ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.03: ಅತಿಯಾದ ಉಷ್ಣತೆ ಮತ್ತು ಬಿಸಿಗಾಳಿಯಿಂದ ರಕ್ಷಣೆ ಪಡೆಯಲು, ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಡೆಂಗ್ಯೂ ಜ್ವರದ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತವು ಈ ಕೆಳಗಿನಂತೆ ಸಲಹೆ ಸೂಚನೆಗಳನ್ನು ನೀಡಿರುತ್ತದೆ. ಬಾಯಾರಿಕೆ ಇಲ್ಲದಿದ್ದರೂ ಸಹಾ ಹೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. ಮೌಖಿಕ ಪುನರ್ಜಲೀಕರಣ ದ್ರಾವಣ (ಓ.ಆರ್.ಎಸ್), ಎಳನೀರು ಹಾಗೂ ಮನೆಯಲ್ಲಿಯೇ ಸಿದ್ಧಪಡಿಸಿದ ನಿಂಬೆ ಶರಬತ್ತು, ಹಣ್ಣಿನ ರಸಗಳು, ಮಜ್ಜಿಗೆ/ಲಸ್ಸಿಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ಸೇವಿಸಬೇಕು ಮತ್ತು ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು, ತರಕಾರಿಗಳನ್ನು ಸೇವಿಸುವುದು ಸೂಕ್ತ. ತಿಳಿಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಹಾಗೂ ಗಾಳಿಯಾಡುವ ಪಾದರಕ್ಷೆಗಳನ್ನು ಧರಿಸುವುದು ಈ ಸಂದರ್ಭದಲ್ಲಿ ಉತ್ತಮ. ಬಿಸಿಲಿನಲ್ಲಿ ಹೊರಹೋಗುವ ಸಂದರ್ಭದಲ್ಲಿ ಛತ್ರಿ, ಟೋಪಿ, ಟವೆಲ್, ತಂಪು ಕನ್ನಡಕಗಳನ್ನು ಬಳಸಬೇಕು. ಸಾಧ್ಯವಾದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಹಾಗೂ ಸಂಜೆ 4 ಗಂಟೆಯ ನಂತರಕ್ಕೆ ಸೀಮಿತವಿರುವಂತೆ ಹೊರಾಂಗಣ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವುದು ಸೂಕ್ತವಾಗಿದ್ದು, ಮಧ್ಯಾಹ್ನ 12 ಗಂಟೆಯಿAದ 4 ಗಂಟೆಯವರೆಗೆ ಬಿಸಿಲಿನಲ್ಲಿ ಓಡಾಡುವುದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕದ್ವಯರು ಹಾಗೂ ಬಿಜೆಪಿ ಮುಖಂಡರು ಪಾದಯಾತ್ರೆ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮತ ಯಾಚನೆ ಮಾಡಿದರು. ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಮೀನುಗಾರಿಕೆ ಬಂದರು ಪ್ರದೇಶದ ತನಕ ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ ಯಾಚಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಬಿಜೆಪಿ ಹಿರಿಯ ಮುಖಂಡರು, ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಗಮನಿಸಿ, ಮತ್ತೊಮ್ಮೆ ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮಂತ್ರಿಯನ್ನಾಗಿ ನೋಡಲು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಅತ್ಯಧಿಕ ಬಹುಮತದೊಂದಿಗೆ ಆಯ್ಕೆ ಮಾಡುವಂತೆ ಅವರು ಮನವಿ ಮಾಡಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಸಮೀಪ ತತ್ವಂ ಚೈಲ್ಡ್ ಕೇರ್ ಸೆಂಟರ್ ಶುಭಾರಂಭಗೊಂಡಿತು. ಕುಂದಾಪುರದ ಶ್ರೀದೇವಿ ನರ್ಸಿಂಗ್ ಹೋಮ್ ಇದರ ಮುಖ್ಯಸ್ಥರಾದ ಡಾ. ರವೀಂದ್ರ ರಾವ್ ಹಾಗೂ ಡಾ. ಭವಾನಿ ರವೀಂದ್ರ ರಾವ್ ರವರು ದೀಪ ಬೆಳಗಿಸಿ ಮೂಲಕ ತತ್ವಂ ಚೈಲ್ಡ್ ಕೇರ್ ಸೆಂಟರ್ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ 20 ವರ್ಷಗಳಿಂದ ಮಕ್ಕಳ ಆರೈಕೆ ಹಾಗೂ ಚಿಕಿತ್ಸೆಯಲ್ಲಿ ಕುಂದಾಪುರ ನಗರದ ಮನೀಷ್ ಆಸ್ಪತ್ರೆ ಹಾಗೂ ಶ್ರೀದೇವಿ ನರ್ಸಿಂಗ್ ಹೋಮ್ನಲ್ಲಿ ಮಕ್ಕಳ ತಜ್ಞೆಯಾಗಿ ಸೇವೆ ಸಲ್ಲಿಸಿದ ಡಾ. ರಶ್ಮೀ ಎಸ್ ಉಡುಪ (ಎಂ.ಡಿ.ಪಿಡಿಯಾಟ್ರಿಕ್ಸ್) ರವರು ನೂತನ ಕ್ಲಿನಿಕ್ನಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಸೇವೆಗೆ ಲಭ್ಯರಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ.7ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಗರಿಷ್ಠ ತಾಪಮಾನದ ಅವಧಿಯಲ್ಲಿ ಮಧ್ಯಾಹ್ನ 12 ರಿಂದ 3 ರ ಅವಧಿಯಲ್ಲಿ ಬಿಸಿಲಿಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಬೇಕು. ಶ್ರಮದಾಯಕ ಚಟುವಟಿಕೆಗಳಲ್ಲಿ ತೊಡಗಬಾರದು. ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಹಗುರ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸಬೇಕು. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ರಕ್ಷಣೆಗಾಗಿ ಕನ್ನಡಕ, ಕೊಡೆ, ಬೂಟು / ಚಪ್ಪಲಿಗಳನ್ನು ಬಳಸಬೇಕು. ಪ್ರಯಾಣದ ಸಂದರ್ಭದಲ್ಲಿ ನೀರಿನ್ನು ಜೊತೆಗೆ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ನಂತಹ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಮಾರಿಕಲ್ಲುಬೆಟ್ಟು, ಶ್ರೀ ಮಾರಿಕಾಂಬಾ ಹಾಗೂ ಸಹ ಪರಿವಾರ ದೇವರುಗಳ ಸಾನ್ನಿಧ್ಯದಲ್ಲಿ ವಾರ್ಷಿಕ ವರ್ಧ್ಯಂತ್ಯೋತ್ಸವದ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ನಾಯಕ್ ನಾಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರವಂತೆ ಮಾರಿಕಲ್ಲುಬೆಟ್ಟು ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ , ಕದಂ ದುಬೈನ ಶೀನ ದೇವಾಡಿಗ ಮರವಂತೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಮರವಂತೆ ಮಾರಿಕಲ್ಲುಬೆಟ್ಟು ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ರಾಜು ದೇವಾಡಿಗ ತ್ರಾಸಿ, ಶೀನ ದೇವಾಡಿಗ ಮರವಂತೆ, ಮರವಂತೆ ಶ್ರೀ ರಾಮಮಂದಿರ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾಗಿರುವ ವಾಸುದೇವ ಖಾರ್ವಿಯವರು ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು. ಈ ಸಂದರ್ಭ ದೇಗುಲದ ಜೀರ್ಣೋದ್ದಾರಕ್ಕೆ ಸಹಕರಿಸಿದ 7 ಜನ ಮಹನೀಯರನ್ನು ಹಾಗೂ ವಿಜ್ಞಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಗರ ಅಥವಾ ಗ್ರಾಮೀಣ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ನೀರಿನ ಯಾವುದೇ ತೊಂದರೆಗಳು ಉಂಟಾಗದAತೆ ನೋಡಿಕೊಳ್ಳಬೇಕು. ಯಾರೊಬ್ಬರೂ ದೂರವಾಣಿ ಮೂಲಕ ನೀರಿನ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದ್ದಲ್ಲಿ 24 ಗಂಟೆಯ ಒಳಗಾಗಿ ಅದನ್ನು ಬಗೆಹರಿಸಬೇಕು. ಮಳೆ ಬರುವವರೆಗೂ ನೀರಿನ ಸಮಸ್ಯೆಗೆ ಸ್ಪಂದಿಸಲು ಸದಾ ಸನ್ನದ್ಧರಾಗಿರಬೇಕು ಎಂದರು. ಜಾನುವಾರುಗಳಿಗೆ ಮೇವಿನ ಕೊರತೆ ಈವರೆಗೂ ಕಂಡುಬAದಿಲ್ಲ. ಜಿಲ್ಲೆಯಲ್ಲಿ 2.20 ಲಕ್ಷ ಕ್ಕೂ ಹೆಚ್ಚು ಜಾನುವಾರುಗಳಿದ್ದು, ಮುಂದಿನ 14 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯತೆ ಇದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬದುಕು, ಬೆಲೆ ಏರಿಕೆ, ರೈತ, ಹೆಣ್ಣು ಮಕ್ಕಳ ಮಾನಹರಣ, ದೇಶದ ಸಮಸ್ಯೆಗಳ ಬಗ್ಗೆ ಮಾತನಾಡಬೇಕಿದ್ದ ದೇಶದ ಪ್ರಧಾನಿಗಳು ಯಾವುದೋ ನಾಯಕ ಮೀನು ತಿನ್ನುವುದನ್ನೇ ದೊಡ್ಡ ವಿಷಯವನ್ನಾಗಿಸಿ ವ್ಯಂಗ್ಯವಾಡುತ್ತಿದ್ದಾರೆ ನಿಕೇತರಾಜ್ ಮೌರ್ಯ ಹೇಳಿದರು. ಅವರು ಮಂಗಳವಾರ ಕಿರಿಮಂಜೇಶ್ವರದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಿವಮೋಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಪರ ಆಯೋಜಿಸಲಾದ್ದ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಶೋಷಿತರು, ಬಡವರು ದೇಶದ ಜನರ ಉಳಿವಿಗಾಗಿ ನೀಡಿದ ಸಂವಿಧಾನವನ್ನೇ ಬದಲಿಸಲು ಹೊರಟಿರುವ ಬಿಜೆಪಿಯನ್ನು ತಿರಸ್ಕರಿಸಿ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಅವರು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಮೊದಲ ಭಾರಿಗೆ ಮೀಸಲಾತಿ ನೀಡಿ ಧ್ವನಿ ನೀಡಿದ್ದು, ದೇಶದ ಜನರ ಬದುಕು ಕಟ್ಟಿದ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ದೇಶದಲ್ಲಿ ಐಎನ್ಡಿಐಎ ಅಧಿಕಾರಕ್ಕೆ ಬಂದರೆ ದೇಶದಲ್ಲಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಮರು ಮೌಲ್ಯಮಾಪನದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಾಣಿಜ್ಯ ವಿಭಾಗದ ಅಭಿಷೇಕ್ ಅಡಿಗ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದರೆ, ವಿಜ್ಞಾನ ವಿಭಾಗದ ಸನ್ನಿಧಿ ಕುಲಾಲ್ 591 ಅಂಕಗಳೊAದಿಗೆ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಪರೀಕ್ಷೆಗೆ ಹಾಜರಾದ 404 ವಿದ್ಯಾರ್ಥಿಗಳೆಲ್ಲರೂ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಶೇಕಡ 100 ಫಲಿತಾಂಶ ಲಭಿಸಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ 14 ವಿದ್ಯಾರ್ಥಿಗಳು 588 ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸುವುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಒಟ್ಟು 404 ವಿದ್ಯಾರ್ಥಿಗಳಲ್ಲಿ ಶೇ.95 ಕ್ಕಿಂತಲೂ ಅಧಿಕ ಅಂಕಗಳನ್ನು 86 ವಿದ್ಯಾರ್ಥಿಗಳು ಗಳಿಸಿದರೆ, 308 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ ಹಾಗೂ ಚಾರಿಟೇಬಲ್ ಟ್ರಸ್ಟ್ (ರಿ.)ನ ಅಧ್ಯಕ್ಷರಾಗಿರುವ ಎಂ. ಮಹೇಶ್ ಹೆಗ್ಡೆ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಡಾ. ರಮೇಶ್ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಮತಗಳ ಅಂತರ ಒದಗಿಸುವ ಶಾಸಕ ಗುರುರಾಜ ಗಂಟಿಹೊಳೆ ಅವರ ಸಂಕಲ್ಪದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪೇಜ್ ಪ್ರಮುಖ್ ಕಾರ್ಯಗಾರ ನಡೆಯಿತು. ಶಿರೂರು, ಬೈಂದೂರು ಪಟ್ಟಣ ಪಂಚಾಯಿತಿ, ಕಾವ್ರಾಡಿ, ಸಿದ್ದಾಪುರ, ಚಿತ್ತೂರು, ಕಿರುಮುಂಜೇಶ್ವರ, ತ್ರಾಸಿ, ಯಡ್ತರೆ ಸೇರಿದಂತೆ ಬೈಂದೂರಿನ ವಿವಿಧ ಭಾಗಗಲ್ಲಿ ಪೇಜ್ ಪ್ರಮುಖ್ ಕಾರ್ಯಗಾರ ನಡೆಯಿತು. ಕಾರ್ಯಾಗಾರದಲ್ಲಿ ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಬಿ.ಆರ್ಚ್ (99.744) ಪರ್ಸಂಟೈಲ್ ಪಡೆದು ಜಿಲ್ಲೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾಳೆ. ಜೆಇಇ 2ನೇ ಪ್ರವೇಶ ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 95.97 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 95.84, ಲಲನ್ ಪಿ. 93.15 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 93.02 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ:…
