ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರಾವಣಿ ಮಂಜುನಾಥ ನಾಯಕ್ ಇವರು ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ 2024 ನೇ ಕ್ಯಾಲೆಂಡರ್ ವರ್ಷದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಅಥವಾ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ:0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೆ ಎದುರಿಸುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಹೆಚ್ಚಿನ ಪ್ರೇರಣೆ, ಪ್ರೋತ್ಸಾಹ ವಿದ್ಯಾರ್ಥಿಗಳಿಗೆ ದೊರೆಯುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇರುವ ಸಮಯವನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು, ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕಗಳನ್ನು ಪಡೆಯುವಂತಾಗಬೇಕು ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ನಾಯ್ಕ್ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪ್ರೇರಣಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ. ರಾಮನಾಥ ನಾಯಕ್ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಶಿಕ್ಷಣ ಸಂಯೋಜಕ ಶೇಖರ್ ಮತ್ತು ಗಂಗೊಳ್ಳಿ ಕ್ಲಸ್ಟರ್ನ ಸಿಆರ್ಪಿ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಗಂಗೊಳ್ಳಿ ಕ್ಲಸ್ಟರ್ನ ವಿವಿಧ ಶಾಲೆಗಳ ಸುಮಾರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣ ಸ್ವಾಮಿ ವಂಡ್ಸೆ ಜ.3ರಂದು ಗ್ರಾಮ ಪಂಚಾಯತ್ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಸದಸ್ಯರುಗಳಾದ ಮೊಹಮ್ಮದ್ ಸನಾವುಲ್ಲ ಐಎಎಸ್, ಆರ್ಎಸ್ ಪೋಂಡೆ, ರಾಜ್ಯ ಹಣಕಾಸು ಆಯೋಗದ ಸಮಾಲೋಚಕರಾದ ಎಮ್. ಕೆಕೆಂಪೇಗೌಡ, ಸಿ. ಜಿ ಸುಪ್ರಸನ್ನ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಕೆ. ಯಾಲಕ್ಕಿ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಹುಕ್ಕೇರಿ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ಧನ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾ.ಪಂ. ಅಧ್ಯಕ್ಷ ರವೀಂದ್ರ ಶೆಟ್ಟಿ, ಇಡೂರು ಗ್ರಾ.ಪಂ.ಅಧ್ಯಕ್ಷೆ ಆಶಾ ಆಚಾರ್ಯ, ಕೆರಾಡಿ ಗ್ರಾ.ಪಂ. ಅಧ್ಯಕ್ಷ ಸುದರ್ಶನ ಶೆಟ್ಟಿ, ಆಲೂರು ಗ್ರಾ.ಪಂ. ಅಧ್ಯಕ್ಷ ರಾಜೇಶ್ ದೇವಾಡಿಗ, ಹಕ್ಲಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ದೇವಾಡಿಗ, ವಂಡ್ಸೆ ಗ್ರಾ.ಪಂ. ಉಪಾಧ್ಯಕ್ಷ ಮತ್ತು ಸದಸ್ಯರು ಹಾಗೂ ವಂಡ್ಸೆ, ಚಿತ್ತೂರು, ಇಡೂರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬವಲಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರೂ.12 ಲಕ್ಷ ವೆಚ್ಚದಲ್ಲಿ ನಿರ್ಮಾಣದಗೊಂಡ ದಿ. ಗಂಟಿಹೊಳೆ ನಾರಾಯಣ ಶೆಟ್ಟಿ ಸ್ಮರಣಾರ್ಥ ಶ್ರೀಮತಿ ಗೀತಾ ಗೋಕುಲ ಶೆಟ್ಟಿ ಮೇಲ್ಗಾಯಾಡಿ ಮತ್ತು ಹಳೆ ವಿದ್ಯಾರ್ಥಿಗಳು ಸೇರಿ ನಿರ್ಮಿಸಿದ ನೂತನ ‘ಬ್ರಿಥಿ ವೇದಿಕೆ’ ಲೋಕಾರ್ಪಣೆಗೊಳಿಸಲಾಯಿತು. ನೂತನ ವೇದಿಕೆ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಬ್ರಿಥಿ ವೇದಿಕೆಯ ಮಹಾಪೋಷಕರಾದ ಗೋಕುಲ ಶೆಟ್ಟಿ. ಜಿ ಅವರು ಮಾತನಾಡಿ, ಒಂದು ಸರ್ಕಾರಿ ಶಾಲೆ ಉಳಿಸಲು ನಾವೆಲ್ಲರೂ ಕಂಕಣಬದ್ಧರಾಗೋಣ. ಅಧ್ಯಾಪಕರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳ ನಡುವಿನ ಪರಸ್ಪರ ಹೊಂದಾಣಿಕೆ ಹಾಗೂ ಸಹಕಾರ ಭಾವನೆಯಿಂದ ಸರಕಾರಿ ಕನ್ನಡ ಶಾಲೆಯನ್ನು ಉಳಿಸಬಹುದು ಎಂದು ಮನವಿ ಮಾಡಿದರು. ಧ್ವಜಾರೋಹಣವನ್ನು ಸ.ಹಿ.ಪ್ರಾ ಶಾಲೆ ಬವಳಾಡಿಯ ಎಸ್.ಡಿ.ಎಂ,ಸಿ ಅಧ್ಯಕ್ಷರಾದ ರಾಘವೇಂದ್ರ ಗಾಣಿಗ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೂರು ಗ್ರಾ.ಪಂ. ಅಧ್ಯಕ್ಷರಾದ ಚೆಣ್ಣಮ್ಮ ವಹಿಸಿದ್ದರು. ಈ ವೇಳೆ ಬಿಜೂರು ಪಂಚಾಯತ್ ಉಪಾಧ್ಯಕ್ಷ ರಂಜಿತ್ ಹೊಸ್ಕೋಟೆ, ಸದಸ್ಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಪುಟಾಣಿಗಳು ತಮ್ಮ ಪುಷ್ಪವಾಟಿಕಾದಲ್ಲಿ ಹಣ್ಣುಗಳ ದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಜಂಟಿ ಕಾರ್ಯನಿರ್ವಾಹಕರಾದ ಅನುಪಮ. ಎಸ್ .ಶೆಟ್ಟಿ ಮಾತನಾಡಿ, ಆರೋಗ್ಯದ ದೃಷ್ಟಿಯಿಂದ ಆಯಾಯ ಕಾಲಕ್ಕೆ ಸಿಗುವ ಹಣ್ಣುಗಳನ್ನು ಸಮಯೋಚಿತವಾಗಿ ಬಳಸುವ ಪ್ರವೃತ್ತಿಯನ್ನು ನಾವು ನಮ್ಮ ಹಿರಿಯರಿಂದ ಕಲಿತಿದ್ದೇವೆ. ಪುಟಾಣಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಹಣ್ಣುಗಳ ಮಹತ್ವವನ್ನುಈ ರೀತಿಯಾಗಿ ಪ್ರಾತ್ಯಕ್ಷಿಕೆಯ ಮೂಲಕ ಮಕ್ಕಳಿಗೆ ತಿಳಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ಜೊತೆಗೆ ಹಣ್ಣುಗಳ ಮಹತ್ವವನ್ನು ವಿದ್ಯಾರ್ಥಿಗಳು ನೃತ್ಯ , ಪಾತ್ರಾಭಿನಯವನ್ನು ಮಾಡುವ ಮೂಲಕ ಎಲ್ಲರಿಗೂ ಅರ್ಥಪೂರ್ಣವಾಗಿ ಮನವರಿಕೆ ಮಾಡಿಸಿದರು. ಒಟ್ಟಿನಲ್ಲಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳ ಮೂಲಕ ಹಣ್ಣುಗಳ ಮಹತ್ವವನ್ನು ಅರ್ಥಪೂರ್ಣವಾಗಿ ಅರಿತರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್, ಪ್ಯಾಟ್ರಿಕ್ ಸಂಯೋಜಕಿ ವಿಶಾಲ ಶೆಟ್ಟಿ, ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹಶಿಕ್ಷಕಿ ರೇಣುಕಾ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ʼನಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ’ ಎಂಬ ಧ್ಯೇಯವಾಕ್ಯದಂತೆ ಜ್ಞಾನದಾನವೇ ವಿದ್ಯಾಸಂಸ್ಥೆಗಳ ಪ್ರಧಾನಕಾರ್ಯ. ಅದು ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು ಮೂಡಿಸುವ ಅವರಲ್ಲಿ ಚಿಂತನಾಶೀಲತೆಯನ್ನು ಉದ್ದೀಪನಗೊಳಿಸುವ ಕಾರ್ಯಕ್ರಮಗಳನ್ನೂ ಆಯೋಜಿಸುತ್ತಿರಬೇಕು. ಈ ನಾಡಿನ ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಗಳ ಸಾರವನ್ನು ವಿದ್ಯಾರ್ಥಿ ಸಮೂಹಕ್ಕೆ ತಲುಪಿಸುವ ಕಾರ್ಯವಾಗಬೇಕು. ಆ ನಿಟ್ಟಿನಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯಲ್ಲಿ ‘ಭಾವಾಂತರಂಗ-ಪರಿಪೂರ್ಣ ಬದುಕಿನೆಡೆ ನಮ್ಮ ಪಯಣ’ ಎನ್ನುವ ಸಂಪೂರ್ಣ ಚಟುವಟಿಕೆ ಆಧಾರಿತ ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಹತ್ತು ವರ್ಷಗಳಿಂದ ನಡೆಸುತ್ತಿದ್ದು, ಈ ವರ್ಷ ಜ. 3ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಸ೦ಪನ್ಮೂಲ ವ್ಯಕ್ತಿಗಳು ಜೇನುಗೂಡಿಗೆ ಕಲಾತ್ಮಕ ಜೇನುಹುಳುಗಳನ್ನು ಪೋಣಿಸುವ ಮೂಲಕ ವಿನೂತನ ರೀತಿಯಲ್ಲಿ ಉದ್ಘಾಟಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಾತನಾಡಿ, “ಭಾವಾಂತರಂಗವು ನಮ್ಮ ಶಾಲೆಯಲ್ಲಿ ನಡೆಯುವ ವಿಶಿಷ್ಟ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ವಿದ್ಯಾರ್ಥಿಗಳು ಯಶಸ್ಸಿನತ್ತ ದಾಪುಗಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಜ.2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ ಬ್ರಹ್ಮಾವರದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಾದ ಪ್ರೀತಮ್ (9ನೇ ತರಗತಿ) ಮತ್ತು ಆದಿತ್ಯ ಬಿ. (ದ್ವಿತೀಯ ಪಿಯುಸಿ)ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ, ಶ್ರೀಶಾಂತ್ ಎಸ್. (ಪ್ರಥಮ ಪಿಯುಸಿ) ಕನ್ನಡ ಕವನವಾಚನ ಸ್ಪರ್ಧೆಯಲ್ಲಿ ತೃತೀಯ ಹಾಗೂ ಪ್ರತೀಕ್ಷಾ (ಪ್ರಥಮ ಪಿಯುಸಿ) ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದಲ್ಲಿ ಆಯ್ಕೆಯಾಗಿರುತ್ತಾರೆ. ಈ ಎಲ್ಲಾ ಪ್ರತಿಭೆಗಳಿಗೆ ಆಡಳಿತಮಂಡಳಿ, ಪ್ರಾಂಶುಪಾಲರು, ಮುಖ್ಯಶಿಕ್ಷಕರು ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಿಲ್ಲಾಡಿ ಗ್ರಾಮದ ನಿವಾಸಿ ಶೇಖರ (54)ಅವರು ವಿಪರೀತ ಮಧ್ಯ ಸೇವನೆ ಚಟ ಹೊಂದಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಶಾಸ್ತ್ರೀ ಸರ್ಕಲ್ನ ಬಸ್ ನಿಲ್ದಾಣ ಬಳಿ ಮಲಗಿದ್ದಲೇ ಸಾವನ್ನಪ್ಪಿಸ ಘಟನೆ ಜ.2 ರಂದು ನಡೆದಿದೆ. ಹೋಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಶೇಖರ ಅವರು ಕಿಡ್ನಿ ಸಮಸ್ಯಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಧ್ಯ ಸೇವನೆಯ ಚಟ ಹೊಂದಿದ್ದ ಅವರು ಸರಿಯಾಗಿ ಆಹಾರ ಸೇವನೆ ಮಾಡದೆಯೂ ಇರುತ್ತಿದ್ದರು. ಅದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂದು ಪುತ್ರ ರಿತೇಶ್ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ಡಿ ಅಧ್ಯಯನ ಪ್ರಾರಂಭಿಸಿರುವ (2024 ರ ಜನವರಿ 10 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ ದೂ.ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣನ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
