ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘ ತ್ರಾಸಿ ಇವರ ವತಿಯಿಂದ ನಾರಾಯಣ ವಿಶೇಷ ಮಕ್ಕಳ ಶಾಲೆ, ತಲ್ಲೂರು ಮತ್ತು ಚೈತನ್ಯ ಸ್ಪೆಶಲ್ ಸ್ಕೂಲ್, ವಡೇರ ಹೋಬಳಿ ಕುಂದಾಪುರ ಇವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ ಮೊವಾಡಿ ತ್ರಾಸಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಘುರಾಮ ದೇವಾಡಿಗ ಸಹಿತ ಅಭಿಮಾನಿಗಳಾದ ಮಿಥುನ್ ಎಂ. ಡಿ. ಬಿಜೂರು, ರವಿ ಶೆಟ್ಟಿಗಾರ್, ತ್ರಾಸಿ., ಪಾಂಡುರಂಗ ದೇವಾಡಿಗ, ಗಣೇಶ ದೇವಾಡಿಗ, ಮಹೇಶ ದೇವಾಡಿಗ, ಕಿರಣ್ ದೇವಾಡಿಗ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗವರ್ನ್ಮೆಂಟ್ ಟೆಕ್ ಕೆಪಿಎಮ್ಜಿ ಇಂಡಿಯಾದ ಸಹಾಯಕ ನಿರ್ದೇಶಕರಾದ ಡಾ. ರತನ್ ಮುರಳೀದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಒಬ್ಬ ವಿದ್ಯಾರ್ಥಿಯಾಗಿ, ನಿಮ್ಮ ಸುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ನಿಮ್ಮ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು, ಆ ನಿಟ್ಟಿನಲ್ಲ್ ವಿದ್ಯಾರ್ಥಿಗಳು ಪ್ರಯತ್ನ ಪಡುತ್ತಲೇ ಇರಬೇಕು ಎಂದು ಪ್ರೋತ್ಸಾಹಿಸಿದರು.” ವಿವಿಧ ವಿಭಾಗದ ಡೀನ್ ಅವರು ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಬ್ರ್ಯಾಂಡ್ ಬಿಲ್ಡಿಂಗ್ ವಿಭಾಗದ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಈಗ ಕೇವಲ ವ್ಯಕ್ತಿಗಳಲ್ಲ, ನಮ್ಮ ಸಂಸ್ಥೆಯ ಪ್ರತಿನಿಧಿಗಳು ಎನ್ನುತ್ತ ತಾವು ಶಿಸ್ತನ್ನು ಕಾಪಾಡಿಕೊಳ್ಳುವುದು, ಬಲವಾದ ವೈಯಕ್ತಿಕ ಬ್ರ್ಯಾಂಡ್ ಅನ್ನು ಅಭಿವೃದ್ಧಿಪಡಿಸುವುದು ಮತ್ತು ನಾಯಕತ್ವ, ಆತ್ಮವಿಶ್ವಾಸ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಮತ್ತು ಯೋಗಾಸನ ಭಾರತ್ ಆಶ್ರಯದಲ್ಲಿ ಛತ್ತೀಸ್ಗಡ್ನ ಅಗ್ರಸೇನ್ ಭವನದಲ್ಲಿ ನಡೆದ 2025-26ನೇ ಸಾಲಿನ 6ನೇ ರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್ನಲ್ಲಿ ಬ್ಯಾಕ್ ಬೆಂಡಿಂಗ್ ಯೋಗಾಸನದಲ್ಲಿ ತಾಲೂಕಿನ ಸಂದೀಪ್ ಪೂಜಾರಿ ತ್ರಾಸಿ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ, ಸೆಮಿಫೈನಲ್ನಲ್ಲಿ 4ನೇ ಸ್ಥಾನ ಹಾಗೂ ಫೈನಲ್ನಲ್ಲಿ 5ನೇ ಸ್ಥಾನವನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ರಾಷ್ಟ್ರ ಮಟ್ಟದ ಈ ಯೋಗಾಸನ ಸ್ಫರ್ಧೆಯಲ್ಲಿ 22 ರಾಜ್ಯಗಳ ತಂಡಗಳು ಭಾಗವಹಿಸಿದ್ದವು. ಅನೇಕ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಸಂದೀಪ ಪೂಜಾರಿ ಅನೇಕ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಅವರು ತ್ರಾಸಿ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಂಚ ಗ್ಯಾರೆಂಟಿಯಲ್ಲಿ ಮಹಿಳೆಯನ್ನು ಕೇಂದ್ರಿಕರಿಸಿ ಯೋಜನೆಯನ್ನು ರೂಪಿಸಲಾಗಿದ್ದು, ಮಹಿಳೆಯರ ನಿರಂತರ ಶ್ರಮಕ್ಕೆ ಮಾನ್ಯತೆ ನೀಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಉಡುಪಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಗುರುವಾರ ಶಿರೂರು ಪೇಟೆ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೈಂದೂರು, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೈಂದೂರು ಹಾಗೂ ಗ್ರಾಮ ಪಂಚಾಯತ್ ಶಿರೂರು ನೇತೃತ್ವದಲ್ಲಿ ಆಯೋಜಿಸಲಾದ ಗ್ಯಾರೆಂಟಿ ಸಮಾವೇಶ ಹಾಗೂ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ಯಾರೆಂಟಿ ಯೋಜನೆಯಿಂದ ರಾಜ್ಯದ ಯಾವೊಂದು ಕಲ್ಯಾಣ ಕಾರ್ಯಕ್ರಮಗಳಿಗೂ ಹಿನ್ನಡೆಯಾಗಿಲ್ಲ. ಕಾಲಕಾಲಕ್ಕೆ ಸರಕಾರ ಅಭಿವೃದ್ಧಿಗೆ ಅನುದಾನ ನೀಡುತ್ತಿದೆ. ಅಲ್ಲದೇ ಗ್ಯಾರೆಂಟಿ ಯೋಜನೆಯಿಂದಾಗಿ ತಲಾ ಆದಾಯವೂ ಪ್ರಗತಿ ಕಂಡಿದ್ದು, ಜನರ ಆರ್ಥಿಕ ವಹಿವಾಟು ಹೆಚ್ಚಿದೆ ಎಂದರು. ಬೈಂದೂರು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಕ್ಷೇತ್ರ ಅಕ್ರಮ ಸಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ತಾಲೂಕಿನ ಕಮಲಶಿಲೆ ಗ್ರಾಮದ ಬರೆಗುಂಡಿ ನಿವಾಸಿ ಉದಯ ಚಾತ್ರ (43) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಿದ್ದಾಪುರ ಚಾತ್ರ ಎಂಟರ್ಪೈಸಸ್ ಮಾಲಕರಾಗಿರುವ ಉದಯ ಚಾತ್ರ ಅವರು ಬುಧವಾರ ಬೆಳಿಗ್ಗೆ ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಗೆ ತನ್ನ ತಂದೆ, ತಾಯಿ ಹಾಗೂ ಪತ್ನಿಯ ಜತೆಯಲ್ಲಿ ತೆರಳಿದ್ದರು. ಬಳಿಕ ಅವರನ್ನು ಮಹಾಸಭೆಯಲ್ಲಿ ಬಿಟ್ಟು ಸಿದ್ದಾಪುರದಲ್ಲಿರುವ ಚಾತ್ರ ಎಂಟರ್ಪೈಸಸ್ಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಆದರೆ ಕಮಲಶಿಲೆಯಿಂದ ತನ್ನ ಅಂಗಡಿಗೆ ಹೋಗದೆ ನೇರವಾಗಿ ಮನೆಗೆ ಹೋಗಿ ಮಹಡಿ ಮೇಲಿನ ಕೋಣೆಗೆ ತೆರಳಿ ಫ್ಯಾನಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬಿಕರು ಸಂಘದ ಸಭೆ ಮುಗಿಸಿ ಮನೆಗೆ ಮರಳಿದಾಗ ಅವರ ವಾಹನ ಅಲ್ಲೇ ಇರುವುದರಿಂದ ಮನೆಯ ಸುತ್ತಮುತ್ತ ಹಾಗೂ ಒಳಗೆ ಹುಡುಕಾಟ ನಡೆಸಿ ನಂತರ ಮಹಡಿಯ ಕೋಣೆಗೆ ಹೋಗಿ ನೋಡಿದಾಗ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾ ಕಾರ್ಯಕ್ರಮದಲ್ಲಿ ಒಎನ್ಜಿಸಿ ಮುಂಬೈ ಇದರ ನಿವೃತ್ತ ಚೀಫ್ ಜನರಲ್ ಮ್ಯಾನೇಜರ್ ಸಮಾಜ ಸೇವಕ ಬನ್ನಾಡಿ ನಾರಾಯಣ ಆಚಾರ್ ವಿಶೇಷ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಅಧ್ಯಕ್ಷ ಎಂ. ಸುಬ್ರಾಯ ಆಚಾರ್, ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ಮತ್ತಿತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆ.23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ 29 ಮಂದಿ ಕ್ರೀಡಾಪಟುಗಳು ಭಾಗವಹಿಸಲು ಆಯ್ಕೆಯಾಗಿದ್ದರೆ. ಒಂದೇ ಸಂಸ್ಥೆಯಿAದ 29 ಕ್ರೀಡಾಪಟುಗಳು ಸ್ಪರ್ಧೆಗೆ ಅವಕಾಶ ಪಡೆದಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ. ಇವರಲ್ಲಿ 10 ಮಂದಿ ಬಾಲಕಿಯರು ಹಾಗೂ 19 ಮಂದಿ ಬಾಲಕರು ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ಬಾಲಕಿಯರ ವಿಭಾಗ:ಐಶ್ವರ್ಯ (ಚಕ್ರ ಎಸೆತ, ಗುಂಡು ಎಸೆತ), ಗೀತಾ (400 ಮೀ., 4*400 ರಿಲೇ), ನಾಗಿನಿ (1000 ಮೀ.), ಚರಿಶ್ಮಾ (1000 ಮೀ.), ವೈಷ್ಣವಿ (ಉದ್ದ ಜಿಗಿತ), ಭಾಗೀರಥಿ (3 ಕಿ.ಮೀ ನಡಿಗೆ), ನಂದಾ (ಜಾವಲಿನ್ ಎಸೆತ), ಪ್ರೇಕ್ಷಿತಾ (ಜಾವಲಿನ್ ಎಸೆತ), ಮೇಘಾ (ತ್ರ್ರಯಥ್ಲಾನ್ ಸಿ), ಸುಜಾತ ವೈ (ತ್ರಯಥ್ಲಾನ್ ಸಿ). ಬಾಲಕರ ವಿಭಾಗ:ನೋಯಿಲ್ (ಉದ್ದ ಜಿಗಿತ), ಮಹಮ್ಮದ್ ತಬ್ಶೀರ್ (ತ್ರಿವಿಧ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ವೆಬ್ಸೈಟ್ https://sevasindhuservices.karnataka.gov.in/ ಮೂಲಕ ಗ್ರಾಮ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 25 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಅರ್ಹ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದೇಶದ ಆರ್ಥಿಕ ವ್ಯವಸ್ಥೆ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ತರ ಪಾತ್ರ ವಹಿಸುತ್ತವೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರ ಕಾರ್ಯಕ್ಷಮತೆಯನ್ನು ಹೆಚ್ಚಿಸಿ, ಅವರುಗಳಲ್ಲಿ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದರೊಂದಿಗೆ ಉದ್ಯಮವನ್ನು ವಿಸ್ತರಿಸಲು ಅರಿವು ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ (ಕೆ.ಸಿ.ಟಿ.ಯು), ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್) ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರ್ಯಾಂಪ್ ಯೋಜನೆಯಡಿ ಟ್ರೇಡ್ಸ್ ಯೋಜನೆ ಕುರಿತ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಗಾರಿಕೆಗಳ ಹೊಸ ಘಟಕ ಸ್ಥಾಪನೆಗೆ ಹಾಗೂ ಕೈಗಾರಿಕೆಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಇದರ ವಾರ್ಷಿಕ ಸರ್ವ ಸದಸ್ಯರ ಸಭೆಯು ಇಲ್ಲಿನ ರೋಟರಿ ಕ್ಲಬ್ನಲ್ಲಿ ಬುಧವಾರ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಆಶಾ, ನಿರ್ದೇಶಕರಾದ ಸರಳಾ ಶೆಟ್ಟಿ,, ಗೀತಾ ಎಸ್., ಸಾವಿತ್ರಿ, ಗಿರಿಜಾ, ನೇತ್ರಾವತಿ, ಪ್ರೇಮಾ, ಲಕ್ಷ್ಮೀ ಬೈಂದೂರು, ಅಂಬಿಕಾ, ಅಲಿಯಾನಾಜ್, ಶ್ಯಾಮಲಾ, ಮಾಲತಿ, ಸಿಬ್ಬಂದಿ ಪೂರ್ಣಿಮಾ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ವಾರ್ಷಿಕ ವರದಿ ಹಾಗೂ ಆಡಿಟ್ ವರದಿ ಮಂಡಿಸಿದರು. ಕಛೇರಿ ಸಿಬ್ಬಂದಿ ನಾಗರಾಜ್ ಸ್ವಾಗತಿಸಿದರು. ಪತ್ರಕರ್ತ ಅಂದುಕಾ ಎ. ಎಸ್. ನಿರೂಪಿಸಿ, ವಂದಿಸಿದರು.
