ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸ ಹೊಸ ದಾಖಲೆಗಳನ್ನು ಸೃಷ್ಠಿಸುತ್ತಾ 100 ದಿನ ಪೂರೈಸಿರುವ ‘ಕಾಂತಾರ’ಸಿನಿಮಾ ಇದೀಗ ಆಸ್ಕರ್ ಪ್ರಶಸ್ತಿಯ ಅರ್ಹತಾ ಸುತ್ತಿಗೆ ಪ್ರವೇಶ ಪಡೆದಿದೆ. ಈ ಮೂಲಕ ಕನ್ನಡದ ಸೂಪರ್ ಹಿಟ್ ‘ಕಾಂತಾರ ಮತ್ತೊಂದು ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದೆ. ಕನ್ನಡದ ಹೆಮ್ಮೆಯ ‘ಕಾಂತಾರ‘ ಆಸ್ಕರ್ ರೇಸ್ಗೆ ಎಂಟ್ರಿ ಕೊಟ್ಟಿದ್ದಲ್ಲದೇ ಎರಡು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿ ‘ಕಾಂತಾರಾ ಅರ್ಹತಾ ಸುತ್ತು ಪಾಸ್ ಮಾಡಿದ್ದು, ಕನ್ನಡಿಗರ ಖುಷಿಯನ್ನು ಹೆಚ್ಚಿಸಿದೆ. ಕುಂದಾಪುರ ಕೆರಾಡಿಯ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುರುವ ಚಿತ್ರ ಬಿಡುಗಡೆಯಾದಾಗಲಿಂದಲೂ ಸಾಕಷ್ಟು ದಾಖಲೆ ಸೃಷ್ಟಿಸಿತ್ತು. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಮಂಗಳವಾರ ಟ್ವೀಟ್ ಸಂತಸ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರವು 2 ಆಸ್ಕರ್ ಅರ್ಹತೆಗಳನ್ನು ಪಡೆದಿರುವ ವಿಚಾರ ತಿಳಿಸಲು ನಮಗೆ ಖುಷಿಯಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು’ಎಂದು ಹೇಳಿದ್ದಾರೆ. ಆಸ್ಕರ್ ರೇಸ್ನಲ್ಲಿರುವ 301 ಸಿನಿಮಾಗಳು ಅರ್ಹತಾ ಸುತ್ತನ್ನು ಪಾಸ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತದ ಮೇಲಿನ ದಾಳಿಗಳಿಗೆ ಕಾರಣವೇ ಭಾರತದ ಆರ್ಥಿಕ ಸಮೃದ್ಧಿ. ಮೊದಲ ಶತಮಾನದಿಂದ 15 ನೇ ಶತಮಾನದವರೆಗೆ ಪ್ರಪಂಚದ ಉತ್ಪಾದನೆಯ ಶೇಕಡಾ 32 ಭಾರತವೊಂದರಿಂದಲೇ ಆಗಿತ್ತು ಎಂದು ಸ್ವಾವಲಂಬಿ ಭಾರತ ಅಭಿಯಾನದ ಉಡುಪಿ ಜಿಲ್ಲಾ ಸಹ ಸಂಯೋಜಕ ಪ್ರಸನ್ನ ಕುಮಾರ್ ಹೇಳಿದರು. ಅವರು ಕಂಬದಕೋಣೆ ಪದವಿ ಪೂರ್ವ ಕಾಲೇಜು ಇಲ್ಲಿ ನಡೆದ ಸ್ವಾವಲಂಬಿ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರಾಚೀನ ಭಾರತ ಸಮೃದ್ಧ ಆರ್ಥಿಕತೆಯಾಗಿರಲು ಕಾರಣ ಸಮಾಜದ ಪ್ರತಿಯೊಬ್ಬ ಯುವಕರು ಸ್ವಯಂ ಪ್ರೇರಿತರಾಗಿ ಉತ್ಪಾದನೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿಯೊಂದು ವ್ಯಾಪಾರ, ಉದ್ಯಮ ಅಥವಾ ಕೃಷಿಯಲ್ಲಿ ಜನರು ಸ್ವಾಭಾವಿಕವಾಗಿ ಸೇರಿಕೊಳ್ಳುತ್ತಿದ್ದರು ಎಂದರು. ಕಾಲೇಜು ಪ್ರಾಂಶುಪಾಲರಾದ ಗಣಪತಿ ಅವಭೃತ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಡುಪಿ ಜಿಲ್ಲಾ ಸ್ವಾವಲಂಭಿ ಭಾರತ ಅಭಿಯಾನದ ಸಂಯೋಜಕರಾದ ವಿಜಯ ಕೊಡವೂರು ಉಪಸ್ಥಿತರಿದ್ದರು. ರಾಘವೇಂದ್ರ ಬಿ.ಕೆ. ಸ್ವಾಗತಿಸಿದರು. ತುಳಸಿದಾಸ್ ನಿರೂಪಿಸಿದರು. ಆ ನಂತರ ವಿದ್ಯಾರ್ಥಿಗಳಿಗೆ ಪ್ರೊಜೆಕ್ಟರ್ ಮೂಲಕ ಪವರ್ ಪಾಯಿಂಟ್ ಪ್ರಸೆಂಟೇಶನ್ ತೋರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಔಟ್ ಬೋರ್ಡ್ ಇಂಜಿನ್ ಅಳವಡಿಸಿ ಮೀನುಗಾರಿಕೆ ಮಾಡುವ ಸಾಂಪ್ರದಾಯಿಕ ನಾಡದೋಣಿಗಳಿಗೆ ರಾಜ್ಯ ಸರಕಾರ ಈ ಹಿಂದೆ ಒದಗಿಸುತ್ತಿರುವ ಮಾಸಿಕ ತಲಾ 150 ಲೀಟರ್ ಸೀಮೆಎಣ್ಣೆ ಮಾತ್ರ ಒದಗಿಸುತ್ತಿದ್ದು, ಸರಕಾರ ನೀಡುವ ಸೀಮೆಎಣ್ಣೆ ಪ್ರಮಾಣ ತೀರಾ ಕಡಿಮೆಯಾಗಿದ್ದರಿಂದ ನಾಡದೋಣಿಯವರು ಪ್ರತಿದಿನ ಸಮುದ್ರಕ್ಕೆ ಮೀನುಗಾರಿಕೆಗೆ ಹೋಗಲು ಕಷ್ಟವಾಗಿರುತ್ತದೆ. ಸೀಮೆಎಣ್ಣೆ ಪ್ರಮಾಣವನ್ನು 300 ಲೀಟರಿಗೆ ಏರಿಸಿದ್ದರೂ ಈ ತನಕ ಹಂಚಿಕೆ ಮಾಡದೇ ಮೀನುಗಾರರಿಗೆ ಸರಕಾರ ಅನ್ಯಾಯ ಮಾಡುತ್ತಿದೆ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ಬಿ. ನಾಗೇಶ್ ಖಾರ್ವಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಲ್ಲಿ 2021-22ನೇ ಸಾಲಿಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ಒಟ್ಟು 8,030 ಮೀನುಗಾರಿಕಾ ದೋಣಿಗಳಿಗೆ 3,540 ಕೆ.ಎಲ್ ಪ್ರಮಾಣದ ಸೀಮೆಎಣ್ಣೆಯನ್ನು ವಿಶೇಷ ಉದ್ದೇಶಕ್ಕಾಗಿ ಬಿಡುಗಡೆಗೊಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು 2,610 ಮೀನುಗಾರಿಕೆ ದೋಣಿಗಳಿಗೆ ಸೀಮೆಎಣ್ಣೆ ಪರ್ಮಿಟ್ ನೀಡಲಾಗಿದ್ದು, ನಂತರ ಈಗ ಹೊಸದಾಗಿ ಸುಮಾರು 1,900…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾವೇರಿಯಲ್ಲಿ ಜರುಗಿದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನಿವಾಸಿ ಭಾರತೀಯ, ಬೈಂದೂರು ತಗ್ಗರ್ಸೆಯ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಕನ್ನಡ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಮೂಲತಃ ಬೈಂದೂರಿನವರು. ಪ್ರಾಥಮಿಕ ಶಿಕ್ಷಣದಿಂದ ಪದವಿಯವರೆಗೆ ಕರ್ನಾಟಕದಲ್ಲಿ ಪೂರ್ಣಗೊಳಿಸಿ ವೃತ್ತಿಯನ್ನು ಅರಸಿ ಕತಾರ್’ಗೆ 2007ರಲ್ಲಿ ಪಯಣ ಬೆಳೆಸಿದರು. ಉದ್ಯೋಗದ ಜೊತೆಗೆ ಕತಾರ್ ಕರ್ನಾಟಕ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಆಡಳಿತ ಸಮಿತಿಯ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಸದಸ್ಯತ್ವ ಸಂಚಾಲಕರಾಗಿ ಸಂಘ ಬೆಳೆಯಲು ಹಾಗೂ ಅದರ ಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ಪಾಲ್ಗೊಂಡರು. ಮಂದೆ ಐಸಿಬಿಎಫ್ ಭಾರತೀಯ ಸಮುದಾಯ ಹಿತೈಷಿ ವೇದಿಕೆ ಇದರಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರಕಿತು. ಇವರ ಕಾರ್ಯಕ್ಷಮತೆಯನ್ನು ಭಾರತೀಯ ದೂತಾವಾಸದ ಕಾರ್ಯಾಲಯವು ಗಮನಿಸಿ ಶ್ಲಾಘಿಸಿತು. ಪೂರ್ವ ರಾಯಭಾರಿಗಳು, ಸುಬ್ರಹ್ಮಣ್ಯ ಅವರಿಗೆ ಅಭಿನಂದಿಸಿ ಪ್ರಮಾಣಪತ್ರವನ್ನು ಹಾಗೂ ನೆನಪಿನ ಕಾಣಿಕೆಯನ್ನು ನೀಡಿದ್ದಾರೆ. ಮಹಾಮಾರಿಯ ಕರೋನಾ ಉತ್ತುಂಗದಲ್ಲಿದ್ದ ಕಾಲದಲ್ಲಿ ಎಲ್ಲರೂ ಮನೆಯಿಂದ ಹೊರಬರಲು ಹೆದರುತ್ತಿದ್ದ ಸಂದರ್ಭ, ಸುಬ್ರಹ್ಮಣ್ಯ ಹೆಬ್ಬಾಗಿಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶದಲ್ಲಿ ನಾವು ಮತ್ತು ನಮ್ಮ ಕುಟುಂಬ ಎಂಬ ಸ್ವಾರ್ಥದಲ್ಲಿ ಬದುಕುತ್ತಿದ್ದೇವೆ. ನಾವು ನಿಶ್ಚಿಂತೆಯಿಂದ ಸುಂದರ ಬದುಕು ಕಾಣಲು ತಮ್ಮ ಜೀವದ ಹಂಗು ತೊರೆದು ನಮ್ಮನ್ನು ನಮ್ಮ ದೇಶವನ್ನು ಹಗಲಿರುಳು ಕಾಯುತ್ತಿರುವ ಸೈನಿಕರ ನೆನಪು ಯಾರಿಗೂ ಆಗದಿರುವುದು ಬೇಸರದ ಸಂಗತಿ ಎಂದು ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಭಾನುವಾರ ಲೇಖಕ ಬೈಂದೂರು ಚಂದ್ರಶೇಖರ ನಾವಡರ ’ಸೈನಿಕನ ಆಂತರ್ಯದ ಪಿಸುನುಡಿ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ದೇಶದ ಭದ್ರತೆ ಮತ್ತು ರಕ್ಷಣೆಗೆ ಗಡಿಭಾಗದಲ್ಲಿ ಹಗಲಿರುಳು ಕಾಯುತ್ತಿರುವ ಸೈನಿಕರ ದೈನಂದಿನ ಚಟುವಟಿಕೆಗಳು, ಅವರ ಜೀವನಶೈಲಿಯನ್ನು ನಿವೃತ್ತ ಸೈನಿಕ, ಲೇಖಕರು ಎಳೆಎಳೆಯಾಗಿ ತಮ್ಮ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ತಮ್ಮ ನೈಜ ಅನುಭವದ ಘಟನಾವಳಿಗಳನ್ನು ಭಾವನಾತ್ಮಕವಾಗಿ ಪುಸ್ತಕ ರೂಪದಲ್ಲಿ ಮೆಲುಕು ಹಾಕಿರುವುದು ಖುಷಿ ನೀಡಿದೆ ಎಂದರು. ದೇವಳದ ಸೇವ ಸಮಿತಿ ಅಧ್ಯಕ್ಷ ನಾಕಟ್ಟೆ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸೇನೆಯ ಮೂರೂ ಪಡೆಗಳಲ್ಲಿ ಸೇವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನರಂಜನಾ ಕಲಾ ಪ್ರಕಾರಗಳಲ್ಲಿ ಯಕ್ಷಗಾನ ಇಂದಿಗೂ ಪ್ರಥಮ ಸ್ಥಾನದಲ್ಲಿದೆ. ಸರ್ವಾಂಗ ಸುಂದರವಾದ ಕಲಾ ಪ್ರಕಾರ, ಸಂಗೀತ, ಸಾಹಿತ್ಯ, ನಾಟ್ಯ, ವೇಷಭೂಷಣ, ಕುಣಿತ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಜನತೆಗೆ ಉತ್ತಮ ಸಂದೇಶ ನೀಡುವ ಮೂಲಕ ಜ್ಞಾನ ತುಂಬುವ ಕೆಲಸ ಯಕ್ಷಗಾನಗಳಿಂದಾಗುತ್ತಿವೆ ಎಂದು ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಯು. ರಾಜೇಶ ಪೈ ಹೇಳಿದರು. ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಸ್ಥಳೀಯ ವೃತ್ತಿಪರ ಯಕ್ಷಗಾನ ಕಲಾವಿದರ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ ವತಿಯಿಂದ ನಡೆದ ಯಕ್ಷಗಾನ ಮುಖವರ್ಣಿಕೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕಾರ್ಯಕ್ರಮಗಳಲ್ಲಿ ಹಿರಿಯರು ಹೆಚ್ಚು ಹೆಚ್ಚು ಯುವ ಪೀಳಿಗೆಯನ್ನು ಕರೆತರುವ ಪ್ರಯತ್ನ ಮಾಡಿದರೆ ಈ ಕರಾವಳಿ ಕಲೆ ಇನ್ನಷ್ಟು ಜನಪ್ರಿಯತೆಯನ್ನು ಪಡೆದುಕೊಳ್ಳಬಹುದು. ನಮ್ಮ ಬದುಕಿಗೆ ಬೇಕಾದ ಪ್ರತಿಯೊಂದು ಜೀವನ ಸಂದೇಶಗಳು ಯಕ್ಷಗಾನದಲ್ಲಿ ದೊರೆಯುವುರಿಂದ ನಮ್ಮ ಸಮಾಜವನ್ನು ಸುಸಂಸ್ಕೃಗೊಳಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು. ಬೈಂದೂರು ಲಾವಣ್ಯ ಕಲಾಸಂಸ್ಥೆ ಉಪಾಧ್ಯಕ್ಷ ನರಸಿಂಹ ಬಿ. ನಾಯಕ್ ಅಧ್ಯಕ್ಷತೆ ವಹಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾವು ವಿದ್ಯಾರ್ಥಿ ದೆಸೆಯಿಂದಲೇ ಸಾಧಕರನ್ನು ಅನುಕರಿಸುತ್ತಾ ಸಾಧನೆಗೆ ಬೇಕಾದ ಅವಕಾಶ ಸೃಷ್ಠಿಸಿಕೊಳ್ಳಬೇಕು. ಸಾಧನೆ ಮತ್ತು ಖುಷಿಯೇ ಗಮ್ಯಸ್ಥಾನವೆಂದು ಹೇಳಲಾಗದು. ಆದರೆ ಇದು ಜೀವನದಲ್ಲಿ ಒಂದು ಮಹತ್ತರ ಮೈಲಿಗಲ್ಲಂತೂ ಹೌದು ಎಂದು ಡಾ. ಮಾಧವ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಾಲೆಯ ವಾರ್ಷಿಕೋತ್ಸವ ’ಸೃಜನ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಳೆಯ ಶಿಕ್ಷಣ ಪದ್ದತಿ ಈಗ ಅರ್ಥ ಕಳೆದುಕೊಂಡು ಅದರ ಸ್ಥಾನದಲ್ಲಿ ಹೊಸ ವ್ಯಾಖ್ಯೆ ರೂಢಿಗೆ ಬಂದಿದೆ. ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ದಿ ಶಿಕ್ಷಣದ ಗುರಿಯೆನಿಸಿದ್ದು, ಅದರ ಸಾಧನೆಗೆ ವಿದ್ಯಾರ್ಥಿ, ಶಿಕ್ಷಕ, ಪೋಷಕರ ಸಂಯೋಜಿತ ತ್ರಿಕೋನ ಸ್ಪಂದನೆ ಅಗತ್ಯವೆನಿಸಿದೆ ಎಂದರು. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು. ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಎರಡೂ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಅಗತ್ಯವಾದ ಎಲ್ಲಾ ರೀತಿಯ ಪಾಠ ಹಾಗೂ ಪಾಠೇತರ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ ಅನುಭವಿ ಪದವೀಧರ ಶಿಕ್ಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರದ ಬಡವರು, ಅಶಕ್ತರಿಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಇದರ ಪ್ರಯೋಜನ ದೊರೆಯುವಂತೆ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ಕಂದಾಯ ಇಲಾಖೆ ಶ್ರಮಿಸುತ್ತಿದೆ ಎಂದು ಬೈಂದೂರು ತಹಶಿಲ್ದಾರರಾದ ಶ್ರೀಕಾಂತ್ ಎಸ್. ಹೆಗ್ಡೆ ಹೇಳಿದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ನಾವುಂದ, ಮರವಂತೆ ಶಾಖೆ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಆಶ್ರಯದಲ್ಲಿ ಶನಿವಾರ ಮರವಂತೆ ಶಾಖಾ ವಠಾರದಲ್ಲಿ ಆಯೋಜಿಸಲಾದ ಗ್ರಾಹಕರ ಸಭೆ, ಕಂದಾಯ ಇಲಾಖೆ ಮಾಹಿತಿ ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸಾರ್ವಜನಿಕರು ಸಾಧ್ಯವಾದಷ್ಟು ನೇರವಾಗಿ ಕಛೇರಿಗೆ ಬಂದರೆ ಅಗತ್ಯ ಸೌಲಭ್ಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮಖರಾಗಿದ್ದೇವೆ ಎಂದರು. ಹಿರಿಯ ಪತ್ರಕರ್ತರಾದ ಎಸ್. ಜನಾರ್ದನ ಮರವಂತೆ, ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಎಂ. ವಿನಾಯಕ ರಾವ್, ಭೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೆಶ್ವರ ಕಾಮತ್ ಪೆಟ್ರೋಲ್ ಪಂಪ್ ಪ್ರಸನ್ನ ನಾರಾಯಣ ಆಚಾರ್ಯ (47) ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು ಚಿನ್ನಾಭರಣಗಳನ್ನು ಹಾಗೂ ನಗದು ಹಣ ಕಳವುಗೈದ ಪ್ರಕರಣಕ್ಕೆ ಸಂಬಂದಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವೃತ್ತಿಪರ ಕಳವು ಆರೋಪಿಗಳಾದ ಕಾಸರಗೋಡಿನ ಹಾಶಿಮ್ ಎ ಎಚ್ (42 ವರ್ಷ) ಮಜೇಂಶ್ವರದ ಅಬೂಬಕ್ಕರ್ ಸಿದ್ದಿಕ್ (48 ವರ್ಷ) ಎಂಬಾತನನ್ನು ಮಡಿಕೇರಿಯಲ್ಲಿ ಡಿ.27ರಂದು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಪಾದಿತರು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ. ಮಲ್ವೆ ಪೋಲೀಸ್ ಠಾಣೆ. ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿದ್ದಾಗಿ ತಿಳಿಸಿ ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ಗೆ ಮಾರಾಟ ಮಾಡಿದ್ದರು. ಸದ್ರಿ ಜುವೆಲ್ಲರಿ ಅಂಗಡಿಯವನು ಹಾಜರುಪಡಿಸಿದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಧನವಂತರಿಗೆಲ್ಲಾ ಪರರಿಗೆ ಸಹಾಯ ಮಾಡುವಷ್ಟು ಔದಾರ್ಯವಿರಲ್ಲ. ಹೃದಯವಂತರು ಮಾತ್ರ ಇನ್ನೊಬ್ಬರ ಕಷ್ಟಕ್ಕೆ ಸ್ಪಂಧಿಸುತ್ತಾರೆ ಎಂದು ಅವಧೂತ ವಿನಯ್ ಗುರೂಜೀ ಹೇಳಿದರು. ಅವರು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ವತಿಯಿಂದ ಮರವಂತೆ ಗಾಂಧಿನಗರದ ಹಿಂದೂ ಕಾರ್ಯಕರ್ತ ರಾಜು ಮರವಂತೆ ಅವರಿಗೆ ನಿರ್ಮಿಸಿಕೊಡಲಾದ ‘ಶ್ರೀ ವರಲಕ್ಷ್ಮೀ ನಿಲಯ’ ಉದ್ಘಾಟಿಸಿ ಆಶೀರ್ವದಿಸಿ, ಪರರ ಕಷ್ಟಕ್ಕೆ ಸ್ಪಂದಿಸುವ ಶ್ರೇಷ್ಠ ಚಿಂತನೆಗಳು ಮುಖ್ಯ. ಪರರಿಗೆ ಒಳಿತಾಗಲು ಶ್ರಮಿಸುತ್ತಿರುವ ಡಾ. ಗೋವಿಂದ ಬಾಬು ಪೂಜಾರಿಯವರ ಸೇವಾ ಕೈಂಕರ್ಯ ಶ್ರೇಷ್ಠವಾದುದು ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಪ್ರಾಸ್ತಾವಿಕ ಮಾತನಾಡಿ, ಧರ್ಮ ಜಾಗೃತಿಗಾಗಿ ಹಾಗೂ ಹಿಂದುತ್ವದ ರಕ್ಷಣೆಗಾಗಿ ವೈಯಕ್ತಿಕ ಬದುಕನ್ನು ಮರೆತು ಧರ್ಮ ಕಾರ್ಯದಲ್ಲಿ ತೊಡಗುವ ಸಂಘಟನೆಯ ಕಾರ್ಯಕರ್ತರ ಪರಿಶ್ರಮ, ತ್ಯಾಗ ಸದಾ ಸ್ಮರಣೀಯವಾಗಿದೆ. ಅವರ ಕಷ್ಟ, ನೋವುಗಳಿಗೆ ಸ್ಪಂದಿಸಬೇಕಾಗಿರುವುದು ಧರ್ಮ. ಹೀಗಾಗಿ ಎಲ್ಲಾ ಪ್ರಮುಖರ ಮಾರ್ಗದರ್ಶನದಲ್ಲಿ ಹಿಂದೂ ಕಾರ್ಯಕರ್ತರ ಕಷ್ಟಕ್ಕೆ ಸ್ಪಂದಿಸಿ…
