Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.02: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ. ಸೋಮವಾರ ಸಮುದ್ರದಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿದ್ದ ಪಟ್ಟೆಬಲೆ ದೋಣಿಯಲ್ಲಿ ಒಟ್ಟು ಎಂಟು ಮಂದಿ ಮೀನುಗಾರರಿದ್ದು, ಈ ಪೈಕಿ ಆರು ಮಂದಿ ಈಜಿ ದಡ ಸೇರಿದ್ದರು. ನಾಗೇಶ್ ಬಾಬು ಖಾರ್ವಿ ಎಂಬವವರು ದುರಂತ ನಡೆದು ಕೆಲಹೊತ್ತಿನಲ್ಲಿಯೇ ಮೃತಪಟ್ಟಿದ್ದರು. ಸತೀಶ್ ಖಾರ್ವಿ ನಾಪತ್ತೆಯಾಗಿದ್ದರು. ಮಂಗಳವಾರ ರಾತ್ರಿ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ವಿತರಿಸಿದ್ದರು. ಹಾನಿಗೀಡಾದ ದೋಣಿಗೆ 1 ಲಕ್ಷ ರೂ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಇದನ್ನೂ ಓದಿ:► ಕರ್ಕಿಕಳಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರ ಭೇಟಿ – https://kundapraa.com/?p=68163 .►…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 211 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಐಜಿ ಆದೇಶ ಹೊರಡಿಸಿದ್ದಾರೆ. ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್‌ ಸಂತೋಷ್ ಕಾಯ್ಕಿಣಿ ಅವರ ಅವರ ಸ್ಥಾನಕ್ಕೆ ಮಂಗಳೂರು ಸಿಟಿ ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಆಗಿದ್ದ ಸವಿತ್ರತೇಜ್ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಬೈಂದೂರು ಇನ್ಸ್‌ಪೆಕ್ಟರ್‌ ಸಂತೋಷ್ ಕಾಯ್ಕಿಣಿ ಅವರು ನೂತನ ಸ್ಥಳದ ನಿರೀಕ್ಷೆಯಲ್ಲಿದ್ದು, ಆದೇಶ ಕಾಯ್ದಿರಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜನರ ತೆರಿಗೆ ಹಣದಿಂದ ಅಧಿಕಾರಿಗಳಿಗೆ ಸ್ಥಾನ ಮಾನ ಸಂಬಳ ಸವಲತ್ತುಗಳು ಸಿಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಛೇರಿಯಲ್ಲಿ ಕುಳಿತುಕೊಳ್ಳುವುದಷ್ಟೇ ಅಲ್ಲದೇ ಸ್ಥಳಕ್ಕೆ ಭೇಟಿ ನೀಡಬೇಕು. ಅಧಿಕಾರಿಗಳು ನಿಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಸಿಎಂ. ಸಿದ್ಧರಾಮಯ್ಯ ಗುಡುಗಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ.ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ ಎಂದರು. ಆರೋಗ್ಯ ಸೂಚ್ಯಂಕದಲ್ಲಿ ಕುಸಿತಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮಂಗಳವಾರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ಚೆಕ್ ಹಸ್ತಾಂತರಿಸಲಾಗುತ್ತಿದೆ. ಕೊಡೇರಿ ಬಂದರಿನ ಎರಡು ಬದಿಯಲ್ಲಿ 250 ಮೀಟರ್ ಬ್ರೇಕ್ ವಾಟರ್ ವಿಸ್ತರಿಸುವ ಬಗ್ಗೆ ಶಾಸಕರು ಹಾಗೂ ಮಾಜಿ ಶಾಸಕರು ಬೇಡಿಕೆ ಇರಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದರು. ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಡಿಪಿಆರ್ ತಯಾರು ಮಾಡಲಾಗುತ್ತಿದೆ. ಹಂತಹಂತವಾಗಿ ಕಾಮಗಾರಿ ಮಾಡಲಾಗುವುದು ಆದರೆ ಅದಕ್ಕೂ ಮೊದಲು ಬಂದರು ಬ್ರೇಕ್ವಾಟರ್ ವಿಸ್ತರಣೆ ಕಾಮಗಾರಿಯನ್ನು ಮಾಡಲಾಗುವುದು. ಮರವಂತೆ ಬಂದರಿನಂತೆ ಒಟ್ಟು 28 ಕಾಮಗಾರಿಗಳು ಸಿಆರ್ಝಡ್ ನೆಪವೊಟ್ಟು ಸ್ಥಗಿತಗೊಂಡಿದೆ. ಸಿಆರ್ಝಡ್ ಸಮಸ್ಯೆ ನಿವಾರಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೊಬೈಲ್ ಟವರ್ ಹಾಗೂ ಹೆಚ್ಚಿನ ರೈಲು ನಿಲುಗಡೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಹಾಗೂ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳು ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಉಡುಪಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಸಂದರ್ಭ ಪಡುಬಿದ್ರಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ಬಳಿಕ ಮಾತನಾಡಿದರು. ವೀಡಿಯೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಈ ಹೊತ್ತಿನಲ್ಲಿ ಎಸ್ಐಟಿ ಪ್ರಶ್ನೆ ಉದ್ಭವಿಸುವುದಿಲ್ಲ. ತನಿಕೆಯ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ. ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆಯಾಗದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಮಾಹಿತಿ ಇಲ್ಲ. ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರದ ಯೋಜನೆ:ಕರಾವಳಿಯಲ್ಲಿ ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು, ಇದಕ್ಕೆ ಎಷ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.01: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತದಲ್ಲಿ ಓರ್ವ ಮೀನುಗಾರ ಮೃತಪಟ್ಟು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಮೀನುಗಾರರಿಂದ ಘಟನೆಯ ಮಾಹಿತಿ ಪಡೆದುಕೊಂಡದರು. ಈ ವೇಳೆ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ, ಮೀನುಗಾರ ಮುಖಂಡರಾದ ಆನಂದ ಖಾರ್ವಿ, ಜಗನ್ನಾಥ ಮೊಗವೀರ, ಬಿಎಚ್‌ಪಿ ನಾಗರಾಜ ಖಾರ್ವಿ, ಪ್ರಜ್ವಲ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪಟ್ಟೆಬಲೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು. ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ದುರಂತ ನಡೆದಿದ್ದು, ದೋಣಿಯಡಿಗೆ ಸಿಲುಕಿದ್ದ ನಾಗೇಶ್ ಬಾಬು ಖಾರ್ವಿ [30] ಎಂಬುವವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ [34] ಎಂಬುವವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ. ಉಪ್ಪುಂದದ ಸಚಿನ್ ಖಾರ್ವಿ ಎಂಬುವವರಿಗೆ ಸೇರಿದ ಮಾಸ್ತಿ ಮರ್ಲಿಚಿಕ್ಕು ಪ್ರಸಾದ ಹೆಸರಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಶುಭಕರ ಆಚಾರಿ ಅವರನ್ನು ನೇಮಕ ಮಾಡಲಾಗಿದ್ದು, ಅವರು ಅ.1ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಳೆದ 30 ವರ್ಷಗಳ ಸುದೀರ್ಘ ಅವಧಿಯಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಕಳದ ಭುವನೇಂದ್ರ ಮತ್ತು ಮೂಡುಬಿದಿರೆ ಮಹಾವೀರ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ, ಭಂಡರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಡಾ.ಶುಭಕರಾಚಾರಿ ಅವರು ಮೂಲತಃ ತೀರ್ಥಹಳ್ಳಿಯ ಗಬಡಿ ಗ್ರಾಮದವರಾಗಿದ್ದು, ಸೀತಾರಾಮ ಆಚಾರ್ಯ ಮತ್ತು ಇಂದಿರಾ ಅವರ ಪುತ್ರ. ತೀರ್ಥಹಳ್ಳಿಯ ತುಂಗಭದ್ರಾ ಮಹಾವಿದ್ಯಾಲಯಲ್ಲಿ ಪದವಿ ಶಿಕ್ಷಣದ ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದು ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರು 31 ಜುಲೈ 2023ರಂದು ನಿವೃತ್ತಿ ಹೊಂದಲಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ನಡೆದ ದೋಣಿ ದುರಂತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನೋರ್ವ ನಾಪತ್ತೆಯಾದ ಘಟನೆ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಪಟ್ಟೆಬಲೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿ ಸಂಜೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ದುರಂತ ನಡೆದಿದ್ದು, ದೋಣಿಯಡಿಗೆ ಸಿಲುಕಿದ್ದ ನಾಗೇಶ್ ಬಾಬು ಖಾರ್ವಿ [30] ಎಂಬುವವರು ಮೃತಪಟ್ಟಿದ್ದಾರೆ. ಸತೀಶ್ ಖಾರ್ವಿ [34] ಎಂಬುವವರು ನಾಪತ್ತೆಯಾಗಿದ್ದು ಹುಡುಕಾಟ ನಡೆಸಲಾಗುತ್ತಿದೆ. ಸಚಿನ್ ಖಾರ್ವಿ ಎಂಬುವವರಿಗೆ ಸೇರಿದ ಮಾಸ್ತಿ ಮರ್ಲಿಚಿಕ್ಕು ಪ್ರಸಾದ ಹೆಸರಿನ ದೋಣಿಯಲ್ಲಿ 8 ಮಂದಿ ಮೀನುಗಾರಿಕೆಗೆ ತೆರಳಿದ್ದು, ದಡಕ್ಕೆ ಸಮೀಪವಿರುವಾಗ ದುರಂತ ನಡೆದಿದೆ. 6 ಮಂದಿ ಈಜಿ ದಡ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಸ್ಪಸ್ಥರಾಗಿದ್ದ ದೋಣಿ ಮಾಲಿಕ ಸಚಿನ್ ಖಾರ್ವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಮೀನುಗಾರರು ದುರಂತಕ್ಕೀಡದ ದೋಣಿ, ಬಲೆಯನ್ನು ದಡಕ್ಕೆ ಎಳೆದು ತರಲಾಗಿದೆ. ಬೈಂದೂರು ಠಾಣೆ ಪೊಲೀಸರು, ಗಂಗೊಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ಕೋಣಿ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲಿನ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಗೆದ್ದುಕೊಂಡಿದ್ದಾರೆ. ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರೀದಾ ಫರ್ವಿನ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರೇ, 6ನೇ ತರಗತಿ ವಿದ್ಯಾರ್ಥಿ ಕಿಶನ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

Read More