Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿದೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಮಹಾಲಿಂಗ ನಾಯ್ಕ್‌ ಮೆಟ್ಟಿನಹೊಳೆ ಕಾಲ್ತೋಡು, ಧನಾಕ್ಷಿ ವಿಶ್ವನಾಥ ಯಡ್ತರೆ ಬೈಂದೂರು, ಸುಧಾ ಕೆ ಪಡುವರಿ ಬೈಂದೂರು, ಕೆ. ಬಾಬು ಶೆಟ್ಟಿ ತಗ್ಗರ್ಸೆ ಬೈಂದೂರು, ಸುರೇಂದ್ರ ಶೆಟ್ಟಿ ಕೋಟೇಶ್ವರ ಕುಂದಾಪುರ, ಅಭಿಲಾಷ್‌ ಪಿ.ವಿ ಮಂಗಳೂರು, ಯು. ರಾಜೇಶ್‌ ಕಾರಂತ್‌ ಉಪ್ಪಿನಕುದ್ರು ಕುಂದಾಪುರ, ರಘುರಾಮ ದೇವಾಡಿಗ ಆಲೂರು ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ. ದೇವಳದ ಕಾರ್ಯನಿರ್ವಾಹಕ ಅಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸದಸ್ಯರನ್ನು ಓರ್ವರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ಮಹಾಸಭೆಯು ಇಲ್ಲಿನ ಶ್ರೀ ರಾಮ ಮಂದಿರದಲ್ಲಿ ಶುಕ್ರವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಆನಂದ ಬಿಲ್ಲವ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 13291 ಸದಸ್ಯರೊಂದಿಗೆ 1.72 ಕೋಟಿ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 37.04 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಹೊರಬಾಕಿ ಸಾಲ 1.53 ಕೋಟಿ ರೂ. ಇದೆ. 19.12 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಸಂಘವು 42.65 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಂಘದ ವ್ಯಾಪ್ತಿಯ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಘದ ನಿರ್ದೇಶಕರಾದ ಶ್ರೀನಿವಾಸ ಜತ್ತನ್ ಪೂಜಾರಿ, ಹರೀಶ ಮೇಸ್ತ, ಕೆ.ಮಾಧವ ಖಾರ್ವಿ, ಜಿ.ಗೋಪಾಲ ನಾಯ್ಕ್, ಪ್ರೇಮಾ ಪೂಜಾರಿ, ಯಮುನಾ, ಚಂದ್ರಮತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಪಾರಿನ ಹೋಟೆಲ್ ಒಂದಕ್ಕೆ ಬಂದಿದ್ದ ಆರೋಪಿಗಳು ಕ್ಯಾಶಿಯರ್‌, ಸಪ್ಲಾಯರ್‌ಗಳಿಗೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಅಜಯ್‌ ಅವರು ರಾತ್ರಿ ಹೋಟೆಲ್ಲಿನ ಕ್ಯಾಶಿಯರ್‌ ಆಗಿರುವ ಸಹೋದರ ಸುಜಯ್‌ ಅವರನ್ನು ಮನೆಗೆ ಕರೆದುಕೊಂಡು ಹೋಗಲು ಬಂದಿದ್ದರು. ಆರೋಪಿಗಳಾದ ಅಭಿ, ಹರೀಶ್‌, ಪ್ರಜ್ವಲ್‌, ಸ್ವರಾಜ್‌ ಮತ್ತು ಇನ್ನೋರ್ವ ವ್ಯಕ್ತಿ ಅಜಯ್‌ ಮತ್ತು ಕ್ಯಾಶಿಯರ್‌ ಸುಜಯ್‌ ಅವರಿಗೆ ಹಲ್ಲೆ ಮಾಡಿದ್ದರು. ಆರೋಪಿ ಸ್ವರಾಜ್‌ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಮತ್ತೋರ್ವ ಕ್ಯಾಶಿಯರ್‌ ಸೀತಾರಾಮ ಮತ್ತು ಸಪ್ಲಾಯರ್‌ಗಳು ಹೆಚ್ಚಿನ ಗಲಾಟೆಯನ್ನು ತಪ್ಪಿಸಲು ಮುಂದಾದರು. ಅನಂತರ ಆರೋಪಿಗಳು ಬೆದರಿಕೆಯನ್ನೂ ಹಾಕಿ ಹೋಗಿದ್ದಾರೆ ಎಂದು ಕ್ಯಾಶಿಯರ್‌ ಸುಜಯ್‌ ಸಹೋದರ ಅಜಯ್‌ ಅವರು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 324.91 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.55 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 66.64 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 58.86 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 5.33 ಕೋಟಿ ರೂ., ಹೂಡಿಕೆಯಲ್ಲಿ 29.52ಕೋಟಿ ರೂ. ಸಂಚಯಿಸಲಾಗಿದೆ ಎಂದರು. ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿ ಅವರು ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್‌ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ, ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಬೋಧಕ/ಬೋಧಕೇತರ  ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ತರುಣ್  (50kg) ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೆ.ಶ್ರೀನಿತಾ. ಎಸ್. ಕಾಮತ್ (56kg) , ಅಕ್ಷಯ್ (82kg ),ಸಾವಿಯೋ (62 kg)  ವಿಭಾಗದಲ್ಲಿ ಬೆಳ್ಳಿ ಪದಕ  ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಹಾಗೂ ಆಂತರಿಕ ಸಮಿತಿ ಆಶ್ರಯದಲ್ಲಿ ಕಾಲೇಜಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ’ಮಹಿಳೆಯರ ಯೋಗ ಕ್ಷೇಮದ ಅನ್ವೇಷಣೆ’ ವಿಷಯದ  ವಿಶೇಷ ಉಪನ್ಯಾಸ  ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಳ್ವಾಸ್ ಸೆಂಟರ್ ಫಾರ್ ವೆಲ್‌ನೆಸ್ ಟ್ರೈನಿಂಗ್‌ನ ನಿರ್ದೇಶಕಿ ಡಾ. ದೀಪ ಕೊಠಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹಲವು ಮಹಿಳಾ ಸಾಧಕರನ್ನು ಪರಿಚಯಿಸುತ್ತಾ, ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹುರಿದುಂಬಿಸಿದರು. ವಿದ್ಯಾರ್ಥಿಗಳು ಹೆಚ್ಚು ಸಕರಾತ್ಮಕ ವಿಷಯಗಳನ್ನು ಹೇಗೆ ವಿಸ್ತರಿಸಿಕೊಳ್ಳಬೇಕು, ತಮ್ಮಲ್ಲಿರುವ ಭಾವನೆಗಳನ್ನು ಒಪ್ಪಿಕೊಂಡು ಅದರೊಂದಿಗೆ ಬದುಕುವ ಮನೋಸ್ಥೈರ್ಯ ಹೇಗೆ ಬೆಳೆಸಿಕೊಳ್ಳಬೇಕು ಎಂದು ವಿವರಿಸಿದರು. ಏಕಾಗ್ರತೆ ಮತ್ತು ಸ್ಥಿರತೆಯನ್ನು ಹೇಗೆ ಉಳಿಸಿಕೊಳ್ಳುವುದು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಜೀವನದಲ್ಲಿ ಕೃತಜ್ಞತೆ ಮತ್ತು ನಿರಂತರ ಕಲಿಕೆ ಎಷ್ಟು ಮುಖ್ಯ ಎಂದು ಉದಾಹರಣೆ ಸಹಿತ ಮಕ್ಕಳಿಗೆ ಮನವರಿಗೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಳಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.                       ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಗುರುವಾರದಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟಿçÃಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಯಾದ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿದಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಯುವ ರೆಡ್‌ಕ್ರಾಸ್ ಘಟಕ ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ದೇವಸ್ಥಾನ ಕೆರೆಗೆ ಬಿದ್ದು ಎಂಬಿಬಿಎಸ್ ಪದವೀಧರ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಹಂಗಳೂರಿನ ಗೌರೀಶ್‌ ಬಿ.ಆರ್‌. (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಎಂ.ಬಿ.ಬಿ.ಎಸ್. ಮುಗಿಸಿದ ಬಳಿಕ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕ್ಟೀಸ್ ಮಾಡುತ್ತಿದ್ದ. ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದು, ಕಳೆದ ಕೆಲವು ದಿನಗಳಿಂದ ಗೌರೀಶ್ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಬ್ಯಾಗ್‌, ಮೊಬೈಲ್‌ ಫೋನ್‌, ಚಪ್ಪಲಿ ಕಂಡುಬಂದಿತ್ತು. ಅಂದು ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಕುಟುಂಬಿಕರು ಶಂಕಿಸಿದ್ದಾರೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್‌ ಬಿ.ಆರ್‌. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ…

Read More