Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಮಹಾನಗರಿಯಲ್ಲಿ 5ನೇ ಭಾರಿಗೆ ಆಯೋಜಿಸಲಾಗುತ್ತಿರುವ “ಕುಂದಾಪ್ರ ಕನ್ನಡ ಹಬ್ಬ”ವನ್ನು ಜುಲೈ 23ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕುಂದಗನ್ನಡದ ಮೇಲಿನ ಪ್ರೀತಿಯಿಂದ ಸಾಮಾಜಿಕ ಮಾಧ್ಯಮದಲ್ಲಿ ಹುಟ್ಟಿದ ಅಭಿಮಾನದ ಕಿಡಿಯೊಂದು ಇಂದು ವಿಶ್ವದಗಲ ಹಬ್ಬಿರುವ ಪರಿಯು ಭಾಷೆಯೊಂದರ ಅಪರಿಮಿತ ಸಾಧ್ಯತೆಯನ್ನು ಎತ್ತಿಹಿಡಿಯುತ್ತದೆ. ಸಮಾನಮನಸ್ಕ ಗೆಳೆಯರ ಸಾರಥ್ಯದಲ್ಲಿ ಆಯೋಜನೆಯಾಗುತ್ತಾ ಬಂದ ಈ ದಿನಾಚರಣೆಯು ಈ ಬಾರಿ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಭಾಷೆಯೆಂಬುದು ಕುಂದಾಪುರ ನೆಲಮೂಲದ ಭಾಷಾ ಸಂಪತ್ತು, ಆಚಾರ-ವಿಚಾರ, ಕಲೆ, ಕ್ರೀಡೆ, ವೈವಿಧ್ಯಮಯ ಆಹಾರ ಮುಂತಾದ ಕುಂದಾಪುರ ಜನಜೀವನ, ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಜೊತೆಗೆ ಇಲ್ಲಿ ನೆಲೆಸಿರುವ ಕುಂದಗನ್ನಡಿಗರ ಅಪರೂಪದ ಸಮ್ಮಿಲನಕ್ಕೆ ವೇದಿಕೆ ಕಲ್ಪಿಸುವ ಉತ್ಸವವಾಗಿರುತ್ತದೆ. ಬೆಂಗಳೂರಿನಲ್ಲಿ ಲಕ್ಷಾಂತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾಹನಕ್ಕೆ ಅಡ್ಡ ಬಂದ ಕಾರಣಕ್ಕೆ ಆರಂಭವಾದ ಮಾತು ಪರಸ್ಪರ ಹಲ್ಲೆ, ವಾಹನ ಜಖಂಗೊಳಿಸುವುದರಲ್ಲಿ ಅಂತ್ಯವಾಗಿದ್ದು ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ವಿವರ:ಉಪ್ಪುಂದದ ರಮೇಶ್ ದೇವಾಡಿಗ ಎಂಬುವವರು, ಟಾಟಾ ಏಸ್ ವಾಹನದಲ್ಲಿ ತನ್ನ ಸ್ನೇಹಿತ ರವಿ ಎಂಬುವವರೊಂದಿಗೆ ಪ್ಲೈವುಡ್ ತರಲು ಉಪ್ಪುಂದದಿಂದ ಬೈಂದೂರಿನ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಮನೀಶ್ ಬಾರ್ & ರೆಸ್ಟೊರೆಂಟ್ ಮುಂದೆ ನಿಖಿಲೇಶ್, ನಿತೇಶ್, ಹಾಗೂ ಕಿಶೋರ್ ಎಂಬುವವರು ವಿರುದ್ಧ ದಿಕ್ಕಿನಲ್ಲಿ ಬಂದು ಟಾಟಾ ಏಸ್ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ. ಪಕ್ಕದಲ್ಲಿ ಕುಳಿತಿದ್ದ ರವಿಯ ಕುತ್ತಿಗೆಗೆ ಕೈಹಾಕಿ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದು ಆಗ ಸ್ಥಳಿಯರು ಗಲಾಟೆಯನ್ನು ಬಿಡಿಸಿ ಕಳುಹಿಸಿದ್ದಾರೆ. ರಮೇಶ್ ದೇವಾಡಿಗ ತಮ್ಮ ಕೆಲಸವನ್ನು ಮುಗಿಸಿಕೊಂಡು ಸಂಜೆ 5 ಗಂಟೆ ವೇಳೆಗೆ ಶೆಟ್ಟಿ ಬಾರ್ & ರೆಸ್ಟೊರೆಂಟ್ ಪಕ್ಕದಲ್ಲಿದ್ದ ಟೀ ಸ್ಟಾಲ್ ನಲ್ಲಿ ಟೀ ಕುಡಿಯಲು ವಾಹನವನ್ನು ನಿಲ್ಲಿಸಿದ್ದ ಸಂದರ್ಭ ನಿಖಿಲೇಶ್, ನಿತೇಶ್, ಕಿಶೋರ್ , ಪ್ರಜ್ವಲ್ ಶೆಟ್ಟಿ ಹಾಗೂ ಮಣಿಕಂಠ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘ ಉಡುಪಿ, ಕೋಟ ವಿದ್ಯಾ ಸಂಘದ ಆಶ್ರಯದಲ್ಲಿ ಬುಧವಾರ ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯಸ್ಥರ ಜಿಲ್ಲಾ ಮಟ್ಟದ ಸಮ್ಮೇಳನ ಜರುಗಿತು. ಕಳೆದ 25 ವರ್ಷಗಳಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆ, ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿರುವುದನ್ನು ಗುರುತಿಸಿ, ಕಾರ್ಯಕ್ರಮದಲ್ಲಿ ಸಂಸ್ಥೆಯ ಶಮಿತಾ ರಾವ್ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಲಾಯಿತು. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100 ಪ್ರತಿಶತ ಫಲಿತಾಂಶ ದಾಖಲಿಸಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶದಲ್ಲಿಯೂ ಪ್ರಥಮ ಸ್ಥಾನ ( 95.18%) ಪಡೆದುಕೊಂಡಿತ್ತು. ಪದವಿಪೂರ್ವ ಶಿಕ್ಷಣದಲ್ಲಿಯೂ ಉತ್ತಮ ಫಲಿತಾಂಶ ದಾಖಲಿಸಿದೆ. ಇದನ್ನೂ ಓದಿ:► ಎಸೆಸೆಲ್ಸಿ ಫಲಿತಾಂಶ: ಕುಂದಾಪುರ ವಲಯದಲ್ಲಿ ಪ್ರಥಮ ಸ್ಥಾನ ಪಡೆದ ಮದರ್ ತೆರೆಸಾ ಶಿಕ್ಷಣ ಸಂಸ್ಥೆ – https://kundapraa.com/?p=66902 .►…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಲಕಿಯೋರ್ವಳು ನಿದ್ದೆ ಮಂಪರಿನಲ್ಲಿ ಎದ್ದು ಸುಮಾರು ಒಂದು 50ಮೀ. ದೂರ ರಸ್ತೆಯಲ್ಲಿ ನಡೆದು ಬಂದಿದ್ದು, ಯುವಕರ ತಂಡವೊಂದು ಬಾಲಕಿಯನ್ನು ರಕ್ಷಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತಾಲೂಕಿನ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆ ಸಮೀಪ ದಬ್ಬೆಕಟ್ಟೆ – ತೆಕ್ಕಟ್ಟೆ ರಸ್ತೆಯಲ್ಲಿ ತೆರಳುತ್ತಿದ್ದ ಚಾರುಕೊಟ್ಟಿಗೆ ಬಾರ್‌ನ ಸಿಬ್ಬಂದಿ ವಿಶ್ವನಾಥ್ ಎಂಬುವವರು ಬಾಲಕಿ ರಸ್ತೆ ಪಕ್ಕದಲ್ಲಿ ನಿಂತಿರುವುದನ್ನು ಗಮನಿಸಿದ್ದು, ಪೂರ್ವಾಪರ ವಿಚಾರಿಸಿ ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ. ಬುಧವಾರ ರಾತ್ರಿ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ಕೆಲಸ ಮುಗಿಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರಸ್ತೆಯಲ್ಲಿ 6 ವರ್ಷದ ಬಾಲಕಿ ಸ್ವಾಮಿ ಕೊರಗಜ್ಜನ ನಾಮಫಲಕದ ಕೆಳಗೆ ನಿಂತಿರುವುದನ್ನು ಗಮನಿಸಿದ್ದಾರೆ. ಈ ಹೊತ್ತಿನಲ್ಲಿ ಒಂಟಿ ಮಗು ಇಲ್ಲಿಗೆ ಬರಲು ಹೇಗೆ ಸಾಧ್ಯ ಎಂದು ಆಲೋಚಿಸಿ ಮಗುವಿನ ರಕ್ಷಣೆಗೆ ಧಾವಿಸುತ್ತಾರೆ. ಮಗುವಿನ ಪೂರ್ವಾಪರ ವಿಚಾರಿಸಿ ಮಗುವನ್ನ ಅವರ ಮನೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ನಿದ್ರೆಯಲ್ಲಿದ್ದ ಪೋಷಕರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ತವ್ಯ ನಿರತ ವಿಜಯಪುರ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಅರುಣ್ ನಾಯಕ್ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ್ ನಾಯಕ್ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಮೂಲದ ಅರುಣ್ ನಾಯಕ್ ಅವರು ಪಿಎಸ್ಐ, ವೃತ್ತ ನಿರೀಕ್ಷಕರಾಗಿ ಬೈಂದೂರು ಬ್ರಹ್ಮಾವರ ಉಡುಪಿ ಮೊದಲಾದೆಡೆ ಸೇವೆ ಸಲ್ಲಿಸಿ ಖ್ಯಾತಿ ಗಳಿಸಿದ್ದರು. ಅರುಣ್ ನಾಯಕ್ ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅರುಣ್ ನಾಯಕ್ ಅವರ ಪತ್ನಿ ಬೆಂಗಳೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ತಮ್ಮ ಮಗನೊಂದಿಗೆ ವಾಸವಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಮಕ್ಕಳಲ್ಲಿ ಭಾಷಾ ಬೆಳವಣಿಗೆ ಹಾಗೂ ಅತ್ಯುತ್ತಮ ಸಂವಹನ ಕೌಶಲ ರೂಢಿಸಲು ಯಕ್ಷಗಾನದ ಕಲಿಕೆ ವಿಶೇಷ ಕೊಡುಗೆ ನೀಡುತ್ತದೆ” ಎಂದು ಕೊಂಕಣ ರೈಲ್ವೆಯ ನಿವೃತ್ತ ಅಧಿಕಾರಿ ರಘುನಾಥ ನಾಯಕ್ ಎಣ್ಣೆಹೊಳೆ ಹೇಳಿದರು. ಅವರು ಸರಕಾರಿ ಹೆಸಕುತ್ತೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ “ನಿರಂತರ ಯಕ್ಷಗಾನ ತರಗತಿ” ಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಶಾಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಯಕ್ಷಗಾನ ತರಗತಿಯನ್ನು ನಡೆಸಿಕೊಡುತ್ತಿರುವ ಯಕ್ಷ ಗುರುಗಳಾದ ಐರೋಡಿ ಮಂಜುನಾಥ ಕುಲಾಲ, ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ, ವಿಜಯಾ ಆರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಸಹಶಿಕ್ಷಕ ರವೀಂದ್ರ ನಾಯಕ್ ನಿರೂಪಿಸಿದರು ಹಾಗೂ ಜಯರಾಮ ಶೆಟ್ಟಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಹಾಗೂ ಬದಲಾದ ಪರೀಕ್ಷಾ ಪದ್ದತಿಯ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಸುನಿಲ್ ಅವರು ಸ್ಪರ್ಧಾತ್ಮಕ ಪರೀಕ್ಷೆಗಳ ನೋಂದಾವಣೆಗೆ ವಿದ್ಯಾರ್ಥಿ ದಾಖಲೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, IAS ಅವರು ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಅವರು ಮಾತನಾಡಿ ಉಡುಪಿ ಜಿಲ್ಲೆಗೆ ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಫಲಪ್ರದವಾಗಲಿ ಎಂದು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ಮಾಹೆ ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಎಂಐಟಿ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ, ಎಂಐಟಿ ಜಂಟಿ ನಿರ್ದೇಶಕ ಡಾ.ಸೋಮಶೇಖರ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಸಹ ನಿರ್ದೇಶಕಿ ಡಾ.ಪೂರ್ಣಿಮಾ ಕುಂದಾಪುರ ಉಪಸ್ಥಿತರಿದ್ದರು.ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ನ್ಯಾಕ್ ಪೀರ್ ತಂಡವು ಇತ್ತೀಚಿಗೆ ಭೇಟಿ ನೀಡಿತು. ತಂಡದ ಅಧ್ಯಕ್ಷರಾಗಿ ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಡಾ. ಅಶೋಕ್ ಬೊಯ್ಟಿ, ತಂಡದ ಸದಸ್ಯ ಸಂಯೋಜಕರಾಗಿ ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರೊ. ಶಹೀದ್ ರಸೂಲ್ ಮತ್ತು ಅಸ್ಸಾಂನ ಟನ್ಷುಕಿಯಾದ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಬಾದಲ್ ಕುಮಾರ್ ಸೇನ್ ಇದ್ದರು. ಸದಸ್ಯರನ್ನು ಸಂಸ್ಥೆಗೆ ಸ್ವಾಗತಿಸಲಾಯಿತು, ಅಲ್ಲಿ ಅವರಿಗೆ ಸಾಂಸ್ಥಿಕ ಮುಖ್ಯಾಂಶಗಳು ಮತ್ತು ವಿವಿಧ ಇಲಾಖೆಗಳಿಂದ ನ್ಯಾಕ್ ನ ಮೌಲ್ಯಮಾಪನ ಮಾನದಂಡಗಳಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪ್ರಸ್ತುತಪಡಿಸಲಾಯಿತು. ತಂಡವು ಕಾಲೇಜಿನ ಎಲ್ಲಾ ವಿಭಾಗಗಳ ಸೌಲಭ್ಯಗಳು, ಕ್ಯಾಂಪಸ್ ಮೂಲಸೌಕರ್ಯಗಳು, ಸಂಘಗಳಿಗೆ ಭೇಟಿ ನೀಡಿದರು. 14 ರಂದು ಸಂಜೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು. 15ರಂದು ಕಾಲೇಜಿನಲ್ಲಿ ನ್ಯಾಕ್ ಪೀರ್ ತಂಡದವರು ನಿರ್ಗಮನ ಸಭೆ ನಡೆಸಿದರು. ತಂಡದ ಸದಸ್ಯರು ತಮ್ಮ ಅವಲೋಕನಗಳ ಆಧಾರದ ಮೇಲೆ ಸಂಸ್ಥೆಯ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು…

Read More

ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ಆಯೋಜಿಸಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದೆಲ್ಲೆಡೆ ನೆಲೆಸಿರುವ ಕುಂದಾಪ್ರ ಕನ್ನಡಿಗರು ತಮ್ಮದೇ ಅಸ್ಥಿತ್ವ ಉಳಿಸಿಕೊಳ್ಳುವುದರ ಜೊತೆಗೆ ಎಲ್ಲರಿಗೂ ಬೇಕಾಗುವ ವ್ಯಕ್ತಿಯಾಗಿ ಬೆಳೆದಿದ್ದಾರೆ. ಇದು ಕುಂದಾಪುರ ಮಣ್ಣಿನ ತಾಕತ್ತು. ಆಧುನಿಕರಣದ ಭರಾಟೆಯಲ್ಲಿ ಭಾಷೆ – ಸಂಸ್ಕೃತಿ ನಾಶವಾಗುತ್ತದೆ ಎಂಬ ಆತಂಕದ ನಡುವೆಯೂ ಯುವ ಜನತೆ ಮತ್ತೆ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸದಲ್ಲಿ ತೊಡಗಿಕೊಂಡಿರುವುದು ಶ್ಲಾಘನಾರ್ಹ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಸೋಮವಾರ ಆನ್ಲೈನ್ ಮೂಲಕ ಹಮ್ಮಿಕೊಳ್ಳಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೈಂದೂರು – ಕುಂದಾಪುರ ಭೌಗೋಳಿಕ ಪ್ರದೇಶ ದೈವದತ್ತವಾದ ಕೊಡುಗೆ. ಇಲ್ಲಿನ ಬದುಕು, ಭಾಷೆ, ಸಂಸ್ಕೃತಿ, ಸಂಪ್ರದಾಯಗಳೆಲ್ಲವೂ ಭಿನ್ನವಾಗಿದೆ. ಭೌಗೋಳಿಕವಾಗಿ ಇರುವ ಸಮಸ್ಯೆಗಳ ನಡುವೆಯೂ ಸಂತಸದ ಬದುಕು ಕಟ್ಟಿಕೊಂಡಿದ್ದೇವೆ. ಇಲ್ಲಿನ ಸಮಸ್ಯೆ ಹಾಗೂ ಮೂಲಭೂತ…

Read More