Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ  ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ  ಇವರ ಆಶ್ರಯದಲ್ಲಿ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ –ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ಶಾಲೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಮಣ್ಯ ಅವರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಸತ್ಯನಾರಾಯಣ ಜಿ. ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಅವರು ಕಾರ್ಯಕ್ರಮ ನಿರೂಪಣೆ ಗೈದರು, ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ಅವರು ವಂದನಾರ್ಪಣೆ ಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಫ್ರೆಂಡ್ಸ್ ಕೊಲ್ಲೂರು ನೇತೃತ್ವದಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್‌ ರೇಡ್‌ ಕ್ರಾರ್ಸ್‌ ಸೊಸೈಟಿ ಕುಂದಾಪುರ ಸಹಯೋಗದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ  ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜರುಗಿತು. ಕಾರ್ಯಕ್ರಮವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಉದ್ಘಾಟಿಸಿದರು. ಕೊಲ್ಲೂರು ಫ್ರೆಂಡ್ಸ್ ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಶೇರುಗಾರ್, ಉಪಾಧ್ಯಕ್ಷ ನಾಗೇಶ್ ದಳಿ, ಕೊಲ್ಲೂರಿನ ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಶೇಖರ್ ಅಡಿಗ, ಜೀಪು ಚಾಲಕ ಮಾಲಕರ ಸಂಘದ ಅಧ್ಯಕ್ಷ ಕಿಶನ್ ಶೆಟ್ಟಿ, ಟ್ಯಾಕ್ಸಿ ಚಾಲಕ ಮಾಲಕರ ಸಂಘದ ನಾಗೇಶ್ ಬಾಳಿಗ, ಆಟೋ ಚಾಲಕ ಮಾಲಕರ ಸಂಘದ ಸುರೇಶ, ಮಹಿಳಾ ಮಂಡಲದ ಅಧ್ಯಕ್ಷೆ ಲತಾ ಶೆಟ್ಟಿ, ಗ್ರೀಷ್ಮ ಗಿರಿಧರ್ ಭೀಡೆ, ನವಶಕ್ತಿ ಮಹಿಳಾ ವೇದಿಕೆಯ ಅಧ್ಯಕ್ಷೆ ಗ್ರೀಷ್ಮ ಗಿರಿಧರ್ ಭೀಡೆ, ಡಾ. ಶ್ರೀಕಾಂತ್, ಎಸ್. ಜಯಕರ ಶೆಟ್ಟಿ ರೆಡ್ ಕ್ರಾಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗದ 40 ಸ್ಪರ್ಧೆಗಳಲ್ಲಿ ಭಾಗವಹಿಸಿ 36 ವಿಭಾಗಗಳಲ್ಲಿಯೂ ಪ್ರಶಸ್ತಿಯನ್ನು ಗಳಿಸಿ ಅತೀ ಹೆಚ್ಚಿನ ಬಹುಮಾನ ಪಡೆದುಕೊಂಡಿದ್ದಾರೆ. 1ರಿಂದ 4ನೇ ತರಗತಿ ವಿಭಾಗದಲ್ಲಿ ಐದು ಪ್ರಥಮ, ಎರಡು ದ್ವಿತೀಯ ಹಾಗೂ ಎರಡು ತೃತೀಯ ಬಹುಮಾನ ಪಡೆದುಕೊಂಡರೆ, 5ರಿಂದ 7ನೇ ತರಗತಿ ವಿಭಾಗದಲ್ಲಿ ಎಂಟು ಪ್ರಥಮ, ಐದು ದ್ವಿತೀಯ ಹಾಗೂ ಒಂದು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. 8ರಿಂದ 12ನೇ ತರಗತಿ ವಿಭಾಗದಲ್ಲಿ ಮೂರು ಪ್ರಥಮ, ಆರು ದ್ವಿತೀಯ ಹಾಗೂ ನಾಲ್ಕು ತೃತೀಯ ಬಹುಮಾನ ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಅಂತಾರಾಷ್ಟ್ರೀಯ ಕ್ರೀಡಾ ಭೂಪಟದಲ್ಲಿ ಮೊದಲ ಬಾರಿಗೆ ಭಾರತ ಮಿನುಗುವಂತೆ ಮಾಡಿದ, ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದುಕೊಟ್ಟ ಕ್ರೀಡಾ ಲೋಕದ ದಿಗ್ಗಜ ಮೇಜರ್ ಧ್ಯಾನ್‌ಚಂದ್ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ, ಗುರುವಾರ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಆಳ್ವಾಸ್ ಕಾಲೇಜು ಜಂಟಿಯಾಗಿ ರಾಷ್ಟೀಯ ಕ್ರೀಡಾ ದಿನದ ಹಿನ್ನಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶವೇ ಹೆಮ್ಮೆ ಪಡುವಂಥ ಸಾಧನೆ:ತಮ್ಮ ಅದ್ಭುತ ಕ್ರೀಡಾ ಕೌಶಲದ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಮುಖ್ಯ ಉದ್ದೇಶ ಕ್ರೀಡೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವುದಾಗಿದೆ ಎಂದರು. ಆಳ್ವಾಸ್‌ನಲ್ಲಿ ಕ್ರೀಡಾಪಟುಗಳಿಗೆ ಪ್ರತೀ ದಿನ ಹಬ್ಬ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಅಸ್ತಿತ್ವ ಹೊಂದುವ ಮೊದಲೇ ಆಳ್ವಾಸ್‌ನಲ್ಲಿ ಏಕಲವ್ಯ ಸ್ಪೋಟ್ಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಪ್ರತಿಯೊಬ್ಬ ನಾಗರೀಕನ ದೈನಂದಿನ ಜೀವನದಲ್ಲಿ ಆಧಾರ್ ಕಾರ್ಡ್ ಮಹತ್ವದ್ದಾಗಿದ್ದು, ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಾಗಿದ್ದು ಇದನ್ನು ಪ್ರತಿಯೊಬ್ಬರು ಚಾಲ್ತಿಯಲ್ಲಿರುವ ಆಧಾರ್ ಗುರುತಿನ ಚೀಟಿ ಹೊಂದಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ವಯೋಮಾನದವರಿಗೂ ಹೊಸಕಾರ್ಡ್ಗಳು, ಕಾರ್ಡುಗಳ ಸ್ಯಾಚುರೇಷನ್ ಹಾಗೂ ಕಡ್ಡಾಯ ಬಯೋ ಮೆಟ್ರಿಕ್ ನವೀಕರಣಗೊಳಿಸುವುದರೊಂದಿಗೆ ಎಲ್ಲಾ ವಯೋಮಾನದವರೂ ಚಾಲ್ತಿಯಲ್ಲಿರುವ ಆಧಾರ್ ಕಾರ್ಡ್ ಅನ್ನು ಹೊಂದಬೇಕು ಎಂದರು. 5 ವರ್ಷದೊಳಗಿನ ಮಕ್ಕಳು ಹೊಸದಾಗಿ ಆಧಾರ್ ಕಾರ್ಡ್ ನೊಂದಣಿಯನ್ನು ಸಮೀಪದ ಅಂಚೆ ಕಚೇರಿ, ತಾಲೂಕು ಕಚೇರಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಅವಶ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಇನ್ಸ್ಟಿಟ್ಯೂಷನ್ ಇನ್ನೋವೆಷನ್ ಕೌನ್ಸಿಲ್ ಇವರ ಸಹಯೋಗದೊಂದಿಗೆ  ಪ್ರಥಮ ಪದವಿಯ ಬಿಸಿಎ ವಿದ್ಯಾರ್ಥಿಗಳಿಗಾಗಿ “ಬಿ.ಸಿ.ಎ ಕೋರ್ಸ್ ಪರಿಚಯ ಎನ್ನುವ ಮಾಹಿತಿ ಮತ್ತು ಅವಕಾಶಗಳು” ಕಾರ್ಯಾಕ್ರಮ  ನೆರವೇರಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.  ಶುಭಕರಾಚಾರಿ  ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಬಿಸಿಎ ಪದವಿಯ ಉಪಯುಕ್ತತೆ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ ಅವರು ಉಪಸ್ಥಿತರಿದ್ದರು. ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ  ಪ್ರೊಫೆಸರ್ ಗಣೇಶ್ ಕೆ. ಅವರು ವಿದ್ಯಾರ್ಥಿಗಳಿಗೆ ಡೇಟಾ ಅನಾಲಿಟಿಕ್ಸ್, ಅದರ ಪಠ್ಯಕ್ರಮ ಮತ್ತು ವೃತ್ತಿ ಅವಕಾಶಗಳ ಬಗ್ಗೆ ವಿವರಿಸಿದರು. ಕಂಪ್ಯೂಟರ್ ಸೈನ್ಸ್ ಉಪನ್ಯಾಸಕಿಯಾದ ವಿಜಯಲಕ್ಷ್ಮಿ ಎನ್. ಶೆಟ್ಟಿ ವಿದ್ಯಾರ್ಥಿಗಳಿಗೆ  ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್   ಕೋರ್ಸ ಅವಶ್ಯಕತೆ ಹಾಗೂ ವಿವಿಧ ವೃತ್ತಿ ಅವಕಾಶಗಳ ಬಗ್ಗೆ, ಅಂತೆಯೇ ಇನ್ನೊರ್ವ ಉಪನ್ಯಾಸಕರಾದ ಕೃಷ್ಣ ಅವರು  ಸಾಮಾನ್ಯ ಬಿಸಿಎ  ಕೋರ್ಸ್‌ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಹಯೋಗದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ವಿ. ಹೆಚ್ 4ನೇ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರನ್ನು ಆಡಳಿತ ಮಂಡಳಿ ಅವರು , ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅವರು ಅಭಿನಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೇರಂಜಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತೋತ್ಸವ ಅಂಗವಾಗಿ ಅಸ್ಮ ಕಮ್ ಸಂಸ್ಕೃತಂ ಸರಣಿ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಾಪುರ ಇವರ ಜಂಟಿ ಆಶ್ರಯದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಉದಯ್ ಆಚಾರ್ಯ ಅವರು ವಹಿಸಿಕೊಂಡಿರುತ್ತಾರೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರಶಾಂತ್ ಅರೆ ಶಿರೂರು ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಂಬದ ಕೋಣೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ, ಗ್ರಾಮ ಪಂಚಾಯಿತಿ ಸದಸ್ಯೆ ಜಲಜಾಕ್ಷಿ ಗಾಣಿಗ ಎಸ್. ವಿ. ಎಸ್. ಗಂಗೊಳ್ಳಿ ಇಲ್ಲಿಯ ಅಧ್ಯಾಪಕರಾದ ಶ್ರೀಧರ ಗಾಣಿಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿಯಾದ ಅಚ್ಚುತ ಬಿಲ್ಲವ. ದುರ್ಗಾ ಮಿತ್ರ ಮಂಡಳಿ ಕಂಚಿಕಾನ್ ಇದರ ಅಧ್ಯಕ್ಷರಾದ ಸಂದೀಪ್ ದೇವಾಡಿಗ, ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಾಪುರ ಇಲ್ಲಿಯ ಮುಖ್ಯ ಶಿಕ್ಷಕರಾದ ತಿರುಮಲೇಶ್ವರ ಭಟ್ ಇನ್ನಿತರರು ಉಪಸ್ಥಿತರಿದ್ದರು. ಮುಖ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯಾನ್ ಫೆಸಿಪಿಕ್ ಯೋಗಾಸನ ಚಾಂಪಿಯನ್‍ಶಿಪ್‍ನಲ್ಲಿ ಎರಡು ಬೆಳ್ಳಿ ಪದಕ ಹಾಗೂ ” ಏಷ್ಯಾನ್ ಫೆಸಿಪಿಕ್ ಐಕಾನಿಕ್ ಕೋಚ್ ಅವಾರ್ಡ್” ದಿವ್ಯಾ ಶೆಟ್ಟಿ  ಪಡೆದಿದ್ದಾರೆ. ಅವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರೆಹೊಳೆ, ಫ್ರೌಢ ಶಿಕ್ಷಣ ಸರಕಾರಿ ಪ್ರೌಢ ಶಾಲೆ ಕಿರಿಮಂಜೇಶ್ವರ ಹಾಗೂ ಪದವಿ ಪೂರ್ವ ಶಿಕ್ಷಣ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದಲ್ಲಿ ಪಡೆದಿದ್ದರೆ. ಯೋಗಾಸನ ಕ್ಷೇತ್ರದಲ್ಲಿ ರಾಜ್ಯ- ರಾಷ್ಟ್ರ ಮಟ್ಟದಲ್ಲಿ ಪ್ರತಿಷ್ಠಿತ ಹಲವಾರು ಪದಕ- ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರು ಮೂಲತಃ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಕುದ್ರು ಗೋಡಿನ ಮಂಜು ಶೆಟ್ಟಿ ಹಾಗೂ ಕುಸುಮ ದಂಪತಿಗಳ ಮಗಳು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 9ನೇ ತರಗತಿ ವಿದ್ಯಾರ್ಥಿನಿ ನಂದಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿರುತ್ತಾಳೆ. ಅವರಿಗೆ ವಿಜ್ಞಾನ ಶಿಕ್ಷಕಿ ಚೈತ್ರಾ ಮಾರ್ಗದರ್ಶನ ನೀಡಿದ್ದು ಆಡಳಿತಮಂಡಳಿ, ಮುಖ್ಯಶಿಕ್ಷಕರು ಬೋಧಕ ಮತ್ತು ಬೋಧಕೇತರ ವೃಂದದವರು ಶುಭ ಕೋರಿರುತ್ತಾರೆ.

Read More