ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಮಾನವ ಜೀವ ಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಸೂನ್ ಮುಂಗಾರು ಮಳೆಯು ಆಗಸ್ಟ್ ಕೊನೆಯವರೆಗೂ ಬರಲಿದೆ, ನೆರೆ-ಪ್ರವಾಹವು ಯಾವಾಗ ಬೇಕಾದರೂ ಉಂಟಾಗುವ ಸಾಧ್ಯತೆಗಳಿರುತ್ತವೆ. ಇವುಗಳ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು. ನಗರ ಹಾಗೂ ಗ್ರಾಮೀಣ ಭಾಗದ ತಗ್ಗು ಪ್ರದೇಶಗಳಲ್ಲಿ ಮಳೆಯ ನೀರು ನುಗ್ಗಿ ನೆರೆ ಉಂಟಾಗುವ ಸಾಧ್ಯತೆಗಳಿರುವ ವ್ಯಾಪ್ತಿಯಲ್ಲಿ ಜನಸಂಖ್ಯೆ, ಕುಟುಂಬಗಳನ್ನು ತಕ್ಷಣದಲ್ಲಿಯೇ ಬೇರೆಡೆಗೆ ವರ್ಗಾಯಿಸುವುದು ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಿಕೊಂಡು, ಸಮಸ್ಯೆಯಾದಲ್ಲಿ ಕೂಡಲೇ ನೆರವಿಗೆ ಧಾವಿಸಬೇಕು ಎಂದರು. ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.4: ಭಾರಿ ಮಳೆ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಯಾ ತಾಲೂಕುಗಳ ತಹಶಿಲ್ದಾರರು ರಜೆ ಘೋಷಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಅವಕಾಶಗಳನ್ನು ಪ್ರೀತಿಸುವಂತಾಗಬೇಕು ಮತ್ತು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅವಕಾಶದೊಂದಿಗೆ ಅಭಿವೃದ್ಧಿ ಹೊಂದಿದಾಗ ಹೆತ್ತವರು, ಗುರುಗಳು ಮತ್ತು ಸಮಾಜದ ಕಾಳಜಿ ವಹಿಸಬೇಕು. ಆ ಮೂಲಕ ಪಡೆದ ಪದವಿಗೆ ಗೌರವ ದೊರೆಯುವಂತಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಪ್ರೊ| ಹೇಮಂತ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಐಕ್ಯೂಎಸಿ ಸಂಯೋಜಿಸಿದ ‘ಗ್ರಾಜುಯೇಷನ್ ಡೇ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಸುಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಬೇಕಾದರೆ ಶಿಕ್ಷಣವೇ ಮುಖ್ಯ. ಪದವಿ ಪೂರೈಸಿದ ನಂತರ ಉದ್ಯೋಗದೊಂದಿಗೆ ಸಾಮಾಜಿಕ ಕಾಳಜಿಯೊಂದಿಗೆ ವಿದ್ಯಾರ್ಥಿಗಳು ಬದುಕು ರೂಪಿಸಿಕೊಳ್ಳುವಂತಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಇನ್ನಿತರರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಪ್ರಾಸ್ತಾವಿಸಿ, ಉಪಪ್ರಾಂಶುಪಾಲರಾದ ಡಾ|…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2022-23ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ 3,000 ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.1,500 ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ:ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ 25ನೇ ತಾರೀಕಿನ ಒಳಗಾಗಿ ಆನ್ಲೈನ್ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು. ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು. ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ಸಂಚರಿಸುವ ಖಾಸಗಿ ಬಸ್ ಮತ್ತು ಶಾಲಾ ವಾಹನಗಳಲ್ಲಿ ಅಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ/ಪ್ರಯಾಣಿಕರು ಸಂಚರಿಸುತ್ತಿರುವುದು ಹಾಗೂ ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ವಾಹನಗಳನ್ನು ಚಲಿಸುತ್ತಿರುವುದು ಕಂಡುಬಂದಿದ್ದು, ಇದರಿಂದಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಈ ಹಿನ್ನಲೆ ಬಸ್ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಿಕರಿಗೆ ಮತ್ತು ಶಾಲಾ ವಾಹನಗಳನ್ನು ಹೊಂದಿರುವ ಶಾಲಾ ಮುಖ್ಯಸ್ಥರುಗಳು ಈ ಕೆಳಕಂಡ ಸಲಹೆ-ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿರುತ್ತಾರೆ. ಸಂಚರಿಸುವ ಬಸ್ಗಳು ಫಿಟ್ನೆಸ್ ಪ್ರಮಾಣಪತ್ರ ಮತ್ತು ವಿಮಾ ಪ್ರಮಾಣ ಪತ್ರವನ್ನು ಹೊಂದಿರಬೇಕು ಮತ್ತು ಅನುಮತಿಸುವ ಮಿತಿಯನ್ನು ಮೀರಿ ಹೊಗೆಯನ್ನು ಹೊರಸೂಸಬಾರದು. ನೊಂದಾಯಿತ ಆಸನ ಸಾಮರ್ಥ್ಯದ ನಿಗದಿತ ಸಂಖ್ಯೆಗಿಂತ ಹೆಚ್ಚು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಸಂಚರಿಸುವಂತಿಲ್ಲ. ನಿಗದಿತ ವೇಗದ ಮಿತಿಗಿಂತ ಹೆಚ್ಚಿನ ವೇಗದಲ್ಲಿ ಬಸ್ಗಳನ್ನು ಚಲಿಸುವಂತಿಲ್ಲ. ವೇಗದ ಮಿತಿಯನ್ನು ಅನುಸರಿಸಬೇಕು. ಚಾಲನಾ ಅನುಭವ ಇರುವ ಬಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೊಂದಣಿಯನ್ನು ಜನನ ಮರಣ ನೋಂದಣಿ ಅಧಿನಿಯಮಗಳ ಅನ್ವಯ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಹಾಗೂ ಮರಣ ದಾಖಲಾತಿಗಳು ಭವಿಷ್ಯದಲ್ಲಿ ಜೀವನದ ಅವಧಿಯ ಪ್ರತೀ ಹಂತದಲ್ಲಿಯೂ ಅವಶ್ಯಕತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದರು. ಈ ದಾಖಲಾತಿಗಳು ಅಗತ್ಯವಾಗಿರುತ್ತದೆ. ಜನನ-ಮರಣ ಘಟನೆಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳು, ಇ- ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯವನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದ ಅವರು, ಜನನ-ಮರಣ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದಾಗ ವಿಳಂಬವಿಲ್ಲದೇ ಕಾಲಮಿತಿಯೊಳಗೆ ಜನನ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಎಸ್ಇಇಟಿ – ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ ಹಾಗೂ ಧೀರಜ್ ಶೇಟ್ ಸಾಧನೆ ಮೆರೆದು ಸಿಎಸ್ ಎಕ್ಸಿಕ್ಯೂಟಿವ್ ಪ್ರೋಗ್ರಾಮ್ಗೆ ಅರ್ಹತೆ ಪಡೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ನಗರ ಪ್ರದೇಶದಲ್ಲಿ 2020ರ ಮಾರ್ಚ್ 24ರ ಪೂರ್ವದಲ್ಲಿ ಬೀದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಸ್ಥರು ಮತ್ತು ಮನೆ ಮನೆಗೆ ದಿನಪತ್ರಿಕೆ ವಿತರಣೆ, ಹಾಲು ವಿತರಣೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯಾಪಾರ /ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಾಪನೆಗಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಹಂತದಲ್ಲಿ ತಲಾ ರೂ.10,000 ರೂ.20,000 ಮತ್ತು ರೂ.50,000 ಸಾಲ ಸೌಲಭ್ಯವನ್ನು 7% ಬಡ್ಡಿ ದರದಲ್ಲಿ ಬ್ಯಾಂಕ್ ಮುಖೇನ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಸೋಮವಾರ ಅತ್ಯಂತ ವೈಭವದಿಂದ ಜರುಗಿತು. ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಕೆ.ಅವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ. ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. ಅಂಕಗಳ ಜೊತೆಗೆ ಒಳ್ಳೆಯ ಮೌಲ್ಯ, ಆದರ್ಶಗಳನ್ನು ಮೈಗೂಡಿಸಿಕೊಂಡರೆ ಉತ್ತಮ ಮನುಷ್ಯರಾಗಲು ಸಾಧ್ಯ. ಸ್ವಾಭಿಮಾನದ ಮೂಲಕ ಬದುಕುವುದು ಹೇಗೆ ಎನ್ನುವುದನ್ನು ಪೋಷಕರಿಂದ ಕಲಿತುಕೊಳ್ಳಲು ಸಾಧ್ಯವಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ನಮ್ಮ ಕಾಲೇಜು ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಎಸೆಸ್ಸೆಲ್ಸಿಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಥಮ…
