ಬೈಂದೂರು ಕ್ಷೇತ್ರದ ಕೃಷಿ, ಮೀನುಗಾರಿಕೆ, ನೀರಾವರಿ, ಹೆದ್ದಾರಿ, ಗೋಶಾಲೆ – ಶಾಸಕರಾದ ಗುರುರಾಜ ಗಂಟಿಹೊಳೆ ಏನಂತಾರೆ?
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2022-23 ನೇ ಸಾಲಿನ “ವಿಶೇಷ ಪ್ರೋತ್ಸಾಹಕ ಸಂಘ ಪ್ರಶಸ್ತಿ” ಯನ್ನು ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರಿನಲ್ಲಿ ಇಂದು ನಡೆದ ಮಹಾಸಭೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪ್ರಶಸ್ತಿ ಯನ್ನು ಸಂಘದ ಅಧ್ಯಕ್ಷರಾದ ಎಸ್ ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಸಿಇಒ ಶ್ರೀ ವಿಷ್ಣು ಆರ್ ಪೈ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್, ಮಂಜು ದೇವಾಡಿಗ ಹಾಗೂ ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ ಎನ್ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್ ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆಯಾಗಿದ್ದಾರೆ. ಒಟ್ಟು 18 ಮಂದಿ ಸದಸ್ಯ ಬಲವಿರುವ ಬಿಜೂರು ಪಂಚಾಯತಿಯಲ್ಲಿ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮೀಸಲಾತಿ ಬಂದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ 2022-23 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ ಮರವಂತೆ ಬಡಾಕೆರೆ ವ್ಯ. ಸೇ. ಸಹಕಾರಿ ಸಂಘ(ನಿ), ನಾವುಂದದ ಅತ್ಯುತ್ತಮ ಕಾರ್ಯ ವೈಖರಿ ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಬ್ಯಾಂಕಿನ ಎಲ್ಲಾ ನಿರ್ದೇಶಕರು, ಮ.ಬ.ವ್ಯ.ಸೇ.ಸಹಕಾರಿಯ ನಿರ್ದೇಶಕ ವಿನಾಯಕ ರಾವ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜ್ವರಕ್ಕಾಗಿ ನೀಡಲಾದ ಇಂಜೆಕ್ಷನ್ ಅಡ್ಡ ಪರಿಣಾಮದಿಂದ ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರು ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಹೊಸಂಗಡಿ ಬೆದ್ರಳ್ಳಿ ನಿವಾಸಿ ದಿ. ಚಂದ್ರ ಶೆಟ್ಟಿ ಎಂಬುವವರ ಪುತ್ರ ಅಮರ್ ಶೆಟ್ಟಿ [31 ವರ್ಷ] ಮೃತ ದುರ್ದೈವಿ. ದುಬೈನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ ಅಮರ್ ಶೆಟ್ಟಿ ಒಂದು ವರ್ಷದ ಹಿಂದಷ್ಟೇ ಊರಿಗೆ ಹಿಂದಿರುಗಿ ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದರು. ಆ.13ರಂದು ಕೆ.ಪಿ. ಅಗ್ರಹಾರದ ಸಂಬಂಧಿಯ ಮನೆಗೆ ತೆರಳಿದ್ದಾಗ ಮೈಬಿಸಿ ಇರುವುದನ್ನು ಗಮನಿಸಿ ಅಲ್ಲಿಯೇ ಸಮೀಪವಿದ್ದ ಖಾಸಗಿ ಕ್ಲಿನಿಕ್ಗೆ ತೆರಳಿದ್ದು ವೈದ್ಯರು ಪರೀಕ್ಷಿಸಿ ಜ್ವರವೆಂದು ಇಂಜೆಕ್ಷನ್ ಹಾಗೂ ಮಾತ್ರೆಗಳನ್ನು ನೀಡಿದ್ದರು. ಆದರೆ ಇಂಜೆಕ್ಷನ್ ನೀಡಿದ ಸೋಟದ ಭಾಗ ಇದ್ದಕ್ಕಿದ್ದಂತೆ ಊದಿಕೊಂಡಿದ್ದು, ಜೊತೆಗೆ ನೋವು ಕೂಡ ಕಾಣಿಸಿಕೊಂಡಿದೆ. ಹಾಗಾಗಿ ಆ.15ರಂದು ರಾಜಾಜಿನಗರದ ರೂಮಿಗೆ ಸಮೀಪದ ಖಾಸಗಿ ಕ್ಲಿನಿಕ್ಗೆ ತೆರಳಿದ್ದು, ವೈದ್ಯರು ಪರೀಕ್ಷಿಸಿ ಮಾತ್ರೆ ಹಾಗೂ ಗ್ಲೂಕೋಸ್ ನೀಡಿದ್ದರು. ಒಂದು ದಿನದ ಬಳಿಕ ನೋವು ಕಡಿಮೆಯಾಗದಿದ್ದರೆ ಚಿಕಿತ್ಸೆ ನೀಡುವುದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ,ಅ.18: ಇಂದು ನಡೆದ ಅಂಪಾರು ವೃತ್ತ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ, ಗ್ರಾಪಂ ಕೊಲ್ಲೂರು, ಅರಣ್ಯ ಇಲಾಖೆ ವನ್ಯಜೀವಿ ವಿಭಾಗ, ಸ್ಥಳೀಯ ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸನ್ಮನಸ್ ಸಮಿತಿ, ಟಿಪ್ ಸೆಷನ್ಸ್ ಎನ್ಜಿಓ ಹಾಗೂ ವಿಜಯವಾಣಿ ಆಶ್ರಯದಲ್ಲಿ ಶುಕ್ರವಾರ ಕೊಲ್ಲೂರು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗಾಗಿ ಪ್ಲಾಸ್ಟಿಕ್ ನಿಷೇಧ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ಜಿ. ಎಂ. ರೆಬೆಲ್ಲೊ ಅವರು ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿ, ನಾವುಗಳು ಬಳಸಿ ಎಸೆಯುವ ಪ್ಲಾಸ್ಟಿಕ್ ಕಪ್ನಲ್ಲಿ ಬಿಸಿ ಪಾನೀಯವನ್ನು ಸೇವಿಸಿದರೆ ನಮ್ಮ ದೇಹದೊಳಗೆ ಪ್ಲಾಸ್ಟಿಕ್ ಕಣಗಳು ಸೇರಿಕೊಳ್ಳುತ್ತವೆ. ಖರಗ್ಪುರ್ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ ಪ್ರತಿನಿತ್ಯ ಈ ಕಪ್ನಲ್ಲಿ ಬಿಸಿಪಾನೀಯ ಸೇವೆನೆಯಿಂದ ಸುಮಾರು ೭೫ ಸಾವಿರ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ದೇಹಕ್ಕೆ ಹೋಗುತ್ತವೆ. ಅಲ್ಲದೇ ಪ್ಲಾಸ್ಟಿಕ್ ಬಿಸಿ ಮಾಡಿದರೆ ಅಥವಾ ಸುಟ್ಟರೆ ಕಾರ್ಸಿನೋಜನ್ ಮತ್ತು ವಿನೈಲ್ ಕ್ಲೋರೈಡ್ ಮಾನೋಮರ್ ಉತ್ಪತ್ತಿಯಾಗುತ್ತದೆ. ಇದು ಪಿವಿಸಿಕ್ಕಿಂತ ಹತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಮಂಜುನಾಥ್ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಿ ಶೇರಿಗಾರ್ ಆಯ್ಕೆಯಾಗಿದ್ದಾರೆ. ಒಟ್ಟು 17 ಮಂದಿ ಸದಸ್ಯ ಬಲವಿರುವ ಕಾಳಾವರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಘಂಟು ಬ್ರಹ್ಮ ಜಿ. ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ 2023ನೇ ಸಾಲಿನ ಈ ಪುರಸ್ಕಾರಕ್ಕೆ ‘ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಪಂಜು ಗಂಗೊಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಜಿ.ವಿ ಅವರ 111ನೇ ಹುಟ್ಟುಹಬ್ಬದ ದಿನವಾದ ಆ.23ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಥೆಕೂಟದ ಗೋಪಾಲಕೃಷ್ಣಕುಂಟನಿ ತಿಳಿಸಿದ್ದಾರೆ. ‘ಕಥೆಕೂಟ’ ಬಳಗವು ನಿಘಂಟು ಬ್ರಹ್ಮ ಜಿ. ವೆಂಕಟಸುಬ್ಬಯ್ಯ ಸ್ಮರಣಾರ್ಥ, ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿವರ್ಷ ಜಿ. ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸುಲೋಚನಾ ಗಾಣಿಗ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 12 ಹಾಗೂ ಬಿಜೆಪಿ ಬೆಂಬಲಿತ 3 ಸದಸ್ಯ ಬಲವಿರುವ ನಾವುಂದ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು. ನರಸಿಂಹ ದೇವಾಡಿಗ ಅವರು 5ನೇ ಭಾರಿ ನಾವುಂದ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, 3ನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
