Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟ ವ್ಯಾಪ್ತಿಯ ನಿವಾಸಿ ಅಕ್ಷತಾ (26) ಎಂಬವರಿಗೆ ಮೊಬೈಲ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತು ನಂಬಿ ಅವರು ಲಿಂಕ್ ಒತ್ತಿದ್ದು 9 ಆರ್ಡರ್ ಮುಗಿಸುವಂತೆ ಆದೇಶ ಬಂದಿತ್ತು. ಅದನ್ನು ನಂಬಿ ಇನ್ನೊಬ್ಬ ಹಂತಹಂತವಾಗಿ 67,330 ರೂ. ಪಾವತಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಯಾವುದೇ ಬೋನಸ್ ನೀಡದೆ ವಂಚನೆ ಎಸಗಿದ್ದಲ್ಲದೆ ಪಾವತಿಸಿದ್ದ ಹಣ ವಾಪಸ್ ನೀಡದೆ ವಂಚನೆ ಎಸಗಿದ್ದಾರೆ ಎಂದು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಾಂಧಿ ಮೈದಾನದಲ್ಲಿ ನಡೆದ, ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಕ್ರಿಕೆಟ್ ಆಯ್ಕೆಯಲ್ಲಿ ಶ್ರೀ  ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಾದ, ಆರ್ಯನ್ ಎ. ಖಾರ್ವಿ, ದಿಗಂತ ಖಾರ್ವಿ, ಶ್ರೇಷ್ಠ ಪಿ. ಖಾರ್ವಿ, ಸೌರೀಶ್ ಆರ್. ಖಾರ್ವಿ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಮಕ್ಕಳ ರಕ್ಷಣೆಗೆ ಹಲವಾರು ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ಎಸ್.ಗಂಗಣ್ಣವರ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ನೀತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಮಿಷನ್ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021, ದತ್ತು ಅಧಿನಿಯಮ -2022, ಪೋಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ರಕ್ಷಣಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಮಂಗಳವಾರದಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಅವರು ಮಾತನಾಡಿ ’ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂದೀಪ್ ಕುದ್ವ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ’ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ’ ಎಂದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಎಚ್. ಅವರು ’ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಕಾರ್ಯಕ್ರಮವನ್ನು ಕುರಿತು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ’ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆ ಪರಿಹಾರವಲ್ಲ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸಾಂಯವಾಹಿನಿ ಸಂಘದ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ “ಮತ್ಸಾಂಯವಾಹಿನಿ” ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿ ಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 0.50 ಲಕ್ಷ ಭದ್ರತಾ ಠೇವಣಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಪರವಾನಗಿದಾರರಿಗೆ ಪ್ರತಿ ವಾಹನಕ್ಕೆ 3000 ರೂ ಮಾಸಿಕ ಶುಲ್ಕ ನಿಗದಿಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರು ಕಸ್ತೂರ್ಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ತರಬೇತಿ ಶಿಬಿರ ನಡೆಸಲಾಗಿದೆ. ತರಬೇತಿ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 15 ದಿನಗಳ ಜಿಮ್ ಹಾಗೂ ಫಿಟ್ನೆಸ್ ತರಬೇತಿ, ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳಿಗೆ 13 ದಿನಗಳ ಬ್ಯೂಟೀಷಿಯನ್ ತರಬೇತಿ ಹಾಗೂ ಅಕ್ಟೋಬರ್ 4 ರಿಂದ 9 ರವರೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 6 ದಿನಗಳ ಚಾಟ್ಸ್ ತಯಾರಿಕೆ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿಯ ಅರ್ಹ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಹರಿಪ್ರಸಾದ ಶೆಟ್ಟಿ ನೇಮಕಗೊಂಡಿದ್ದಾರೆ. ಸದಸ್ಯರಾಗಿ ಸದಾಶಿವ ಶೆಟ್ಟಿ, ವಸುಂಧರಾ ಹೆಗ್ಡೆ, ಚಂದ್ರ ಕಾಂಚನ್, ಅಭಿಜಿತ್ ಪೂಜಾರಿ, ವಾಣಿ ಆ‌ರ್ ಶೆಟ್ಟಿ, ಆಶಾ ಕರ್ವೇಲ್ಲೋ, ನಾರಾಯಣ ಆಚಾರ್, ಗಣೇಶ್, ಕೆ.ಪ್ರದೀಪ್ ಕುಮಾ‌ರ್ ಶೆಟ್ಟಿ, ಅರುಣಾ, ಹರ್ಷ ಶೆಟ್ಟಿ, ಸವಿತಾ ಪೂಜಾರಿ, ಮಂಜು ಕೊಟಾರಿ, ಜಹೀರ್ ಅಹಮದ್‌, ಪ್ರಧಾನ ಕಾರ್ಯದರ್ಶಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆಗಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೃಷ್ಣ ಬರಿ ನಾಯಕತ್ವ ಗುಣ ಹೊಂದಿದವನಲ್ಲ ಆತ ನಾಯಕತ್ವದ ನಿರ್ಮಾತೃ ಎಂದು ಯಕ್ಷಗಾನ ಸಂಘಟಕ ಹಾಗೂ ಪ್ರವಚನಕಾರ ಉಜಿರೆ ಅಶೋಕ ಭಟ್ಟ ನುಡಿದರು. ಅವರು ಮಂಗಳವಾರ ಆಳ್ವಾಸ್ ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಪ್ರಜ್ಞಾ ಜಿಜ್ಞಾಸ ವೇದಿಕೆ, ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ʼನಾಯಕತ್ವದ ನಿರ್ಮಾಣದಲ್ಲಿ ಕೃಷ್ಣನ ಕೊಡುಗೆ’ ವಿಷಯದ ಕುರಿತು ಮಾತನಾಡಿದರು.  ರಾಮ, ಕೃಷ್ಣ ದೇವರಲ್ಲ, ಬದಲಾಗಿ ಅವರು ಯುಗಧರ್ಮದ ನಾಯಕರು. ಕೇವಲ ಭಾವುಕ ಭಕ್ತಿಯಿಂದ ಅವರನ್ನು ದೇವರು ಅಂತ ನೋಡಬೇಕಿಲ್ಲ, ಪ್ರಾಯೋಗಿಕವಾಗಿ ನೋಡಬೇಕು. ರಾಮ ಅತ್ಯಂತ ಶ್ರೇಷ್ಠ ಜಾತ್ಯಾತೀತ ಎಂದು ತಿಳಿಸಿದರು.  ಭಗವದ್ಗೀತೆಯಲ್ಲಿ ತಿಳಿಸಿರುವಂತೆ ಮನುಷ್ಯ ತನ್ನ ಆತ್ಮವನ್ನು ತಾನು ಉದ್ಧರಿಸಿಕೊಳ್ಳಬೇಕು. ಕೃಷ್ಣ ವಿಕಾರಕ್ಕೆ ಆಕಾರ ಕೊಟ್ಟ. ಪ್ರಾಕೃತ ಸಂಗತಿಗಳಿಗೆ ಸಂಸ್ಕಾರ ಕೊಟ್ಟ. ಕ್ರಿಯೆಗೆ ಪ್ರಯೋಗಶೀಲತೆ ನೀಡಿದ. ಕೃಷ್ಣ ಕ್ಷೀರ ಹಾಗೂ ಅಕ್ಷರ ಕ್ರಾಂತಿಗಳ ಹರಿಕಾರ. ಎಲ್ಲರಲ್ಲೂ ಜಾಗೃತಿ ಮೂಡಿಸುವ ಕೃಷ್ಣ, ಸ್ಥಿತಪ್ರಜ್ಞೆಯ ಮೂರ್ತಸ್ವರೂಪ. ಯಾರು ಧರ್ಮ ಅನುಷ್ಠಾನ ಮಾಡ್ತಾರೋ ಅವರನ್ನು ಕೃಷ್ಣ ಸದಾ…

Read More

ಕುಂದಾಪ್ರ ಡಾಟ ಕಾಂ ಸುದ್ದಿ.ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಿದ್ಧಾರ್ಥ್ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿ ಎರಡು ವರ್ಷ ಕಳೆದಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಬೈಂದೂರು ಕ್ಷೇತ್ರ ವ್ಯಾಪ್ತಿಯ ಕೊಲ್ಲೂರಿನಿಂದ ಯಡ್ತರೆ ತನಕ ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಕಾಮಗಾರಿ ಆರಂಭಿಸಲು ಹಿನ್ನಡೆಯಾಗಿದೆ. ಸಂಬAಧಿತ ಇಲಾಖೆ ಈ ಬಗ್ಗೆ ವಿಶೇಷ ಮುತುರ್ವಜಿವಹಿಸಿ, ರೈತರಿಗೆ ಯಾವುದೇ ಅನ್ಯಾಯವಾಗದಂತೆ ಗರಿಷ್ಠ ಪರಿಹಾರ ನೀಡುವ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 766ಸಿ ಭೂಸ್ವಾಧೀನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ದ್ವಿಪಥ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡ ಸಂಸದರು, ರೈತರು ತಮ್ಮ ಭೂಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅದಕ್ಕೆ ಬೆಲೆಕಟ್ಟಲಾಗದು. ಆದರೆ ಅಭಿವೃದ್ಧಿ ಕಾರ್ಯ ನಡೆಯಬೇಕಾದರೆ ಭೂಮಿ ಅಗತ್ಯವಾಗಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಸುವುದು…

Read More