Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರಕಾರದ ಅನುದಾನವನ್ನು ಕಾಯದೇ ಸರಕಾರೇತರ ಸಂಸ್ಥೆಗಳ ಸಹಯೋಗ ಪಡೆದು ಸರಕಾರಿ ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯ ನಿರಂತರ ಒದಗಿಸಿದ್ದಲ್ಲಿ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್ ಅಲ್ಲಿ ನಡೆದ ಸಮೃದ್ಧ ಬೈಂದೂರು ಪರಿಕಲ್ಪನೆಯ “300 ಟ್ರೀಸ್” ಯೋಜನೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಯೂಥ್ ಫಾರ್ ಸೇವಾ ಬೆಂಗಳೂರು ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್, ಯೂಥ್ ಫಾರ್ ಸೇವಾ ಹಾಗೂ ಸ್ವಯಂ ಸ್ಫೂರ್ತಿ ಫೌಂಡೇಶನ್ ಇವರ ಸರಕಾರಿ ಶಾಲೆ ಉಳಿಯುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ಬಹಳ ಮಹತ್ತರವಾದದ್ದು ಎಂದು ಅಭಿಪ್ರಾಯಪಟ್ಟರು. ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಶಾಲಾ ಪರಿಕರಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿ.ಪಂ., ಕುಂದಾಪುರ ತಾ.ಪಂ., ಆಲೂರು ಗ್ರಾ.ಪಂ. ಹಾಗೂ ಗುಜ್ಜಾಡಿ ಪಶು ಚಿಕಿತ್ಸಾಲಯದ ಸಂಯುಕ್ತ ಆಶ್ರಯದಲ್ಲಿ ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆಗಳಲ್ಲಿ ಸಾಕು ನಾಯಿ, ಬೀದಿ ನಾಯಿಗಳು ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ ಶುಕ್ರವಾರ ನಡೆಯಿತು. ಗುಜ್ಜಾಡಿ ಗ್ರಾ.ಪಂ. ಅಧ್ಯಕ್ಷ ತಮ್ಮಯ್ಯ ದೇವಾಡಿಗ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು. ಗುಜ್ಜಾಡಿಪಶು ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಅರುಣ್ ಕೆ.ಪಿ. ಅವರು, ರೇಬಿಸ್ ರೋಗದಿಂದ ಉಂಟಾಗುವ ದುಷ್ಟರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಜಲಜಾ ಮೊಗವೀರ, ಗ್ರಾಪಂ. ಸದಸ್ಯರು, ಪಿಡಿಒ ಶೋಭಾ, ಕಾರ್ಯದರ್ಶಿ ಶಕುಂತಲಾ, ಸಿಬಂದಿ, ಪಶು ಸಖಿ, ಗ್ರಾಪಂ ಸಿಬ್ಬಂದಿಗಳು, ಪಶು ಚಿಕಿತ್ಸಾಲಯದ ಸಿಬ್ಬಂದಿಗಳು, ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಟು ಕಡೆಗಳಲ್ಲಿ ನಡೆದ ಲಸಿಕಾ ಶಿಬಿರದಲ್ಲಿ ಸುಮಾರು 110 ನಾಯಿಗಳಿಗೆ ಲಸಿಕೆ ನೀಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ವಿದ್ಯಾ ಸಂಘ ಕೋಟ ಇವರ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕ ಶಿಕ್ಷಣ ಸಂಸ್ಥೆಗಳ 2025ರ ವಾರ್ಷಿಕ ಕ್ರೀಡಾಕೂಟವು ವಿಜೃಂಭಣೆಯಿಂದ ನಡೆಯಿತು. ಸಮಾರಂಭವನ್ನು ಭಾರತೀಯ ಮಿಲಿಟರಿಯಲ್ಲಿ ಆಡಳಿತಾತ್ಮಕ ಸಹಾಯಕ ಅಧಿಕಾರಿಯಾಗಿ ಜಾಮ್‌ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹೆಮ್ಮೆಯ ಹಳೆಯ ವಿದ್ಯಾರ್ಥಿ ಎಸ್.ಜಿ.ಟಿ. ಶ್ರೀಕಾಂತ್ ಮಧ್ಯಸ್ಥ ಅವರು ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ, ಮಾತನಾಡಿ, ಕ್ರೀಡೆಯು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯಿಂದ ಕಲಿಯುವ ಶಿಸ್ತು, ಸಂಯಮ ಮತ್ತು ಸವಾಲುಗಳನ್ನು ಎದುರಿಸುವ ಮನೋಭಾವವು ಮಿಲಿಟರಿ ಸೇವೆ ಸೇರಿದಂತೆ ಯಾವುದೇ ಉನ್ನತ ಸಾಧನೆಗೆ ಬುನಾದಿಯಾಗುತ್ತದೆ. ಕ್ರೀಡೆಯಲ್ಲಿ ಸಕ್ರಿಯರಾಗಿದ್ದರಿಂದಲೇ ನಾನು ಭಾರತೀಯ ಮಿಲಿಟರಿ ವೃತ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಯಿತು. ವಿದ್ಯಾರ್ಥಿ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದ ಬಹುಮಾನ ಪಡೆದಿದ್ದನ್ನು ಸ್ಮರಿಸಿದ ಅವರು, ತಮ್ಮ ಈ ಸಾಧನೆಗೆ ಸಹಕರಿಸಿದ ಎಲ್ಲ ದೈಹಿಕ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳು ಕೇವಲ ಗೆಲುವಿಗಾಗಿ ಅಲ್ಲದೇ ಉತ್ತಮ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕೆಂದು ಕರೆ ನೀಡಿದರು. ಮುಖ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇವರ ಆಶ್ರಯದಲ್ಲಿ ನಡೆದ 2025 26ನೇ ಸಾಲಿನ ಕಲಾ ಪ್ರತಿಬೋತ್ಸವದ ಜಿಲ್ಲಾ ಮಟ್ಟದ ಬಾಲ ಪ್ರತಿಭೆಯ ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ  ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಅವರು ದ್ವಿತೀಯ ಸ್ಥಾನವನ್ನು ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರು ಗಂಗೊಳ್ಳಿಯ ಸಾಕ್ಸೋಫೋನ್ ಕಲಾವಿದ ಮಾಧವ ಜಿ. ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಯನ್ನು ಶಾಲಾ ಎಸ್‌ಡಿಎಂಸಿ ಬಳಗ ಮುಖ್ಯೋಪಾಧ್ಯಾಯರು ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಅಂಪಾರಿನ ಸಂಜಯಗಾಂಧಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳ ಆರೋಗ್ಯದ ಮಹತ್ವ ಕುರಿತು ಅತ್ಯಂತ ಯಶಸ್ವಿ ಮತ್ತು ಮಾಹಿತಿಪೂರ್ಣ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮತ್ತು ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ನಿವೃತ್ತ ಅರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರು ಮಕ್ಕಳ ಆರೋಗ್ಯದ ಬಗ್ಗೆ ಪರಿಣಾಮಕಾರಿಯಾಗಿ ಮಾತನಾಡಿ, “ಉತ್ತಮ ಆರೋಗ್ಯ ಅಥವಾ ಯೋಗಕ್ಷೇಮ ಎಂದರೆ ಕೇವಲ ದೈಹಿಕವಾಗಿ ಮಾತ್ರವಲ್ಲದೆ, ಮಾನಸಿಕ ಮತ್ತು ಸಾಮಾಜಿಕವಾಗಿಯೂ ಆರೋಗ್ಯವಾಗಿರುವುದು. ಆರೋಗ್ಯಕರ ಸಮತೋಲಿತ ಆಹಾರ, ವೈಯಕ್ತಿಕ ಸ್ವಚ್ಛತೆ ಮತ್ತು ಉತ್ತಮ ಜೀವನಶೈಲಿಯ ಮಹತ್ವವನ್ನು ಸರಳ ಉದಾಹರಣೆಗಳೊಂದಿಗೆ ವಿವರಿಸಿದರು. ಪೋಷಕರು ಮಕ್ಕಳ ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶಯುಕ್ತ ತರಕಾರಿಗಳು ಮತ್ತು ಹಣ್ಣುಗಳನ್ನು ಸೇರಿಸುವ ಅಗತ್ಯದ ಬಗ್ಗೆ ತಿಳುವಳಿಕೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್‌ನ ಕೋಶಾಧಿಕಾರಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ವಹಿಸಿ ಮಾತನಾಡಿ, ಇಂತಹ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ  ಪದವಿ ಪೂರ್ವ  ಕಾಲೇಜಿನಲ್ಲಿ  9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಅಂತರ್ ಶಾಲಾ ಸಾಂಸ್ಕೃತಿಕ  ಸ್ಪರ್ಧೆ ‘ವಿಕ್ಟರಿ-2025’ ಕಾಲೇಜು ಆಡಿಟೋರಿಯಂನಲ್ಲಿ ಜರುಗಿತು. ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ  ಕೋವಾಡಿ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ  ಚಾಲನೆ ನೀಡಿ, ಮಾತನಾಡಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜನೆಗೊಂಡ ಈ ಸಾಂಸ್ಕೃತಿಕ ಸ್ಪರ್ಧೆಯು ವಿದ್ಯಾರ್ಥಿಗಳಲ್ಲಿ ಗೆದ್ದರೆ ಆತ್ಮವಿಶ್ವಾಸ ಮೂಡಿಸುತ್ತದೆ ನಿಜ ಆದರೆ  ಸೋತರೇ ಹತಾಶರಾಗಬೇಡಿ. ನಿಮ್ಮ ಭವಿಷ್ಯದ ಹಾದಿಗೆ ಈ ಸ್ಪರ್ಧೆ ಮಹತ್ವದ ಮೈಲುಗಲ್ಲು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ  ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾ‌ರ್, ಹಿರಿಯ ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ, ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್‌ ಅವರನ್ನು ಉಡುಪಿ ಓಸಿಯನ್‌ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು. ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್‌ ಸಂಸ್ಥೆಯ ಅಶ್ವತ್‌ ಎಸ್‌. ಎಲ್‌, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್‌ ಸಂಸ್ಥೆಯ ಡಾ. ಗಣನಾಥ್‌ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್‌ ಚಂದ್ರ ಶೆಟ್ಟಿಸ, ಉಪಾಧ್ಯಕ್ಷರುಗಳನ್ನಾಗಿ ಸುಜ್ಞಾನ ಸಂಸ್ಥೆಯ ರಮೇಶ್‌ ಶೆಟ್ಟಿ, ಎಕ್ಸಲೆಂಟ್‌ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್‌ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್‌ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷರಾದ ರಾಧಕೃಷ್ಣ ಶೆಣೈ, ಫಾದರ್‌ ವಿನ್ಸೆಂಟ್‌ ಕ್ರಾಸ್ತ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಮ್‌ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು‌ ಸ್ಪರ್ಧೆ ನವೋನ್ಮೇಶ 2025 ಇದರ ಸಮಾರೋಪ‌ ಸಮಾರಂಭ ತಾರಾ ಮೆರುಗಿನೊಂದಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸು ಫ್ರಮ್ ಸೋ ಖ್ಯಾತಿಯ ನಟ ಶನೀಲ್‌ ಗೌತಮ್ ಅವರು ಮಾತನಾಡಿ, ತಮ್ಮ ವಿಧ್ಯಾರ್ಥಿ ಜೀವನವನ್ನು ಮೆಲುಕು‌ಹಾಕುತ್ತ, ಶಿಕ್ಷಕರ ಮಾರ್ಗದರ್ಶನವನ್ನು ನಿರ್ಲಕ್ಷಿಸದೆ ಎಲ್ಲ ಕ್ಷೇತ್ರದಲ್ಲು ತಮ್ಮನ್ನು ತಾವು ತೊಡಗಿಸಿಕೊಳ್ಳಿ ಯಶಸ್ಸು ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಈ ಟಿವಿ ಎದೆ ತುಂಬಿ ಹಾಡಿದೆನು ಹಾಗೂ ಸರಿಗಮಪ ಖ್ಯಾತಿಯ ದೀಕ್ಷಾ ರಾಮಕೃಷ್ಣ ಅವರು ಮಾತನಾಡಿ, ಪಾಠದ ಜೊತೆಗೆ ಹವ್ಯಾಸಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಶಿಸಿದರು. ಸಭಾ ಕಾರ್ಯಕ್ರಮದ ಮೊದಲು ಇವರು ತಮ್ಮ ಸುಮಧುರ ಗಾಯನದ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ ಕುಂದಾಪುರ ಡಿವೈಎಸ್ಪಿ ಎಚ್ ಡಿ ಕುಲಕರ್ಣಿ ಅವರು ಮಾತನಾಡಿ, ಈ‌‌ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರೊಂದಿಗೆ ಉತ್ತಮ ಸಾಧನೆ ಮಾಡಿದರೆ ಬದುಕನ್ನು ಕಟ್ಟಿಕೊಳ್ಳಬಹುದೆಂದು. ಪ್ರತಿ ಕ್ರೀಡೆಗಳನ್ನು ವೈಜ್ಞಾನಿಕ ಸೂತ್ರಗಳೊಂದಿಗೆ ಅಭ್ಯಾಸ ಮಾಡಿದರೆ ಗೆಲುವು ನಿಶ್ಚಿತ ಎಂದು ತೆಕ್ಕಟ್ಟೆ ಅಲ್ ಜಾಮಿಯಾ ಮಸ್ಜಿದ್ ಇದರ ಅಧ್ಯಕ್ಷರಾದ ಮಹ್ಮದ್ ಸಲಾಂ ಹೇಳಿದರು. ಅವರು ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಷನಲ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್‌ನ 20ನೇ ವಾರ್ಷಿಕ ಕ್ರೀಡೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾರದಾ ಕಾಲೇಜಿನ ದೈಹಿಕ ಶಿಕ್ಷಕರಾದ ಸೂರಜ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಶರೀರವನ್ನು ಸಧೃಢಗೊಳಿಸಲು ಶಾರೀರಿಕ ವ್ಯಾಯಾಮ ಬಹು ಮುಖ್ಯ ಎಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಶ್ರೀ ಶಿರೂರು ಮಠದ ಪರ್ಯಾಯ ಸ್ವಾಗತ ಸಮಿತಿಯ ಕುಂದಾಪುರ ವಲಯದ ಪೂರ್ವಭಾವಿ ಸಭೆಯು ಇಲ್ಲಿನ ಕುಂಭಾಶಿ ಆನೆಗುಡ್ಡೆ ದೇವಸ್ಥಾನದ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನೆರವೇರಿತು. ಸದ್ರಿ ಸಭೆಯಲ್ಲಿ ಶಾಸಕರು ಮಾತನಾಡಿ, ಕುಂದಾಪುರ ವಲಯದಿಂದ ಪರ್ಯಾಯ ಮಹೋತ್ಸವದ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿ ಶಾಸಕರು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನ ಸ್ವಾಗತ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಪರ್ಯಾಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಹಾಗೂ ಹೊರೆಕಾಣಿಕೆ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕಾರ ನೀಡಲು ವಿನಂತಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಆನೆಗುಡ್ಡೆ ಕ್ಷೇತ್ರದ ಧರ್ಮದರ್ಶಿಗಳಾದ ರಮಣ ಉಪಾಧ್ಯ, ವಿಶ್ರಾಂತ ಅಧ್ಯಕ್ಷ ಸೂರ್ಯನಾರಾಯಣ ಉಪಾಧ್ಯ ಪ್ರಚಾರ ಸಮತಿಯ ಸಹಸಂಚಾಲಕ ಮಧುಕರ್ ಮುದ್ರಾಡಿ, ಕಾರ್ಯದರ್ಶಿ ಮೋಹನ್ ಭಟ್, ಜೊತೆ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯಕ್ ಕಾಪು ಹಾಗೂ…

Read More