Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶತಮಾನೋತ್ಸವ ಕಂಡ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರತಿವರ್ಷ ಹಳೆ ವಿದ್ಯಾರ್ಥಿಗಳ ಕೊಡುಗೆ ಒಂದಕ್ಕಿಂತ ಒಂದು ಹೆಚ್ಚು, ಶಿಕ್ಷಣಕ್ಕೆ ಆದ್ಯತೆ ನೀಡಿ ನಾವು ಓದಿದ ಶಾಲೆ ಎಂಬ ಪ್ರೀತಿಯಿಂದ ಹಳೆ ವಿದ್ಯಾರ್ಥಿಗಳು ಶಾಲೆಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವದ ನೆನಪಿಗಾಗಿ ನಿರ್ಮಿಸಲಾಗಿರುವ ಎರಡು ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯನ್ನು ಹೇಗೆ ಮಾಡಿ ತೋರಿಸಬಹುದು ಎಂಬುದಕ್ಕೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿದರ್ಶನ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 50ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳು ಸುಮಾರು 50 ಇದ್ದರೆ, 6-7 ಮಕ್ಕಳಿರುವ ಶಾಲೆಗಳಿವೆ. ಇಂತಹ ಸಂದರ್ಭದಲ್ಲಿ ಬೈಂದೂರು ವಲಯದಲ್ಲಿ ಅತೀ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಗುಜ್ಜಾಡಿ ಶಾಲೆ ಬೇರೆ ಶಾಲೆಗಳಿಗೆ ಮಾದರಿಯಾಗಿದೆ ಎಂದರು. ಕಳೆದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಬಿತ್ತನೆಗೆ ಪೂರ್ವಸಿದ್ಧತಾ ಕ್ಷೇತ್ರ ಮಟ್ಟದಲ್ಲಿ ಪ್ರಗತಿಯಲ್ಲಿರುತ್ತದೆ. ಕೃಷಿ ಇಲಾಖೆಯಿಂದ ರೈತರಿಗೆ ಅವಶ್ಯವಿರುವ ಎಂ.ಓ-4 ತಳಿಯ ಬಿತ್ತನೆ ಬೀಜವನ್ನು ಜಿಲ್ಲೆಯ 9 ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಲಾಗಿದ್ದು, ಸಹಾಯಧನದಲ್ಲಿ ರೈತರು ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಗೆ ಮುಂಗಾರು ಹಂಗಾಮಿಗೆ ಅಂದಾಜು 2,500 ಕ್ವಿಂಟಾಲ್‌ನಷ್ಟು ಬಿತ್ತನೆ ಬೀಜದ ಅವಶ್ಯಕತೆಯಿದ್ದು, ಈಗಾಗಲೇ 2,800 ಕ್ವಿಂಟಾಲ್ ಎಂ.ಓ-4 ಬಿತ್ತನೆ ಬೀಜ ಸರಬರಾಜಿಗೆ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, 1,696 ಕ್ವಿಂಟಾಲ್ ಎಂ.ಓ-4 ಬಿತ್ತನೆ ಬೀಜವನ್ನು ರೈತ ಸಂರ್ಪಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಲಾಗಿದೆ. ಬಿತ್ತನೆ ಬೀಜವನ್ನು ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಕೆ.ಜಿಗೆ ರೂ. 8 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿ ಕೆ.ಜಿಗೆ ರೂ. 12 ರ ಸಹಾಯಧನದಲ್ಲಿ ಒದಗಿಸಲಾಗುತ್ತಿದೆ. ಪ್ರಸ್ತುತ 1058 ಮಂದಿ ರೈತರಿಗೆ 475 ಕ್ವಿಂಟಾಲ್ ಬಿತ್ತನೆ ಬೀಜವನ್ನು ವಿತರಿಸಲಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ಹಂತಹಂತವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಸ ಎಸೆಯುವ ಕೈಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಆಗ ಮಾತ್ರ ಎಸೆಯುವ ಮನಸ್ಥಿತಿ ಕ್ಷೀಣಿಸುತ್ತದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು. ಅವರು ಭಾನುವಾರ ಕೋಟತಟ್ಟುವಿನ ಹಂದಟ್ಟಿನ ಸೀತಾನದಿ ತಟದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ಕೋಟತಟ್ಟು ಗ್ರಾಮಪಂಚಾಯತ್, ಗೆಳೆಯರ ಬಳಗ ಹಂದಟ್ಟು ಸಹಯೋಗದೊಂದಿಗೆ 255ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು. ತ್ಯಾಜ್ಯದ ಕೊಂಪೆ ದಿನದಿಂದ ದಿನಕ್ಕೆ ವಿಸ್ತರಿಸಿಕೊಳ್ಳುತ್ತದೆ ಒಂದಿಷ್ಟು ಪಂಚವರ್ಣದಂತಹ ಸಂಸ್ಥೆಗಳು ಪರಿಸರ ಕಾಳಜಿ ಕಾರ್ಯಕ್ರಮಗಳು ನಿತ್ಯ ನಿರಂತರವಾಗಿಸಿಕೊಳ್ಳುತ್ತಿವೆ ಆದರೆ ಎಸೆಯುವ ಕೊಳಕು ಮನಸ್ಥಿತಿ ಅಂತ್ಯವಾಗಿಲ್ಲ ಈ ಬಗ್ಗೆ ಸ್ಥಳೀಯಾಡಳಿತ ಬ್ಲಾಂಕ್‌ ಸ್ಪಾಟ್ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಅಳವಡಿಸಲಿದೆ. ಸ್ವಚ್ಛ ಪರಿಸರದ ಕಲ್ಪನೆ ಮನೆ ಮನೆಯಲ್ಲಿ ಮೊಳಗಬೇಕು ಆಗ ಮಾತ್ರ ಪರಿಸರಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದಂತೆ ಎಂದು ಪಂಚವರ್ಣದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನವಾದ ಇಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಅಧೀನದಲ್ಲಿ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪ್ರಾರಂಭಿಸಲಾದ ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಕೆಲವು ನಿರಾಶ್ರಿತ ಮಕ್ಕಳು ಆಶ್ರಯ ಹಾಗೂ ಜೀವನೋಪಾಯಕ್ಕಾಗಿ ವಿವಿಧ ಭಾಗಗಳಿಗೆ ಪ್ರಯಾಣಿಸಲು ರೈಲ್ವೆ ನಿಲ್ದಾಣವನ್ನು ಹಾಗೂ ರೈಲುಗಳನ್ನು ಬಳಸುತ್ತಾರೆ. ಪ್ಲಾಟ್‌ಫಾರ್ಮ್ಗೆ ಬಂದ ಅವರು ನಿಂದನೆ, ಹಿಂಸೆ, ನಿರ್ಲಕ್ಷ್ಯ ಹಾಗೂ ಶೋಷಣೆಗೆ ಒಳಗಾಗುತ್ತಾರೆ. ಹೆಚ್ಚಿನ ಬೆಂಬಲವಿಲ್ಲದ ಅವರು, ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ ಹಾಗೂ ತಮ್ಮ ಬಾಲ್ಯದಿಂದ ವಂಚಿತರಾಗುತ್ತಾರೆ. ಇಂತಹ ಮಕ್ಕಳನ್ನು ರಕ್ಷಿಸಿ, ಅವರುಗಳಿಗೆ ಪುನರ್ವಸತಿ ಕಲ್ಪಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲ ಮಾಡಿಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಕುಟುಂಬದಿಂದ ಬೇರ್ಪಟ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸರಾಸರಿ 4.7 ಮೀ.ಮೀ ಮಳೆಯಾಗಿದ್ದು, ಈ ಪೈಕಿ ಕಾರ್ಕಳ ತಾಲೂಕಿನಲ್ಲಿ 5.7, ಕುಂದಾಪುರ ತಾಲೂಕಿನಲ್ಲಿ 2.4, ಉಡುಪಿಯಲ್ಲಿ 11.4, ಬೈಂದೂರು ತಾಲೂಕಿನಲ್ಲಿ 1.0, ಬ್ರಹ್ಮಾವರ ತಾಲೂಕಿನಲ್ಲಿ 7.4, ಕಾಪು ತಾಲೂಕಿನಲ್ಲಿ 8.0, ಹೆಬ್ರಿ ತಾಲೂಕಿನಲ್ಲಿ 3.6 ಮಿ.ಮೀ ಮಳೆಯಾಗಿದೆ. ಹವಾಮಾನ ಇಲಾಖೆ ವರದಿಯಂತೆ ಮೇ.17 ರಿಂದ 21ರತನಕ ಮಳೆ, ಮೇ 20 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ‌ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್. ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ‍್ಯಾಂಕ್‌ ಪಡೆದು ಶೈಕ್ಷಣಿಕ ಸಾಧನೆ ಮೆರೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾ.ಹೆ 66ರ ಹಂಗಳೂರು ಮಸೀದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸದೆ. ಕೊಲ್ಲೂರು ದೇವರ ದರ್ಶನ ಪಡೆದು ಕುಂದಾಪುರ ಕಡೆಯಿಂದ ಕೇರಳ ಕಾಸರಗೋಡಿಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ಕುಟುಂಬವೊಂದು ಕುಂದಾಪುರದ ಹಂಗಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನಣೆ ಗ್ರಾಮದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ವೃಂದಾವನ ಪುನಃ ಪ್ರತಿಷ್ಠೆ- ಶತಕಲಶಸಹಿತ ಬ್ರಹ್ಮಕಲಶೋತ್ಸವವು ಮೇ.25 ರವಿವಾರದಿಂದ ಮೇ.29 ಗುರುವಾರ ತನಕ ಜರುಗಲಿದೆ ಎಂದು ವತ್ತಿನಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ವೃಂದಾವನ ಟ್ರಸ್ಟ್ ಉಪಾಧ್ಯಕ್ಷ ಎಸ್‌. ರಾಜು ಪೂಜಾರಿ ಹೇಳಿದರು. ಅವರು ವತ್ತಿನಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ವೃಂದಾವನ ಪುನಃ ಪ್ರತಿಷ್ಠೆ – ಮಹಾಅನ್ನಸಂತರ್ಪಣೆ, ಶ್ರೀ ಆಂಜನೇಯ ಶ್ರೀ ನವಗ್ರಹ ಗುರು ಸಾರ್ವಭೌಮರ ವೃಂದಾವನಕ್ಕೆ ಶತಕಲಶಸಹಿತ ಬ್ರಹ್ಮಕಲಶೋತ್ಸವ-ಮಹಾಅನ್ನಸಂತರ್ಪಣೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಹೇಳಿದರು. ಮೇ.25ರಂದು ವೈಶಾಖ ಕೃಷ್ಣ ತ್ರಯೋದಶೀ ಪೂಜೆ ನಡೆಯಲಿದೆ. ಸಾಯಂಕಾಲ ಗಂಟೆ 5.00 ರಿಂದ ಋತ್ವಿಜರ ಸ್ವಾಗತ, ಶಿಲ್ಪಿ ಪೂಜೆ, ಆಲಯ ಪ್ರತಿಗ್ರಹ, ಮಹಾಪ್ರಾರ್ಥನೆ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಾಹ, ಗೋಪ್ರವೇಹ, ಪಂಚಗವ್ಯ, ವಾಸ್ತು ಪೂಜೆ, ಭೂಶುದ್ಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ.ಎಸ್. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ  ಶ್ರೀಧನ್ಯ, ಅಕ್ಷತಾ, ಕಿಶನ್, ಸೂರಜ್, ಅದ್ವಿತಾ ಹಾಗೂ ಗಣೇಶ್ ಇವರು  ಸಿ.ಎಸ್. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆ 2 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರಿಕೃಪಾ ಎಮ್‌ಎಸ್‌ 597 ಅಂಕ ದಾಖಲಿಸುವುದರ ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ, ರಾಜ್ಯ ಮಟ್ಟದಲ್ಲಿ  4 ನೇ ರ್ಯಾಂಕ್‌ ಪಡೆದುಕೊಂಡು ಅದ್ವಿತೀಯ  ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More