ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: 14 ವಯೋಮಾನದ ಬಾಲಕರ ಕಬಡ್ಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ ತಂಡ ಹೋಬಳಿ, ತಾಲೂಕು ಜಿಲ್ಲೆಯಲ್ಲಿ ತನ್ನ ತಂಡದ ಬಲಿಷ್ಠತೆಯನ್ನು ಪ್ರಚುರ ಪಡಿಸುತ್ತಾ ದೊಡ್ಡ ಅಂತರದೊಂದಿಗೆ ಉಳಿದ ತಂಡಗಳನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿತ್ತು. ಅ.15ರಿಂದ 17ರ ವರೆಗೆ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ತಂಡ ತೃತೀಯ ಸ್ಥಾನ ಪಡೆಯುವುದರೊಂದಿಗೆ ಶಾಲೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತದೆ. ಕ್ರೀಡಾ ಸ್ಪೂರ್ತಿ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮದಿಂದ ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ಅವರ ಗರಡಿಯಲ್ಲಿ ತಯಾರಾದ ಕುಮಾರ ರೋಹಿತ್ ನಾಯಕತ್ವದ ತಂಡ ಪ್ರಥಮ ಪಂದ್ಯಾಟದಲ್ಲಿ ಮೈಸೂರಿನ ವಿರುದ್ಧ 40-08ರ ದೊಡ್ಡ ಅಂತರದಲ್ಲಿ ಜಯಶಾಲಿಯಾಗಿ ಸೆಮಿಫೈನಲ್ ಹಂತ ತಲುಪಿತ್ತು. ಸೆಮಿಫೈನಲ್ನಲ್ಲಿ ಮಂಡ್ಯದ ವಿರುದ್ಧ ಕೇವಲ 08 ಅಂಕಗಳ ಅಂತರದಲ್ಲಿ ವಿರೋಚಿತ ಸೋಲನ್ನು ಅನುಭವಿಸಿತು. ಮೂರನೇ ಸ್ಥಾನಕ್ಕಾಗಿ ಹಾಸನ ತಂಡದ ವಿರುದ್ಧ ನಡೆದ ಪಂದ್ಯಾಟದಲ್ಲಿ 45-21ರ ಅಂತರದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮತದಾರರು ಕೂಡ ಕಾಂಗ್ರೆಸ್ ಪಕ್ಷದ ಯೋಜನೆಗಳ ಬಗ್ಗೆ ವಿಶ್ವಾಸವಿಟ್ಟಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕೈ ಬಿಡುವುದಿಲ್ಲ. ಪ್ರತಿ ಪಂಚಾಯತಿಗೆ ಎರಡು ಕೋಟಿ ಅನುದಾನ ತರಲು ಉದ್ಯೋಗ ಖಾತ್ರಿ ಸಹಕಾರಿಯಾಗಿದೆ. ಇದನ್ನು ಜಾರಿಗೆ ತಂದ ಶ್ರೇಯಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಇಂಡಿಯನ್ ರೆಡ್ ಕ್ರಾಸ್, ಲಯನ್ಸ್ ಕ್ಲಬ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್ ಲಿಮಿಟೆಡ್, ರೆಡ್ ರಿಬ್ಬನ್ ಕ್ಲಬ್ ಕುಂದಾಪುರ, ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ನೌಕಾದಳ ಮತ್ತು ಭೂದಳ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಶನಿವಾರದಂದು ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಅವರು ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯದ ನೆಲೆಯಲ್ಲಿ ರಕ್ತದಾನ ಒಳ್ಳೆಯದು. ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಅಲ್ಲದೆ ರಕ್ತದಾನ ಪ್ರಕ್ರಿಯೆ ಯಲ್ಲಿ ನಿಮ್ಮ ರಕ್ತದಲ್ಲಿ ಮಲೇರಿಯಾ, ಹೆಪಾಟೈಟಿಸ್ ಹೀಗೆ ಬೇರೆ ಬೇರೆ ಪರೀಕ್ಷೆ ನಡೆಯುತ್ತದೆ. ಇದರಿಂದ ನಿಮಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರದ ಭಾರತೀಯ ರೆಡ್ ಕ್ರಾಸ್ ಸಭಾಪತಿಗಳಾದ ಜಯಕರ ಶೆಟ್ಟಿ ಕೋಶಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ಮತ್ತು ವಿಜ್ಞಾನ ವಿಭಾಗದ ಆಶ್ರಯದಲ್ಲಿ ವಿಭಾಗದ ಅಂತಿಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಗೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಮತ್ತಿತರ ಆಧುನಿಕ ತಂತ್ರಜ್ಞಾನಗಳ ಕುರಿತು ಮಾಹಿತಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ವಿಭಾಗದ ಪ್ರಾಧ್ಯಾಪಕರುಗಳಾದ ವಿಲ್ಮಾ, ಹರೀಶ್ ಕಾಂಚನ್, ಶ್ರೀಕಾಂತ್, ಮೇಘಾ ಮತ್ತು ನಿರ್ಮಲಾ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಹಯೋಗದೊಂದಿಗೆ ನಡೆಯುತ್ತಿರುವ ಲೇಕ್ 2024 – 14ನೇ ದ್ವೈವಾರ್ಷಿಕ ವಿಚಾರ ಸಂಕಿರಣ ಎರಡನೇ ದಿನ ಒಟ್ಟು ತಾಂತ್ರಿಕ ಅವಧಿಯಲ್ಲಿ ನಗರ ವಿಭಾಗದ ಆರರಿಂದ ಒಂಬತ್ತನೇ ತರಗತಿಯ 83 ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ವಿಭಾಗದಿಂದ 45 ವಿದ್ಯಾರ್ಥಿಗಳ ಪ್ರಸ್ತುತಿ, 21 ಸಂಶೋಧಕರು ಮತ್ತು ಅಧ್ಯಾಪಕರಿಂದ ಪ್ರಸ್ತುತಿ, ಹತ್ತರಿಂದ ಹನ್ನೆರಡನೇ ತರಗತಿಯ 32 ವಿದ್ಯಾರ್ಥಿಗಳ ಪ್ರಸ್ತುತಿ, ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳಿಂದ ಒಟ್ಟು 38 ಜನರ ವಿಚಾರ ಮಂಡನೆ ಕಾಲೇಜಿನ ವಿವಿಧ ಸಭಾಂಗಣದಲ್ಲಿ ನಡೆಯಿತು. ಜೊತೆಯಲ್ಲಿ, ಎಲ್ಲಾ ವರ್ಗಗಳಲ್ಲಿ ಒಟ್ಟು 63 ಸಂಶೋಧನಾ ಆಸಕ್ತರು ಪೋಸ್ಟರ್ ಪ್ರಸ್ತುತಿಯಲ್ಲಿ ಭಾಗಿಯಾದರು. ಮೈಕ್ರೋ ಪ್ಲಾಸ್ಟಿಕ್ ಕಾರಣಅಂತರರಾಷ್ಟ್ರೀಯ ಸಂಶೋಧನಾ ಪ್ರಸ್ತುತಿಯಲ್ಲಿ ರಷ್ಯಾದ ನಿಕೋಲಾಯ್ ಫಿಲೆಟೊವ್- ಹವಾಮಾನ ತಾಪಮಾನ ಮತ್ತು ಮಾನವಜನ್ಯ ಪರಿಣಾಮಗಳು: ರಷ್ಯಾದ ಕೆರೆಗಳ ಆಧುನಿಕ ಸ್ಥಿತಿ ಮತ್ತು ಬದಲಾವಣೆಗಳಲ್ಲಿ ಪರಿಸರ ಮತ್ತು ಸಾಮಾಜಿಕ, ಆರ್ಥಿಕ ಅಂಶಗಳ ಕುರಿತು ಮಾತನಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ ಪ್ರತಿಭೆ ಅನಾವರಣಕ್ಕೆ ಕೃಷ್ಣ ವೇಷ ಸ್ಪರ್ಧೆಗಳೇ ಬುನಾದಿ. ಕಾರಂತರಿಗೆ ಮಕ್ಕಳೆಂದರೆ ಅಚ್ಚುಮೆಚ್ಚು ಅವರ ನೆನಪಿನಲ್ಲಿ ನಿರ್ಮಾಣವಾದ ಈ ಸ್ಥಳದಲ್ಲಿ ಮಕ್ಕಳಿಗಾಗಿಯೇ ಹೆಚ್ಚೆಚ್ಚು ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ಗೀತಾ ಆನಂದ್ ಸಿ. ಕುಂದರ್ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟತಟ್ಟು ಮಹಿಳಾ ಮಂಡಲ ಕೋಟ, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನ ಸಹಯೋಗದಲ್ಲಿ ಕಾರಂತ ಹುಟ್ಟೂರ ಪುರಸ್ಕಾರದ ವಿಂಶತಿ ಅಂಗವಾಗಿ, ಕಾರಂತ ಜನುಮದಿನದಂದು ಮುದ್ದು ಕೃಷ್ಣ ವೇಷ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನದ ಅಧ್ಯಕ್ಷೆಯಾದ ಲೀಲಾವತಿ ಗಂಗಾಧರ, ಸಾಂಸ್ಕೃತಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ವಿಭಾಗ) ಬೆಳಗಾವಿ, ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ, ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿರುತ್ತಾರೆ. ಬಾಲಕಿಯರ 70ಕೆ.ಜಿ. ವಿಭಾಗದಲ್ಲಿ ವಿದ್ಯಾರ್ಥಿನಿ ಗಾಯತ್ರಿ ಚಿನ್ನದ ಪದಕ ಹಾಗೂ ಬಾಲಕರ 97+ಕೆ.ಜಿ. ವಿಭಾಗದಲ್ಲಿ ವಿದ್ಯಾರ್ಥಿ ಋತ್ವಿಕ್ ಚಿನ್ನದ ಪದಕ.ಈ ಮೂಲಕ ಈರ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಕ್ರಮವಾಗಿ, 50 ಕೆ.ಜಿ. ವಿಭಾಗದಲ್ಲಿ ಅನನ್ಯ ಬೆಳ್ಳಿಯ ಪದಕ, 97ಕೆ.ಜಿ.ವಿಭಾಗದಲ್ಲಿ ಪನ್ನಗ ಬೆಳ್ಳಿಯ ಪದಕ 72ಕೆ.ಜಿ. ವಿಭಾಗದಲ್ಲಿ ಅನುಷಾ ಕಂಚಿನ ಪದಕ, 68 ಕೆ.ಜಿ. ವಿಭಾಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಕಳೆದ ತಿಂಗಳು ಗಂಗೊಳ್ಳಿಯಲ್ಲಿ 10 ದಿನಗಳ ಕಾಲ ನಡೆಸಲಾದ ಆರಿ ಎಂಬ್ರಾಯ್ಡರಿ ತರಬೇತಿಯ ಫಲಾನುಭವಿಗಳು ಗಂಗೊಳ್ಳಿಯಲ್ಲಿ ಆರಂಭಿಸಿದ ಆಶ್ರಯ ಆರಿ ಎಂಬ್ರಾಯ್ಡರಿ ತರಬೇತಿ ಕೇಂದ್ರ ಎಂಬ ಸ್ವ ಉದ್ಯಮವನ್ನು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ನ ರಾಘವೇಂದ್ರ ಆಚಾರ್ಯ ಕೆದೂರು ಗುರುವಾರ ಉದ್ಘಾಟಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳು ರಚಿಸಿಕೊಂಡಿರುವ ನೂತನ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಾಯಿತು. ತರಬೇತುದಾರೆ ಆರತಿ ರಾಜ್, ತರಬೇತಿ ಕೇಂದ್ರದ ಮುಖ್ಯಸ್ಥರಾದ ರೇಖಾ ಖಾರ್ವಿ ಮತ್ತು ಶಾಂತಿ ಖಾರ್ವಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಬೆಂಗಳೂರು, ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್. ಜಾಲಪ್ಪ ಕ್ಯಾಂಪಸ್ ಕೊಡಿಗೇಹಳ್ಳಿ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನು ಪ್ರತಿನಿಧಿಸಿದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಹಾಗೂ ಪ್ರಮೋದ ಮಧ್ವರಾಜ್ ಅಭಿಮಾನಿ ಬಳಗ ಕುಂದಾಪುರ ಇವರ ಸಹಕಾರದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಗುರುವಾರದಂದು ಗೋ ಡಾ. ನರಸಿಂಹ ಶೆಟ್ಟಿ ಯಡ್ತರೆ ಸಭಾ ಮಂಚ್ ರೋಟರಿ ಕ್ಲಬ್ ಸಭಾಭವನದಲ್ಲಿ ಜರಗಿತು. ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟ ಗೀತಾನಂದ ಪೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಪುರಸಭಾ ಅಧ್ಯಕ್ಷರಾದ ಮೋಹನ್ ದಾಸ್ ಶೆಣೈ, ಸರಕಾರಿ ಆಸ್ಪತ್ರೆಯ ಡಾ. ನಾಗೇಶ್ ಫಿಶಿಯನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿಗಳಾದ ಜಯಕರ ಶೆಟ್ಟಿ, ಆನಗಳ್ಳಿ ಚೆನ್ನಕೇಶವ ಭಟ್ ವೇದಮೂರ್ತಿ ಗಾಯತ್ರಿ , ಹಂಗಳೂರು ಲಯನ್ ಕ್ಲಬ್ ಅಧ್ಯಕ್ಷರಾದ ರೋವನ್ ಡಿಕೋಸ್ಟಾ,…
