Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉದಯ ನಾಯ್ಕ್ ಅವರು, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಕನಕ ಅಧ್ಯಯನ ಪೀಠ, ಚೇತನಾ ಫೌಂಡೇಶನ್ ಹುಬ್ಬಳ್ಳಿ ಸಂಯುಕ್ತ ಆಶ್ರಯದಲ್ಲಿ ಕೊಡಮಾಡುವ ಡಾ| ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೈಂದೂರು ಏಳಜಿತ ಗ್ರಾಮದವರಾದ ಉದಯ ನಾಯ್ಕ್ ಅವರು, ಶೈಕ್ಷಣಿಕ, ಸಾಹಿತ್ಯಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗದಲ್ಲಿ ಒಟ್ಟು 21 ಪದಕಗಳನ್ನು ಪಡೆದುಕೊಂಡಿದ್ದಾರೆ. ಹರ್ಷಿಣಿ ಪ್ರಥಮ ಪಿ.ಯು.ಸಿ. 59 ಕೆ.ಜಿ ವಿಭಾಗದಲ್ಲಿ ಚಿನ್ನ, 62 ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ, 68 ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ ದ್ವಿತೀಯ ಪಿ.ಯು.ಸಿ.ಚಿನ್ನ, 70 ಕೆ.ಜಿ.ವಿಭಾಗದಲ್ಲಿ ಪ್ರಜ್ವಲ್ ಎಸ್ ಪೂಜಾರಿ ದ್ವಿತೀಯ ಪಿ.ಯು.ಸಿ.ಚಿನ್ನ, 74 ಕೆ.ಜಿ.ವಿಭಾಗದಲ್ಲಿ ಅದ್ವಿತ್ ದ್ವಿತೀಯ ಪಿ.ಯು.ಸಿ.ಚಿನ್ನ, 86 ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 92 ಕೆ.ಜಿ.ವಿಭಾಗದಲ್ಲಿ ರೋಹಿತ್ ದ್ವಿತೀಯ ಪಿ.ಯು.ಸಿ.ಚಿನ್ನ, 97 ಕೆ.ಜಿ.ವಿಭಾಗದಲ್ಲಿ ಚೇತನ್ ಖಾರ್ವಿ ದ್ವಿತೀಯ ಪಿ.ಯು.ಸಿ. ಚಿನ್ನ, 125 ಕೆ.ಜಿ.ವಿಭಾಗದಲ್ಲಿ ಶ್ರೀಷ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 60 ಕೆ.ಜಿ.ವಿಭಾಗದಲ್ಲಿ ಸ್ವಸ್ತಿಕ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ, 72 ಕೆ.ಜಿ.ವಿಭಾಗದಲ್ಲಿ ಗಗನ್ ಎಮ್ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸ ಶಿಕ್ಷಣ ನೀತಿಯನ್ನು ನೆಪವಾಗಿರಿಸಿಕೊಂಡು ಬ್ರಹ್ಮಾವರದ ಕೃಷಿ ಕಾಲೇಜು ರದ್ಧುಗೊಳಿಸಿ ಕೃಷಿ ಡಿಪ್ಲೊಮಾ ಕೋರ್ಸ್‌ಗಳನ್ನು ಸ್ಥಗಿತಗೊಳಿಸಿರುವುದು ರೈತರ ಮಕ್ಕಳಿಗೆ ಮಾಡಿದ ದ್ರೋಹವಾಗಿದೆ. ಕಾಲೇಜು ಪುನರಾರಂಭಕ್ಕಾಗಿ ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಸ್ಪಂದಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪ ಚಂದ್ರ ಶೆಟ್ಟಿ ಹೇಳಿದರು. ಇಲ್ಲಿನ ಆರ್.ಎನ್. ಶೆಟ್ಟಿ, ಮಿನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ ತಲಾ 35 ಕೋಟಿ ವೆಚ್ಚದಲ್ಲಿ ಕೃಷಿ ಕಾಲೇಜು ಹಾಗೂ ಹಾಸ್ಟೆಲ್ ನಿರ್ಮಾಣ ಮಾಡಲಾಗಿದೆ. 2014ರಿಂದ ಸಾಕಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿದ್ದಾರೆ. ಸ್ಥಳೀಯ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ. ಕಾಲೇಜು ಪುನಾರಾರಂಭ ಮಾಡುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ. ರಾಜ್ಯ ಕೃಷಿ ಸಚಿವರನ್ನು ಭೇಟಿಯಾಗಿ ಕಾಲೇಜನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಹಳೆಯ ಯಂತ್ರೋಪಕರಣಗಳನ್ನು ಗುಜರಿಗೆ ಮಾರಾಟ ಮಾಡಿದ ಹಗರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.06: ಭಾರತೀಯ ಭೂ ಸೇನೆಯಲ್ಲಿ ಹವಾಲ್ದಾರರಾಗಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿ ಹುಟ್ಟೂರಿಗೆ ಮರಳಿದ ದಿನೇಶ್ ಆಚಾರ್ಯ ಅವರಿಗೆ ನಾಗರಿಕರು ಗೌರವ ಸಂಭ್ರಮದೊಂದಿಗೆ ಸ್ವಾಗತಿಸಿಕೊಂಡಿದ್ದಾರೆ. ದಿನೇಶ್ ಆಚಾರ್ಯ ಅವರು ಹರಿಯಾಣದಲ್ಲಿ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಪೋರ್ಸ್ಗಾಗಿ ತರಬೇತಿ ಪಡೆದು ಜಮ್ಮು ಕಾಶ್ಮೀರ, ಉತ್ತರಾಖಂಡ ಸಹಿತ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದರು. 2011ರಲ್ಲಿ ಕಮಾಂಡೋ ಕೋರ್ಸ್ ತರಬೇತಿಯನ್ನು ಹಿಮಾಚಲ ಪ್ರದೇಶದ ಮಸೂರಿಯಲ್ಲಿ ಪಡೆದರು. 2014ರಿಂದ ಅರುಣಾಚಲ, ಜಮ್ಮು ಕಾಶ್ಮೀರ, ಪಂಜಾಬ್ನಲ್ಲಿ ಸೇವೆ ಸಲ್ಲಿಸಿದ್ದರು. ಛತ್ತೀಸ್ ಗಢ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದು ನಕ್ಸಲೈಟ್ ಕಾರ್ಯಾಚರಣೆಯಲ್ಲಿ 10ಕ್ಕೂ ಅಧಿಕ ಬಾರಿ ಪಾಲ್ಗೊಂಡಿದ್ದರು. ಜಮ್ಮು ಕಾಶ್ಮೀರದ ಲಡಾಖ್ನಲ್ಲಿ ಮೈನಸ್ 35ರಿಂದ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. 2013ರಲ್ಲಿ ಆಫ್ರಿಕಾದ ಡಿ. ಆರ್. ಕಾಂಗೋದಲ್ಲಿ ವಿಶ್ವ ಸಂಸ್ಥೆಯ ಶಾಂತಿ ಪಾಲನಾ ಪಡೆಗೆ ಭಾರತದ 135 ಮಂದಿಯ ತಂಡದೊಂದಿಗೆ ತೆರಳಿ 13ತಿಂಗಳ ಕಾಲ ಸೇವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ ಕುರಿತು ಮಾತನಾಡಿದರು.ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್ ಉಡುಪಿ ಲಕ್ಯ್ಯ ಇದರ ಅಧ್ಯಕ್ಷರಾದ ಧನುಷ್ ಕೆ ಇವರು ವಿದ್ಯಾರ್ಥಿ ಬದುಕಿಗೆ ಇಂತಹ ನೂರಾರು ಕಾರ್ಯಕ್ರಮಗಳ ಅಗತ್ಯತೆ ಬಹಳಷ್ಟಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ ನಾಯಕ್ ರವರು ವೃತ್ತಿ ಮಾರ್ಗದರ್ಶನದ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಡುಪಿ ಲಯನ್ಸ್ ಕ್ಲಬ್ ಲಕ್ಷ್ಯ ಇದರ ಉಪಾಧ್ಯಕ್ಷರಾದ ರಘುನಾಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ ಗೌರವದಿಂದ ಕಾಣಬೇಕಾದ ವ್ಯಕ್ತಿ, ಅಂತಹ ವ್ಯಕ್ತಿತ್ವಕ್ಕೆ ಜಗತ್ತಿನಲ್ಲಿ ಅಪೂರ್ವ ಮನ್ನಣೆಯಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿಂದಿ ಉಪನ್ಯಾಸಕ ವಿನಾಯಕ ಜೋಗ್ ಹಾಗೂ ಜೀವಶಾಸ್ತ್ರ ಉಪನ್ಯಾಸಕ ಆದಂ ಶೇಕ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಸಂಸ್ಥೆಯ ಉಪನ್ಯಾಸಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಕೊನೆಯ ಭೂಮಿ ಧನುಷ್ಕೋಡಿಗೆ ಬೈಕ್ ಮೂಲಕ ತೆರಳಿದ ಯುವಕರ ತಂಡವೊಂದು ಅಲ್ಲಿನ ಕೊನೆಯ ರಸ್ತೆಯಲ್ಲಿ ಕುಂದಾಪ್ರದ ನಕ್ಷೆಯನ್ನೊಳಗೊಂಡ ಧ್ವಜ ಹಾರಿಸಿ ತಮ್ಮೂರ ಅಭಿಮಾನ ಮೆರೆದಿದ್ದಾರೆ. ಅಗಸ್ಟ್ 28ರಂದು ಕುಂದಾಪುರದಿಂದ ತೆರಳಿದ್ದ ಬೈಕರ್‌ಗಳಾದ ಸುದರ್ಶನ್ ಹೆಬ್ಬಾರ್, ಕೆ. ಶ್ರೀಹರ್ಷ ಯಡಿಯಾಳ್ ಹಾಗೂ ಗುರುಪ್ರಸಾದ್ ಮಂಜ ಅವರನ್ನೊಳಗೊಂಡ ನಮ್ಮ ಕೆ2ಡಿ ತಂಡವು, ಅ.30ರಂದು ಭಾರತದ ಕೊನೆಯ ರಸ್ತೆ ಧನುಷ್ಕೋಡಿಗೆ ತಲುಪಿದ್ದರು. ಅಲ್ಲಿ ತಮ್ಮ ಪ್ರಯಾಣದ ನೆನಪು ಹಾಗೂ ತಮ್ಮೂರಿನ ಅಭಿಮಾನಕ್ಕಾಗಿ ಕುಂದಾಪುರದ ನಕ್ಷೆಯನ್ನೊಳಗೊಂಡ ಧ್ವಜವನ್ನು ಹಾರಿಸಿದ್ದಾರೆ. ಆರು ದಿನಗಳ ಒಟ್ಟು ಪ್ರಯಾಣದಲ್ಲಿನ ತಮ್ಮ ಅನುಭವವನ್ನು ಕುಂದಾಪ್ರ ಡಾಟ್ ಕಾಂ ಜೊತೆಗೆ ಹಂಚಿಕೊಂಡ ಅವರು, ಇದು ಕುಂದಾಪುರ ಹಾಗೂ ನಮ್ಮ ತಂಡಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದಿದ್ದಾರೆ. ಧನುಷ್ಕೋಡಿ ರಾಮೇಶ್ವರಂ ದ್ವೀಪದ ಬಳಿಯಿರುವ ದಕ್ಷಿಣದ ತುತ್ತತುದಿಯಲ್ಲಿರುವ ಒಂದು ಗ್ರಾಮವಾಗಿದ್ದು, ರಾಮಸೇತು ನಿರ್ಮಾಣ ಕಾರ್ಯ ಅಲ್ಲಿಂದಲೇ ಆರಂಭವಾಯಿತು ಎಂಬ ಪ್ರತೀತಿ ಇದೆ. ಬಂಗಳಕೊಲ್ಲಿ ಹಾಗೂ ಹಿಂದೂ ಮಹಾ ಸಾಗರ ಸಂಗಮದ ಸ್ಥಳವಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಕ್ಷಯ್ ಹಾಕಿ ಮಚ್ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ. ಅರುಣ್ ಕೆ ಅವರು ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿ ಕರ್ತವ್ಯದಲ್ಲಿದ್ದರು‌. ಕರಾವಳಿ ಕಾವಲು ಪೊಲೀಸ್‌ನ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ಸಾಲಿನಲ್ಲಿ ರೂ.243 ಕೋಟಿ ವ್ಯವಹಾರ ನಡೆಸಿ ರೂ 44.09 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಸೋಮವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಂಘವು 21 ವರ್ಷ ಪೂರೈಸಿದೆ. ಏಳು ಶಾಖೆಗಳನ್ನು ಹೊಂದಿದ್ದು, ಬೈಂದೂರಿನ ಪ್ರಧಾನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಖರೀದಿಸಲಾಗಿದ್ದು ಸಂಸ್ಥೆ ಬೆಳ್ಳಿ ಹಬ್ಬ ಆಚರಿಸುವ ವೇಳೆಗೆ ಸಾಗರ ಸೌಧ ಲೋಕಾರ್ಪಣೆಗೊಳ್ಳಲಿದೆ. ಕುಂದಾಪುರ ಶಾಖೆ ಸ್ವಂತ ನಿವೇಶನ ಕಟ್ಟಡ ಹೊಂದಿದ್ದು, ಸಿದ್ಧಾಪುರ ಶಾಖೆಗೂ ಸ್ವಂತ ನಿವೇಶನ ಖರೀದಿಸಲು ನಿರ್ಣಯಿಸಲಾಗಿದೆ. ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರದಿಂದ ಸೊಸೈಟಿ ಪ್ರಗತಿ ಸಾಧಿಸುತ್ತಿದೆ ಎಂದು ಅವರು ಹೇಳಿದರು. ಉತ್ತಮ ಠೇವಣಿ ಹಾಗೂ ಸಾಲ ವಸೂಲಾತಿ ಮಾಡಿದ ಸಿದ್ಧಾಪುರ ಶಾಖೆಯ ಪ್ರಬಂಧಕಿ ಕವಿತಾ ಪೂಜಾರಿ ಹಾಗೂ ಸಿಬ್ಬಂದಿ ರವೀಂದ್ರ ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 46 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.1015 ಕೋಟಿ ವ್ಯವಹಾರ ನಡೆಸಿ, ರೂ 5.07 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು. ಸಂಘವು ವರ್ಷದಲ್ಲಿ ರೂ. 219.17 ಕೋಟಿ ಠೇವಣಿ ಸಂಗ್ರಹಿಸಿ, ರೂ. 177.66 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 91.21 ಕೋಟಿ ಹೂಡಿಕೆ ಮಾಡಿದೆ. ರೂ.27.98 ಕೋಟಿ ನಿಧಿಗಳು, ರೂ.2.41 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.16.88 ಕೋಟಿ…

Read More