ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀರ್ಘಕಾಲ ಆರೋಗ್ಯವಂತರಾಗಿರಬೇಕೆಂದರೆ ನಮ್ಮ ಬದುಕಿಗೆ ವರ್ಷಗಳನ್ನು ಸೇರಿಸುತ್ತ ಹೋಗುವ ಬದಲು ನಾವು ಬದುಕುವ ವರ್ಷಗಳಿಗೆ ಜೀವ ತುಂಬುತ್ತ ಹೋಗಬೇಕು. ಅದರೊಂದಿಗೆ ನಮ್ಮ ಹದಿಹರೆಯ ಮತ್ತು ಯೌವನವನ್ನು ವಿಸ್ತರಿಸಿಕೊಳ್ಳುತ್ತ ಸಾಗಿ ಮುದಿತನಕ್ಕೆ ವಶವಾಗುವುದನ್ನು ಮುಂದೂಡಬಹುದು ಎಂದು ಉಡುಪಿಯ ಆದರ್ಶ ಆಸ್ಪತ್ರೆಯ ತಜ್ಞವೈದ್ಯ ಡಾ. ಕೆ. ಸುದೀಪ್ ಶೆಟ್ಟಿ ಹೇಳಿದರು. ಮರವಂತೆಯ ಸೇವಾ, ಸಾಂಸ್ಕೃತಿಕ ವೇದಿಕೆ ಸಾಧನಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ಇಲ್ಲಿನ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನಡೆದ ವಯೋವೃದ್ಧರನ್ನು ಕಾಡುವ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳು ಕುರಿತು ನಡೆದ ಮಾರ್ಗದರ್ಶನ ಶಿಬಿರದಲ್ಲಿ ಅವರು ಮಾಹಿತಿ, ಮಾರ್ಗದರ್ಶನ ನೀಡಿದರು. ವೃದ್ಧಾಪ್ಯ ಸಮೀಪಿಸುತ್ತಿದ್ದಂತೆ ಜನರನ್ನು ಬಾಧಿಸುವ ಹಲವು ಮನೋದೈಹಿಕ ಸಮಸ್ಯೆಗಳನ್ನು ದೃಕ್ ಮಾಧ್ಯಮ ಬಳಸಿ ವಿವರಿಸಿದ ಅವರು, ಅವುಗಳು ಸನಿಹಕ್ಕೆ ಸುಳಿಯದಂತೆ ನೋಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳನ್ನು ವಿಸ್ತೃತವಾಗಿ ತಿಳಿಸಿಕೊಟ್ಟರು. ವೃದ್ಧಾಪ್ಯದಲ್ಲಿಯೂ ಚಟುವಟಿಕೆಯಿಂದ ಇರಬೇಕಾದ ಅಗತ್ಯವನ್ನು, ರೂಢಿಸಿಕೊಳ್ಳಬೇಕಾದ ಆರೋಗ್ಯಕರ ಜೀವನಶೈಲಿಯನ್ನು ಮನದಟ್ಟು ಮಾಡಿದರು. ಪ್ರಾಥಮಿಕ ಆರೋಗ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ರಾಜೀವ್ ಕೊಟ್ಯಾನ್ ಅವರ ಕೆಸರು ಗದ್ದೆಯಲ್ಲಿ ಭತ್ತದ ಸಸಿಯನ್ನು ನಾಟಿಮಾಡಿ ಸಂಭ್ರಮಿಸಿದರು. ಇವರೊಂದಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಕುಮಾರ್ ಹಾಗೂ ದೀಪಶ್ರೀಯವರು ಸಹಕರಿಸದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ. ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದ್ದು ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಕೊಲ್ಲೂರು ಪಿಯು ಕಾಲೇಜಿನ 10 ವಿದ್ಯಾರ್ಥಿಗಳು ಹಾಗೂ ಹೈಸ್ಕೂಲಿನ 6 ಮಂದಿ ವಿದ್ಯಾರ್ಥಿಗಳು ಸಹಿತ ಪ್ರಯಾಣಿಕರಿಗೆ ಗಾಯಗಳಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ 16 ವಿದ್ಯಾರ್ಥಿಗಳ ಪೈಕಿ 3 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಹಿಂದಿರುಗಿದ್ದಾರೆ. ವಿದ್ಯಾರ್ಥಿಗಳು ರಜೆ ಮುಗಿಸಿ ಸೋಮವಾರ ಮತ್ತೆ ಬಸ್ಸಿನಲ್ಲಿ ಕೊಲ್ಲೂರಿನ ಶಾಲೆಗೆ ವಾಪಾಸ್ಸಾಗುತ್ತಿದ್ದರು. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆಯ ಪಿಸೈಗಳಾದ ವಿನಯ್ ಕೊರ್ಲಹಳ್ಳಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ.ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸಾಕಷ್ಟು ಮನೆ, ಕೃಷಿ ಭೂಮಿಗಳಿಗೆ ಹಾನಿಯಾಗಿದ್ದು ಪರಿಹಾರಕ್ಕೆ ಸೂಕ್ತಕ್ರಮವಹಿಸಲಾಗುವುದು. ರಸ್ತೆಗಳು ದುರಸ್ತಿಯಾಗಬೇಕಿದ್ದು, ಅದಕ್ಕಾಗಿ ಕ್ರಮವಹಿಸಲಾಗುವುದು. ಸೋಮೇಶ್ವರ ಗುಡ್ಡ ಜರಿತ ಸೇರಿದಂತೆ ಮಳೆಹಾನಿಯ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಅಗತ್ಯವಿರುವಲ್ಲಿ ತಕ್ಷಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ. ಸಂತೃಸ್ಥರಿಗೂ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದರು. ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶನಿವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಭೇಟಿ ನೀಡಿದರು. ಜಿಲ್ಲೆಯಲ್ಲಿ ಈ ಭಾರಿ ಅಧಿಕ ಮಳೆಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿಯೂ ಹೆಚ್ಚಿನ ಮಳೆ ಸುರಿದಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ದೊಂಬೆ ಸಮೀಪದ ಸೋಮೇಶ್ವರದ ಶೇಡಿಗುಡ್ಡ ಜರಿತಗೊಂಡಿದ್ದು, ಮತ್ತಷ್ಟು ಹಾನಿಯ ಸೂಚನೆ ಇದೆ. ಈ ಭಾಗಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಜೆಡಿಮಣ್ಣು ನೀರಿನೊಂದಿಗೆ ಬೆರೆತು ಕುಸಿಯುವ ಸಂಭವ ಜಾಸ್ತಿ ಇರುವುದರಿಂದ ಅಧಿಕ ಜರಿತ ಇರುವ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಮುಚ್ಚಿ ಮೇಲಿನ ನೀರು ಜಾರಿಹೋಗುವಂತೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದರು. ಮಳೆಗಾಲದ ಬಳಿಕ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಜಿಲ್ಲಾಧಿಕಾರಿಗಳು, ಗುಡ್ಡ ಕಡಿದು ರಸ್ತೆ ನಿರ್ಮಾಣ ಕಾಮಗಾರಿ ಮಾಡುವಲ್ಲಿ ಕಾನೂನು ಮೀರಿದ್ದರೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಒತ್ತಿನಣೆ ಪ್ರದೇಶದಲ್ಲಿರುವ ಕಸ ವಿಲೇವಾರಿ ಪ್ರದೇಶ, ಹೇನಬೇರು ತೆರಳುವ ರಸ್ತೆ, ದೊಂಬೆ ಪ್ರದೇಶದಲ್ಲಿ ಉಂಟಾಗಿರುವ ಕಡಲಕೊರೆತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು – ಮಂಗಳೂರು – ಕಾರವಾರ ನಡುವೆ ಭೂಕುಸಿತ ಹಾಗೂ ಹಲವು ರಸ್ತೆಗಳು ಬಂದ್ ಆಗಿರುವ ಕಾರಣ ಸಾವಿರಾರು ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದು, ಅದಕ್ಕಾಗಿ ಬೆಂಗಳೂರು ಮಂಗಳೂರು ರೈಲಿಗೆ ಲಿಂಕ್ ಆಗಿ ಮಡಗಾಂವ್ ಮಂಗಳೂರು ಜಂಕ್ಷನ್ ಮಧ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು ಮಂಗಳೂರು ರೈಲಿಗೆ ಮಡಗಾಂವ್ ಮಂಗಳೂರು ಜಂಕ್ಷನ್ ಮದ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮಡಗಾಂವ್ ಮಂಗಳೂರು ಜಂಕ್ಷನ್ ವಿಶೇಷ ಲಿಂಕ್ ರೈಲಿಗೆ ಉಡುಪಿ, ಬಾರ್ಕೂರು, ಕುಂದಾಪುರ, ಸೇನಾಪುರ, ಬಿಜೂರು, ಬೈಂದೂರು, ಶಿರೂರು, ಭಟ್ಕಳ, ಮುರುಡೇಶ್ವರ ಮೊದಲಾದ ಸ್ಟೇಷನ್ಗಳಲ್ಲಿ ನಿಲುಗಡೆ ಇರಲಿದೆ. ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಾವಣೆ, ನೀರು ತುಂಬುವಿಕೆಯಂತ ವಿಳಂಭಧ ಕಾರಣದಿಂದ ಪ್ರತ್ಯೇಕ ಲಿಂಕ್ ರೈಲಿಗಾಗಿ ಮಾಡಲಾಗಿದ್ದ ಸಂಸದರ ಪತ್ರಕ್ಕೆ ರೈಲ್ವೇ ಸಚಿವಾಲಯ ಸ್ಪಂದಿಸಿದೆ. ಇದರಿಂದಾಗಿ ಬೆಂಗಳೂರು ಮಂಗಳೂರು ವಿಶೇಷ ರೈಲು ಬಂದ ಕೆಲವೇ ಹೊತ್ತಲ್ಲಿ ಲಿಂಕ್ ರೈಲು ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯ ಜೊತೆಗೆ ಪಠ್ಯೇತರ ಚಟುವಟಿಕೆ ಮಾತ್ರ ಅಲ್ಲ ವಿದ್ಯಾರ್ಥಿಗಳಿಗೆ ಇವತ್ತಿನ ಸಾಮಾಜಿಕವಾದ ಸವಾಲಿನ ಬಗ್ಗೆ ಅರಿವು ಮೂಡಿಸುವಂಥ ಅನೇಕ ಶಿಬಿರಗಳನ್ನು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಿದ್ದೇವೆ. ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ನಶಮುಕ್ತ ಭಾರತ ಈ ವಿಷಯದ ಬಗ್ಗೆ ಮಾಹಿತಿ ಕೊಡಲು ಕೋಟ ಪೊಲೀಸ್ ಠಾಣೆಯ ಪಿ.ಎಸ್.ಐ ಗುರುನಾಥ್ ಬಿ. ಹಾದಿಮನಿ ಅವರು ಮಾಹಿತಿಯನ್ನು ನೀಡಿದರು. ಮಾದಕ ದ್ರವ್ಯದ ವ್ಯಸನದಿಂದ ಯಾವ ರೀತಿ ನಮ್ಮ ದೇಹದ ಮೇಲೆ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಯಾವೆಲ್ಲ ದುಷ್ಪರಿಣಾಮಗಳು ವ್ಯಕ್ತಿಗಳಿಗೆ ಹಾಗೂ ಅವರ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಆಗುತ್ತದೆ ಇದರ ಬಗ್ಗೆ ಸುಧೀರ್ಘ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಇವತ್ತಿನ ಯುವಜನತೆ ಮಾದಕ ದ್ರವ್ಯದ ವ್ಯಸನಗಳಿಗೆ ಅಧಿಕವಾಗಿ ಬಲಿಯಾಗುತ್ತಿದ್ದಾರೆ ನಾವು ಇವತ್ತು ವಿದ್ಯಾರ್ಥಿಗಳನ್ನು ಒಬ್ಬ ವೈದ್ಯ, ಇಂಜಿನಿಯರ್, ಕಂಪನಿ ಸೆಕ್ರೆಟರಿ, ಸಿಎ ಇಂಥ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆಯ 2024-25ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಮಧುಕರ, ಸರಕಾರದ ವಿವಿಧ ಇಲಾಖೆಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ವಹಿಸಿದ ಕಾಮಗಾರಿಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಕಾಮಗಾರಿಗಳಲ್ಲಾದ ಲೋಪದೋಷಗಳನ್ನು ತಿಳಿದುಕೊಳ್ಳಲು ಹಾಗೂ ಕಾಮಗಾರಿಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರ ಅಹವಾಲು ಆಲಿಸಲು ಈ ವಿಶೇಷ ಗ್ರಾಮಸಭೆ ಸಹಕಾರಿಯಾಗಲಿದೆ ಎಂದರು. ಕುಂದಾಪುರ ಅಮೂಲ್ಯ ಸಾಕ್ಷರತಾ ಕೇಂದ್ರದ ಆಶಾಲತಾ ಬ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ, ಗ್ರಾಪಂ ಲೆಕ್ಕ…
