ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಕರಾಟೆ ಚಾಂಪಿಯನ್ಶಿಪ್ -2024ರಲ್ಲಿ ಶಿಖಾ 3 ಸುತ್ತಿನ ಗೆಲುವಿನೊಂದಿಗೆ ಚಿನ್ನದ ಪದಕವನ್ನು ಗಳಿಸಿದ್ದಾಳೆ. ಕರಾಟೆ ಚಾಂಪಿಯನ್ಶಿಪ್ -2024ರ ಅಂತಿಮ ಪಂದ್ಯದಲ್ಲಿ 7-0 ಪಾಂಯಿಟ್ನೊಂದಿಗೆ ಗೆಲುವು ಸಾಧಿಸಿದ್ದಾರೆ. ಶಿಖಾ ಕರಾಟೆ ತರಬೇತಿಯನ್ನು ಕುಂದಾಪುರದ ಇವೊಲ್ಯೂಷನ್ ಅಕಾಡೆಮಿ ಆಫ್ ಮೆಟೀರಿಯಲ್ ಆರ್ಟ್ಸ್ & ಫಿಟ್ನೆಸ್ ಸಂಸ್ಥೆಯಲ್ಲಿ ಗುರು ಗ್ರಷಮೇಶ್ ಕುಂದರ್ ಅವರಿಂದ ತರಬೇತಿ ಪಡೆದಿದ್ದಾಳೆ. ಬ್ರಹ್ಮಾವರ ಲಿಟಲ್ರಾಕ್ ಇಂಡಿಯನ್ ಸ್ಕೂಲ್ನ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಶಿಖಾ, ಕುಂದಾಪುರದ ಶ್ರೀದರ್ ಬಿಜೂರು ಹಾಗೂ ದೀಪಿಕಾ ಅವರ ದಂಪತಿಯ ಪುತ್ರಿ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಾಗಿ ಸಾಧನೆ ಮಾಡಿರುವ ರಾಜ್ಯದ ಹಿರಿಯ ಕ್ರೀಡಾಪಟುಗಳು ಹಾಗೂ ತರಬೇತುದಾರರಿಂದ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಮೊ. ನಂ: 0820-2521324, 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುಕುಲ ಸಂಸ್ಥೆಯಲ್ಲಿ ಗೋಕುಲಾಷ್ಟಮಿಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಸ್ವಪ್ನ ಆಪ್ತ ಸಮಾಲೋಚಕರು ಅವರು ಭಗವದ್ಗೀತೆಯ ವಿವಿಧ ಸಂದೇಶಗಳನ್ನು ಅರ್ಥಪೂರ್ಣವಾಗಿ ತಿಳಿಸುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು, ಅದರಲ್ಲೂ ಸಣ್ಣ ವಯಸ್ಸಿನಲ್ಲೇ ಹೆಚ್ಚಿನ ಕಥೆಗಳನ್ನು ಹೇಳಿ ಅವರನ್ನು ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡಿದಾಗ ಮುಂದೆ ಎಂದು ಅವರು ತಮ್ಮ ಬದುಕಿನಲ್ಲಿ ಎಡುವುದಿಲ್ಲ ಎಂದರು. ಮಕ್ಕಳನ್ನು ಬೆಳೆಸುವಲ್ಲಿ ಶಾಲೆಯ ಶಿಕ್ಷಕರ ಪಾತ್ರಕ್ಕಿಂತಲೂ ಪೋಷಕರ ಪಾತ್ರ ಹಿರಿದಾದ್ದದ್ದು ಅದನ್ನು ಅರಿತು ಮಕ್ಕಳನ್ನು ಬೆಳೆಸಿದ್ದಾದರೆ ಒಂದು ಉತ್ತಮ ಸಮಾಜ ನಿರ್ಮಾಣಕ್ಕೆ ಬೇರೆ ಏನು ಬೇಕಿಲ್ಲ ಎಂಬುದನ್ನು ಅರ್ಥಪೂರ್ಣವಾಗಿ ತಮ್ಮ ಅತಿಥಿ ಭಾಷಣದಲ್ಲಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಾಂಡ್ಯ ಎಜುಕೇಶನಲ್ ಟ್ರಸ್ಟನ್ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ನಮ್ಮ ಸನಾತನ ಧರ್ಮದ ಉಳಿವಿಗಾಗಿ ಇಂತಹ ಆಚರಣೆಗಳು ತುಂಬಾ ಮುಖ್ಯ,ಅದರ ಮಹತ್ವವನ್ನು ಈ ಹಂತದಲ್ಲಿ ಮಕ್ಕಳಿಗೆ ತಿಳಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿ ಇವರ ಆಶ್ರಯದಲ್ಲಿ ಪಿಎಂ ಪೋಷಣ್ ಅಭಿಯಾನ್ ಕಾರ್ಯಕ್ರಮದಡಿಯಲ್ಲಿ ತಾಯಂದಿರ ಕೈತುತ್ತು ಕಾರ್ಯಕ್ರಮವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಎಸ್ಡಿಎಂಸಿ ಅಧ್ಯಕ್ಷೆ ಶೋಭಾ ಖಾರ್ವಿ, ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ದಾಕುಹಿತ್ಲು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಎಸ್ಡಿಎಂಸಿ ಸದಸ್ಯರು, ರೋಟರಿ ಸದಸ್ಯರು, ಪೋಷಕರು ಮೊದಲಾದವರು ಉಪಸ್ಥಿತರಿದ್ದರು. ರೋಟರಿ ಕ್ಲಬ್ ವತಿಯಿಂದ ಲಕ್ಕಿ ಮದರ್ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 45 ತಾಯಂದಿರು ತಮ್ಮ ಮಕ್ಕಳಿಗೆ ಇಷ್ಟವಾದ ವಿಶಿಷ್ಟ ತಿನಿಸುಗಳನ್ನು ತಯಾರಿಸಿ ತಂದು ತಮ್ಮ ಮಕ್ಕಳಿಗೆ ಕೈಯರೆ ಉಣಬಡಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇವರ ಸಹಯೋಗದೊಂದಿಗೆ ಮಧುಮೇಹ ಅರಿವು ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಸಿಟಿ ಇಲ್ಲಿನ ವೈದ್ಯರಾದ ಡಾ| ಶ್ರುತಿ ಬಲ್ಲಾಳ್ ಕಾರ್ಯಕ್ರಮವನ್ನು ಉದ್ದೇಶಿಸಿ ಇತಿ-ಮಿತಿ ಆಹಾರ ಪದ್ಧತಿ ಹಾಗೂ ದೈನಂದಿನ ವ್ಯಾಯಾಮದ ಬದುಕು ಆರೋಗ್ಯವನ್ನು ಸುಸ್ಥಿರದಲ್ಲಿಡುವುದಲ್ಲದೆ, ಮಧುಮೇಹದಂತಹ ಖಾಯಿಲೆ ಬಾರದಂತೆ ತಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇದರ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಚಿಕ್ಕ ವಯಸ್ಸಿನಲ್ಲೇ ಆರೋಗ್ಯದ ಬಗ್ಗೆ ಸಕಲ ಅರಿವು ಅವಶ್ಯಕ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾಲೇಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಸಾಹಿತ್ಯ ಪರಿಷತ್ತಿನ 19ನೇ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರೊಫೆಸರ್ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳು ಅವರ ಮನೆಯಲ್ಲಿ ವಿದ್ಯುಕ್ತವಾಗಿ ಆಮಂತ್ರಣ ಪತ್ರವನ್ನು ನೀಡುವುದರ ಮುಖೇನ ಸಮ್ಮೇಳನಕ್ಕೆ ಆಹ್ವಾನಿಸಿ ಯಶಸ್ವಿಯಾಗಿ ನಡೆಸಿಕೊಡಲು ಕೋರಿಕೊಂಡರು. ಆಹ್ವಾನ ಸ್ವೀಕರಿಸಿದ ಪ್ರೊಫೆಸರ್ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಅವರು ಮಾತನಾಡುತ್ತಾ, ತಾಲೂಕಿನಲ್ಲಿ ಸಾಹಿತ್ಯ ಸೇವೆಯಲ್ಲಿ ಗಣನೀಯವಾಗಿ ತೊಡಗಿಸಿಕೊಂಡಿರುವ ಅನೇಕ ಹಿರಿಯರ ನಡುವೆ ನನ್ನನ್ನು ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕಕ್ಕೆ ಚಿರಋಣಿಯಾಗಿದ್ದೇನೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಆಶಯಗಳಂತೆ ಸಾಹಿತ್ಯ ಸಮ್ಮೇಳನವನ್ನು ಬಹು ಜವಾಬ್ದಾರಿಯಿಂದ ಅಧ್ಯಕ್ಷತೆ ವಹಿಸಿ ನಡೆಸಿಕೊಡುತ್ತೇನೆಂದು ಹೇಳಿದರು. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉಡುಪಿ ತಾಲೂಕು ಸಮ್ಮೇಳನದ ಪೂರ್ವ ಅಧ್ಯಕ್ಷರಾದ ಪ್ರೊಫೆಸರ್ ಉಪೇಂದ್ರ ಸೋಮಯಾ ಜಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂತೋಷ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಪಶು ವೈದ್ಯರಾದ ಸಾಣೂರಿನ ಜ್ಞಾನದೇವ ಅವರು ಇಂದು ಜಗತ್ತೇ ವಿಷಮಯವಾಗುತ್ತಿದೆ. ಆಹಾರ ಪದಾರ್ಥಗಳೆಲ್ಲ ಕಲುಷಿತಗೊಂಡಿವೆ. ಇಂದಿನ ತುರ್ತು ಅಗತ್ಯ ಸಂಪೂರ್ಣ ಸಾವಯವ ಪ್ರಧಾನವಾದ ಕೃಷಿ ನಡೆಸುವುದಾಗಿದೆ. ಕೃಷಿ ಕಷ್ಟಕರವಾದರೂ ಅದನ್ನು ಇಷ್ಟಪಟ್ಟು ಮಾಡಬೇಕಾಗಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವಥ್ ಎಸ್. ಎಲ್. ಅವರು ಮಾತನಾಡಿ ಕೃಷಿ ಮೂಲವೇ ನಾಗರಿಕತೆಯ ಮೂಲ. ಮಣ್ಣು ಕೇವಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಸಂಸ್ಥೆಯ ಹಳೇ ವಿದ್ಯಾರ್ಥಿಗಳು ಹಾಗೂ ಪೋಷಕರಾದವರು ವಿದ್ಯಾಭ್ಯಾಸಕ್ಕೆ ಇತಂಹ ಸರಕಾರಿ ಸಂಸ್ಥೆಗೆ ಸೇರಿಸಬೇಕೆಂದು ಹೇಳಿ ಇಲ್ಲಿರುವ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಬೇರೆ ಪೋಷಕರಿಗೆ ಮನವರಿಕೆ ಮಾಡಿದರೆ ಈ ಸಂಸ್ಥೆಗೆ ಸೇರಿಸಬೇಕೆಂದು ಬೇರೆ ಪೋಷಕರಿಗೆ ಭರವಸೆ ಬರುತ್ತದೆ. ಹನ್ನೆರಡು ವರ್ಷದ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಅತಂಹ ಕಾಲಘಟ್ಟದಲ್ಲಿ ಈ ಪ್ರತಿಭಾ ಪುರಸ್ಕಾರ ಶುರುಮಾಡಿ ದಶಕಗಳವರೆಗೆ ಮುನ್ನೆಡೆಸಿಕೊಂಡು ಬಂದಿರುವ ಸ್ನೇಹ ಸಂಗಮ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಫ್ರೌಡಶಾಲಾ ವಿಭಾಗದ ವೈಸ್ ಪ್ರಿನ್ಸಿಪಾಲ್ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು 2002-03 ಸಾಲಿನ ಹಳೇ ವಿದ್ಯಾರ್ಥಿ ಸಂಘ ಸ್ನೇಹ ಸಂಗಮ ವತಿಯಿಂದ ಶಾಲಾ ಸಭಾಭವನದಲ್ಲಿ ಜರುಗಿದ 12ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸ್ನೇಹ ಸಂಗಮದ ಅಧ್ಯಕ್ಷ ಗಿರೀಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಸತೀಶ್ ನಾಯ್ಕ್ ಪ್ರತಿಭಾನ್ವಿತರಿಗೆ ಪ್ರೂತ್ಸಾಹಧನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 3.36 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ.17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2023-24 ನೇ ಸಾಲಿನ 8ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 150 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 50 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ. 99.20 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊAಡಿದ್ದು, ಪ್ರಸ್ತುತ 3876 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಆಳ್ವಾಸ್ ಸಂಸ್ಥೆಯು ಖಾಸಗಿ ದೋರಣೆಯೊಂದಿಗೆ ಕೆಲಸ ನಿರ್ವಹಿಸಿದರೂ, ಸಮಾಜದ ಪರಿಕಲ್ಪನೆಯಲ್ಲಿ…
