ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-2026ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕುಂದಾಪುರದ ‘ಸುಜ್ಞಾನʼಪಿಯು ಕಾಲೇಜು ತನ್ನ ಮೊದಲ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೇ ಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಎಸ್ ಎಸ್ ಎಲ್ ಸಿಯಲ್ಲಿ ಶೇಕಡಾ 95ಕ್ಕಿಂತ ಅಧಿಕ ಫಲಿತಾಂಶ ಪಡೆದ ಕೇವಲ 9 ವಿದ್ಯಾರ್ಥಿಗಳನ್ನೊಳಗೊಂಡ ಒಟ್ಟು 125 ವಿದ್ಯಾರ್ಥಿಗಳಿರುವ ಸುಜ್ಞಾನ ಪಿಯು ಕಾಲೇಜಿನ ಪ್ರಥಮ ಬ್ಯಾಚ್ ನ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಅಧಿಕ ಅಂಕ ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ 84 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5 ಹಾಗೇ ಪ್ರಥಮ ಶ್ರೇಣಿಯಲ್ಲಿ ವಿಜ್ಞಾನ ವಿಭಾಗದಲ್ಲಿ 33, ವಾಣಿಜ್ಯ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಿರುವ ವಿಜ್ಞಾನ ವಿಭಾಗದ ಸಾಧಕರು: ಸಮ್ಮೆದ ಪಾರೀಸ ಭೋಜ: 587 ಅಂಕಗಳು ಸಿಂಚನಾ: 586 ಅಂಕಗಳು ಪ್ರತೀಕ್ಷಾ ಎಚ್. ಶೆಟ್ಟಿ: 586 ಅಂಕಗಳು ಎನ್. ರಕ್ಷಾ: 584…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025- 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ ಐದನೇ ವರ್ಷವೂ ಶೇಕಡ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 589ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿ:ಪಿಸಿಎಂಬಿ ವಿಭಾಗ:ಶ್ರಾವ್ಯ ಬಾಲಕೃಷ್ಣ 595, ತೇಜಸ್ ಆರ್ ಬಿ 594, ಮೋಕ್ಷ ಬಿ.ಎಂ. 593, ವರ್ಷಿತಾ ಎನ್ 593, ದಿಶಾ ಎ. 592, ಲೇಖನ್ ಕರಿಯಪ್ಪ ಎಂ.ಡಿ. 592, ಪೂರ್ಣಿಮಾ ಕೆ ಎ 592, ಪ್ರಜ್ಞಾ ಎಸ್ 591, ಅನನ್ಯ ರಾಜಶೇಖರ್ ಬಿ 590, ಧೃವ ವಿ ಬಿ 589, ಬಿಂದು ಪಿ ಗೌಡ 589, ನಾಗಶ್ರೀ ರಾಮಚಂದ್ರ ಗೌಡ 589, ತೇಜಸ್ ಹೆಗ್ಡೆ ಹೆಚ್ ಡಿ 589, ಭೂಮಿಕಾ ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ. 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ:ರಶ್ಮಿ ಪೈ 598, ಶ್ರಾವ್ಯ ದೇವಾಡಿಗ 597, ಅಕ್ಷತಾ ವೀರಣ್ಣ 596, ಪ್ರಜ್ಞಾ ಎಸ್. ಪೂಜಾರಿ 594, ಇಂಚರಾ ಅಶೋಕ್ 594, ಮಾನ್ಯ 592, ಪ್ರಸಾದ್ ಪೂಜಾರಿ 591, ಸ್ಮೃತಿಕಾ 590 ಅಂಕಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ:ಶಮ್ಯ ಶೆಟ್ಟಿ 597, ಪ್ರಥಮ ಕಾಂಚನ್ 596, ಸುಚಿತ್ರ 595, ಅನ್ವಿತಾ 594, ಸಾನಿಕಾ 593, ರನ್ಮಯ್ 592, ಕಲ್ಪಿತಾ 592, ಪ್ರೀತನ್ 591 ಅಂಕ ಗಳಿಸಿ ರಾಜ್ಯ ಮಟ್ಟದಲ್ಲೇ ವಿಶೇಷ ಸಾಧನೆ ಮಾಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯಕ್ಷಗಾನದಲ್ಲಿ ಕೋಟ ವೈಕುಂಠರ ಪಾತ್ರ ಗಣನೀಯವಾದದ್ದು ಎಂದು ಕೋಟದ ಅಮೃತೇಶ್ವರೀ ಮೇಳದ ಯಜಮಾನ ಆನಂದ್ ಸಿ. ಕುಂದರ್ ಹೇಳಿದರು. ಅವರು ಬುಧವಾರ ಕೋಟತಟ್ಟು ಬಾರಿಕೆರೆ ಹತ್ತು ಸಮಸ್ತರ ವತಿಯಿಂದ ಹಮ್ಮಿಕೊಂಡ ಕೋಟ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮೇಳದ ಗ್ರಾಮದ ಸೇವೆಯಾಟದಲ್ಲಿ ಕೋಟ ಸುರೇಶ್ ಬಂಗೇರರಿಗೆ ಯಕ್ಷಕಲಾವಿದ ಕೋಟ ವೈಕುಂಠ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಒರ್ವ ಕಲಾವಿದ ರಂಗಸ್ಥಳದಲ್ಲಿ ಹೇಗೆ ಪಳಗಬೇಕು ಎಂಬುವುದನ್ನು ಕೋಟ ವೈಕುಂಠರು ಆ ಕಾಲಘಟ್ಟದಲ್ಲಿ ತೊರಿಸಿಕೊಟ್ಟಿದ್ದಾರೆ,ಯಕ್ಷಗಾನ ಮೇಳವನ್ನು ಮುನ್ನುಡೆಸುವುದರೊಂದಿಗೆ ತನ್ನ ವೇಷ ನಿರ್ವಹಿಸುವ ಅವರ ಪರಿ ಪದಗಳಲ್ಲಿ ವರ್ಣಿಸಲು ಸಾಲದು ಅದೇ ರೀತಿ ತನ್ನ ಸಂಪ್ರದಾಯ ಬದ್ಧ ಯಕ್ಷಕಲೆಯ ಮೂಲಕ ಸುರೇಶ್ ಬಂಗೇರರು ಯಕ್ಷಕಲಾ ಕ್ಷೇತ್ರಕ್ಕೆ ಧಾರೆ ಎರೆದಿದ್ದಾರೆ ಎಂದರು. ಈ ಸಂದರ್ಭದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರರಿಗೆ ಕೋಟ ವೈಕುಂಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೋಟತಟ್ಟು ಗ್ರಾಮದ ಹಿರಿಯರಾದ ಒಳಮಾಡು ಸೋಮ ಮರಕಾಲ, ಯಕ್ಷ ಸಂಘಟಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಈ ವರ್ಷದ ಪದವಿ ಪೂರ್ವ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಒಟ್ಟು 175 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 92 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 83 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಂಜನಾ 595 ಅಂಕಗಳನ್ನು ಪಡೆದು 99.16% ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನವನ್ನು ತಂದುಕೊಟ್ಟಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಅಮೂಲ್ಯ ಕೂಡ 595 ಅಂಕಗಳನ್ನು ಗಳಿಸಿ 99.16% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆಡಿದ್ದಾರೆ. ಇವರ ಸಾಧನೆ ಕಾಲೇಜಿನ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ. ವಿದ್ಯಾರ್ಥಿಗಳ ಈ ಉಜ್ವಲ ಸಾಧನೆಗೆ ಉಪನ್ಯಾಸಕರ ಪರಿಶ್ರಮ, ಸಮರ್ಪಿತ ಬೋಧನೆ ಹಾಗೂ ಸಮಗ್ರ ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದ್ದು, ಸಂಸ್ಥೆಯ ಶೈಕ್ಷಣಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘ಕಂಪ್ಯೂಟೇಶನಲ್ ಇಂಟೆಲಿಜೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್ ಟೆಕ್ನಾಲಜೀಸ್’ (ICCIEST-2026) ಎಂಬ ಬೃಹತ್ ಅಂತರರಾಷ್ಟ್ರೀಯ ಸಮ್ಮೇಳನವನ್ನು ಅತ್ಯಂತ ವೈಭವದಿಂದ ಉದ್ಘಾಟಿಸಲಾಯಿತು. ದೀಪ ಬೆಳಗಿಸುವ ಮೂಲಕ ಚಾಲನೆಗೊಂಡ ಈ ಕಾರ್ಯಕ್ರಮದಲ್ಲಿ ಭಾರತದ ತಾಂತ್ರಿಕ ಮತ್ತು ರಕ್ಷಣಾ ವಲಯದ ಪ್ರಮುಖರು ಭಾಗವಹಿಸಿದ್ದರು. ಸೈಬರ್ ಸೆಕ್ಯೂರಿಟಿ ಅಸೋಸಿಯೇಷನ್ ಆಫ್ ಇಂಡಿಯಾ (ನವದೆಹಲಿ) ಮಹಾನಿರ್ದೇಶಕರು ಮತ್ತು ಎಂ.ಐ.ಟಿ.ಕೆ ಮುಖ್ಯ ಸಲಹೆಗಾರರಾದ ವಿಜಯಂತ್ ಗೌರ್ ಮಾತನಾಡಿ, “ನೀವು ಭವಿಷ್ಯದ ಡಿಜಿಟಲ್ ಕಾವಲುಗಾರರು” ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಡಿಜಿಟಲೀಕರಣ ಹೆಚ್ಚುತ್ತಿರುವ ಈ ಕಾಲದಲ್ಲಿ ಸೈಬರ್ ಭದ್ರತೆ ಕೇವಲ ವೃತ್ತಿಯಲ್ಲ, ಅದು ರಾಷ್ಟ್ರಕ್ಕೆ ಮಾಡುವ ಸೇವೆ ಎಂದು ಅವರು ಪ್ರತಿಪಾದಿಸಿದರು. ಲೆಫ್ಟಿನೆಂಟ್ ಕರ್ನಲ್ ಸಂತೋಷ್ ಖಾಡ್ಸರೆ ಅವರು ರೈತ ಕುಟುಂಬದಿಂದ ಬಂದು ಭಾರತೀಯ ಸೇನೆ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ತಾವು ಸಾಧಿಸಿದ ಹಾದಿಯನ್ನು ಹಂಚಿಕೊಂಡರು, ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿತು. ಉಡುಪಿ ಸೈಬರ್ ಕ್ರೈಮ್ ಇನ್ಸ್ಪೆಕ್ಟರ್ ನೀಲೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಂಘ ಸಂಸ್ಥೆಗಳು ಸಮಾಜದ ಆಗುಹೋಗುಗಳಿಗೆ ಸದಾ ಸ್ಪಂದಿಸಬೇಕು. ಪರಿಸರದ ಎಲ್ಲಾ ಚಟುವಟಿಕೆಗಳಲ್ಲಿ ಕೈಜೋಡಿಸಿ ಗ್ರಾಮದ ಅಭಿವೃದ್ಧಿಗೆ ಸಹಾಯ ಮಾಡಬೇಕು. ಸಮಾಜದಲ್ಲಿ ಅತ್ಯುತ್ತಮ ಸೇವೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಗಂಗೊಳ್ಳಿ ಲೈಟ್ಹೌಸ್ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಜರಗಿದ ಗಂಗೊಳ್ಳಿ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ನ 35ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರದ ವಿದ್ಯುತ್ ಗುತ್ತಿಗೆದಾರ ಕೆ.ಆರ್. ನಾಯ್ಕ್, ಶ್ರೀ ನಾರಾಯಣಗುರು ಜನ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಪೂಜಾರಿ, ಪಂಚಗಂಗಾವಳಿ ಬಳಗ ಗಂಗೊಳ್ಳಿ ಇದರ ಅಧ್ಯಕ್ಷ ರೋಶನ್ ಖಾರ್ವಿ, ಗುತ್ತಿಗೆದಾರ ಜಯಂತ್ ಶೇರುಗಾರ್, ಗಂಗೊಳ್ಳಿ ಗ್ರಾಪಂ ಸದಸ್ಯ ಮಹೇಶ್ (ಅಯ್ಯಪ್ಪ), ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಯೂತ್ ಕ್ಲಬ್ ಅಧ್ಯಕ್ಷ ಕೆ.ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ ಹಾಗೂ ಶಾಲೆಯನ್ನು ಜ್ಞಾನನಿಧಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಸ್ವಯಂ ಸ್ಫೂರ್ತಿ ಫೌಂಡೇಶನ್ ಸಹಕಾರದೊಂದಿಗೆ ಟೊರೆಂಟೋ ಟೆಕ್ನಾಲಾಜಿಸ್ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್ಆರ್ ನಿಧಿಯಿಂದ ಈ ಕೌಶಲ್ಯ ಕೇಂದ್ರ ಸ್ಥಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಸ್ವಯಂ ಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ್ ಶೆಟ್ಟಿ ಜಡ್ಕಲ್ ಕೌಶಲ್ಯಾಭಿವೃದ್ಧಿಯ ಮಹತ್ವವನ್ನು ಒತ್ತಿಹೇಳಿದರು. ಈ ಸಂದರ್ಭದಲ್ಲಿ ಜ್ಞಾನನಿಧಿ ಟ್ರಸ್ಟ್ ಶಾಲೆಯನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಎಸ್ಡಿಎಮ್ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕರು, ವಿದ್ಯಾರ್ಥಿ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006 ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 27 ಕೊನೆಯ ದಿನವಾಗಿದ್ದು, ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಮೇ. 2ರಂದು ನಡೆಯಲಿರುವ ರ್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೈಹಿಕ ಆರೋಗ್ಯಕ್ಕೆ ಮಾನಸಿಕ ಸ್ವಾಸ್ತ್ಯ ಅಗತ್ಯ. ಒಳ್ಳೆಯ ಆರೋಗ್ಯಕ್ಕೆ ಸಂತೋಲನ ಆಹಾರ, ಪೌಷ್ಟಿಕ ಆಹಾರ, ಸಕ್ಕರೆಯ ಮಿತವಾದ ಬಳಕೆ ಅತ್ಯಂತ ಅವಶ್ಯಕ. ವಿದ್ಯಾರ್ಥಿ ದೆಸೆಯಲ್ಲಿಯೇ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿರುವುದು ವರ್ತಮಾನದ ತುರ್ತು ಎಂದು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇಲ್ಲಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಶಿಶು ತಜ್ಞರಾದ ಡಾ. ಮಾಧವ ಪೈ ಕೆ. ತಿಳಿಸಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2ರ ಆಶ್ರಯದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಸುಶ್ಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಪಲ್ಲವಿ ಪ್ರಾರ್ಥಿಸಿ, ನಿಶಾ ಶೆಟ್ಟಿ ಸ್ವಾಗತಿಸಿ, ಎನ್.ಎಸ್.ಎಸ್. ಸ್ವಯಂಸೇವಕರರಾದ ಶ್ರೇಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದ, ದೀಪಿಕಾ ಶೆಟ್ಟಿ ವಂದಿಸಿದರು.
