ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ.ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ವತಿಯಿಂದ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಜರುಗಿದ ಅಕ್ಷರ ಬೆಳಕು ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ನಾಲ್ವುರು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಸ್ವೀಕಾರ ಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿ.ಶೈನ್ ಕೊಚಿಂಗ್ ಸೆಂಟರ್ ನಿರ್ದೇಶಿಕ ಹರೀಶ್ ಕುಮಾರ್ ಶೆಟ್ಟಿ, ದಲಿತ ಸಂಘಟನೆಯ ಮುಖಂಡರಾದ ಮಂಜುನಾಥ ಗಿಳಿಯಾರು, ವಾಸುದೇವ ಮುದೂರು, ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ, ಸಂಘಟನೆಯ ಪದಾಧಿಕಾರಿಗಳಾದ ವಿನಯ, ಗೀತಾ ಸುರೇಶ್ ಕುಮಾರ್, ಸುರೇಶ್ ಕುಮಾರ್, ದ.ಸಂ.ಸ ಬೈಂದೂರು ತಾಲೂಕಿನ ಪದಾಧಿಕಾರಿಗಳಾದ ಭಾಸ್ಕರ್, ಶಿವರಾಜ, ಗೋವಿಂದ. ಬೈಂದೂರು ಡಾ.ಬಿ.ಆರ್. ಅಂಬೇಡ್ಕರ್ ಸಂಘದ ರಂಗ. ಎಸ್, ದಯಾನಂದ.ಪಿ. ಹಾಗೂ ಮಹಿಳಾ ಸಂಘದ ಮಹಿಳಾ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಚಂದ್ರ ಕೆ ದೇವಾಡಿಗ ಸ್ವಾಗತಿಸಿದರು. ಶಿಕ್ಷಕಿ ಚೈತ್ರಾ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗುರುವಾರ ಸಹಕಾರಿಯ ಕಛೇರಿ ಆವರಣದಲ್ಲಿ ನಡೆಯಿತು. ಸಹಕಾರಿ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ್ದು, ರೂ. 10.73 ಕೋಟಿ ಠೇವಣಿ ಸಂಗ್ರಹಿಸಿ, ರೂ. 6.34 ಕೋಟಿ ಸಾಲ ನೀಡಿದೆ. ರೂ.11.03 ಕೋಟಿಗೂ ಅಧಿಕ ದುಡಿಯುವ ಬಂಡವಾಳ ಹೊಂದಿದ್ದು, ರೂ. 81 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ. ಆರ್ಥಿಕ ವರ್ಷದಲ್ಲಿ ರೂ. 19.99 ಲಕ್ಷ ಲಾಭಾಂಶ ಗಳಿಸಿದ್ದು, ಸದಸ್ಯರಿಗೆ ಶೇ. 11% ಡಿವಿಡೆಂಡ್ ಘೋಷಿಸಲಾಗಿದೆ. ಕ್ರಮಬದ್ಧವಾಗಿ ಹಾಗೂ ವಿಶ್ವಾಸದಿಂದ ಸೇವೆಯನ್ನು ನೀಡುವ ಮೂಲಕ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಸದಸ್ಯರಿಗೆ ಅಪಘಾತ ವಿಮೆ, ಶೈಕ್ಷಣಿಕ ನಿಧಿ, ಸ್ವಸಹಾಯ ಗುಂಪುಗಳ ರಚನೆ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಮುಖ್ಯ ಅತಿಥಿಗಳಾಗಿದ್ದ ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ಅಂಗವಾಗಿ ಶೆಫಿನ್ಸ್ ಸಂಸ್ಥೆಯಿಂದ ಅತಿಥಿ ಹಾಗೂ ಗೌರವ ಶಿಕ್ಷಕರ ತರಬೇತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯೆಡಾಡಿ-ಮತ್ಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು. ತರಬೇತಿಗೆ ಕುಂದಾಪುರ ತಾಲೂಕಿನ 8 ಶಾಲೆಯ 20 ಶಿಕ್ಷಕರು ಭಾಗವಹಿಸಿದ್ದು, ಅವರ ನಡುವೆ ಶೆಫಿನ್ಸ್ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಗಾಗಿ ಸ್ಪರ್ಧೆ ಯನ್ನು ಏರ್ಪಡಿಸಲಾಗಿತ್ತು. ಎಲ್ಲಾ ಅತಿಥಿ/ ಗೌರವ ಶಿಕ್ಷಕರೂ ತಾವು ಪಾಠ ಮಾಡುವ ವಿಷಯದಲ್ಲಿ ಬಹಳ ಅದ್ಭುತವಾಗಿ ಬಹಳಷ್ಟು ಟೀಚಿಂಗ್ ಎಯ್ಡ್ ಜೊತೆಗೆ ಭಾಗವಹಿಸಿ, ತಮ್ಮ ಅಧ್ಯಾಪನದಲ್ಲಿನ ಕ್ರಿಯಾಶೀಲತೆಯನ್ನು ಪ್ರದರ್ಶಿಸಿದರು. ಮೂರು ಸುತ್ತಿನ ಈ ಸ್ಪರ್ದೆಯ ಅಂತಿಮ ಸುತ್ತಿನಲ್ಲಿ ಬಿದ್ಕಲ್ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಗರತ್ನ ಹಾಗೂ ಜಪ್ತಿ ರಾಮಚಂದ್ರ ಅನುದಾನಿತ ಶಾಲೆಯ ಉದಯ್ ಕೊಠಾರಿ ಮತ್ತು ವಿಜಯ್ ಕಣದಲ್ಲಿದ್ದರು. ಕೊನೆಯ ಸುತ್ತಿನಲ್ಲಿ ರಾಮಚಂದ್ರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಜಪ್ತಿಯ ಗೌರವ ಶಿಕ್ಷಕರಾದ ಉದಯ ಕೊಠಾರಿ ಉಳಿದೆಲ್ಲ ಶಿಕ್ಷಕರ ಮೆಚ್ಚುಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಕ್ರೀಡೆಯಿಂದ ದೂರ ಸರಿಯಬಾರದು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರಬೇಕು. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚುತ್ತದೆ ಮತ್ತು ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು. ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್, ಕುಂದಾಪುರ ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 20.09.2023 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆ, ನೌಕಾ ಪಡೆ, ವಾಯುಪಡೆ ಹಾಗೂ ಸಿವಿಲ್ ಸರ್ವಿಸ್ ಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಭಾರತೀಯ ಸೇನಾ ಶಾರ್ಟ್ ಸರ್ವಿಸ್ ಕಮಿಷನ್ – 54ನೇ ಕೋರ್ಸಿಗೆ ಆಯ್ಕೆಗೊಂಡಿರುವ ಭರತ್ ಬಾಬು ದೇವಾಡಿಗ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಷ್ಮಿಶ್ ಕುಂದರ್ ಹಾಗೂ ರಾಷ್ಟ್ರೀಯ ಕರಾಟೆ ಪಟು ಅಜಯ್ A ದೇವಾಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರದ್ಧಾ ವಂದಿಸಿ, ಸಾನಿಕ ಶೆಟ್ಟಿ ಸ್ವಾಗತಿಸಿ, ಸಿಂಚನ ಅತಿಥಿಗಳನ್ನು ಪರಿಚಯಿಸಿದರು. ರಝಿನಾ ಬಾನು ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಅಗತ್ಯತೆಯ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಶ್ರೀ ಚಂದ್ರಶೇಖರ್ ರವರು ನಾಟಾ(NATA) ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಉಪನ್ಯಾಸಕ ಅಭಿಜಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸದಸ್ಯರ ಸಭೆ ಇತ್ತೀಚೆಗೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು. ಆಶಾ ಕಿಶೋರ್ ಪ್ರಾರ್ಥಿಸಿದರು.ಸಂಸ್ಥೆಯ ಸಿಬ್ಬಂದಿ ಆಶಾ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರೆಹನಾ ಸುಲ್ತಾನಾ ಅವರು ಸಂಘದ ವಾರ್ಷಿಕ ವರದಿ, ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಸಂಸ್ಥೆಯ ಉಪಾಧ್ಯಕ್ಷೆ ಕು. ಆಶಾ, ನಿರ್ದೇಶಕರಾದ ಗೀತಾ. ಎಸ್, ಲಕ್ಷ್ಮೀ ಬೈಂದೂರು, ಗಿರಿಜಾ, ಸಾವಿತ್ರಿ, ಮಾಲತಿ, ಪ್ರೇಮಾ, ಅಂಬಿಕಾ, ಶ್ಯಾಮಲಾ, ಅಲಿಯಾ ನಾಜ್, ನೇತ್ರಾವತಿ, ಸರಳಾ ಮುಂತಾದವರು ಉಪಸ್ಥಿತರಿದ್ದರು. ಪತ್ರಕರ್ತ ಅಂದಕಾ ಎ.ಎಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ಗಣೇಶ ಚಥುರ್ತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಕಾರ್ಕಳದ ಎಣ್ಣೆಹೊಳೆಯಿಂದ ತೆರೆದ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಕಾಲೇಜಿಗೆ ಮೆರವಣಿಗೆ ಮುಖಾಂತರ ಕರೆತರಲಾಯಿತು. ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ವಿಶೇಷವಾಗಿ ಗಣಹೋಮ, ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮಗಳು ನಡೆದವು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಗಣೇಶ ಚತುರ್ಥಿಯ ಮಹತ್ವದ ಕುರಿತು ಮಾತನಾಡಿದರು. ತದನಂತರ ಶ್ರೀ ದೇವಿ ಬಯಲಾಟ ಸಮಿತಿ ರಂಗನಪಲ್ಕೆ ತಂಡದಿಂದ ಅಸಹಾಯಕ ಬಡರೋಗಿಗಳ ಸಹಾಯಾರ್ಥ ಹುಲಿಕುಣಿತ ಪ್ರದರ್ಶನ ನಡೆಯಿತು. ಮಧ್ಯಾಹ್ನ ಮಹಾಪೂಜೆ ಮತ್ತು ಸಾಯಂಕಾಲ ರುದ್ರಶಿವ ಮೂಡಬಿದ್ರೆ ತಂಡದಿಂದ ನಾಸಿಕ್ ಬ್ಯಾಂಡ್ ಹಾಗೂ ಸಾಯಂಕಾಲ 4.30 ಗಂಟೆಗೆ ದುರ್ಗಾಪರಮೇಶ್ವರಿ ಜೋಡುರಸ್ತೆ ಇವರಿಂದ ಹುಲಿಕುಣಿತ ನಡೆಯಿತು. ಸಂಜೆ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕುಕ್ಕುದಕಟ್ಟೆಯವರೆಗೆ ಕರೆದೊಯ್ದು ಹತ್ತಿರದ ನದಿಯಲ್ಲಿ ಜಲಸ್ಥಂಬನಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಅಶ್ವತ್ ಎಸ್.ಎಲ್, ಆದರ್ಶ ಎಂ.ಕೆ. ಅಮೃತ್ ರೈ ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಶೆಟ್ಟಿ ಮತ್ತು ಸುನೀಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಬಳ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿದ್ದ ದಿ. ಸುರೇಶ್ ಪೂಜಾರಿ ಕಾಡಿನತಾರು ಅವರ ಸ್ಮರಣಾರ್ಥ, ಬೈಂದೂರು ತಾಲೂಕು ಕಂಬಳ ಸಮಿತಿ ಸಹಯೋಗದೊಂದಿಗೆ 25ನೇ ವರ್ಷದ ಮಿಯ್ಯಾಣಿ ಕಂಬಳೋತ್ಸವ ಸೆ.24ರ ಬೆಳಿಗ್ಗೆ 10ಗಂಟೆಯಿಂದ, ಮಿಯ್ಯಾಣಿ ಕಾಡಿನತಾರುವಿನಲ್ಲಿ ನಡೆಯಲಿದೆ. ಹಗ್ಗ ಅತೀ ಕಿರಿ, ಹಗ್ಗ ಕಿರಿಯ, ಹಗ್ಗ ಹಿರಿಯ ಹಾಗೂ ಹಲಗೆ ಮುಕ್ತ ವಿಭಾಗಲ್ಲಿ ಸ್ಪರ್ಧೆ ನಡೆಯಲಿದ್ದು ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ. ಈ ಕಂಬಳೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಸಂಯೋಜಕ ಸಂತೋಷ್ ಪೂಜಾರಿ ಕಾಡಿನಾರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಬಾಲ ಗೋಪಾಲ ಬಾಲರಾಧೆ ಸ್ಪರ್ಧೆಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ಬಾಲರಾಧೆ ಬಾಲಗೋಪಾಲರಾಗಿ ವರ್ಣಮಯ ವಸ್ತ್ರಾಲಂಕಾರದೊಂದಿಗೆ ಕೃಷ್ಣ ರಾಧೆಯರ ವಿವಿಧ ಅವತಾರಗಳನ್ನು ಪ್ರದರ್ಶಿಸುವ ಮೂಲಕ ನೆರೆದವರ ಗಮನ ಸೆಳೆದರು. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕಿಯರು ಹಾಗೂ ನೃತ್ಯ ಸಂಯೋಜಕರಾದ ಜಗದೀಶ್ ಬನ್ನಂಜೆ ಇವರು ಉಪಸ್ಥಿತರಿದ್ದರು.
