ್ನು ತರುವುದೇ ಶಿಕ್ಷಣ ಎನ್ನುತ್ತಾರೆ ಸ್ವಾಮಿ ವಿವೇಕಾನಂದರು. ಶಿಕ್ಷಣದ ಉದ್ದೇಶ ಬಹುಮುಖ ವ್ಯಕ್ತಿತ್ವದ ವಿಕಸನ. ಉತ್ತಮ ಶಿಕ್ಷಣ ದೊರೆತಾಗ ಮಾತ್ರ ವ್ಯಕ್ತಿ ಉತ್ತಮ ನಾಗರಿಕನಾಗಿ ಬದುಕಬಲ್ಲ. ಸ್ವತಂತ್ರವಾಗಿ ಯೋಚಿಸಬಲ್ಲ. ದೇಶ,…
ಕುಂದಾಪುರ ಡಾಟ್ ಕಾಂ ಸುದ್ದಿ.ಕುಂದಾಪುರ: 2024ರ ಸಾಲಿನ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್ಗಳನ್ನು ಪಡೆದು ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಈಶಾ ಶೆಟ್ಟಿ 224, ನಿಶಾ 245, ಚಿರಾಗ್ 296, ಅನನ್ಯ ಉಡುಪ 530, ನಾಗರಾಜ ಉಪ್ಪಾರ್ 572, ಅನಿರುದ್ದ್ ಎಸ್ ಹತ್ವಾರ್ 787, ವರುಣ್ ಕೆ ಪಿ 1536, ಸನ್ನಿಧಿ ಕುಲಾಲ್ 1692, ಆಕಾಶ್ ಕೆ ಶೆಟ್ಟಿ 1935, ಸನ್ಮಾನ್ 1998 , ತಸ್ಯಾ ಶೆಟ್ಟಿ 2382, ರಿತಿಕಾ ಶೆಟ್ಟಿ 2413, ಎಮ್ ಸ್ರಜನ್ 2939, ಆಶಿತಾ 3008, ಸಾಕ್ಷಿ ಗಣಪತಿ ಹೆಗ್ಡೆ 3597, ಧನುಷ್ 3702, ಶರಣ್ಯ 3829, ರುಮೇಝ್ ಶೇಖ್ 2953, ಪ್ರೀತಮ್ ಶೆಟ್ಟಿ 3976, ಸಂಜನ್ ಕೆ 4091, ನಿರ್ಮಿತಾ ಎನ್ ಡಿ 4181 ಮತ್ತು ವಿನುತಾ 4468 ರ್ಯಾಂಕ್ಗಳನ್ನು ಗಳಿಸಿ ರಾಜ್ಯದಲ್ಲಿ ನಮ್ಮ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಧ್ಯಾರ್ಥಿಗಳ ಈ ಸಾಧನೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್ಗೆ 63,750 ರೂ. ಗಳಂತೆ ವಿಮಾ ಕಂತಿನ ದರವನ್ನು ಪ್ರತಿ ಹೆಕ್ಟೇರ್ಗೆ 1275 ರೂ. ಗಳಂತೆ ನಿಗಧಿಪಡಿಸಿದ್ದು, ನೋಂದಣಿಗಾಗಿ ಅಧಿಸೂಚಿಸಲಾಗಿರುತ್ತದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಅಧಿಸೂಚಿತ ಘಟಕದಲ್ಲಿ ಬೆಳೆ ವಿಮಾ ಯೋಜನೆಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂಡುಬಿದರೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇದರ ಅಧ್ಯಕ್ಷರಾದ ಎಸ್ ಪ್ರಕಾಶ್ಚಂದ್ರ ಶೆಟ್ಟಿ ಅವರು ಶಿಬಿರಾರ್ಥಿಗಳಿಗೆ ಸಹಕಾರ ತತ್ವ ಹಾಗೂ ಸಹಕಾರಿ ಕ್ಷೇತ್ರದ ವ್ಯವಸ್ಥಾಪನೆ ಮತ್ತು ಸಿಬ್ಬಂದಿಗಳ ಪಾತ್ರದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ವಿಶ್ವೇಶ್ವರಯ್ಯ, ಉಪನ್ಯಾಸಕರಾದ ಬಿಂದು ನಾಯರ್, ಹರೀಶ ಎಂ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಂಘದ ಸಿಇಓ ವಿಷ್ಣು ಆರ್ ಪೈ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ತಗ್ಗೆರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾರಿಕಾ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳು ತಮ್ಮಿಂದ ಪರಿಸರಕ್ಕೆ ಕೊಡಬಹುದಾದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಕಾಂಚನ್ ಉಪಸ್ಥಿತರಿದ್ದರು. ವಾಣಿಜ್ಯ ಪ್ರಾಧ್ಯಾಪಕರಾದ ಸುಧೀರ್ ಕುಮಾರ್ ಸ್ವಾಗತಿಸಿ, ಶ್ವೇತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.7: ಕರ್ನಾಟಕ ರಾಜ್ಯ ಕ್ರೀಡಾ ಅಸೋಸಿಯೇಷನ್ ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸೀನಿಯರ್ ಮತ್ತು 18 ವರ್ಷದೊಳಗಿನವರ ಕ್ರೀಡಾಕೂಟದಲ್ಲಿ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಹೆಮ್ಮಾಡಿ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಜಿ. 553, ಆಕಾಶ್ ಹೆಬ್ಬಾರ್ 552, ಕ್ಷಮಾ ಪಡಿಯಾರ್ 496, ರಿಷಿಕಾ ಮೊಂಟೆರಿಯೊ 456, ಪವಿತ್ರಾ 444 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ. ಇದನ್ನೂ ಓದಿ ► ಕೆಸಿಇಟಿ-2024 ಫಲಿತಾಂಶ: ಹೆಮ್ಮಾಡಿ ಜನತಾ ಕಾಲೇಜು ವಿದಾರ್ಥಿಗಳಿಂದ ಉತ್ತಮ ಸಾಧನೆ – https://kundapraa.com/?p=72730 . ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ದ್ವಿತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
