ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮದ ಪ್ರಗತಿಗೆ ಪ್ರತಿಯೊಬ್ಬ ಗ್ರಾಮ ಪಂಚಾಯತ್ ಸದಸ್ಯರು ಶಕ್ತಿಮೀರಿ ಶ್ರಮಿಸಿದ್ದು, ಪಿಡಿಒ ಹಾಗೂ ಸಿಬ್ಬಂದಿಗಳ ಮತ್ತು ಗ್ರಾಮಸ್ಥರ ಸಹಕಾರ ಕೂಡ ಉತ್ತಮವಾಗಿ ದೊರೆತಿದೆ. ಇದರಿಂದಾಗಿ ಕಳೆದ ಐದು ವರ್ಷಗಳಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡುವಂತಾಗಲಿ ಎಂದು ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಶುಭಾಶಂಸನೆಗೈದರು. ಗ್ರಾಪಂ ಪಿಡಿಒ ಉಮಾಶಂಕರ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ರಾಘವೇಂದ್ರ ಪೈ ಮತ್ತು ಅಕ್ಕಮ್ಮ ಅನಿಸಿಕೆ ಹಂಚಿಕೊಂಡರು. ಇದೇ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವ ಧರ್ಮ ಎಲ್ಲಕ್ಕಿಂತಲೂ ಶ್ರೇಷ್ಠವಾಗಿದ್ದು, ಪ್ರತಿಯೊಬ್ಬರೂ ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದ್ವೇಷ ಭಾವನೆ ದೂರೀಕರಿಸಿ ಬದುಕಿರುವಷ್ಟು ದಿನ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಭಾವೈಕ್ಯತೆಯಿಂದ ಬಾಳುವಂತಾಗಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಕಲ್ಲಾಗರ ಹೇಳಿದರು. ಇಲ್ಲಿನ ನಾಕಟ್ಟೆ ಮಸೀದಿ ಆವರಣದಲ್ಲಿ ಜಮೀಯ್ಯತುಲ್ ಫಲಾಹ್ ಬೈಂದೂರು ಘಟಕ ಆಯೋಜಿಸಿದ ಖದೀಜತುಲ್ ಕುಬ್ರಾ ಮಸೀದಿ ಸಹಯೋಗದಲ್ಲಿ ನಡೆದ ’ನಮ್ಮೂರ ಮಸೀದಿ ನೋಡಬನ್ನಿ’ ಎಂಬ ವಿನೂತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೇದ ಓದಿದರೆ ಸಾಲದು ವೇದನೆ ಅರಿಯಬೇಕು. ಅಪನಂಬಿಕೆ, ತಪ್ಪು ಮಾಹಿತಿ ಹಾಗೂ ಅವಿಶ್ವಾಸದಿಂದ ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತಿದೆ. ಬದುಕು ತುಂಬಾ ಚಿಕ್ಕದಾಗಿದ್ದು, ನಾವೆಲ್ಲರೂ ಭಾರತೀಯರು ಎಂಬ ನೆಲೆಯಲ್ಲಿ ಪರಸ್ಪರ ಪ್ರೀತಿ, ನಂಬಿಕೆ, ಸಾಮರಸ್ಯ ಹಾಗೂ ಸಹೋರತ್ವದಿಂದ ನಮ್ಮ ಭಾರತ ದೇಶದಲ್ಲಿ ಸಹಬಾಳ್ವೆ ನಡೆಸುವಂತಾಗಬೇಕು. ಒಂದೊಂದು ಧರ್ಮದಲ್ಲಿ ಒಂದೊಂದು ಆಚರಣೆ, ಸಂಪ್ರದಾಯವಿದ್ದು, ಅನ್ಯ ಧರ್ಮಕ್ಕೂ ನಾವು ಗೌರವಿಸುವ ಭಾವನೆ ನಮ್ಮಲ್ಲಿರಬೇಕು. ಮಂದಿರ, ಮಸೀದಿ, ಚರ್ಚ್ಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ 25 ವರ್ಷಗಳ ಸಂವತ್ಸರಗಳನ್ನ ಪೂರೈಸಿದ ಅಂಗವಾಗಿ ಆಯೋಜಿಸಲಾದ ರಜತ ಮಹೋತ್ಸವದ ಸಮಾರೋಪ ಸಮಾರಂಭವು ಇತ್ತಿಚಿಗೆ ಜರುಗಿತು. ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಾಜಿ ಸಂಪಾದಕರಾದ ಡಾ. ರೊನಾಲ್ಡ್ ಫೆರ್ನಾಂಡಿಸ್ ಕಾರ್ಯಕ್ರಮಕ್ಕೆ ವೈವಿಧ್ಯಮಯವಾಗಿ ಚಾಲನೆ ನೀಡಿ ರೌಪ್ಯೋತ್ಸವದ ನೆನಪಿನಲ್ಲಿ ಸಿದ್ದಗೊಂಡ “ರೌಪ್ಯಯಾನ” ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರನಾರಾಯಣ ತಾಲೂಕು ರಚನಾ ಹೋರಾಟ ಸಮಿತಿಯ ಸಂಚಾಲಕರಾದ ಚಿಟ್ಟೆ ರಾಜಗೋಪಾಲ್ ಹೆಗ್ಡೆ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಪಿ. ಜಗನ್ನಾಥ ಶೆಟ್ಟಿ, ಉಳ್ಳೂರಿನ ಆನಂದ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕರಾದ ಚಂದ್ರಶೇಖರ್ ಶೆಟ್ಟಿ, ಸಂಸ್ಥೆಯ ಸ್ಥಾಪಕ ದ್ವಾಯರಾದ ರೆನೀಟ ಲೋಬೋ ಹಾಗೂ ಶಮಿತ ರಾವ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಯಟ್ ಹಿರಿಯ ಉಪನ್ಯಾಸಕರಾದ ಅಶೋಕ್ ಕಾಮತ್ ವಹಿಸಿದ್ದರು. ಈ ಸಂದರ್ಭ ಸಹಕರಿಸಿದ ಮಹನೀಯರಿಗೆ ಸನ್ಮಾನಿಸಲಾಯಿತು. ಅತಿಥಿಗಳನ್ನು ಬೇಬಿ ಸ್ವಾಗತಿಸಿದರೆ, ಗಣಿತ ಶಿಕ್ಷಕರಾದ ಜಗದೀಶ್ ವಂದಿಸಿದರು. ಇಂಗ್ಲೀಷ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯ ಚುನಾವಣಾಧಿಕಾರಿಗಳ ಕಛೇರಿ, ಬೆಂಗಳೂರು ಮತ್ತು ಚಂದನ ವಾಹಿನಿ (ಡಾ. ನಾ. ಸೋಮೇಶ್ವರ ನೆಡೆಸುವ ಥಟ್ ಅಂತ ಹೇಳಿ) ಜಂಟಿಯಾಗಿ ನಡೆಸಿದ ಚುನಾವಣಾ ರಸಪ್ರಶ್ನೆಯಲ್ಲಿ ಆಲೂರು ಸರಕಾರಿ ಪ್ರೌಢಶಾಲೆಯ ವಿಧ್ಯಾರ್ಥಿಗಳಾದ ಗ್ರೀಷ್ಮ ಮತ್ತು ಪ್ರಜ್ಞಾ ಪ್ರಥಮ ಸ್ಥಾನಿಯಾಗಿದ್ದಾರೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಯು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ 33 ಜಿಲ್ಲೆಗಳ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದ ವಿಧ್ಯಾರ್ಥಿಗಳಾದ ಗ್ರೀಷ್ಮ ಮತ್ತು ಪ್ರಜ್ಞಾ ಅವರನ್ನು ಬೆಂಗಳೂರು ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಚುನಾವಣಾ ಆಯುಕ್ತರಾದ ಮನೋಜ್ ಕುಮಾರ ಮೀನಾ, ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ್ ಗಿರಿನಾಥ್, ಆಪರ ಚುನಾವಣಾ ಆಯುಕ್ತರಾದ ಕೂರ್ಮರಾವ್, ವೆಂಕಟೇಶ ಕುಮಾರ ಉಪಸ್ಥಿತರಿದ್ದರು. ಈ ವಿಧ್ಯಾರ್ಥಿಗಳಿಗೆ ಶಿಕ್ಷಕ ಉದಯಕುಮಾರ ಶೆಟ್ಟಿ ತರಬೇತಿ ನೀಡಿದ್ದರು.ಶಿಕ್ಷಕಿ ಅಮ್ರತಾ ಸಹಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರೀಡೆ ಬದುಕಿನಲ್ಲಿ ನವೋಲ್ಲಾಸವನ್ನು ನೀಡುತ್ತದೆ. ಯುವ ಸಮುದಾಯವು ಶಿಕ್ಷಣದೊಂದಿಗೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಕ್ರೀಯಾಶೀಲರಾಗಿರುವುದು ಬಹುಮುಖ್ಯ ಎಂದು ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಹೆಚ್. ವಸಂತ ಹೆಗ್ಡೆ ಹೇಳಿದರು. ಅವರು ಕಳವಾಡಿಯ ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ನೇತೃತ್ವದಲ್ಲಿ ಆಯೋಜಿಸಲಾದ ಎರಡು ದಿನಗಳ ಕೆಪಿಎಲ್ – 2024 ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿ ಕ್ರಿಕೆಟ್ ಹಲವರ ನೆಚ್ಚಿನ ಕ್ರೀಡೆ. ಪ್ರತಿ ಊರುಗಳಲ್ಲಿಯೂ ಕ್ರಿಕೆಟ್ ಆಯೋಜಿಸುವುದು, ಆ ಮೂಲಕ ಸಂಘಟನಾತ್ಮಕವಾಗಿ ತೊಡಗಿಕೊಳ್ಳುವ ಕಾರ್ಯ ನಡೆಯುತ್ತಿದೆ ಎಂದರು. ಸಂಸ್ಥೆಯ ಅಧ್ಯಕ್ಷ ಪ್ರವೀಣ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಡೆಫ್ ಕ್ರಿಕೆಟ್ತಂಡದ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಹುಂಚನಿ, ಕುಂದಾಪುರ ಚಕ್ರವರ್ತಿ ಕ್ರಿಕೆಟರ್ಸ್ನ ಮನೋಜ್ ನಾಯರ್, ಬೈಂದೂರು ರೈತ ಸಂಘದ ದೀಪಕ್ ಕುಮಾರ್ ಶೆಟ್ಟಿ, ಯಾದಗಿರಿಯ ಕೃಷ್ಣರೆಡ್ಡಿ, ಕಳವಾಡಿ ಮಾರಿಕಾಂಬಾ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರರಾದ ವಸಂತ್ ಶೆಟ್ಟಿ ಕಾರಿಕಟ್ಟೆ, ಸಂಸ್ಥೆಯ ಕಾರ್ಯದರ್ಶಿ ಪೂರ್ಣಚಂದ್ರ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯು ಜ್ಞಾನ ವಾರಿಧಿ ಮತ್ತು ಜ್ಞಾನ ಶರಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ಆಯೋಜಿಸಿರುವ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿಯ ರಿಷಿಕಾ ದೇವಾಡಿಗ ಪ್ರಥಮ ಸ್ಥಾನ ಪಡೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಧರ್ಮಸ್ಥಳದಲ್ಲಿ ನಡೆದ “ಪುರಸ್ಕಾರ ಸಮಾರಂಭದಲ್ಲಿ” ಖ್ಯಾತ ಸಾಹಿತಿ ಡಾ. ವಸಂತ ಭಾರದ್ವಾಜ್ ಕಬ್ಬಿನಾಲೆ ಇವರು ಸನ್ಮಾನಿಸಿದ್ದಾರೆ. ಈಕೆ ಕಳೆದ ವರ್ಷ ನಡೆದ ಇದೇ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಳು. ವಿದ್ಯಾರ್ಥಿಯ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೆತ್ತವರ ಸ್ವಪ್ರತಿಷ್ಠೆಯಿಂದ ಮಕ್ಕಳಿಗೆ ಶಿಕ್ಷಣವೆಂಬುದು ಹೊರೆಯಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಪಂಜರದ ಗಿಣಿಗಳಂತೆ ಪೋಷಿಸಿ ದುಡಿಮೆಗೆ ಸೀಮಿತಗೊಳಿಸಿ ಬೆಳೆಸಿದರೆ ಅವರ ಬದುಕು ನಿಸ್ಸಾರವಾಗುತ್ತದೆ. ಅವರನ್ನು ಸಾಂಸ್ಕೃತಿಕವಾಗಿಯೂ ಸಂಪನ್ನರನ್ನಾಗಿಸಲು ಸಂಗೀತ, ನೃತ್ಯ, ಸಾಹಿತ್ಯದಂತಹ ಕಲೆಗಳಲ್ಲೂ ತೊಡಗಿಸಬೇಕು ಎಂದು ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ಆಶ್ರಯದಲ್ಲಿ ಶನಿವಾರ ನಡೆದ ಸುರಭಿ ಜೈಸಿರಿ ಕಾರ್ಯಕ್ರಮದಲ್ಲಿ ’ಬಿಂದುಶ್ರೀ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಇಂದು ಮನುಷ್ಯನಲ್ಲಿ ಸ್ವಾರ್ಥ ಹೆಚ್ಚುತ್ತಿದೆ ಎಂದು ಒಮ್ಮೊಮ್ಮೆ ಭಾಸವಾಗುತ್ತದೆ. ಆದರೆ ನಾವು ಆಡುವ ಮಾತು ಹಾಗೂ ಮಾಡುವ ಕೆಲಸ ಎರಡೂ ಒಂದೇ ಆಗಿದ್ದರೆ ಮಾತ್ರ ಪ್ರೀತಿ ವಿಶ್ವಾಸದ ಸಮಾಜ ನಿರ್ಮಾಣವಾಗುತ್ತದೆ. ಕಲಾ ಚಟುವಟಿಕೆಗಳು ಅದಕ್ಕೆ ಪೂರಕ ವಾತಾವರಣವನ್ನು ನಿರ್ಮಿಸುತ್ತದೆ ಎಂದರು. ಸಂಗೀತ ಕೇಳುಗರ ಮನಸ್ಸನ್ನು ಅರಳಿಸುತ್ತದೆ. ನಾನು ಸಂಗೀತ ಕಲಿತಿಲ್ಲವಾದರೂ ನನ್ನಲ್ಲಿನ ಆಸಕ್ತಿ ಮತ್ತು ಛಲದಿಂದ ಸಿಕ್ಕ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ಈ ಮಟ್ಟಿಗೆ ಬೆಳಿದಿದ್ದೇನೆ. ಇದಕ್ಕೆ ಅನೇಕ ಹಿರಿಯರ ಮಾರ್ಗದರ್ಶನ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜ.27: ಕುಂದಾಪುರದಲ್ಲಿ ನಡೆದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ವರದಿಗಾಗಿ ತೆರಳಿದ್ದ ಪತ್ರಕರ್ತರನ್ನು ಬಲವಂತವಾಗಿ ಹೊರಕಳುಹಿಸಿದ ಘಟನೆ ನಡೆದಿದ್ದು, ಇದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ. ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಈ ವೇಳೆ ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿ ತಳ್ಳಿದ್ದಾರೆ. ಇದರಿಂದ ಕೆಲ ಹೊತ್ತು ಸಂದಿಗ್ಧತೆ ವಾತಾವರಣ ಸೃಷ್ಟಿಯಾಯಿತು. ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸಹಿತ ಎರಡು ಬ್ಲಾಕ್ ಕಾಂಗ್ರೆಸ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದರು. ಶನಿವಾರ ಕುಂದಾಪುರದ ಆರ್.ಎನ್. ಶೆಟ್ಟಿ ಭವನದಲ್ಲಿ ನಡೆದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಜನರಿಗೆ ಕಾರ್ಯಕರ್ತರು ತಲುಪಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್ ಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು. ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದರು. ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಶೂಲಕ್ಕೆ ತಳ್ಳಿದೆ. ಕೇವಲ 4 ವರ್ಷಗಳಲ್ಲಿ ಸುಮಾರು ಮೂರೂವರೆ ಲಕ್ಷ ಕೋಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಲೆಯೆಂದರೆ ದೇವಸ್ಥಾನದಷ್ಟೇ ಪವಿತ್ರ ಸ್ಥಳ. ಅದರ ಬೆಳವಣಿಗೆಯ ಹಿಂದೆ ಶಿಕ್ಷಕರ ಜೊತೆಗೆ ಊರವರ ಅವಿರತ ಶ್ರಮವಿರುತ್ತೆ. ಎಲ್ಲರನ್ನೂ ಒಳಗೊಂಡು ಸರಕಾರಿ ಶಾಲೆಯ ಗುಣಮಟ್ಟ ಕಾಯ್ದುಕೊಳ್ಳುವುದು ಇಂದಿನ ಅಗತ್ಯ ಎಂದು ಬೈಂದೂರು ಬಿಐಇಆರ್ಟಿ ನಾಗರತ್ನ ಹೇಳಿದರು. ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಮತ್ತು ಚಿಣ್ಣರ ಸಂಭಮ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಅವರು ಮಾತನಾಡಿ, ಕನ್ನಡ ಮಾಧ್ಯಮ ಇಂಗ್ಲೀಷ್ ಮಾಧ್ಯಮ ಶಾಲೆಗಳೆಂಬ ಭೇದಭಾವ ಮಾಡದೇ, ಗುಣಾತ್ಮಕ ಶಿಕ್ಷಣದ ಬಗ್ಗೆ ಪೋಷಕರು ಗಮನಹರಿಸಬೇಕಿದೆ. ಸರಕಾರಿ ಶಾಲೆಗಳಲ್ಲಿ ಕಲಿತು ಉನ್ನತ ಹುದ್ದೆಗೇರಿದ ಸಾವಿರಾರು ಉದಾಹರಣೆಗಳಿವೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ಮಾಹದೇವ ಬಿಲ್ಲವ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ತಗ್ಗರ್ಸೆ ಶಾಲೆ, ಶತಮಾನದ ಹೊಸ್ತಿಲಿನಲ್ಲಿದೆ. ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವನ್ನು ಒಗ್ಗಟ್ಟಾಗಿ ಶತಮಾನೋತ್ಸವವನ್ನು ಆಚರಿಸಬೇಕಿದೆ ಎಂದರು. ಬೈಂದೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ…
