ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ನಾವುಂದ, ನಾಡ, ಮರವಂತೆ ಗ್ರಾಮದ ಹಲವು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೈಂದೂರು ತಾಲೂಕಿನ ಬಡಾಕೆರೆ, ಮರವಂತೆ, ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ. ನೆರೆಪೀಡಿತ ಪ್ರದೇಶದಲ್ಲಿದ್ದ ಮನೆಯವರು, ಜಾನುವಾರುಗಳನ್ನು ಬೇರೆ ಪ್ರದೇಶಕ್ಕೆ ಸ್ಥಳ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕಾರ್ಯಚರಣೆಗಿಳಿದಿದ್ದರು. ಸ್ಥಳೀಯರು ದೋಣಿಗಳ ಮೂಲಕ ತೆರಳಿ ರಕ್ಷಣಾ ಕಾರ್ಯಕ್ಕೆ ಸಹಕರಿಸಿದರು. ಅಧಿಕಾರಿಗಳ ಭೇಟಿಬೈಂದೂರು ತಾಲೂಕು ಆಡಳಿತ ಅಧಿಕಾರಿ ಪ್ರದೀಪ್ ತಾಲೂಕು ಪಂಚಾಯತಿಯು ಭಾರತಿ, ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು, ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ, ಗ್ರಾಮ ಪಂಚಾಯತ್ ನಾವುಂದ, ಗ್ರಾಮ ಪಂಚಾಯತ್ ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸುಂಟರಗಾಳಿಯಿಂದ ಹಾನಿಗೊಳಗಾದ ಕುಳ್ಳುಂಜೆ, ರಟ್ಟಾಡಿ ಮೊದಲಾದ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆದೂರು ಸದಾನಂದ ಶೆಟ್ಟಿ, ಹಾಲಾಡಿ ಗ್ರಾಪಂ ಅದ್ಯಕ್ಷ ಚೋರಾಡಿ ಅಶೋಕ ಶೆಟ್ಟಿ, ಸದಾಶಿವ ಶೆಟ್ಟಿ, ಶಂಕರನಾರಾಯಣ, ಅಜಿತ್ ರಟ್ಟಾಡಿ, ಸಂಪತ್ ಶೆಟ್ಟಿ ರಟ್ಟಾಡಿ, ಕೃಷ್ಣ ರಟ್ಟಾಡಿ ಜೊತೆಯಲ್ಲಿದ್ದರು. ► ಕೊಲ್ಲೂರು: ಮನೆ ಮೇಲೆ ಗುಡ್ಡ ಜರಿದು ಬಿದ್ದು ಮಹಿಳೆ ಸಾವು – https://kundapraa.com/?p=73870 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಮನೆಗೆಲಸಕ್ಕೆಂದು ತೆರಳಿದ್ದ ಮಹಿಳೆ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿಗುಡ್ಡೆ ಎಂಬಲ್ಲಿ ನಡೆದಿದೆ. ಹಳ್ಳಿಬೇರು ನಿವಾಸಿ ಅಂಬಾ (55) ಮೃತ ದುರ್ದೈವಿ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಗುರುವಾರ ಸಂಜೆಯ ವೇಳೆಗೆ ಗುಡ್ಡದ ಒಂದು ಪಾರ್ಶ್ವ ಜರಿದು ಬಲಭಾಗಕ್ಕೆ ಅಪ್ಪಳಿಸಿದೆ. ಈ ವೇಳೆ ಸೊಸೈಟಿಗುಡ್ಡೆಯ ಮನೆಯೊಂದರಲ್ಲಿ ಕೂಲಿ ಕೆಲಸಕ್ಕಾಗಿ ತೆರಳಿದ್ದ ಮಹಿಳೆಯ ಮೇಲೆಯೇ ಗುಡ್ಡ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ ಅವರು ಉಸುರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹ ಮೇಲಕ್ಕೆತ್ತಲಾಗಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೈದ್ಯೋ ನಾರಾಯಣ ಹರಿ ಎಂಬ ವಾಕ್ಯ ಇಂದಿಗೂ ಪ್ರಸ್ತುವಾಗಿದ್ದು ದೇವರ ನಂತರ ಜನರು ವೈದ್ಯರನ್ನು ತಮ್ಮ ಕಾಯಿಲೆ ಗುಣಪಡಿಸುವ ದೇವರಂತೆಯೇ ನೋಡುತ್ತಾರೆ ಎಂದು 2024-25ನೇ ಸಾಲಿನ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಹೇಳಿದರು. ವೈದ್ಯರ ದಿನಾಚರಣೆ ಅಂಗವಾಗಿ ಬೈಂದೂರು ರೋಟರಿ ವತಿಯಿಂದ ವಿವಿಧೆಡೆ ಹಮ್ಮಿಕೊಳಲಾಗಿದ್ದ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಬೈಂದೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜೇಶ್, ವೈದ್ಯೆ ಹಾಗೂ ಬೈಂದೂರು ರೋಟರಿ ಸದಸ್ಯರಾದ ಡಾ. ನಂದಿನಿ, ವೈದ್ಯರುಗಳಾದ ಡಾ. ನಿವೇದಿತಾ, ಡಾ. ಜೈಮಿನಿ, ಡಾ. ವತ್ಸಲಾ, ಡಾ. ಆರ್. ಸಿ. ಪಾಟೀಲ್, ಹಿರಿಯ ವೈದ್ಯರುಗಳಾದ ಡಾ. ಎಂ. ಎಸ್. ಶೆಟ್ಟಿ, ಡಾ. ಕೆ. ಆರ್. ನಂಬಿಯಾರ್, ಡಾ. ಸುಧಾಕರ ಹೆಗ್ಡೆ, ಡಾ. ಪ್ರವೀಣ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕಾರ್ಯದರ್ಶಿ ಸುನಿಲ್ ಹೆಚ್.ಜಿ., ಈ ವೇಳೆ ಹಿರಿಯ ರೊಟೇರಿಯನ್ ಐ. ನಾರಾಯಣ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.4: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರ್ಕಾರಿ / ಅನುದಾನಿತ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಸಮಾರಂಭವನ್ನು ಬೈಂದೂರಿನ ಜೆ.ಎನ್.ಆರ್ ಸಭಾಂಗಣದಲ್ಲಿ ಜುಲೈ 6ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಅವರು ಬೈಂದೂರು ಪ್ರಸ್ ಕ್ಲಬ್ನ್ನಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಾದ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ [ಎಂ.ಎಂ.ಸಿ.ಎಲ್) ನೆರವಿನೊಂದಿಗೆ ಹೆಗ್ಗುಂಚೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಾಲಾ ಕಟ್ಟಡಗಳ ನಿರ್ಮಾಣ, ವಿದ್ಯಾರ್ಥಿಗಳಿಗೆ ನಿರಂತರವಾಗಿ ಉಚಿತ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ, ಮಧ್ಯಾಹ್ನ ಊಟಕ್ಕೆ ದೇಣಿಗೆ, ಶಾಲಾ ಕಂಪ್ಯೂಟರ್ ಲ್ಯಾಬ್ಗಳ ವ್ಯವಸ್ಥೆ, ಸಾರ್ವಜನಿಕ ಶೌಚಾಲಯಗಳ ನಿರ್ಮಾಣ, ಬಡ ಮತ್ತು ನಿರ್ಗತಿಕರಿಗೆ ವೈದ್ಯಕೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆಂಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರ ಶೋಭಾಲಕ್ಷ್ಮೀ ಎಚ್. ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತ ಡಾ. ಎಂ ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಮೂಡುಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು.ಜಿಲ್ಲೆಯ ಎಲ್ಲಾ ಸ್ಥಳೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ. ವಿಪರೀತ ಗಾಳಿ-ಮಳೆ ಹೆಚ್ಚಿರುವ ಕಾರಣ ಇಲ್ಲಿನ ನದಿಗಳು ತುಂಬಿ ಹರಿಯುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಇತರ ಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂ ಧರ್ಮ ಎಂದರೆ ಹಿಂಸಾವಾದಿಗಳು ಮೊದಲಾದ ಆರೋಪಮಾಡಿದ್ದು ಇದು ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಸಂಸದ ರಾಹುಲ್ ಗಾಂಧಿ ಅವರು ಈ ಕೂಡಲೇ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಡಬೇಕು ಮತ್ತು ಹಿಂದೂ ಧರ್ಮದ ಜನತೆಯ ಕ್ಷಮೆಯನ್ನು ಯಾಚಿಸಬೇಕು ಎಂದು ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ. ಎಸ್ ಬೇಲೆಮನೆ ಆಗ್ರಹಿಸಿದರು. ತ್ರಾಸಿಯಲ್ಲಿ ಬೈಂದೂರು ಬಿಜೆಪಿ ಯುವಮೋರ್ಚಾ ಪ್ರತಿಭಟನೆ ವತಿಯಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಸುಧಾಕರ್ ಶೆಟ್ಟಿ ನೆಲ್ಯಾಡಿ ಮೊದಲಾದವರು ಈ ವೇಳೆ ಮಾತನಾಡಿ ಕೇಂದ್ರದ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ರಾಘವೇಂದ್ರ ನೆಂಪು, ಪ್ರವೀಣ್ ಕೊಡ್ಲಾಡಿ, ಬೈಂದೂರು ಮಹಿಳಾಮೋರ್ಚ ಅಧ್ಯಕ್ಷೆ ಶ್ಯಾಮಲ ಕುಂದರ್ , ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನಕಾರ್ಯದರ್ಶಿ ಅನಿತಾ ಆರ್ ಕೆ, ಮಾಜಿ ಜಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಮಾಸೆಬೈಲು ಗ್ರಾಮದ ರಟ್ಟಾಡಿ, ಕೊಳಂಜೆ, ಜಡ್ಡಿನಗದ್ದೆ ಮೊದಲಾದೆಡೆಗಳಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಮನೆ, ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಮರಗಿಡಗಳು ಧರಾಶಾಹಿಯಾಗಿದೆ. ಮನೆಗಳ ಹೆಂಚು ಹಾರಿಹೋಗಿರುವುದು, ಮನೆ ಕೊಟ್ಟಿಗೆ ಮೇಲೆ ಮರಬಿದ್ದಿರುವುದು, ಮೆಸ್ಕಾಂ ಕಂಬಗಳ ನೆಲಕ್ಕುರುಳಿರುವುದು ಸೇರಿದಂತೆ ಅಪಾರ ನಷ್ಟ ಸಂಭವಿಸಿದೆ. ಇಂದು ಬೆಳಿಗ್ಗೆ ಮಳೆಯೊಂದಿಗೆ ಬೀಸಿದ ಸುಂಟರಗಾಳಿ ಮನೆ, ಕೊಟ್ಟಿಗೆ, ತೋಟಗಳನ್ನು ಹೊಕ್ಕು ಅಪಾರ ಹಾನಿಯನ್ನುಂಟುಮಾಡಿದೆ. ಗ್ರಾಮಿಣ ಭಾಗವಾದ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಟ್ಟಾಡಿ ಹಾಗೂ ಕೊಳಂಜೆ ಎಂಬಲ್ಲಿ ಕೃಷಿ ತೋಟಕ್ಕೆ ಅಪಾರ ಹಾನಿ ಸಂಭವಿಸಿದೆ. ಕೊಳಂಜೆಯಲ್ಲಿ ಸುಮಾರು ಮೂರೂವರೆ ಎಕರೆ ಕೃಷಿ ಭೂಮಿ ಸುಂಟರಗಾಳಿಯ ತೀವ್ರತೆಗೆ ಧ್ವಂಸವಾಗಿದೆ. ಹಲವಾರು ಮನೆಗಳಿಗೂ ಹಾನಿಯಾಗಿವೆ. ಜಡ್ಡಿನಗದ್ದೆ, ರಟ್ಟಾಡಿ, ಹೊರ್ಲಿಜೆಡ್ಡು ಭಾಗದ ಸುಮಾರು 3000ದಷ್ಟು ಅಡಿಕೆ ಮರಗಳು ನೆಲಕ್ಕುರುಳಿವೆ. ರಟ್ಟಾಡಿಯಲ್ಲಿ ಮರಗಳೂ ಸೇರಿದಂತೆ ತೋಟಗಳಿಗೆ ನುಗ್ಗಿದ ಸುಂಟರಗಾಳಿಯಿಂದಾಗಿ ಕೃಷಿ ನಾಶವಾಗಿದೆ. ಅಲ್ಲದೇ ಮನಗಳ ಮೇಲ್ಛಾವಣಿಗಳೂ ಧರೆಗುರುಳಿವೆ. ಘಟನಾ ಸ್ಥಳಕ್ಕೆ…
