ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್ ಜೀವನ್ ಮಿಷನ್ ಯೋಜನೆಯಡಿ ನಿಗದಿಯಾಗಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಪ್ರತಿ ಮನೆಗೂ ನೀರಿನ ಸಂಪರ್ಕ ಒದಗಿಸಿ ಶೇ. 100 ರಷ್ಟು ಪ್ರಗತಿ ದಾಖಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಹೇಳಿದರು. ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕುಡಿಯುವ ನೀರಿನ ಗುಣಮಟ್ಟ ಮೇಲ್ವಿಚಾರಣೆಯ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಕಳ ಮತ್ತು ಕುಂದಾಪುರ ವ್ಯಾಪ್ತಿಯಲ್ಲಿ ಮೀಸಲು ಮತ್ತು ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಮತ್ತು ಓವರ್ ಹೆಡ್ ಟ್ಯಾಂಕ್ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ಅನುಮತಿಯ ಅಗತ್ಯವಿದ್ದು, ಅರಣ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದು ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸಬೇಕು. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ನಳ್ಳಿ ನೀರಿನ ಸಂಪರ್ಕಗಳ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಕಾರ್ಯಧ್ಯಕ್ಷ ಕರ್ನಾಟಕ ಸರಕಾರದ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಇವರ ಆಪ್ತ ಸಹಾಯಕ ರಾಜಶೇಖರ ಮೆಣಸಿನಕಾಯಿ ಹಾಗೂ ಕರ್ನಾಟಕ ಜಂಗಮ ಕ್ಷೇಮಭಿವೃದ್ಧಿ ಮಹಾಸಭಾದ ರಾಜ್ಯಾಧ್ಯಕ್ಷ ಬಂಗಾರೇಶ್ ಹಿರೇಮಠ್, ಕೆಪಿಸಿಸಿ ಪದಾಧಿಕಾರಿ ಸುರೇಶ ಸವಣೂರ, ಬಾಂಡ್ ಉದ್ಯಮಿ ರಫೀಕ್ ದೊಡ್ಡಮನಿ ಭೇಟಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೊದಿಸಿ ದೇವಿಯ ಪ್ರಸಾದವನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಬ್ರಾಯ ಜೋಗಿ, ಸುಧಾ ಎ. ಪೂಜಾರಿ, ಸುಭಾಸ್ ಶೆಟ್ಟಿ, ಗಣೇಶ್ ಕೆ ನೆಲ್ಲಿಬೆಟ್ಟು, ಜ್ಯೋತಿ ಡಿ ಕಾಂಚನ್, ರತನ್ ಐತಾಳ್, ಕಾಂಗ್ರೆಸ್ ಮುಖಂಡರಾದ ಉಣಕಲ್ ಪ್ರಕಾಶ್ ಶೆಟ್ಟಿ, ಅಪ್ಪಣ್ಣ ಕಮ್ಮಾರ, ಸೂರ್ಯಕಾಂತ್ ಗೋಡ್ಕೆ ಹಾಗೂ ದೇವಸ್ಥಾನದ ವ್ಯವಸ್ಥಾಪಕ ಗಣೇಶ್ ಹೊಳ್ಳ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ. ವಿಭಾಗ ವತಿಯಿಂದ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯೂರಿಟೀಸ್ ಮಾರ್ಕೆಟ್ಸ್ ಸಹಯೋಗದೊಂದಿಗೆ ಫೈನಾನ್ಸಿಯಲ್ ಪ್ಲಾನಿಂಗ್ ಫಾರ್ ಯಂಗ್ ಪ್ರೊಫೆಷನಲ್ ಬಿಲ್ಡಿಂಗ್ ಎ ಸ್ಟ್ರಾಂಗ್ ಫೌಂಡೇಶನ್ ಎಂಬ ವಿಷಯದ ಬಗ್ಗೆ ಎರಡು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಸ್ಟಿವನ್ ರಾಬರ್ಟ್ ಟೆಲ್ಲಿಸ್, ಸೆ.ಬಿ ಸ್ಮಾರ್ಟ್ ಟ್ರೈನರ್ ಇವರು ಆಗಮಿಸಿ ವಿವಿಧ ಹೂಡಿಕೆಗಳ ಬಗ್ಗೆ ಅರಿವು ಮೂಡಿಸಿದರು. ಮೊದಲು ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ರೂಪಿಸಿಕೊಳ್ಳಬೇಕು, ಈ ಗುರಿಯನ್ನು ಹೇಗೆ ನಿರ್ಧರಿಸಬೇಕು ಹಾಗೆ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿ ಉಳಿತಾಯ ಮಾಡಿ ಈ ಉಳಿತಾಯವನ್ನು ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಕೆಯ ವಿವಿಧ ಸ್ತರಗಳನ್ನು ತಿಳಿಸಿದರು. ಮ್ಯೂಚುವಲ್ ಫಂಡ್, ಇಕ್ವಿಟಿ, ಡಿರಾವೇಟಿವ್ ಹಾಗೂ ಕಮೋಡಿಟಿ ಮಾರುಕಟ್ಟೆಗಳ ಬಗ್ಗೆ ತಿಳಿಸಿದರು. ಇದರ ಜೊತೆಗೆ ರಿಯಲ್ ಟ್ರೇಡಿಂಗ್ ಮಾಡಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಹೂಡಿಕೆಯ ಬಗ್ಗೆ ಆಸಕ್ತಿ ಮೂಡಿಸಿದರು. ಈ ಕಾರ್ಯಗಾರದಲ್ಲಿ ಎಂಐಟಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲೆ, ಕಾಲೇಜು ಬಸ್ಸಿಗೆ ಹೊಸ ವಿಮೆ ಪಾಲಿಸಿ ಮಾಡಿಸುವುದಾಗಿ ಹಣ ಪಡೆದು ನಕಲಿ ವಿಮೆ ಮಾಡಿಸಿ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೋಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ರಾಕೇಶ ಎಸ್., ಹಾಗೂ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು. ಘಟನೆಯ ವಿವರ:ಕುಂದಾಪುರ ತಾಲೂಕಿನ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕೋಟ ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಕುಂದಾಪುರ ಸೆಷನ್ಸ್ ನ್ಯಾಯಾಲಯದ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕರಾದ ಉದಯ ಶೆಟ್ಟಿ ಎಂಬುವರು ವಿಮಾ ಪರಿಹಾರವಾಗಿ ರೂ, 15,95,000/- ಕೋರಿಕೊಂಡಿರುತ್ತಾರೆ. ಸದ್ರಿ ಪ್ರಕರಣವನ್ನು ವಿಮಾ ಕಂಪೆನಿಯವರು ಪರಿಶೀಲಿಸಲಾಗಿ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ವಿಮಾ ಪಾಲಿಸಿಯಾಗಿರುವುದು ಕಂಡುಬಂದಿರುತ್ತದೆ. ಆರೋಪಿಯು ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗದ ಅಧ್ಯಕ್ಷರಾಗಿ ಜಿ. ಗೋಪಾಲ ಪೂಜಾರಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಉದ್ಘಾಟನಾ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಗೋಪಾಲ ಚಂದನ್, ಉಪಾಧ್ಯಕ್ಷರಾಗಿ ಸುಜಾತ ಕಾಂತು, ಬಾಬು ಖಾರ್ವಿ ಮತ್ತು ಮಮತಾ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಹರ್ಷೇಂದ್ರ ಆಚಾರ್ಯ, ಕಾರ್ಯದರ್ಶಿಯಾಗಿ ಕಾರ್ತಿಕ್ ಬಿ. ಖಾರ್ವಿ, ಜೊತೆ ಕಾರ್ಯದರ್ಶಿಗಳಾದ ಮಹೇಶ್ ಶೇಟ್ ಮತ್ತು ರಾಘವೇಂದ್ರ ಬಿ., ಕೋಶಾಧಿಕಾರಿಗಳಾಗಿ ನರೇಂದ್ರ ಎಸ್. ಗಂಗೊಳ್ಳಿ, ಸಂಘಟನಾ ಕಾರ್ಯದರ್ಶಿ ಆನಂದ ಬಿಲ್ಲವ, ಕ್ರೀಡಾ ಕಾರ್ಯದರ್ಶಿ ಶರಣ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಗಳಾದ ಗಣೇಶ್ ಪಡಿಯಾರ್ ಮತ್ತು ನಾಗಭೂಷಣ್ ಶೇಟ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ಎನ್. ಡಿ., ಲೆಕ್ಕಪರಿಶೋಧಕರಾಗಿ ದೀಕ್ಷಿತ್ ಮೇಸ್ತ, ಸಲಹೆಗಾರರಾಗಿ ಡಾ. ವೀಣಾ ಕಾರಂತ್, ಸದಸ್ಯರಾಗಿ ರಘುನಾಥ ಪೂಜಾರಿ, ಶೈಲಜಾ ಪೂಜಾರಿ, ವಿನೋದಾ ದೇವಾಡಿಗ, ನಿತ್ಯಾನಂದ ದೇವಾಡಿಗ, ಸಂದೇಶ್, ವೈಷ್ಣವಿ ಗೋಪಾಲ್, ವಿಜಯ ಖಾರ್ವಿ, ಈಶ್ವರ್ ಗಂಗೊಳ್ಳಿ ಮತ್ತು ಅಭಿಷೇಕ್ ಗಾಣಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್, ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಜೆಸಿಐ ಕೋಟ ಸಿನಿಯರ್ ಲಿಜನ್ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಸಂಯೋಜನೆಯೊಂದಿಗೆ 274ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಕೋಟ ರಾಷ್ಟ್ರೀಯ ಹೆದ್ದಾರಿ ಹರ್ತಟ್ಟು ಭಾಗವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಕಾರ್ಯಕ್ರಮ ಜರಗಿತು. ಸುಮಾರು ಒಂದು ಕಿಮೀ ಹೈವೇ ಎಂಬಾಕ್ ಮೆಂಟ್ ಆಸುಪಾಸು ಸ್ವಚ್ಛಗೊಳಿಸಿ ಸುಮಾರು 20ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯ ಅಜಿತ್ ದೇವಾಡಿಗ,ಎಸ್ಎಲ್ಆರ್ಎಂ ಘಟಕದ ಮುಖ್ಯಸ್ಥೆ ಭವ್ಯ ಸಹಕಾರ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಜೆಸಿಐ ಕೋಟ ಸಿನಿಯರ್ ಲಿಜನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ತಗ್ಗರ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾದ ಮಾಲತಿ ಹಾಗೂ ಗಣೇಶ ಬಿಲ್ಲವ ಮತ್ತು ಕೋಶಾಧಿಕಾರಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಾಲಯದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಚಂಡಿಕಾ ಹವನ ಸೇವೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ನಡೆಯಿತು. ಮಧ್ಯಾಹ್ನ ಯಾಗದ ಪೂರ್ಣಹುತಿ, ಮಧ್ಯಾಹ್ನ ಪೂಜೆ, ದೇವಿಗೆ ಬಂದ ಹರಕೆಯ ಸೀರೆಗಳ ಏಲಂ, ಮಹಾಸಮಾರಾಧನೆ ಸೇವೆ, ಸಂಜೆ ರಜತ ಪಲ್ಲಕ್ಕಿ ಉತ್ಸವ, ಭಜನಾ ಕಾರ್ಯಕ್ರಮ ಮೊದಲಾದ ಧಾರ್ಮಿಕ ಸಂಪನ್ನಗೊಂಡಿತು. ದೇವಸ್ಥಾನದ ಅರ್ಚಕರು, ಪುರೋಹಿತರು, ಆಡಳಿತ ಧರ್ಮದರ್ಶಿ ಮಂಡಳಿ ಸದಸ್ಯರು, ಸಮಾಜಬಾಂಧವರು, ಕುಳಾವಿ ಭಜಕರು, ಭಕ್ತಾದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬಲ್ಮಟದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಗೊಂದು ಮರ ಊರಿಗೊಂದು ವನ ಎಂಬ ನಾಣ್ಣುಡಿಯಂತೆ ಭಾನುವಾರ ಮೊಗವೀರ ಸಂಘದ ಮಾರ್ಗದರ್ಶಕರಾದ ನಾಡೋಜ ಡಾ. ಜಿ ಶಂಕರ್ ಅವರ 70ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮೊಗವೀರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ವಿನೂತನವಾಗಿ ಮನೆಮನೆಗೂ ಹಸಿರು ಕಾರ್ಯಕ್ರಮದಡಿ ಮನೆಗೊಂದು ಸಸಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಸಂಘಟನೆಯ ಕಾರ್ಯಕರ್ತರಾದ ಜಗದೀಶ್ ಮೇಸ್ತ್ರಿ ಅವರ ಮನೆಯಲ್ಲಿ ಗಿಡ ನೆಡುವುದರ ಮೂಲಕ ಚಾಲನೆ ನೀಡಲಾಯಿತು. ನಂತರ ತಂಡವಾಗಿ ವಿವಿದೆಡೆ ಮನೆಮನೆಗೆ ಭೇಟಿ ನೀಡಿ 70ರ ಹುಟ್ಟುಹಬ್ಬದ ನೆನಪಿಗಾಗಿ 70 ಮನೆಗಳಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು. ಇದೇ ವೇಳೆ ಸ್ಥಳೀಯವಾಗಿ ಅಶಕ್ತರಿಗೆ ಮನೆಗಳಿಗೆ ತೆರಳಿ ಅನಾರೋಗ್ಯಕ್ಕೆ ತುತ್ತಾದವರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಲಾಯಿತು. ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷರಾದ ರಾಘವೇಂದ್ರ ಹರಪ್ಪನಕೆರೆ ಅಧ್ಯಕ್ಷೆತೆಯಲ್ಲಿ ಈ ಕಾರ್ಯಕ್ರಮ ಜರಗಿತು. ಸಂಘದ ಕೋಟೇಶ್ವರ ಘಟಕದ ಸ್ಥಾಪಕ ಅಧ್ಯಕ್ಷ ಸತೀಶ್…
