Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿದ್ದಿವಿನಾಯಕ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕೋಣಿ ಎಂಬಲ್ಲಿ ನಡೆದಿದೆ. ಸತೀಶ್ ಪೂಜಾರಿ ಎಂಬವರ ಪುತ್ರ, ಮನೀಷ (14) ಮೃತಪಟ್ಟ ಬಾಲಕ. ನ.6ರಂದು ಸಂಜೆ ಶಾಲೆಯಿಂದ ಮನೆಗೆ ಬಂದ ಮನೀಷ ಬಳಿಕ ನಾಪತ್ತೆಯಾಗಿದ್ದ. ಮನೆ ಸಮೀಪದ ಬಾವಿಯಲ್ಲಿ ಶಬ್ದ ಕೇಳಿಸಿದ್ದು, ನೋಡಿದಾಗ ಮನೀಷ ಕೆರೆಗೆ ಬಿದ್ದಿರುವುದು ತಿಳಿದು ಬಂದಿದೆ. ತಕ್ಷಣ ಅಗ್ನಿಶಾಮಕದಳದವರು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಬಾಲಕ ಮೃತಪಟ್ಟಿದ್ದ. ಬಾವಿ ದಂಡೆ ಮೇಲೆ ಕುಳಿತಿದ್ದ ಮನೀಷ ಆಕಸ್ಮಿಕವಾಗಿ ಬಿದ್ದನೇ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘದಿಂದ ಆರಂಭಗೊಂಡ ಕ್ಷೀರ ಸಂಜೀವಿನಿಯಿಂದ ಹೈನುಗಾರಿಕೆ ಹೆಚ್ಚಿನ ಬಲ ಸಿಗಲಿದೆ ಎಂದು ಕೆ.ಎಂ.ಎಫ್ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಪ್ರಾಂಗಣದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ವಿನೂತನ ಕ್ಷೀರ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಹೈನುಗಾರಿಕೆ ಕರಾವಳಿ ಭಾಗದಲ್ಲಿ ಕ್ಷೀಣಿಸುತ್ತಿರುವ ಕಾಲಘಟ್ಟದಲ್ಲಿ ಈ ಯೋಜನೆ ತುಂಬಾ ಸಹಕಾರಿಯಾಗಲಿದೆ. ಇದೊಂದು ಸಹಕಾರಿ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆಯಲಿದೆ ಎಂದರು. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕ ಐಕಳದ ಬಾವ ದೇವಿ ಪ್ರಸಾದ ಶೆಟ್ಟಿ ಮಾತನಾಡಿ, ಸಹಕಾರಿ ಚರಿತ್ರೆಯಲ್ಲಿ ಕೋಟ ಸಹಕಾರಿ ಸಂಘ ಹೊಸ ಹೊಸ ಯೋಜನೆಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ,ಹೈನುಗಾರಿಕೆ ಇಂದು ಉದ್ಯಮ ರೀತಿಯಲ್ಲಿ ಪರಿವರ್ತನೆಗೊಳ್ಳುತ್ತಿದೆ, ಹಾಲಿಗೆ ಕನಿಷ್ಟಪಕ್ಷ ಲೀ.50ರೂ ಸಿಕ್ಕರೆ ಹೈನುಗಾರಿಕೆಗೆ ಮತ್ತಷ್ಟು ಬಲ ಸಿಗಲಿದೆ ಎಂದು ಕೋಟ ಸಂಘದ ಈ ಯೋಜನೆಯನ್ನು ಕೊಂಡಾಡಿದರು. ಪ್ರಾರಂಭದಲ್ಲಿ ತಮಿಳುನಾಡಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮರವಂತೆಯ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆಯ ಹತ್ತು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕೆ ಆಯ್ಕೆಯಾಗಿದ್ದಾರೆ. ಶೀವತ್ಸ ಡಿಸ್ಕಸ್ ತ್ರೊನಲ್ಲಿ ಪ್ರಥಮ, ಗುಂಡು ಎಸೆತ ದ್ವಿತೀಯ, ಸಾತ್ವಿಕ ಎಂಬತ್ತು ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ, ಶಿವರಾಜ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ, ಶಾಹಿದ್ ನೂರು ಮೀಟರ್ ಓಟದಲ್ಲಿ ದ್ವಿತೀಯ, ಬಿಲಾಲ್ ಹ್ಯಾಮರ್ ಎಸೆತದಲ್ಲಿ ಪ್ರಥಮ, ಸಾಕೇತ ಐದು ಕಿಲೋಮೀಟರ್ ನಡಿಗೆ ಪ್ರಥಮ, ಆರ್ಚನಾ ಮೂರು ಸಾವಿರ ಮೀಟರ್ ಓಟ ಪ್ರಥಮ, ಮೇಘನಾ ನಾಲ್ಕು ನೂರು ಮೀಟರ್ ರಿಲೇ ಪ್ರಥಮ, ರಿತ್ವಿ ನಾಲ್ಕು ನೂರು ಮೀಟರ್ ರಿಲೇ ಪ್ರಥಮ, ದೀಪಿಕಾ ನಾಲ್ಕು ನೂರು ಮೀಟರ್ ರಿಲೇ ಪ್ರಥಮ, ಅನ್ವಿತಾ ನಾಲ್ಕು ನೂರು ಮೀಟರ್ ರಿಲೇ ತ್ರತೀಯ, ಶಿವರಾಜ ನಾಲ್ಕು ನೂರು ಮೀಟರ್ ರಿಲೇ ತೃತೀಯ, ಸುಜನ ನಾಲ್ಕು ನೂರು ಮೀಟರ್ ರಿಲೇ ತೃತೀಯ, ಆರಾನ್ ನಾಲ್ಕು ನೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಸುಮಂತ್ ಕುಮಾರ್ ಬಿ. ಶೆಟ್ಟಿ, ರವಿಶಂಕರ್, ರಜತ್ ಭಟ್, ಚಂದನ್, ಸತ್ಯರಾಜ್, ಯಶಸ್ವಿನಿ ಹೆಚ್., ರಿಯಾನ ಕ್ರಿಸ್ಟಲ್ ಪಿಂಟೋ, ಕೃತಿ, ರಾಘವ, ಸುಮೇದಾ, ರಚನಾ ಡಿ ಭಟ್, ಸರ್ವೇಶ್, ನಿಖಿತಾ ಗೌಡ ಅವರು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ.   ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಚಲವಾದ ಛಲ, ಆತ್ಮ ವಿಶ್ವಾಸವಿದ್ದರೆ ಒಬ್ಬ ಕ್ರೀಡಾಪಟು ಅತ್ಯುತ್ತಮ ಸಾಧನೆ ಮಾಡಿ ಕ್ರೀಡೆಗಳಿಂದ ಬದುಕು ಕಟ್ಟಿಕೊಳ್ಳುಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಘ್ರನ್ಮೇಶ್ ಅಭಿಪ್ರಾಯಿಸಿದರು. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಬಾಕ್ಸಿoಗ್ ಪಂದ್ಯಾಟದ ಮುಖ್ಯ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಕ್ರೀಡೆಯಿಂದ ಆರೋಗ್ಯವಂತರಾಗಿ ಎಂದು ಶುಭ ಹಾರೈಸಿದರು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೈಹಿಕ ಬಲವರ್ಧನೆ ಗಾಗಿ ಕ್ರೀಡೆಗಳ ಪಾತ್ರ ಅತ್ಯಮೂಲ್ಯವಾದುದು. ಏಕತೆ ಮತ್ತು ಐಕ್ಯತೆ ಸಾರಿ ನಾವೆಲ್ಲಾ ಒಂದೆ ಎಂಬ ಭಾವನೆ ಮೂಡಿಸುತ್ತದೆ.ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 17ರ ವಯೋಮಿತಿಯ ಬಾಲಕ ಬಾಲಕಿಯರ ಕರ್ನಾಟಕ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯು ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. 17ರ ವಯೋಮಿತಿಯ ಹುಡುಗಿಯರ ವಿಭಾಗದಲ್ಲಿ ಪಾವನಿ ಆರ್. ದ್ವಿತೀಯ ಸ್ಥಾನ, ಪ್ರಕೃತಿ ಪಿ. ಶೆಟ್ಟಿ ತೃತೀಯ ಸ್ಥಾನ, ಹುಡುಗರ ವಿಭಾಗದಲ್ಲಿ ವೈಭವ್ ಸಂಗನಭ ಶೆಟ್ಟರ್ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ತಿಂಗಳು ನವೆಂಬರ್ 25, 26 ರಂದು ತ್ರಿಪುರದಲ್ಲಿ ನಡೆಯುವ ರಾಷ್ಟ್ರ ಮಟ್ಟದಲ್ಲಿ ತ್ರಿವಳಿ ಪ್ರಶಸ್ತಿ ವಿಜೇತರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅವರು ಕಶ್ಚಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ ಚೆಸ್ ತರಬೇತಿ ಪಡೆದಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗ್ರಾಮೀಣ ಒಳಭಾಗದಲ್ಲಿ ಆರೋಗ್ಯ ಕೇಂದ್ರಗಳ ಅಗತ್ಯತೆ ಇದ್ದು ಈ ನಿಟ್ಟಿನಲ್ಲಿ ಆಯುಷ್ಮಾನ್ ಆರೋಗ್ಯ ಉಪಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟತಟ್ಟು ಪಡುಕರೆಯಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಆಯುಷ್ಮಾನ್ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸಗೈದು ಮಾತನಾಡಿದರು. ಜನಸಾಮಾನ್ಯರ ಆರೋಗ್ಯದ ಬಗ್ಗೆ ಸರಕಾರ ಸದಾ ಕಾಳಜಿ ವಹಿಸುತ್ತಿದ್ದು, ಸ್ಥಳೀಯಾಡಳಿತ ಮುತುವರ್ಜಿಯಲ್ಲಿ ಉಪಕೇಂದ್ರ ನಿರ್ವಹಣೆ ನಮ್ಮ ಕ್ಲಿನಿಕ್ ಆಗಿ ಪರಿವರ್ತನೆಗೊಳ್ಳಲಿ ಎಂದು ಹಾರೈಸಿದರು. ಕೋಟತಟ್ಟು ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ. ಕುಂದರ್, ಮನೋವೈದ್ಯ ಡಾ. ಪ್ರಕಾಶ್ ಸಿ. ತೋಳಾರ್, ಕೋಟ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಮಾಧವ ಪೈ, ಕೋಟತಟ್ಟು ಪಂಚಾಯತ್ ಉಪಾಧ್ಯಕ್ಷೆ ಸರಸ್ವತಿ ಪೂಜಾರಿ, ಸ್ಥಳೀಯರಾದ ಅಬ್ದುಲ್ ಖಾದರ್, ಪಂಚಾಯತ್ ಸದಸ್ಯರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನೇತಾಜಿ ಸುಭಾಶ್ಚಂದ್ರ ಸರ್ಕಾರಿ ಪ್ರೌಢಶಾಲೆ ಮರವಂತೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ವಿದ್ಯಾರ್ಥಿಗಳು ಅಪ್ರತಿಮ ಸಾಧನೆಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದ 100ಮೀ ಓಟದ ಸ್ಪರ್ಧೆಯಲ್ಲಿ ಹೃತಿಕ್ (1೦ನೇ ತರಗತಿ) ಚಿನ್ನದ ಪದಕ, ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕಿಯರ ತ್ರಿವಿದ ಜಿಗಿತ ಸ್ಪರ್ಧೆಯಲ್ಲಿ ಶ್ರೀರಕ್ಷಾ (10ನೇ ತರಗತಿ) ಚಿನ್ನದ ಪದಕ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯಮಾನದ ಹುಡುಗಿಯರ ಚಕ್ರ ಎಸೆತ ಮತ್ತು ಗುಂಡು ಎಸೆತ ಸ್ಪರ್ಧಿಗಳಲ್ಲಿ ಶರಣ್ಯ (9ನೇ ತರಗತಿ) ಬೆಳ್ಳಿಯ ಪದಕ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . 14ರ ವಯೋಮಾನದ ಬಾಲಕರ ವಿಭಾಗದ ರಿಲೆ ಸ್ಪರ್ಧೆ ಯಲ್ಲಿ ರಜತ್ ಎಲ್ ಪಿ, ಅಬ್ದುಲ್ ಶಯನ್ ,ಪ್ರೀತಮ್, ತನ್ವೀರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ  ಅಂತಿಮ ಬಿ.ಕಾಂ ವಿದ್ಯಾರ್ಥಿನಿಯಾದ ನಯನ ಎಂ. ನಾಯ್ಕ್ ಅವರು ಕ್ರೀಡಾ ಕ್ಷೇತ್ರದಲ್ಲಿ ಗಳಿಸಿದ  ವಿಶಿಷ್ಟ ಸಾಧನೆಗೆ ’ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದಿರುತ್ತಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ಸಿಬ್ಬಂಧಿವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಕೋಟಿಲಿಂಗೇಶ್ವರ ದೇವಸ್ಥಾನ, ಕೋಟೇಶ್ವರ ಇದರ ದೇವಸ್ಥಾನ ಕೆರೆಯ ಸ್ವಚ್ಛತಾ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ದೇವಸ್ಥಾನಕ್ಕೆ ಆಗಮಿಸಿದ್ದ ತೆಲುಗು ಚಿತ್ರ ನಟ ಶ್ರೀಕಾಂತ್ ಅವರು ಈ ಶ್ರಮದಾನವನ್ನು ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ .ಎಂ. ಗೊಂಡ ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ  ಅರುಣ್ ಎ.ಎಸ್. ಹಾಗೂ ರಾಮಚಂದ್ರ ಆಚಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 75 ಏನ್ ಎಸ್ ಎಸ್ ವಿದ್ಯಾರ್ಥಿಗಳು ದೇವಸ್ಥಾನದ ಕೆರೆಯ ಪರಿಸರವನ್ನು ಸ್ವಚ್ಛಗೊಳಿಸಿದರು.

Read More