ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಕಬ್ಬಡಿ ಪಂದ್ಯಾಟ ಗಂಗೊಳ್ಳಿಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮೌಲಾನಾ ಅಬ್ದುಲ್ ಹಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಹಕ್ಕುಗಳ ಸಾಮಾಜಿಕ ಕಾರ್ಯಕರ್ತೆ ತಿಲೋತ್ತಮ ನಾಯಕ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಕ್ಲಸ್ಟರ್ನ ಸಿಆರ್ಪಿ ಪ್ರದೀಪ ಕುಮಾರ್ ಶೆಟ್ಟಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶಾಬುದ್ದೀನ್ ಅವೂಫ್, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಮಹಮ್ಮದ್ ನೂರ್ ಫಾಜಿಲ್, ನಾಕುದಾ ಮೊಹಮ್ಮದ್ ಅಶ್ರಫ್, ಶಾಬುದ್ದೀನ್ ಮೊಹಮ್ಮದ್ ಮೀರಾನ್, ಗಂಗೊಳ್ಳಿ ಜಾಮೀಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್ ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಹೇಮಾವತಿ ಸ್ವಾಗತಿಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ವೇಟ್ಲಿಫ್ಟಿಂಗ್ ಸಂಸ್ಥೆ ರಿ. ಹಾಗೂ ಮೈಸೂರು ಜಿಲ್ಲಾ ವೇಟ್ಲಿಫ್ಟಿಂಗ್ ಸಂಸ್ಥೆ ರಿ. ಇವರ ಜಂಟಿ ಆಶ್ರಯದಲ್ಲಿ ಮೈಸೂರಿನ ಮಹಾಜನ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ- ಯೂತ್, ಜೂನಿಯರ್, ಸೀನಿಯರ್ ಸೇರಿದಂತೆ ಇರುವ ಒಟ್ಟು ಆರು ವಿಭಾಗಳಲ್ಲೂ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಪುರುಷರ ವಿಭಾಗದಲ್ಲಿ ಒಟ್ಟು 9 ಚಿನ್ನ, 10 ಬೆಳ್ಳಿ, 6 ಕಂಚಿನೊAದಿಗೆ 25 ಪದಕ ಪಡೆದರೆ, ಮಹಿಳೆಯರ ವಿಭಾಗದಲ್ಲಿ 9 ಚಿನ್ನ 14 ಬೆಳ್ಳಿ ಹಾಗೂ 5 ಕಂಚು ಸೇರಿದಂತೆ ಒಟ್ಟು 28 ಪದಕ ಪಡೆದು, ಎರಡು ವಿಭಾಗದಲ್ಲಿ ಭರ್ಜರಿ 53 ಪದಕ ಪಡೆದು ಪಾರಮ್ಯ ಮೆರೆದರು. ಪುರುಷರ ಯೂತ್ ವಿಭಾಗದಲ್ಲಿ ಆಳ್ವಾಸ್ ಕಾಲೇಜು -2 ಚಿನ್ನ, 1 ಬೆಳ್ಳಿ, 3 ಕಂಚು, ಜೂನಿಯರ್ ವಿಭಾಗದಲ್ಲಿ- 3 ಚಿನ್ನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ರಕ್ಷಾಬಂಧನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಕ್ಕಳಿಗೆ ರಾಖೀ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ ನಂತರ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟುವುದು, ಆರತಿ ಮಾಡಿ ತಿಲಕ ಇಟ್ಟು, ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿದರು. ಮುಖ್ಯೋಪಾಧ್ಯಾಯಿನಿ ಸರೋಜಾ ಮತ್ತು ಶಿಕ್ಷಕಿಯರು ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಅವರು ರಕ್ಷಾ ಬಂಧನದ ಅರ್ಥ, ಇದಕ್ಕೆ ಪೂರಕವಾದ ಪುರಾಣ ಕಥೆ ಹೇಳುವ ಮೂಲಕ ಸಹೋದರ ಸಹೋದರಿಯರ ಮದ್ಯದ ಪವಿತ್ರ ಬಂಧನದ ಮಹತ್ವ ತಿಳಿಸಿದರು. ಆಡಳಿತ ಮಂಡಳಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿಯವರಾದ ಶಾನ್ಕಟ್ಟು ನವೀನ್ ಕುಮಾರ್ ಶೆಟ್ಟಿ ಹಾಗೂ ಎಲ್ಲಾ ನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರಾವಣ ಮಾಸದ ಹುಣ್ಣಿಮೆಯ ದಿನವಾದ ಸೋಮವಾರದಂದು ವಿಶ್ವ ಸಂಸ್ಕೃತ ದಿನ ಮತ್ತು ರಕ್ಷಾ ಬಂಧನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕ್ಯಾಂಪಸ್ನಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಸಂಸ್ಕೃತ ಉಪನ್ಯಾಸಕಿಯಾದ ಸುಧಾಕ್ಷಿಣಾ ಉಡುಪ, ಸಂಸ್ಕೃತ ದಿನ ಮತ್ತು ರಕ್ಷಾ ಬಂಧನದ ಆಚರಣೆಯ ಹಿನ್ನೆಲೆಯನ್ನು ವರ್ಣಿಸುತ್ತಾ, ವಿಶ್ವ ಸಂಸ್ಕೃತ ದಿನದ ಇತಿಹಾಸವು 1969ರ ಹಿಂದಿನದು. ಭಾರತ ಸರ್ಕಾರವು ಶ್ರಾವಣದ ಹುಣ್ಣಿಮೆಯ ದಿನವನ್ನು ಸಂಸ್ಕೃತ ದಿನವೆಂದು ಘೋಷಿಸಿತು. ಸಂಸ್ಕೃತ ವ್ಯಾಕರಣದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಸಂಸ್ಕೃತ ವಿದ್ವಾಂಸ ಹಾಗೂ ವ್ಯಾಕರಣಕಾರರಾದ ಪಾಣಿನಿಯು ಹುಟ್ಟಿದ ದಿನವನ್ನು ಅವರ ಸವಿನೆನಪಿಗಾಗಿ ಆಚರಣೆ ಮಾಡಲಾಗಿದೆ ಎಂದು ಅದರ ಮಹತ್ವದ ಬಗ್ಗೆ ತಿಳಿಸಿದರು. ರಕ್ಷಾ ಬಂಧನದ ಕಥೆಯು ಹಿಂದೂ ಪುರಾಣ ಮತ್ತು ಹಿಂದೂ ಮಹಾಕಾವ್ಯ ಮಹಾಭಾರತಕ್ಕೆ ಸಂಬಂಧಿಸಿದೆ. ಈ ಹಬ್ಬವು ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮಹತ್ವವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್ಸೈಟ್ https://karnemakaone.kar.nic.in/abcd/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ (ಹೋಮ್ ನರ್ಸಿಂಗ್) 18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ರೆಡ್ಕ್ರಾಸ್ ಭವನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಪ್ತಸ್ವರ ವಿವಿಧೊದ್ದೇಶ ಸಹಕಾರ ಸಂಘ ರಿ. ತಲ್ಲೂರು, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಪ್ಪಿನಕುದ್ರು, ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಕಾರದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ತಲ್ಲೂರು ಇಲ್ಲಿ ನಡೆದ ರಕ್ತದಾನ ಶಿಬಿರವನ್ನು ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿಗಳಾದ ಬಾಲಚಂದ್ರ ಭಟ್ ಉದ್ಘಾಟಿಸಿದರು. ಕುಂದಾಪುರ ಲಯನ್ಸ್ ಕ್ಲಬ್ ಸಿಟಿ ಸೆಂಟರ್ ಅಧ್ಯಕ್ಷರಾದ ಶಂಕರ್ ಸೇರುಗಾರ್ ಅಧ್ಯಕ್ಷತೆ ವಹಿಸಿದರು. ಡಾ.ಆದರ್ಶ್ ಹೆಬ್ಬಾರ್, ಡಾ. ಎಚ್.ಅಶೋಕ್, ಮನೋಜ್ ಕುಮಾರ್, ಗಿರೀಶ್ ಎಸ್. ನಾಯ್ಕ್ , ಡಾ. ದೀಕ್ಷಾ, ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ರಕ್ತದಾನ ಶಿಬಿರದ ಮುಖ್ಯ ರೂವಾರಿ ಪ್ರಶಾಂತ್ ತಲ್ಲೂರು ಹಾಗೂ ಇತರರು ಉಪಸ್ಥಿತರಿದ್ದರು. ಈ ಯಶಸ್ವಿ ರಕ್ತದಾನ ಶಿಬಿರದಲ್ಲಿ 103 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ 14ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ವಿದ್ಯಾರ್ಥಿನಿ ಸಾನಿಧ್ಯ ಎಸ್. ಮೊಗವೀರ ಪ್ರಥಮ ಸ್ಥಾನಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಿಕೇತರವರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಕೋಡಿ ಸಮುದ್ರ ಕಿನಾರೆಯಲ್ಲಿ ಸೋಮವಾರದಂದು ಸಮುದ್ರ ಪೂಜೆ ಜರುಗಿತು. ಉತ್ತಮ ಮಳೆ, ಬೆಳೆ, ಮತ್ಸ್ಯ ಸಮೃದ್ಧಿ ಹಾಗೂ ಲೋಕ ಕಲ್ಯಾಣಾರ್ಥ ಪ್ರಾರ್ಥನೆ ಸಲ್ಲಿಸಲಾಯಿತು. ಖಾರ್ವಿಕೇರಿ ಶ್ರೀಮಹಾಕಾಳಿ ಅಮ್ಮನವರ ದೇವಸ್ಥಾನದ ಅಧ್ಯಕ್ಷರಾದ ಅಜಂತ ಖಾರ್ವಿ ಪೂಜೆಯ ನೇತೃತ್ವ ವಹಿಸಿದ್ದರು. ದೇವಳದ ಪ್ರಧಾನ ಅರ್ಚಕರಾದ ಸುಮಂತ್ ಭಟ್ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಳದ ಉಪಾಧ್ಯಕ್ಷರಾದ ಪ್ರಕಾಶ್ ಆರ್. ಖಾರ್ವಿ, ಮುಕ್ತೇಸರರದ ಆನಂದ ನಾಯ್ಕ, ಸಲಹೆಗಾರರಾದ ಜಯಾನಂದ ಖಾರ್ವಿ, ಕಾರ್ಯದರ್ಶಿ ನಾಮದೇವ ಖಾರ್ವಿ, ಖಜಾಂಚಿ ರಾಜು ನಾಯ್ಕ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಖಾರ್ವಿ, ಶ್ರೀ ಮಹಾಕಾಳಿ ದೇವಸ್ಥಾನದ ಆಡಳಿತ ಮಂಡಳಿ ನಿರ್ದೇಶಕರು, ಮಹಾಕಾಳಿ ಮಹಿಳಾ ಮಂಡಳಿ ಸದಸ್ಯರು, ನವರಾತ್ರಿ ಉತ್ಸವದ ಸದಸ್ಯರು ಹಾಗೂ ವಿದ್ಯಾರಂಗ ಮಿತ್ರ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಉಸ್ತುವಾರಿಯನ್ನು ತಲ್ಲೂರು ಸುನಿಲ್ ಖಾರ್ವಿ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುವಿಕಾಸ ಸಂಸ್ಥೆ ಶಿರಸಿ ಮತ್ತು ನಬಾರ್ಡ್ ಬೆಂಗಳೂರು ಇವರ ಸಹಯೋಗದಲ್ಲಿ ಸೋಮವಾರದಂದು ಮರವಂತೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಮತ್ಸ್ಯಸಿರಿ ಮಹಿಳಾ ಮೀನು ಉತ್ಪಾದಕರ ಮತ್ತು ಜನ ಸಂಘದ ಆಡಳಿತ ಮಂಡಳಿ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಜರುಗಿತು. ಸಭೆಯಲ್ಲಿ ಮನುವಿಕಾಸ ಸಂಸ್ಥೆ ನಿರ್ದೇಶಕರಾದ ಗಣಪತಿ ಭಟ್, ಮರವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಗೀತಾ, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಖಾರ್ವಿ, ಮತ್ಸ್ಯ ಸಂಜೀವಿನಿ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಖಾರ್ವ, ಜೀವನ ಶಿಕ್ಷಣ ತರಬೇತುದಾರರಾದ ರಾಘವೇಂದ್ರ ಆಚಾರ್ಯ ಹಾಗೂ ಮನುವಿಕಾಸ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
