Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ  ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಜೊತೆಗೂಡಿ  ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಕೈಗೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬಿ. ದಯಾನಂದ್ ಶೆಟ್ಟಿ , ಡೈರೆಕ್ಟರ್ ಅಂಡ್ ಸೀನಿಯರ್ ಕನ್ಸಲ್ಟೆಂಟ್ ಪ್ರೊಜಿನ್ ಟೆಕ್ಸ್ ಅವರು ಆಗಮಿಸಿ ಹೇಗೆ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು ಮತ್ತು ಅದಕ್ಕೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಎಂಬಿಎ ವಿದ್ಯಾರ್ಥಿನಿ ಅದಿತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕಾರ್ಯಕ್ಷೇತ್ರದಲ್ಲಿ 25 ಮಂದಿ ಅಭ್ಯರ್ಥಿಗಳಿಗೆ ಸೀರೆ ಗುಚ್ಚು ಹಾಕುವ ಮೂರು ದಿನದ ತರಬೇತಿ ಕಾರ್ಯಕ್ರಮದ  ಸಮಾರೋಪ ಸಮಾರಂಭವು ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು. ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ. ಉದ್ಘಾಟಿಸಿ, ಕೌಶಲ್ಯಾಭಿವೃದ್ಧಿ ತರಬೇತಿ ಅಡಿಯಲ್ಲಿ ಸೀರೆಗುಚ್ಚು ಹಾಕುವ ತರಬೇತಿಯು ನಿಮಗೆ ಒಂದು ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ, ಸ್ವಉದ್ಯೋಗ ಮಾಡುವುದರಿಂದ ಸ್ವಾವಲಂಬನೆ ಜೀವನ ನಡೆಸಲು ಸುಲಭ ಸಾಧ್ಯ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ ಕೋಟತಟ್ಟು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸತೀಶ್ ಕುಂದರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಮಹಿಳೆಯರಿಗೆ ಇಂದು ಸ್ವಾವಲಂಬನೆಯಾಗಿ ಬದುಕಲು ಉತ್ತಮ ಅವಕಾಶ ಕೊಟ್ಟಿದೆ ಎಂದರು. ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇದರ ತರಬೇತಿ ಶಿಕ್ಷಕಿ ರೀನಾ ಎಲ್ಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿಗಳಾದ ಇಬ್ಬರು ವ್ಯಕ್ತಿಗಳಿಗೆ ನ್ಯಾಯಾಲಯವು ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 5,000 ರೂಪಾಯಿ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಗೆ ಒಳಗಾದವರನ್ನು ಕುಂದಾಪುರದ ಮಾಚಟ್ಟು ಗ್ರಾಮದ ಶರತ್ ಶೆಟ್ಟಿ (32) ಮತ್ತು ಅದೇ ಗ್ರಾಮದ ಪ್ರಶಾಂತ್ ನಾಯ್ಕ್ (28) ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ:ಅಮಾಸೆಬೈಲು ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯು ಶಾಲೆಗೆ ಹೋಗಿ ಬರುವ ವೇಳೆ ರಿಕ್ಷಾ ಚಾಲಕ ಶರತ್ ಶೆಟ್ಟಿ ಮತ್ತು ಆತನ ಸಹಚರ ಪ್ರಶಾಂತ್ ನಾಯ್ಕ್ ಆಟೋರಿಕ್ಷಾದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಸಂತ್ರಸ್ತ ಬಾಲಕಿಯು ಈ ಘಟನೆಯ ಬಗ್ಗೆ ತನ್ನ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ್ದಳು. ಶಿಕ್ಷಕರು ನೀಡಿದ ದೂರಿನ ಮೇರೆಗೆ 2025ರ ಜುಲೈ 15ರಂದು ಅಮಾಸೆಬೈಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕುಂದಾಪುರ ಡಿವೈಎಸ್‌ಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್‌ ಸವಾರ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಾವುಂದ ರಾ.ಹೆ 66 ರಲ್ಲಿ ರಾತ್ರಿ ಸಂಭವಿಸಿದೆ. ಜಯಂತ ಗಂಭೀರ ಗಾಯಗೊಂಡ ವ್ಯಕ್ತಿ. ಕುಂದಾಪುರದಿಂದ ಬೈಂದೂರಿಗೆ ಹೋಗುತ್ತಿದ್ದ ಬೈಕ್ ಸವಾರ ಮಿಥುನ್ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರುಗಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯಂತ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದರು. ತಕ್ಷಣ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಟ್‌ಬೇಲ್ಲೂರು ಸಮೀಪ ಬಾರ್ ಎಂಡ್ ರೆಸ್ಟೋರೆಂಟ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ (60) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಡಿತದ ಚಟ ಹೊಂದಿದ್ದರಿಂದ ಕೆಲಸಕ್ಕೆ ಬರುವುದು ಬೇಡ ಎಂದು ಹೇಳಲಾಗಿತ್ತು. ಅದಾಗಿ 3 ದಿನಗಳ ಬಳಿಕ ಕೆಲಸ ಮಾಡುವವರಿಗೆ ಇರಲು ಕೊಟ್ಟಿದ್ದ ರೂಮಿನ ಬಳಿ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಹುಮಹಡಿ ವಸತಿ ಸಮುಚ್ಚಾಲಯಗಳು ಕೊಳಚೆ ಹಾಗೂ ತ್ಯಾಜ್ಯದ ನೀರನ್ನು ಶುದ್ಧೀಕರಣದ ನಿರ್ವಹಣೆ ಮಾಡುವುದರೊಂದಿಗೆ ಮರು ಬಳಕೆ ಮಾಡಬೇಕು. ಒಂದೊಮ್ಮೆ ಕೊಳಚೆ ನೀರನ್ನು ಶುದ್ಧೀಕರಿಸದೆ ಎಲ್ಲಂದಲ್ಲಿ ನದಿ ತೋಡುಗಳಿಗೆ ಬಿಟ್ಟು ಜಲಮಾಲಿನ್ಯ ಉಂಟು ಮಾಡಿದರೆ ಅಂತವರ ಮೇಲೆ ಮುಂದಿನ ದಿನಗಳಲ್ಲಿನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್‌ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ 376 ಕ್ಕೂ ಹೆಚ್ಚು ಅಪಾರ್ಟ್ಮೆಂಟ್‌ಗಳು ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ಸಂಸ್ಕರಣೆ ಮಾಡದೇ ಮಳೆ ನೀರು ಹರಿಯುವ ತೋಡುಗಳಿಗೆ ಬಿಡುತ್ತಿರುವ ಹಿನ್ನೆಲೆ, ನಗರ ಸಭೆ ವತಿಯಿಂದ ನೋಟೀಸ್ ನೀಡಲಾಗಿದೆ. ಇವುಗಳಲ್ಲಿ 200 ಮಣಿಪಾಲ್‌ನಲ್ಲಿ, 105 ಉಡುಪಿ ನಗರದಲ್ಲಿ, 70 ಮಲ್ಪೆ ವ್ಯಾಪ್ತಿಯಲ್ಲಿದ್ದು, ಸಮುಚ್ಚಯದ ಮಾಲೀಕರು ತ್ಯಾಜ್ಯದ ನಿರ್ವಹಣೆಯನ್ನು ವೈಜ್ಞಾನಿಕವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇದೇ ಬರುವ ಮಾಚ್೯ 1ರಂದು ಕೋಟ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ: ಪ್ರವಿತ್ರ ನಾಗಮಂಡಲೋತ್ಸವದ ಕಛೇರಿಯನ್ನು ದೇಗುಲದ ಸಭಾಂಗಣದಲ್ಲಿ ಮೂಡುಗಿಳಿಯಾರಿನ ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಪ್ರಧಾನ ಅರ್ಚಕ ಮಹಾಬಲ ಹೇರ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್, ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಸುಧಾ ಎ. ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ ಗಿಳಿಯಾರು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ಚಂದ್ರ ಆಚಾರ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ದಾನಿಗಳು ಸರಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಶಾಲೆಯ ಸರ್ವತೋಮುಖ ಅಭಿವೃದ್ಧಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸರಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಗುರುವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2ಲಕ್ಷ ವೆಚ್ಚದಲ್ಲಿ ಕೊಡಂಚ ರಸ್ತೆ ಮತ್ತು ಸುಮಾರು 3ಲಕ್ಷ ರೂ. ವೆಚ್ಚದಲ್ಲಿ ಪರಮತೋಟ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಪುರೋಹಿತರಾದ ಜಿ. ವಿಠಲದಾಸ ಭಟ್ ಗಂಗೊಳ್ಳಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಗುಜ್ಜಾಡಿಯ ಉದ್ಯಮಿ ಉಮೇಶ ಎಲ್. ಮೇಸ್ತ, ಗುಜ್ಜಾಡಿ ಗ್ರಾಪಂ. ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾ‍ರ್ತಿ, ಶ್ರೀಧರ, ಗುಜ್ಜಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿದೇಗುಲದ ವತಿಯಿಂದ ಇದೇ ಬರುವ ಮಾಚ್೯ 1ರಂದು ನಡೆಯಲಿರುವ ಏಕ: ಪವಿತ್ರ ನಾಗಮಂಡಲೋತ್ಸವ ಇದರ ಆಮಂತ್ರಣ ಪತ್ರಿಕೆಯನ್ನು ಬುಧವಾರ ದೇಗುಲದಲ್ಲಿ ಬಿಡುಗಡೆಗೊಳಿಸಲಾಯಿತು. ಬಿಡುಗಡೆ ಸಮಾರಂಭದಲ್ಲಿ ನಾಗದೇವರರಿಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ದೇವಿ ಅಮೃತೇಶ್ವರೀಗೆ ಪರಿವಾರ ದೇವರುಗಳಾದ ಮಾರಿಯಮ್ಮ, ರಕ್ತೇಶ್ವರಿ, ವೀರಭದ್ರ, ಬೊಬ್ಬರ್ಯ ಪರಿವಾರ ದೇವರುಗಳಿಗೆ ಪೂಜೆ ಸಲ್ಲಿಸಿ ಆಮಂತ್ರಣ ಪತ್ರಿಕೆಯನ್ನು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು. ದೇಗುಲದಲ್ಲಿ ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ತಯಾರಿ ಕುರಿತಂತೆ ಚರ್ಚಿಸಲಾಯಿತು. ಉಪಸ್ಥಿತರಿದ್ದ ಗ್ರಾಮಸ್ಥರಿಂದ ಸಲಹೆ ಸೂಚನೆಗಳನ್ನು ಪಡೆಯಲಾಯಿತು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಶಿವ ಪೂಜಾರಿ, ಸುಧಾ ಎ. ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ ಗಿಳಿಯಾರು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ,ಹರ್ತಟ್ಟು ಶಿರಸಿ ದೇವಿ ದೇಗುಲದ ಮಂಜುನಾಥ್ ಪೂಜಾರಿ, ಕೋಟ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುಲದ ಟ್ರಸ್ಟಿ ಭಾಸ್ಕರ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರತಿಷ್ಟಿತ, ರಾಜ್ಯ ಪ್ರಶಸ್ತಿ ವಿಜೇತ ಗಂಗೊಳ್ಳಿ ಟೌನ್ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾಗಿ ಜಿ. ವೆಂಕಟೇಶ್ ಭಾಸ್ಕರ್ ಶೆಣೈ ಮತ್ತು ಉಪಾಧ್ಯಕ್ಷರಾಗಿ ಜಿ. ವಿಶ್ವನಾಥ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಶ್ರೀ ಎಚ್. ಎಲ್. ಕಾಮತ್ ಆಡಳಿತ ಮಂಡಳಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಚುನಾವಣಾ ರಿಟನಿಂಗ್ ಅಧಿಕಾರಿ, ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯ ಹಿರಿಯ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಿ. ಎಂ. ಅವಿರೋಧ ಆಯ್ಕೆಯನ್ನು ಘೋಷಿಸಿದರು. ಜಿ. ವೆಂಕಟೇಶ ಶೆಣೈ ಅವರು ಕಳೆದ 10 ವರ್ಷಗಳಿಂದ ಸಹಕಾರಿಯ ನಿರ್ದೇಶಕರಾಗಿ, ಕಳೆದ 18 ತಿಂಗಳುಗಳಿಂದ ಅಧ್ಯಕ್ಷರಾಗಿ ಸಂಘದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ. ವಿಶ್ವನಾಥ ಆಚಾರ್ಯ ಅವರು ಕಳೆದ 15 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 10 ವರ್ಷಗಳಿಂದ ಉಪಾಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ನಿರ್ದೇಶಕರಾದ ಎನ್. ಮಾಧವ ಕಿಣಿ, ಕೆ. ಪರಮೇಶ್ವರ ನಾಯಕ್,…

Read More