Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೂಡಿರುವುದು, ಅವರೊಂದಿಗೆ ಸಂವಾದ ನಡೆಸಿರುವುದು ನಿಜಕ್ಕೂ ಒಂದು ಅವಿಸ್ಮರಣೀಯ ಕ್ಷಣಗಳಲ್ಲಿ ಒಂದು ಎಂದು ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅಭಿಪ್ರಾಯಿಸಿದ್ದಾರೆ. ಅವರು ಹರ್ಕೂರು ಗ್ರಾಮದ ನಾರ್ಕಳಿ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳ ಮನೆಯಲ್ಲಿ ಗ್ರಾಮ ವಾಸ್ತವ್ಯ ಕೈಗೊಂಡ ವೇಳೆ ಶಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊರಗ ಸಮುದಾಯದ ಬಗ್ಗೆ ವಿಶೇಷ ಒಲವು ಹೊಂದಿರುವ ಗಂಟಿಹೊಳೆ ಅವರ ಬಗ್ಗೆ ಮದುಕೊಡ್ಲು ಪರಿಸರದ ಕೊರಗ ಸಮುದಾಯ ಬಂಧುಗಳು ಇದೇ ವೇಳೆ ಅಭಿಮಾನ ವ್ಯಕ್ತಪಡಿಸಿದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಗಂಟಿಹೊಳೆ ಅವರು, ಸಮಾಜದ ಮುಖ್ಯವಾಹಿನಿಗೆ ತೆರೆದುಕೊಳ್ಳುತ್ತಿರುವ ಕೊರಗ ಸಮಾಜವನ್ನು ಹಿಂದೂ ಸಮಾಜ ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದೆ. ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ಕೊರಗ ಸಮುದಾಯದ ಮನೆಯಲ್ಲಿ ವಾಸ್ತವ್ಯ ಹೊಸ ಪ್ರೇರಣೆಯನ್ನು ನೀಡಿದೆ ಮಾತ್ರವಲ್ಲದೆ ಅವರ ನೋವು ನಲಿವುಗಳನ್ನು ಅರಿತುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದು ಬರೆದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಲಾ ಸಾಂಸ್ಕೃತಿಕ ಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ವಾರ್ಷಿಕ ಸಂಭ್ರಮ ಸುರಭಿ ಜೈಸಿರಿಯಲ್ಲಿ ಹಿರಿಯ ನಟಿ, ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಫೆಬ್ರವರಿ 19 ರಿಂದ 22 ಫೆಬ್ರವರಿ 2026ರ ತನಕ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ದಿ. ಹೊಸಾಡು ಸುಬ್ರಾಯ ಶೇರುಗಾರ್‌ ಸಂಸ್ಮರಣೆಯ ಸಾಂಸ್ಕೃತಿಕೋತ್ಸವವು ಪ್ರತಿದಿನ ಸಂಜೆ 6:00ಕ್ಕೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ. ಫೆ.20ರಂದು ಬಿಂದುಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ. ಉದ್ಯಮಿ ಕೃಷ್ಣಮೂರ್ತಿ ಮಂಜ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ► ಫೆ.19ರಿಂದ 22ರ ತನಕ ಸುರಭಿ ರಿ. ಬೈಂದೂರು ಇದರ ವಾರ್ಷಿಕ ಸಂಭ್ರಮ ಸುರಭಿ ಜೈಸಿರಿ – https://kundapraa.com/?p=95886 .

Read More

ಕುಂದಾಪ್ರ ಡಾಟ್‌ ಕಾಂ  ಸುದ್ದಿ.ಕುಂದಾಪುರ: ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರ 66ರ ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಎದುರು 12 ಗಂಟೆ ಸುಮಾರಿಗೆ ನಡೆದ ಬೈಕ್ ಹಾಗೂ ಕಂಟೇನರ್ ಲಾರಿ ನಡುವಿನ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ಬೈರು ಎಂಬವರ ಪುತ್ರ ಜಯರಾಮ್ ಕಾಟ್ಕೋಟ್ (32) ಮೃತಪಟ್ಟವರು. ಕಂಟೈನರ್ ಚಕ್ರದ ಅಡಿಯಲ್ಲಿ ಸಿಲುಕಿದ್ದ ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕನನ್ನು ಕೂಡಲೇ ಸ್ಥಳೀಯರಾದ ಆಟೋ ಚಾಲಕ ಹರೀಶ್ ಪೂಜಾರಿ ಹಾಗೂ ಗಂಗೊಳ್ಳಿಯ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹೊರತೆಗೆದರು. ಉಡುಪಿ ಕಡೆ ರೋಗಿ ಒಬ್ಬರನ್ನು ಬಿಟ್ಟು ವಾಪಸ್ ಬರುತ್ತಿದ್ದು, ತಾಲೂಕು ಆಸ್ಪತ್ರೆ ಹೊನ್ನಾವರ ಇದರ ಆಂಬುಲೆನ್ಸ್ ಚಾಲಕ ನಾಗರಾಜ್ ನಾಯ್ಕ್ aವರಲ್ಲಿ ಗಾಯಾಳುವನ್ನು ಆಸ್ಪತ್ರೆ ಕೊಂಡೆಯಲು ವಿನಂತಿಸಿಲಾಯಿತು. ಕೂಡಲೇ ಗಾಯಾಳುವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯುದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಯುವಕನ ಪ್ಯಾಂಟ್ ಕೀಸೆಯಲ್ಲಿದ್ದ ಲೈಸೆನ್ಸ್  ಆಧಾರದಲ್ಲಿ…

Read More

ಕುಂದಾಪ್ರ ಡಾಟ್‌ ಕಾ ಸುದ್ದಿ.ಕುಂದಾಪುರ: “ವ್ಯಕ್ತಿಗಿಂತ ದೇಶ ದೊಡ್ಡದು. ದೇಶದ ಅಭಿವೃದ್ಧಿಯ ಪ್ರತಿ ಹಂತದಲ್ಲೂ ನಮ್ಮ ಕೊಡುಗೆ ಇರಬೇಕು” ಎಂದು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇದರ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಕೆ. ಜಯಪ್ರಕಾಶ್ ರಾವ್ ಹೇಳಿದರು. ಅವರು ಮಂಗಳವಾರ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ “ತಿಂಗಳ ಅತಿಥಿ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಭಾರತವು ಶಾಂತಿಪ್ರಿಯ ರಾಷ್ಟ್ರ. ಯುದ್ಧದಿಂದ ಮಾನವೀಯತೆ ಕುಸಿಯುತ್ತದೆ. ಸಾವು -ನೋವುಗಳಾಗುತ್ತವೆ ಹೊರತು ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಹೇಳಿದರು. ತಾಂತ್ರಿಕವಾಗಿ ಮತ್ತು ಬಾಹ್ಯಾಕಾಶ, ಉಪಗ್ರಹ ಮತ್ತು ಸೇನಾ ವಲಯದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಹೊಂದುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡ ನಾವುಗಳು ಜಗತ್ತಿನ ಪ್ರಬಲ ದೇಶಗಳಿಗೆ ಪೈಪೋಟಿ ಕೊಡುವಷ್ಟು ಬೆಳೆದಿದ್ದೇನೆ. ಇದರ ಹಿಂದೆ ನಮ್ಭಮದೇ ದೇಶದ ಪ್ರತಿಭಾನ್ವಿತ ವಿಜ್ಞಾನಿಗಳು, ಅಭಿಯಂತರರು ತಂತ್ರಜ್ಞರು ತಮ್ಮ ಕೊಡುಗೆ ನೀಡಿದ್ದಾರೆ. ಅದರಲ್ಲೂ ಮಾಜಿ ರಾಷ್ಟ್ರಪತಿ ಎಪಿಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾವಾಣಿಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ ವಿಜಯವಾಣಿಯ ರವೀಂದ್ರ ಕೆ., ಕಾರ್ಯದರ್ಶಿಯಾಗಿ ಹರೀಶ್ ಕಿರಣ್ ತುಂಗ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರುಗಳನ್ನು ನೋಂದಣಿ ಮಾಡಿಸುವುದರೊಂದಿಗೆ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನೆಯ ಕುರಿತು ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಸಂಘಟಿತ ಕಾರ್ಮಿಕರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಹೆಬ್ಬಾವುಗಳು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದು ಜನರನ್ನು ಭಯಭೀತರನ್ನಾಗಿಸಿದೆ. ಇತ್ತೀಚಿನ ದಿನಗಳಲ್ಲಿ ಗಂಗೊಳ್ಳಿಯ ಅಸುಪಾಸಿನಲ್ಲಿ ರಾತ್ರಿ ವೇಳೆ ದೊಡ್ಡ ಗಾತ್ರದ ಮತ್ತು ಚಿಕ್ಕ ಗಾತ್ರದ ಹೆಬ್ಬಾವುಗಳು ತುಂಬಾ ಕಡೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ನೋಡಿದ ಕ್ಷಣ ಮಾತ್ರದಲ್ಲಿ ಪೊದೆಗಳ ನಡುವೆ ನಿರ್ಜನ ಜಾಗದಲ್ಲಿ ಕಣ್ಮರೆಯಾದ ಕಾರಣ ಸಾಕಷ್ಟು ಹೆಬ್ಬಾವುಗಳು ಸೆರೆ ಹಿಡಿಯಲಾಗದೆ ತಪ್ಪಿಸಿಕೊಂಡಿದೆ. ಭಾನುವಾರ ರಾತ್ರಿ ಗಂಗೊಳ್ಳಿ ಬಂದರು ಬೇಲಿಕೇರಿ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ದಾರಿ ಮದ್ಯ ಕಾಣಿಸಿಕೊಂಡಿದ್ದು, ಭಯಭಿತರಾದ ಅವರು ಕೂಡಲೇ ಉರಗ ತಜ್ಞ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಮಡಿ ನಾಗರಾಜ್ ಖಾರ್ವಿ ಅವರಿಗೆ ವಿಚಾರ ತಿಳಿಸಿದ್ದಾರೆ. ನಾಗರಾಜ ಖಾರ್ವಿ ಅವರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ವಿಶ್ವನಾಥ್ ಗಂಗೊಳ್ಳಿ ಮತ್ತು ಗಣೇಶ್ ಖಾರ್ವಿ ಅವರ ಸಹಾಯದಿಂದ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರಿಸಿದರು. ಸೆರೆ ಹಿಡಿದ ಹೆಬ್ಬಾವು ಸುಮಾರು 11 ಕೆಜಿ ತೂಕವಿದ್ದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್. 99.4585176 ಪರ್ಸೇಂಟೈಲ್ ಗಳಿಸಿ ಸಾಧನೆ ಮೆರೆದಿದ್ದಾರೆ. 8 ವಿದ್ಯಾರ್ಥಿಗಳು 98.5 ಪರ್ಸೇಂಟೈಲ್‌ಗಳಿಗಿಂತ ಅಧಿಕ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ. ಶಶಾಂಕ್ ಬೋರ್ಕರ್ (98.9610456), ಸೃಜನ್ ವಿ. (98.7320359), ಮೆಲ್ರೋಯ್ ಕಾಸ್ಟೆಲಿನೋ (98.648776), ಪ್ರಣವ್ ಎನ್. ಪಂಡಿತ್ (98.5677958), ಹರ್ಷವರ್ಧನ ಕೆ. ಪಿ. (98.5552656), ಕ್ಷಮ ಅಶೋಕ್ ಹಕಟಿ (98.5177603), ಕ್ಲಾರೆನ್ಸ್ ಡಿಸೋಜ (98.4810184) ಸೇರಿದಂತೆ ಈ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೆರೆದಿದ್ದಾರೆ.97 ಪರ್ಸೆಂಟೈಲ್‌ಗಿಂತ ಅಧಿಕ 22 ವಿದ್ಯಾರ್ಥಿಗಳು, 96 ಪರ್ಸೆಂಟೈಲ್‌ಗಿಂತ ಅಧಿಕ 38 ವಿದ್ಯಾರ್ಥಿಗಳು ಮತ್ತು 95 ಪರ್ಸೆಂಟೈಲ್‌ಗಿಂತ ಅಧಿಕ 58 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. ಭೌತಶಾಸ್ತ್ರ ವಿಷಯದಲ್ಲಿ 5 ವಿದ್ಯಾರ್ಥಿಗಳು, ರಸಾಯನಶಾಸ್ತ್ರ ವಿಷಯದಲ್ಲಿ 11 ವಿದ್ಯಾರ್ಥಿಗಳು ಮತ್ತು ಗಣಿತದಲ್ಲಿ 3 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಳಿಗಿಂತ ಅಧಿಕ ಅಂಕ ಪಡೆದಿದ್ದಾರೆ. ಸಾಧನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್  2026ರ  ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು  ಕುಂದಾಪುರ ತಾಲೂಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಧೀರಜ್ ಜಿ.ಡಿ. 99.3604 ಪರ್ಸಂಟೈಲ್, ಮಾನ್ಯ ಪೂಜಾರಿ 98.6832 ಪರ್ಸಂಟೈಲ್ , ಶ್ರೇಯಸ್ ಪಿ. ಗಾಣಿಗ 98.4693 ಪರ್ಸಂಟೈಲ್, ಶ್ರೀರಾಮ್ ಪಿ. ಭಟ್ 97.4402ಪರ್ಸಂಟೈಲ್, ಶ್ರೀಧಾನ್ ಎಂ. ಶೆಟ್ಟಿ 97.5834 ಪರ್ಸಂಟೈಲ್, ನಹುಷ್ ಚಂದ್ರ ಬಿಲ್ಲವ 96.1127, ಆಯುಷ್ ಯು ಮೆಂಡನ್ 96.1817 ಪರ್ಸಂಟೈಲ್ಅಂಕಗಳಿಸಿ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗವಾದ ಹೆಮ್ಮಾಡಿ, ಬೈಂದೂರು, ಕುಂದಾಪುರದ ಅನೇಕ ವಿದ್ಯಾರ್ಥಿಗಳು ಜೆಇಇ ಮೈನ್ಸ್ ಪರೀಕ್ಷೆಗೆ ತರಬೇತಿ ಪಡೆಯಲು ದೂರದ ಕಾರ್ಕಳ, ಮಂಗಳೂರಿಗೆ ತೆರಳಬೇಕಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕುಂದಾಪುರ ಭಾಗದ ಪ್ರತಿಷ್ಠಿತ ಸಂಸ್ಥೆಯಾದ ಜನತಾ ಪಿಯು ಕಾಲೇಜಿನಲ್ಲಿ ನುರಿತ ಉಪನ್ಯಾಸಕರ ಸತತ ಮಾರ್ಗದರ್ಶನದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲೂ ಇಂತಹ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಮೈನ್ಸ್ (ಸೆಷನ್-1) 2026ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ. ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ – 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.3310617 ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ. ತೇಜಸ್ ಆರ್. ಬಿ.- 98.9615457ನಿನಾದ್ ರಾಜೇಶ್ ನಾಯ್ಕ್- 98.9463580ಧನುಷ್  ಹೆಚ್. ಎ.- 98.5706065ಸಂವಿತ್‌ ಅಮಿತ್ ಗೋಕರ್ಣ- 98.5706065ದೃಶ್ಯ್‌- 98.4130581ಸುಕ್ಷಿತ್ ಗಿರೀಶ್ ಗೌಡ- 98.3503880ತೇಜಸ್  ಎನ್. ಇ. – 98.3227894ತೇಜಸ್ ಹೆಗಡೆ ಎಚ್. ಡಿ.- 98.1925416ಅಕ್ಷತಾ ಮೋಹನ್ ಹೆಗಡೆ -…

Read More