Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.29: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಕುಂದಾಪುರ ಬಾಳೆಹಿತ್ಲು ನಿವಾಸಿಯಾದ ವೆಂಕಟೇಶ್‌ ಎಂಬುವವರ ಪುತ್ರ ಶಶಾಂಕ್‌ ಮೊಗವೀರ (22) ಎಂದು ಗುರುತಿಸಲಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ರಾತ್ರಿ 11.00 ರ ವೇಳೆಗೆ ರಿಲಯನ್ಸ್‌ ಪೆಟ್ರೋಲ್‌ ಬಂಕಿನಲ್ಲಿ ಪೆಟ್ರೋಲ್‌ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತವಾಗಿದ್ದು ತಕ್ಷಣ ಅವರನ್ನು ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮದ್ಯೆ ಅವರು ಕೊನೆರುಸಿರೆಳೆದಿದ್ದಾರೆ. ಬುಲೆಟ್‌ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂದಾಪುರ ನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಮೋಗವೀರ ಗರಡಿ ಸಾರ್ವಜನಿಕ ಶ್ರೀ ಶಾರಾದೋತ್ಸವ ಸಮಿತಿಯ ಶಾರದೋತ್ಸವ ರಜತ ಮಹೋತ್ಸವ ಸಂಭ್ರಮ ಅ.06ರಿಂದ ಅ.07ರ ತನಕ ಜರುಗಲಿದೆ. ಅ.06ರ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 01ರ ತನಕ ಪ್ರಸಾದ್‌ ನೇತ್ರಾಲಯದಿಂದ ಉಚಿತ ನೇತ್ರ ತಪಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ, ಬೆಳಿಗ್ಗೆ 10.30ಕ್ಕೆ ದುರ್ಗಾಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಅಂಗನವಾಡಿ ಮಕ್ಕಳಿಂದ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಮಕ್ಕಳಿಂದ ನೃತ್ಯ ವೈವಿಧ್ಯ ನಡೆಯಲಿದೆ. ರಾತ್ರಿ 09ರಿಂದ ದುರ್ಗಾ ಕಲಾತಂಡ ಪುಗರ್ತೆ ಕಲಾವಿದೆರ್‌ ವಿಟ್ಲ ಮೈರ ಕೇಪು ಅಭಿನಯದ ಕನ್ನಡ ಅದ್ದೂರಿ ಭಕ್ತಿ ಪ್ರಧಾನ ನಾಟಕ ಕಲಿಯುಗದ ಕಾಳಿ ಮಂತ್ರದೇವತೆ ನಾಟಕ ನಡೆಯಲಿದೆ ಎಂದು ತಗ್ಗರ್ಸೆ ಮೋಗವೀರ ಗರಡಿ ಸಾರ್ವಜನಿಕ ಶ್ರೀ ಶಾರಾದೋತ್ಸವ ಸಮಿತಿಯ ಅಧ್ಯಕ್ಷ ಶಿವಾನಂದ ಗಾಣಿಗ ಹಾಗೂ ಕಾರ್ಯದರ್ಶಿ ಅಭಿಷೇಕ್‌ ಸುವರ್ಣ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರು ಶುಕ್ರವಾರದಂದು ಶಿವಮೊಗ್ಗ ಜಿಲ್ಲೆಯ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಭೇಟಿ ನೀಡಿದ ಸಮಯದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಕ್ಷೇತ್ರದ ಜನತೆಯ ಪರವಾಗಿ ಸ್ವಾಗತಿಸಿ, ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿರುವ ಹಾಗೂ ಆಗಬೇಕಾದ ಪ್ರಮುಖ ಕಾಮಗಾರಿಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು. ಈ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಸಾಗರ ಪಟ್ಟಣದ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು. ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ-ಆನಂದಪುರ 4 ಪಥದ ರಸ್ತೆ, ನೆಲ್ಲಿಸರದಿಂದ-ತೀರ್ಥಹಳ್ಳಿವರೆಗಿನ 4 ಪಥದ ರಸ್ತೆ, ಬೈಂದೂರು-ನಾಗೋಡಿವರೆಗಿನ ದ್ವಿಪಥ ರಸ್ತೆ, ಹಾಗು ಹೊಸೂರು ಮತ್ತು ತಾಳಗುಪ್ಪ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. 2024-25 ನೇ ಸಾಲಿಗೆ ಮಂಜೂರಾದ ಕಾಮಗಾರಿಗಳಾದ ಆಗುಂಬೆ ರಸ್ತೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು. ಹೊಸ ಬೀಚಿನ ಅಭಿವೃದ್ಧಿಯ ದೃಷ್ಠಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್‌ಗೆ ಆಗಮಿಸುವುದರಿಂದ ಬೀಚ್‌ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳುವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ ಬಿ ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಜಂಟಿ ಆಶ್ರಯದಲ್ಲಿ ‘ಡೆಂಗ್ಯೂ ಅರಿವು’ ಕಾರ್ಯಕ್ರಮ ಜರುಗಿತು.  ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ| ಪ್ರೇಮಾನಂದ ಅವರು ಮಾತನಾಡಿ, ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ ಶೆಟ್ಟಿ ವಹಿಸಿದ್ದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಲಿಯಾಕತ್, ಕಾರ್ಯದರ್ಶಿ ಸಚ್ಚಿದಾನಂದ, ರೋಟರಾಕ್ಟ್ ಕ್ಲಬ್ ಕುಂದಾಪುರದ ಸಭಾಪತಿ ವೆಂಕಟೇಶ್ ಪ್ರಭು, ಕಾರ್ಯಕ್ರಮದ ಸಂಯೋಜಕಿ ಅವಿತಾ ಕೊರೆಯಾ, ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಅಧ್ಯಕ್ಷ ದ್ವಿತೀಯ ಬಿಸಿಎ ಆದಿತ್ಯ ಹಾಗೂ ಕಾರ್ಯದರ್ಶಿ ದ್ವಿತೀಯ ಬಿಸಿಎ ಮಾನ್ಯ ಉಪಸ್ಥಿತರಿದ್ದರು. ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಸಂಯೋಜಕ ಸತೀಶ್ ಶೆಟ್ಟಿ ಹೆಸ್ಕೂತ್ತೂರು ಸ್ವಾಗತಿಸಿ, ವಿದ್ಯಾರ್ಥಿನಿ ಸ್ನೇಹಾ ಪ್ರಾರ್ಥಿಸಿ, ಪ್ರಥಮ್ ಭಂಡಾರಿ ದ್ವಿತೀಯ ಬಿಬಿಎ ವಂದಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26ರಂದು ನಡೆದ ದಕ್ಷಿಣ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲ್ಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ತಂಡವು ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ. ಪುರುಷ ಮತ್ತು ಮಹಿಳಾ ಸೇರಿದಂತೆ ಎರಡೂ ವಿಭಾಗಗಳ ಅಥ್ಲೆಟಿಕ್ಸ್‌ನಲ್ಲಿ ಒಟ್ಟು 23 ಚಿನ್ನ, 10 ಬೆಳ್ಳಿ, 02ಕಂಚಿನ ಪದಕಗಳೊಂದಿಗೆ ಒಟ್ಟು 35 ಪದಕ, ಕುಸ್ತಿಯಲ್ಲಿ 16 ಚಿನ್ನ, 08 ಬೆಳ್ಳಿ, 08 ಕಂಚಿನ ಪದಕಗಳೊಂದಿಗೆ ಒಟ್ಟು 32 ಪದಕ, ಯೋಗದಲ್ಲಿ 05 ಚಿನ್ನ, 04 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 11 ಪದಕ ಹಾಗೂ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಮತ್ತು ಖೋ-ಖೋ ಪಂದ್ಯಾಟಗಳ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ವಾಲಿವಾಲ್ ಪುರುಷರ ವಿಭಾಗದಲ್ಲಿ ದ್ವಿತೀಯ, ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಆಳ್ವಾಸ್ ಪಡೆದುಕೊಂಡಿದೆ. ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖಾ ವೆಬ್‌ಸೈಟ್ ಪರಿಶಿಷ್ಟ ಜಾತಿ SW.KAR.NIC.IN, ಪರಿಶಿಷ್ಟ ಪಂಗಡ: TW.KAR.NIC.IN ಅಥವಾ http://ssp.karnataka.gov.in ಲಿಂಕ್‌ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಓPಅI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಗುರುತಿಸಲಾದ ಮಾನ್ಯುಯಲ್ ಸ್ಕ್ಯಾವೆಂಜರ್ಸ್ಗಳಿಗೆ ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ಸ್ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ, ಒಂದು ಬಾರಿ ನಗದು ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿ ವೇತನ, ಉದ್ಯೋಗ, ಸಾಲ ಸೌಲಭ್ಯ ಇತ್ಯಾದಿ ರೀತಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್ ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ, ದೂ.ಸಂಖ್ಯೆ: 0820–2532222, ಮೊ.ನಂ:8310311448 ಅಥವಾ 9741762007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು  ವೈದ್ಯರುಗಳು ಹಾಗೂ ಸಿಬ್ಬಂದಿಗಳು ಮಾಡಿದ್ದಲ್ಲಿ ಮಾತ್ರ ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಿ, ಶೂನ್ಯ ಗೊಳಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು  ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇವುಗಳ ಅನುಷ್ಠಾನವನ್ನು ಸರಕಾರದ ಮಾರ್ಗಸೂಚಿ ಅನ್ವಯ ನಿಗದಿತ ಕಾಲಾವಧಿಯಲ್ಲಿ ಕಾಲಕಾಲಕ್ಕೆ ಕೈಗೊಂಡು ಜನರ ಆರೋಗ್ಯ ಸುಧಾರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಸಂಸ್ಥೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಇವುಗಳನ್ನು ಸಂಗ್ರಹಿಸುವ ಏಜೆನ್ಸಿಗಳು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಅಲ್ಲದೆ ಔಷಧಿ ಬಾಟಲ್‌ಗಳು,…

Read More