Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ಸಂದೀಪನ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದ ರಾಜ್ಯಕ್ಕೆ 7ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ಬವಳಾಡಿ ಸಹಿಪ್ರಾ ಶಾಲೆಯ ಶಿಕ್ಷಕ ರಾಘವೇಂದ್ರ ಕಲ್ಲುಕಂಟ, ಬೈಂದೂರು ಸ.ಪ.ಪೂ ಕಾಲೇಜಿನ ಸಹಶಿಕ್ಷಕಿ ರಮಾವತಿ ದಂಪತಿಗಳ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಮತ್ತು ಲಿಟ್ಲ್ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024ರ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದು ರಾಜ್ಯಕ್ಕೆ 5ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾಳೆ. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಅಮಾಸೆಬೈಲು, ಮೇ.9 : ಡ್ಯುಯಲ್ ಸ್ಟಾರ್ ಶಾಲೆ ಅಮಾಸಬೈಲುಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದಾಖಲಾಗಿಸಿದೆ. ಶಾಲೆಯ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಅಮಾಸೆಬೈಲಿನ ಮನಸ್ವಿ ರಾವ್ 601 (96.16%), ಸೃಜನ್ ಜೆ. ಪೂಜಾರಿ 586 (93.76%), ಶ್ರಾವ್ಯ ಎನ್.581 (92.96%) ಅಧಿಕ ಅಂಕವನ್ನು ಪಡೆದು ತೆರ್ಗಡೆಗೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.

Read More

ಕುಂದಾಪ್ರ ಡಾ ಕಾಂ ಸುದ್ದಿಶಂಕರನಾರಾಯಣ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ನ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 54 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಾಲೆಯ ವಿದ್ಯಾರ್ಥಿನಿ ಪ್ರಣಮಿ 615 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹತ್ತನೇ ರ್ಯಾಂಕ್ ಮತ್ತು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿನಿ ಮಹಿಮ 612 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹದಿಮೂರನೇ ರ್ಯಾಂಕ್ ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾ ಕಾಂ ಸುದ್ದಿಬೈಂದೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರಿನ ರತ್ತೂಬಾಯಿ ಜನತಾ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳು ಪೈಕಿ, 43 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶ್ರೇಯ 596 ಅಂಕಗಳಿಸಿ ಶಾಲೆಗೆ ಪ್ರಥಮ, ನಿಹಾಲ್ 589 ಅಂಕದೊಂದಿಗೆ ದ್ವೀತಿಯ ಹಾಗೂ ರಾಘವೇಂದ್ರ 577 ತೃತೀಯ ಅಂಕ ಗಳಿಸಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಹೆಮ್ಮಾಡಿ ಶ್ರೀ ವಿವಿವಿ ಮಂಡಳಿ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಹಾಗೂ ಮುಖ್ಯೋಪಧ್ಯಾಯರಾದ ಆನಂದ ಮದ್ದೋಡಿ , ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದ್ದು, ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ -ತಾಂತ್ರಿಕ ಹಾಗೂ ಮ್ಯಾನೇಜ್ ಮೆಂಟ್ ಸ್ಪರ್ಧಾಕೂಟ ವಿಜೃಂಭಣೆಯಿಂದ ಜರುಗಿದ್ದು ಎರಡನೆಯ ದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ,ಕಾರ್ಯಕ್ರಮದ ಸಂಚಾಲಕ, ಉಪ ಪ್ರಾಂಶುಪಾಲ ಡಾ.ಮೆಲ್ವಿನ್ ಡಿಸೋಜಾ, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಈ ಕಾರ್ಯಕ್ರಮ ನಡೆಸಿಕೊಟ್ಟರು. ವಿವಿಧ ವಿಭಾಗದಲ್ಲಿ 25ಕ್ಕೂ ಹೆಚ್ಚಿನ ಸ್ಪರ್ದೆಗಳನ್ನು ನಡೆಸಿದ್ದು 30ಕ್ಕೂ ಹೆಚ್ಚು ಕಾಲೇಜುಗಳು ಭಾಗವಹಿಸಿದ್ದವು. ಅವುಗಳಲ್ಲಿ ಹೆಚ್ಚು ಆಕರ್ಷಣೆಯ ಸ್ಪರ್ಧೆಯಾದ ವೆರೈಟಿ ಶೋ ಅಲ್ಲಿ ಡಾ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಪ್ರಥಮ ಸ್ಥಾನ ಗಳಿಸಿದರೆ, ಎಮ್ ಜಿ ಎಮ್ ಕಾಲೇಜು ಉಡುಪಿ ದ್ವಿತೀಯ ಸ್ಥಾನ ಪಡೆಯಿತು. ಎಲ್ಲ ಸ್ಪರ್ದೆಯ ವಿಜೇತರುಗಳಿಗೆ ಕ್ಯಾಶ್ ಪ್ರೈಸ್ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು ಸಾಂಸ್ಕೃತಿಕ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಡಾ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಚಾಂಪಿಯನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದ NATA (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2023-24ನೇ ಶೈಕ್ಷಣಿಕ ವರ್ಷದ ಐ. ಸಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರೀಯ ಐ. ಸಿ. ಎಸ್. ಇ. ಪಠ್ಯಕ್ರಮ ಆಧಾರಿತ ಶಿಕ್ಷಣದಲ್ಲಿ ಸತತವಾಗಿ 21ನೇ ಬಾರಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದ ಕುಂದಾಪುರ ತಾಲೂಕಿನ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಪರೀಕ್ಷೆಗೆ ಹಾಜರಾದ 173 ವಿದ್ಯಾರ್ಥಿಗಳಲ್ಲಿ 119 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ತನ್ವಿಶ್ರೀ ಎಸ್. ಆಚಾರ್ ಮತ್ತು ಮಾನ್ಯ ಪೂಜಾರಿ 97.4 ಶೇಕಡಾ ಅಂಕದೊಂದಿಗೆ ಪ್ರಥಮ, ಜ್ಞಾನದೀಪ್ ವಿ. ಶೆಟ್ಟಿ 96 ಶೇಕಡಾ ಅಂಕದೊಂದಿಗೆ ದ್ವಿತೀಯ, ಪಾವನಿ ಪಾಟೀಲ್ 95.8 ಶೇಕಡಾ ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಟಾನ, ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ರಜತ ವರ್ಷದ ಸಂಭ್ರಮದಲ್ಲಿ ಎರಡು ಗಿನ್ನಿಸ್ ಪ್ರಶಸ್ತಿ ಪುರಸ್ಕೃತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಇಂದು ನಡೆದಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ.78.24 ಮತದಾನ ನಡೆದಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.76.40 ಮತದಾನ ನಡೆದಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ 83.61%, ಶಿಕಾರಿಪುರ-82.66%, ಸಾಗರ-80.2%, ಭದ್ರಾವತಿ-71.72%, ಸೊರಬ-83.27%, ತೀರ್ಥಹಳ್ಳಿ-82.23%, ಶಿವಮೊಗ್ಗ-70.33%, ಬೈಂದೂರು-76.4% ಮತದಾನವಾಗಿದೆ. ಬೆಳಿಗ್ಗೆ 9 ಗಂಟೆಯ ತನಕ ಶಿವಮೊಗ್ಗ ಕ್ಷೇತ್ರದಲ್ಲಿ ಶೇ.11.45 ಮತದಾನ, ಮಧ್ಯಾಹ್ನ 1 ಗಂಟೆಯ ತನಕ ಶೇ.45.19 ಮತದಾನ, ಮಧ್ಯಾಹ್ನ 3 ಗಂಟೆಗೆ ಶೇ.58.04 ಮತದಾನವಾಗಿದ್ದು, ಅಂತಿಮವಾಗಿ ಶೇ.78.24 ಮತದಾನವಾಗಿದೆ. ಬೈಂದೂರು ಕ್ಷೇತ್ರದಲ್ಲಿ ಹಳ್ಳಿಹೊಳೆ ಬೂತ್‌ 141ರಲ್ಲಿ ಅತಿಹೆಚ್ಚು ಶೇ.88 ಹಾಗೂ ಶಿರೂರು ಮೇಲ್ಪಂಕ್ತಿ ಬೂತ್‌ 3ರಲ್ಲಿ ಅತಿ ಕಡಿಮೆ ಶೇ.66.67 ಮತದಾನವಾಗಿದೆ.  ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ತಂದೆ, ಮಾಜೀ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಹೋದರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕುಟುಂಬಿಕರ ಜೊತೆ ಮತ ಚಲಾಯಿಸಿದರು. ಸೊರಬದಲ್ಲಿ ಜಿಲ್ಲೆಯ ಉಸ್ತುವಾರಿ…

Read More