ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುಷ್ಯನ ಅರ್ಧ ವ್ಯವಹಾರಗಳು ಭೌತಿಕ ಪ್ರಪಂಚದಲ್ಲಿ ನಡೆದರೆ, ಉಳಿದರ್ಧ ಸೌಂದರ್ಯೋಪಾಸನೆಗೆ ಪೂರಕವಾದ ಭಾವ ಪ್ರಪಂಚದಲ್ಲಿ ನಡೆಯಬೇಕು. ಬದುಕು ಕೇವಲ ಭೌತಿಕ ಪ್ರಪಂಚಕ್ಕೆ ಮಾತ್ರ ಸೀಮಿತವಾದರೆ ಅದು ಶುಷ್ಕವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು. ನಾಗೂರಿನ ಕೆಎಎಸ್ ಆಡಿಟೋರಿಯಂನಲ್ಲಿ ನಡೆದ ಕುಸುಮ ಸಂಸ್ಥೆ ಬೆಳ್ಳಿಹಬ್ಬ ಸಂಭ್ರಮ, ನವೀಕೃತ ಪೆಟಲ್ಸ್ ಆರ್ಟ್ ಗ್ಯಾಲರಿ ಅನಾವರಣ, ಕಲಾ ಗಣಪ-2 ಸ್ಪರ್ಧೆಯ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಕುಸುಮ ೨೫ನೆ ವರ್ಷಾಚರಣೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ಸೌಂದರ್ಯೋಪಾಸನೆ, ಕಲಾಸ್ವಾದನೆಯ ಮಹತ್ವವನ್ನು ಸಾರಿದ ಕವಿ ರವೀಂದ್ರರ ರೂಪಕವೊಂದನ್ನು ಉಲ್ಲೇಖಿಸಿದ ಜನಾರ್ದನ ಅವರು, ಉದ್ಯಮಿ ಎಚ್. ನಳಿನ್ಕುಮಾರ ಶೆಟ್ಟಿ 25 ವರ್ಷಗಳ ಹಿಂದೆ ಸ್ಥಾಪಿಸಿದ ತಮ್ಮ ಕುಸುಮ ಫೌಂಡೇಶನ್ ಆಶ್ರಯದಲ್ಲಿ ನಡೆಸುತ್ತ ಬಂದಿರುವ ವಿವಿಧ ಕಲಾ ತರಗತಿಗಳು ಮತ್ತು ಕಾರ್ಯಕ್ರಮಗಳು ನಾಗೂರು ಪರಿಸರವನ್ನು ಕಲಾಸಮೃದ್ಧಗೊಳಿಸಿವೆ ಎಂದು ಹೇಳಿದರು. ಕುಂದಾಪುರ ಮಿಡ್ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಸಂತೋಷಕುಮಾರ ಶೆಟ್ಟಿ ಕಾವ್ರಾಡಿ ಅಧ್ಯಕ್ಷತೆ ವಹಿಸಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅರವಿಂದ ಪೂಜಾರಿ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಬೈಂದೂರು ತಾಲೂಕು ನಾಡ ಪಡುಕೋಣೆಯವರಾದ ಅರವಿಂದ ಪೂಜಾರಿ ಅವರು ಕಾಂಗ್ರೆಸ್ ಪಕ್ಷದ ಸದಸ್ಯರಾಗಿ, ಕಾರ್ಯದರ್ಶಿಯಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಇದೀಗ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದವಿ ದೊರೆತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಳ್ಳೂರು ಕಂದಾವರ ಗುಂಡಾಡಿಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವನ ಮನೆಯಲ್ಲಿ ವಿದ್ಯುತ್ ಸಂಪರ್ಕವಿಲ್ಲದಿರುವುದನ್ನು ಮನಗಂಡು ಸೆಲ್ಕೋ ಸೋಲಾರ್ ವತಿಯಿಂದ ಉಚಿತವಾಗಿ ಎರಡು ಸೋಲಾರ್ ಲೈಟ್ ಮತ್ತು ಮೊಬೈಲ್ ಚಾರ್ಜಿಂಗ್ ಪಾಯಿಂಟ್ ಸಿಸ್ಟಮ್ ಅಳವಡಿಸಲಾಯಿತು. ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಮಣಿಕಂಠನ ತಂಗಿ ಐಶ್ವರ್ಯ ವಿದ್ಯಾಭ್ಯಾಸ ತ್ಯಜಿಸಿ ತಾಯಿಯೊಂದಿಗೆ ಮನೆಯಲ್ಲಿ ಗೇರು ಬೀಜ ಸುಲಿಯುವ ಕೆಲಸ ಮಾಡುತ್ತಿದ್ದಾಳೆ. ಸೋಲಾರ್ ಲೈಟ್ ಅಳವಡಿಸುವ ಕಾರ್ಯಕ್ರಮದಲ್ಲಿ ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನುಪಮಾ ಶೆಟ್ಟಿ, ಸೆಲ್ಕೋ ಸೋಲಾರ್ ಸಂಸ್ಥೆಯ ಏರಿಯ ಮ್ಯಾನೇಜರ್ ಶೇಖರ್ ಶೆಟ್ಟಿ , ಶಾಖಾ ಪ್ರಬಂಧಕರಾದ ಮಂಜುನಾಥ್, ಧರ್ಮಸ್ಥಳ ಗ್ರಾಮಾಅಭಿವೃದ್ಧಿ ಯೋಜನೆಯ ಬಸ್ರೂರು ವಲಯದ ವಲಯ ಅಧ್ಯಕ್ಷ ಅಶೋಕ್ ಕೆರೆಕಟ್ಟೆ, ವಲಯದ ಮೇಲ್ವಿಚಾರಕಿ ಶಕುಂತಲಾ, ಒಕ್ಕೂಟದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಉದಯ್ ಹೇರಿಕೆರೆ, ಸೆಲ್ಕೋ ಸೋಲಾರ್ ಸೇವಾ ಪ್ರತಿನಿಧಿ ಮಂಜುನಾಥ್ ಶೆಟ್ಟಿ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.25: ಭಂಡಾರ್ಕಾರ್ಸ್ ಕಾಲೇಜು ನೇತೃತ್ವದಲ್ಲಿ ಕುಂದಾಪುರ ಪುರಸಭೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು, ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅಕ್ಟೋಬರ್ 2ರ , ಕಳೆದ ವರ್ಷದಂತೆ ಸ್ವಚ್ಛ ಕುಂದಾಪುರ-ನಮ್ಮ ಕುಂದಾಪುರ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. ಅವರು ಕಾಲೇಜಿನ ಎ.ವಿ. ಹಾಲಿನಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, 60ನೇ ವರ್ಷದ ಸಂಭ್ರಮದಲ್ಲಿರುವ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಸುಮಾರು 3000 ವಿದ್ಯಾರ್ಥಿಗಳಿಗೆ ಈ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡಿದೆ. ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆ ದಿನದಂದು ಬೃಹತ್ ಸ್ವಚ್ಛ ಕುಂದಾಪುರ-ನಮ್ಮ ಕುಂದಾಪುರ ಎಂಬ ಜನ ಜಾಗೃತಿ ಕಾರ್ಯಕ್ರಮವನ್ನು ಕುಂದಾಪುರದ 23 ವಾರ್ಡುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಜನರಲ್ಲಿ ಸ್ವಚ್ಛತೆ ಕುರಿತುಅರಿವು ಮೂಡಿಸಲು ಕುಂದಾಪುರ ಪುರಸಭಾ ವ್ಯಾಪ್ತಿಯ ಸುಮಾರು 15,000ಕ್ಕೂ ಮಿಕ್ಕಿ ಮನೆಗಳನ್ನು ಸಂಪರ್ಕ ಮಾಡಲಾಗುತ್ತದೆ ಎಂದರು. ಕುಂದಾಪುರ ಪುರಸಭೆ ಪುರ ಸ್ವಚ್ಛತೆ ಕುರಿತು ಉತ್ತಮವಾದ ಸೇವೆ ಸಲ್ಲಿಸುತ್ತಿದ್ದು, ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಪಡೆದಿದೆ. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಮೊಗರವೀರ ಗರಡಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿಯ24 ವರ್ಷದ ಕಾರ್ಯಕಾರಿ ಸಮಿತಿ ರಚನೆಯು ಭಾನುವಾರ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಸಸಿಹಿತ್ಲು ತಗ್ಗರ್ಸೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಗಾಣಿಗ ಹೆಗ್ಗೇರಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ ಎಂದು ಸಮಿತಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಂಜಾಬ್ ರಾಜ್ಯದ ಲುಧಿಯಾನದ ಶ್ರೀ ಬೈನಿ ಸಾಹಿಬ್ ಗುರುದ್ವಾರ ನಡೆಸುವ ರಾಷ್ಟ್ರೀಯ ಮಟ್ಟದ ಹಿಂದುಸ್ಥಾನಿ ಖಯಾಲ್ ಗಾಯಕಿ ಸಂಗೀತ ಸ್ಪರ್ಧೆಯ ಕಿರಿಯರ ವಿಭಾಗದ ಆನ್ಲೈನ್ ಪ್ರಥಮ ಸುತ್ತಿನಲ್ಲಿ ಯಶಸ್ವಿಯಾದ ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. ಈ ಸುತ್ತಿನ ಸ್ಪರ್ಧೆಯು ನವದೆಹಲಿ, ಕೊಲ್ಕತ್ತಾ, ಪುಣೆಯಲ್ಲಿ ನಡೆಯಲಿದ್ದು ಕೇದಾರ್, ನವಂಬರ್ 4 ಮತ್ತು 5ರಂದು ಪುಣೆಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲು ಆಮಂತ್ರಿತರಾಗಿದ್ದಾರೆ. ಕೇದಾರ್ ಮರವಂತೆ ಗುರು ಬಿ. ರಾಘವೇಂದ್ರ ಉಪಾಧ್ಯಾಯರ ಬಳಿ ಆರಂಭಿಕ ಸಂಗೀತ ಕಲಿಕೆ ನಡೆಸಿದ್ದು, ಆ ಬಳಿಕ ೮ ವರ್ಷಗಳಿಂದ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಅವರಿಂದ ಸಂಗೀತ ಅಭ್ಯಾಸ ನಡೆಸುತ್ತಿದ್ದಾರೆ. ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕೇದಾರ್, ಸಂಗೀತಾಸಕ್ತ ದಂಪತಿ ಜತೀಂದ್ರ ಮರವಂತೆ-ಡಾ. ರೂಪಶ್ರೀ ದಂಪತಿಯ ಪುತ್ರ. ► ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಟ್ಟ ಅಡವಿಯೊಳಗೆ ನಾಪತ್ತೆಯಾಗಿದ್ದ ಯುವಕ 8 ದಿನಗಳ ನಂತರ ಪ್ರತ್ಯಕ್ಷವಾದ ಘಟನೆ ಶನಿವಾರ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟುವಿನಲ್ಲಿ ನಡೆದಿದೆ. ಇರ್ಕಿಗದ್ದೆ ಶೀನ ನಾಯ್ಕ ಅವರ ಪುತ್ರ ವಿವೇಕಾನಂದ (28) ಸೆ. 16ರ ಮಧ್ಯಾಹ್ನ ಕಂಬಕ್ಕಾಗಿ ಮರವೊಂದನ್ನು ಕಡಿದು ತರಲೆಂದು ಹೋಗಿದ್ದು, ದಾರಿ ತಪ್ಪಿ ಅರಣ್ಯದಲ್ಲಿ ಕಾಣೆಯಾಗಿದ್ದರು. ಶನಿವಾರ ಮನೆಯಿಂದ 4 ಕಿ.ಮೀ. ದೂರದ ಕಬ್ಬಿನಾಲೆಯ ಕಾಡಿನ ಸಮೀಪ ಪತ್ತೆಯಾಗಿದ್ದಾರೆ. ಅವರೊಂದಿಗೆ ತೆರಳಿದ್ದ ನಾಯಿ ಜತೆಗೇ ಇದ್ದು ಸ್ವಾಮಿನಿಷ್ಠೆ ಮೆರೆದಿದೆ. ಸೆ. 16ರ ಮಧ್ಯಾಹ್ನ ವಿವೇಕಾನಂದ ಕಾಡಿಗೆ ಹೋಗಿದ್ದರು. ಜತೆಗೆ 2 ಸಾಕುನಾಯಿಗಳೂ ಹೋಗಿದ್ದವು. ಅದರಲ್ಲೊಂದು ಮರಳಿತ್ತು. ಮನೆಯವರಿಗೆ ಆತ ಕಾಡಿಗೆ ತೆರಳಿದ್ದು ಗೊತ್ತಿರಲಿಲ್ಲ. ಹಳೆಯ ಮಾಳಿಗೆ ಮನೆಯಾಗಿದ್ದರಿಂದ ಮಧ್ಯಾಹ್ನ ಊಟ ಮಾಡಿ ಮಹಡಿಯಲ್ಲಿ ಮಲಗಿರಬಹುದು ಅಂದು ಕೊಂಡಿದ್ದರು. ಸಂಜೆಯಾದಾಗ ಆತ ಕಾಣಿಸದ ಕಾರಣ ಆತಂಕಗೊಂಡ ಮನೆಯವರು ಅಕ್ಕಪಕ್ಕದವರಿಗೆ ಸುದ್ದಿ ತಿಳಿಸಿ ಹುಡುಕಾಟ ಆರಂಭಿಸಿದರು. ರಾತ್ರಿ 12ರ ವರೆಗೂ ಕಾಡಿನಲ್ಲಿ ನೂರಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ 2022 -23ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಇಲ್ಲಿನ ಜಯಶ್ರೀ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಂತೋಷಕುಮಾರ್ ಶೆಟ್ಟಿ ಅವರು ಮಾತನಾಡಿ, ಸಂಘವು ಒಟ್ಟು 2.92 ಪಾಲು ಬಂಡವಾಳ, 66.15 ಕೋಟಿ ಠೇವಣಿ ಹೊಂದಿದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ 23.52 ಕೋಟಿ ಪಾವತಿಸಬೇಕಾದ ಹೊರಬಾಕಿ ಸಾಲವಿದ್ದರೇ, ಸದಸ್ಯರಿಂದ 76.86 ಕೋಟಿ ಹೊರಬಾಕಿ ಸಾಲ ಹೊಂದಿದೆ. ಈ ಪೈಕಿ ಶೇ.26.61ರಷ್ಟನ್ನು ಕೃಷಿ ಉದ್ದೇಶಕ್ಕೆ ಸಾಲ ನೀಡಲಾಗಿದೆ. ವರದಿ ವರ್ಷದಲ್ಲಿ ಸಂಘವು 1.28 ಕೋಟಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಟ್ ಘೋಷಿಸಲಾಗಿದೆ ಎಂದರು. ವೈಯಕ್ತಿಕ ಸಾಲ, ಚಿನ್ನಾಭರಣ ಹಾಗೂ ವಾಹನ ಸಾಲ ಬಡ್ಡಿಯನ್ನು ತಗ್ಗಿಸಲಾಗಿದ್ದು, ಈ ಭಾರಿಯಿಂದ ಗೃಹಸಾಲ ನೀಡುವ ಉದ್ದೇಶಿಸಲಾಗಿದೆ. ಶೈಕ್ಷಣಿಕವಾಗಿ ಸಾಧನೆಗೈದ ಸದಸ್ಯರ ಮಕ್ಕಳಿಗೆ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರ ಚಿಕಿತ್ಸೆಗಾಗಿ ನೆರವು ನೀಡಲಾಗುತ್ತಿದೆ ಎಂದರು. ಈ ಸಂದರ್ಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 24ರ ಭಾನುವಾರ ಆಸರೆ ಮತ್ತು ನವಚೇತನ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಬಂಟರ ಯಾನೆ ನಾಡವರ ಸಂಕೀರ್ಣದ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದು, ಎಂ ಆರ್ ಜಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟನೆ ಮಾಡಲಿದ್ದಾರೆ. ಹೇರಂಭ ಆಗ್ರೋ ಇಂಡಸ್ಟ್ರೀಸ್ ಮುಂಬೈನ ಆಡಳಿತ ನಿರ್ದೇಶಕ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದೀಪ ಪ್ರಜ್ವಲನ ಮಾಡಲಿದ್ದು, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಭಿನಂದನಾ ನುಡಿಗಳನಾಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಹಿರಿಯ ಗಣ್ಯರಿಗೆ ದಶಮ ಸಂಭ್ರಮ ಪ್ರಶಸ್ತಿಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರಿನ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಪ್ರಧಾನ ಮಾಡಲಿದ್ದಾರೆ. Watch Live…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಿರಿಜಾ ಸರ್ಜಿಕಲ್ಸ್ ಕುಂದಾಪುರದ ಪ್ರಾಯೋಜಕತ್ವದಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಮತ್ತು ಮಂಥನ ಸಂಸ್ಥೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಿರೂಪಕ ಅವಿನಾಶ್ ಕಾಮತ್ ಸಂಯೋಜಿತ ‘ಕೂತು ಮಾತಾಡುವ’ ಕಾರ್ಯಕ್ರಮ ಇತ್ತಿಚಿಗೆ ಗಿರಿಜಾ ಸರ್ಜಿಕಲ್ಸ್ ಆವರಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕುಂದಾಪುರದವರೇ ಆದ ಕಾರ್ಕಳದಲ್ಲಿ ಉಚಿತ ಅನಾಥಾಶ್ರಮ ನಡಿಸುತಿರುವ ಬಡವರ, ನಿರ್ಗತಿಕರ, ಅನಾಥರ ಪಾಲಿನ ತಾಯಿ ಆಯಿಷಾ ಬಾನು ಅವರನ್ನು ಎಲ್ಲಾ ಸಂಸ್ಥೆಗಳ ವತಿಯಿಂದ ಸನ್ಮಾನಿಸಿ ಗೌರವಿಸಿ ಸಣ್ಣ ಮಟ್ಟದ ಆರ್ಥಿಕ ಸಹಾಯ ವನ್ನೂ ನೀಡಲಾಯಿತು. ಕೂತು ಮಾತಾಡುವ ಸರಣಿ ಕಾರ್ಯಕ್ರಮವನ್ನು ನ್ಯಾಯವಾದಿ ಎ.ಎಸ್. ಎನ್. ಹೆಬ್ಬಾರ್ ಉದ್ಘಾಟಿಸಿದರು. ಗಿರಿಜಾ ಗ್ರೂಪ್ ಆಪ್ ಕಾನ್ಸರ್ನ್ಸ್ ನ ರವೀಂದ್ರ ಶೆಟ್ಟಿ , ಸುರೇಖಾ ರವೀಂದ್ರ ಶೆಟ್ಟಿ , ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಮತ್ತು ಮಂಥನ ಸಂಸ್ಥೆ ಕುಂದಾಪುರದ ಎಲ್ಲಾ ಪದಾಧಿಕಾರಿಗಳು ಸದಸ್ಯರು ಮತ್ತು ಕೂತು ಮಾತಾಡುವ ಕಾರ್ಯಕ್ರಮದ ರೂವಾರಿ ಅವಿನಾಶ್ ಕಾಮತ್ ಉಪಸ್ಥಿತರಿದ್ದರು.
