Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.13: 12 ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನು ಮೂಡಿಸುವುದರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರöಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 12 ನೇ ಶತಮಾನ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯಿಂದ ಗುರುತಿಸಿಕೊಂಡ ಪ್ರತಿಯೊಬ್ಬ ಶರಣರು ವಿಶಿಷ್ಟವಾದ ಜೀವನ ನಡೆಸಿದ್ದಾರೆ. ಪ್ರಮಾಣಿಕ ಕೆಲಸಕ್ಕೆ ಗೌರವ ದೊರಕುತ್ತದೆ ಎಂಬುದನ್ನು ಇವರುಗಳಿಂದ ತಿಳಿಯಬಹುದಾಗಿದೆ. ವೈಚಾರಿಕ ಜ್ಞಾನವನ್ನು ಹೊಂದಿದ್ದ ಇವರುಗಳು ಮಾತು ಮತ್ತು ಕೃತಿಗೆ ವ್ಯತ್ಯಾಸ ಇಲ್ಲದಂತೆ ಸರಳ ಜೀವನ ನಡೆಸಿರುವುದು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು. ಶಿವಶರಣೆಯರು ಜಾತಿ, ಮತ, ಪಂಥದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಎಕ್ಸಲೆಂಟ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಸಿಎ ಮತ್ತು ಸಿಎಸ್ ಪರೀಕ್ಷೆಯಲ್ಲಿ ಉತಿರ್ಣರಾಗುವುದರ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳಾದ ಹೃತಿಕ್ ಎಮ್. (237), ಆಯುಷ್ (236), ದೀಕ್ಷಾ ಎ. ಶೆಟ್ಟಿ (223), ಸಮೃದ್ಧಿ ಎಸ್. ಶೆಟ್ಟಿ (218) ಮತ್ತು ಅಮೋಘ್ (202) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವೈಷ್ಣವಿ (137), ಸಹನಾ (118) ಮತ್ತು ಭೂಮಿಕಾ (112) ಅಂಕಗಳೊಂದಿಗೆ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ ಫೌಂಡೇಶನ್, ಸಿಎಸ್ ಫೌಂಡೇಶನ್ (ಸಿಎಸ್ಇಇಟಿ ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ಹಂತದ ಪರೀಕ್ಷೆಯ ಸಿದ್ಧತೆಯಲ್ಲಿದ್ದಾರೆ. ಪದವಿಪೂರ್ವ ಶಿಕ್ಷಣದೊಂದಿಗೆ ವೃತ್ತಿಪರ ಕೋರ್ಸು ಗಳಿಗೆ ಸಿದ್ಧತೆ:ಎಕ್ಸಲೆಂಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಇಂದಲೇ ವೃತ್ತಿಪರ ಕೋರ್ಸು ಗಳಾದ ಸಿಎ ಮತ್ತು ಸಿಎಸ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ನೆರವಾಗಿದೆ. ಸಿಎ/ಸಿಎಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನರ ಪರಸ್ಪರ ಸಂಬಂಧಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೇಸೆಜ್ ವಿಚಾರದಲ್ಲಿ ತಪ್ಪಾಗಿ ಅರ್ಥೈಸಿಕೊಂಡು ಅನುಭವಿಸುವ ಕೊರಗಿನ ಕುರಿತ ಎಳೆಯನ್ನು ಹೊಂದಿರುವ ಮರೆಯದಿರು ಓಲವೇ ಮ್ಯೂಸಿಕ್ ವಿಡಿಯೋ ಐಶ್ವರ್ಯ ಮೀಡಿಯಾ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಸದ್ಯದಲ್ಲಿಯೇ ಬಿಡುಗಡೆಗೊಳ್ಳಲಿದೆ. ಮ್ಯೂಸಿಕಲ್ ವೀಡಿಯೋವನ್ನು ನಾಗೇಶ್ ಕುಂದಾಪುರ ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ರಾಘವೇಂದ್ರ ಎಸ್ ಬೀಜಾಡಿ ಛಾಯಾಗ್ರಹಣ ಮತ್ತು ಸಂಕಲನ ಮಾಡಿ ತಮ್ಮ ಕೈ ಚಳಕವನ್ನು ತೋರಿಸಿದ್ದಾರೆ. ಕುಟುಂಬದಲ್ಲಿನ ಸದಸ್ಯರ ನಡುವೆ, ಸ್ನೇಹಿತರ ನಡುವೆ, ಪ್ರೇಮಿಗಳ ನಡುವೆ ಸಾಮಾನ್ಯವಾಗಿ ನಡೆಯುವ ಜಾಲತಾಣಗಳಲ್ಲಿ ಮುಖ್ಯವಾಗಿ ವಾಟ್ಸ ಆಪ್ ನಲ್ಲಿ ಹಂಚಿಕೊಳ್ಳುವ ಮೇಸಜ್ ಗಳನ್ನು ಓದಿ ಅದನ್ನು ತಪ್ಪಾಗಿ ತಿಳಿದುಕೊಂಡು ಪರಸ್ಪರ ಸಂಬಂಧವನ್ನು ಹದಗೆಡುವ ಮಟ್ಟಿಗೆ ಹೋಗುತ್ತವೆ ಈ ವಿಷಯಾಧಾರಿತವಾಗಿದೆ. ಐಶ್ವರ್ಯ ಮೀಡಿಯಾ ಹಾಗೂ ಐಶ್ವರ್ಯ ಸ್ಟುಡಿಯೋ ಇವರ ಚೊಚ್ಚಲ ಮ್ಯೂಸಿಕ್ ವೀಡಿಯೋದಲ್ಲಿ ಕರ್ನಾಟಕ ಕರಾವಳಿಯ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಕೆಲವೊಂದು ಪರಿಸರಗಳು ಮುನ್ನೆಲೆಗೆ ಬಾರದ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಡ್ತರೆ ರಾಹುತನಕಟ್ಟೆಯ ಶ್ರೀ ರಾಮ ಭಜನಾ ಮಂಡಳಿಯಿಂದ ವರ್ಷಂಪ್ರತಿ ನಡೆಯುವ ಅಖಂಡ ಶ್ರೀ ರಾಮ ಭಜನಾ ಉತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ರಾಹುತನಕಟ್ಟೆಯ ಶ್ರೀ ರಾಹುತನ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಜರುಗುವ ಅಖಂಡ ರಾಮ ಭಜನೆಯಲ್ಲಿ ಪ್ರದೀಪ ಸ್ಥಾಪನೆಯೊಂದಿಗೆ ಸ್ಥಳೀಯ ಹಾಗೂ ಸುತ್ತಲಿನ ಭಜನಾ ತಂಡಗಳು ಸಂಗೀತ ಹಾಗೂ ವಾದ್ಯತಂಡದೊಂದಿಗೆ ವಿವಿಧ ಭಜನೆ ಪ್ರಸ್ತುತಗೊಳಿಸಿದರು. ರಾಮಭಜನೆಯ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮಗಳು ಈ ವೇಳೆ ಜರುಗಿದವು. ಈ ವೇಳೆ ಅಧ್ಯಕ್ಷರಾದ ಚಂದ್ರ ಮೊಗವೀರ, ಕಾರ್ಯದರ್ಶಿ ನಾಗರಾಜ ಮೊಗವೀರ ಸೇರಿದಂತೆ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇಲ್ಲಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ (AIISH) ಮೈಸೂರು ಇದರ ಔಟ್ರೀಚ್ ಸರ್ವೀಸ್ ಸೆಂಟರ್ (ಓ.ಎಸ್.ಸಿ) ನೂತನ ಕಟ್ಟಡ ಹಾಗೂ ನೂತನ ಡಯಾಲಿಸಿಸ್ ಘಟಕವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ನೆರವೇರಿಸಿದರು. ಆಸ್ಪತ್ರೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ನಿವೃತ್ತರಾಗಿ, ಅಗಲಿರುವ ದಿ| ವಿಜಯಾ ಬಾಯಿ ಅವರ ಹೆಸರಿನಲ್ಲಿ ಅವರ ಪತಿ, ಪುರಸಭೆ ಮಾಜಿ ಸದಸ್ಯ ಶಿವರಾಮ ಪುತ್ರನ್, ಮಕ್ಕಳು ಮತ್ತು ಕುಟುಂಬಿಕರು ಸ್ಪೀಚ್ ಆ್ಯಂಡ್ ಹಿಯರಿಂಗ್ ಸೆಂಟರ್ ಕಟ್ಟಡ ಕೊಡುಗೆಯಾಗಿ ನೀಡಿದ್ದು ಅವರನ್ನು ಹಾಗೂ ದಾನಿಗಳಾದ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ್ ಮಲ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಜಯಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.10: ಜನ ಸಾಮಾನ್ಯರಿಗೆ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರೊಂದಿಗೆ ಹೆಚ್ಚಿನ ಪ್ರಗತಿ ಸಾಧಿಸಿ ಬೇರೆ ಜಿಲ್ಲೆಗೆ ಮಾದರಿಯಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಅವರು ಇಂದು ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಛೇರಿಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನ ನಡೆಸಿ ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಬೇಕೇಂಬುದೇ ಸರ್ಕಾರದ ಆಶಯವಾಗಿದ್ದು, ಆರೋಗ್ಯ ಸುಧಾರಣೆಗೆ ಅನೇಕ ಹೊಸ ಹೊಸ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ರೋಗಿಗಳಿಗೆ ಉಚಿತ ಔಷದೋಪಾಯಗಳನ್ನು ಒದಗಿಸಲು ಔಷದಿಗಳ ವಿತರಣಾ ವ್ಯವಸ್ಥೆಯಲ್ಲಿ ಸುಧಾರಣೆ ಕೈಗೊಳ್ಳಲಾಗುತ್ತಿದೆ ಪ್ರತಿ ತಾಲೂಕುಗಳಿಗೂ 108 ಅಂಬುಲೆನ್ಸ್ ಗಳನ್ನು ಹೊಸದಾಗಿ ನೀಡುವುದರೊಂದಿಗೆ ಅವುಗಳ ನಿರ್ವಾಹಣೆಗೂ ಸುಧರಣೆ ತರಲಾಗುತ್ತಿದೆ ಇವುಗಳ ಜೊತೆಗೆ ಸಹಾಯವಾಣಿಯನ್ನು ತೆರೆಯಲು ಸಹ ಮುಂದಾಗಿದ್ದೇವೆ ಎಂದರು. ಎಂಡೋಸಲ್ಪಾನ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಕೆರಿಂಗ್ ಸೆಂಟರ್ ಅನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಡಿಸೆಂಬರ್‌ 2023ರಲ್ಲಿ ನೆಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ರಾಹುಲ್‌ ಪೂಜಾರಿ (275), ಸಮರ್ಥ ಆರ್‌ ಶೆಟ್ಟಿ (266), ಶ್ರೀವತ್ಸ ಜಿ. ಉಡುಪ (255), ಹೃತಿಕ್‌ ಎಮ್.‌ (237), ಆಯುಷ್‌ (236), ರೋಹನ್‌ ಆಚಾರ್‌ (236), ನಮನ (232), ನಿಖಿತಾ (231), ಗೌತಮಿ ಎನ್.‌ ನಾಯಕ್‌ (221), ಯಶಸ್‌ (219), ಸಮೃದ್ಧಿ ಎಸ್.‌ ಶೆಟ್ಟಿ (218), ಸುಹಾಸ್‌ ಎಸ್‌. (215), ತೇಜಸ್ವಿನಿ (215), ಆಕಾಶ್‌ (214), ವೈಷ್ಣವಿ ಬಿ. (209), ಶ್ರಾವ್ಯ (205), ಶ್ರುತಿ(204), ಅಮೋಘ್ ಶೆಟ್ಟಿ (202), ಹೇಮಂತ್ (200), ಶ್ರೇಯಸ್ (200), ಸುಶ್ರುತ್ ಕುಮಾರ್ (200), ವಿಸ್ಮಿತಾ ಆಚಾರಿ (200) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಿಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಜಿಲ್ಲಾ ಸಮಿತಿ ಉಡುಪಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿ ಬೈಂದೂರು, ಡಾ. ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಮತ್ತು ದಲಿತ ಸಂಘರ್ಷ ಸಮಿತಿ ಮಹಿಳಾ ಘಟಕ ತಾಲೂಕು ಸಮಿತಿ ಬೈಂದೂರು, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಗ್ರಾಮ ಸಮಿತಿ ಉಪ್ಪುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ವಿರೋಧಿ ಉಪ್ಪುಂದ ಗ್ರಾಪಂ ಅಧ್ಯಕ್ಷರನ್ನು ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಗ್ರಾಪಂ ಎದುರು ಶುಕ್ರವಾರ ಧರಣಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದಲಿತ ದೌರ್ಜನ್ಯ ಜಾಗೃತಿ ಸಮಿತಿ ಉಡುಪಿ ಜಿಲ್ಲಾ ಸದಸ್ಯ ವಾಸುದೇವ ಮುದೂರು ಮಾತನಾಡಿ ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಜಾತಿವಾದಿ ಮನಸ್ಥಿತಿ ನಿವಾರಣೆಯಾಗದಿರುವುದು ಸಮಾಜಕ್ಕೆ ಕಳಂಕ. ಸಂವಿಧಾನಬದ್ಧ ವ್ಯವಸ್ಥೆಯಡಿ ಆಯ್ಕೆಯಾದ ಜನಪ್ರತಿನಿಧಿಗಳು ಜನ ಹಾಗೂ ದೀನದಲಿತರ ಪರ ವಾಗಿ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿ ಧೋರಣೆ ಸರಿಯಲ್ಲ ಎಂದು ಹೇಳಿದ್ದಾರೆ. ಜನರಲ್ಲಿ ಸಂವಿಧಾನದ ಆಶಯ, ಹಕ್ಕೊತ್ತಾಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚಿಗೆ ಮುಂಬೈಯಲ್ಲಿ ಜರುಗಿದ 7ನೇ ಅಂತಾರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್ಶಿಪ್ 2024ರಲ್ಲಿ 11ರ ವಯೋಮಾನದ ವಿಭಾಗದ ಕುಮಿಟಿ ಹಾಗೂ ಕಟಾ ಎರಡೂ ವಿಭಾಗದಲ್ಲಿಯೂ ಖಾರ್ವಿಕೇರಿಯ ಸಾನಿಧ್ಯ ಸಂತೋಷ್ ನಾಯ್ಕ್ ಚಿನ್ನದ ಪದಕ ಪಡೆದಿದ್ದಾಳೆ. ಸಾನಿಧ್ಯ ಕೋಟೇಶ್ವರದ ಗುರುಕುಲ ಪಬ್ಲಿಕ್ ಸ್ಕೂಲಿನಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. 7ರ ವಯೋಮಾನದ ವಿಭಾಗದಲ್ಲಿ ಖಾರ್ವಿಕೇರಿಯ ಸಂಕಲ್ಪ್ ಸಂತೋಷ್ ನಾಯ್ಕ್ ಕುಮಿಟಿಯಲ್ಲಿ ಚಿನ್ನ ಮತ್ತು ಕಟಾದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಈತ ಗುರುಕುಲ ಪಬ್ಲಿಕ್ ಸ್ಕೂಲಿನಲ್ಲಿ 2ನೇ ತರಗತಿಯ ವ್ಯಾಸಂಗ ಮಾಡುತ್ತಿದ್ದಾನೆ. ಕುಂದಾಪುರ ಖಾರ್ವಿಕೇರಿ‌ ನಿವಾಸಿ ಸಂತೋಷ್ ನಾಯ್ಕ್ ಹಾಗೂ ಶ್ಯಾಮಲಾ ನಾಯ್ಕ್ ದಂಪತಿಗಳ ಮಕ್ಕಳಾದ ಈರ್ವರೂ, ಕುಂದಾಪುರದ ಕೆಡಿಎಫ್ ಕರಾಟೆ ಸ್ಕೂಲಿನ ಕಿರಣ್ ಕುಂದಾಪುರ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕಾರ್ಕಳ: ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷಿ ಯೋಜನೆಯಾದ “ಮೊಬೈಲ್‌ ಬಿಡಿ, ಪುಸ್ತಕ ಹಿಡಿ” ಅಭಿಯಾನ ಯುವಜನರು ಮತ್ತು ವಿದ್ಯಾರ್ಥಿಗಳನ್ನು ಓದಿನ ಕಡೆಗೆ ಸೆಳೆಯಬೇಕು, ಮೊಬೈಲ್‌ ನ ಬಳಕೆಯನ್ನು ಹಿತಮಿತವಾಗಿ ಮಾಡಬೇಕೆಂಬ ಉದ್ದೇಶವಿರಿಸಿಕೊಂಡು ಕಾರ್ಕಳ, ಉಡುಪಿ, ಪುತ್ತೂರು, ಸುಳ್ಯದ ಶಾಲೆಗಳಿಗೆ ಮತ್ತು ಆಸಕ್ತ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸುವ ಕಾರ್ಯ ನಡೆಯಿತು. ಸಾಹಿತ್ಯಕ್ಷೇತ್ರ ಓದುಗರ ಬರ ಎದುರಿಸುತ್ತಿದೆ ಎಂಬ ಮಾತಿನ ನಡುವೆಯೂ “ದಿನಕ್ಕೊಂದು ಪುಸ್ತಕ”ವನ್ನು ಶಾಲೆಗಳಿಗೆ ತಲುಪಿಸುವ ಕಾರ್ಯ ಮಾಡಲಾಯಿತು. ಕಾರ್ಕಳ ತಾಲೂಕಿನ ಸ್ಥಳೀಯ ಶಾಲೆಗಳನ್ನು ಸಂದರ್ಶಿಸಿ ಪುಸ್ತಕವನ್ನು ಕೊಡಮಾಡಲಾಯಿತು. ಸಾರ್ವಜನಿಕರಿಂದ ಮತ್ತು ವಿದ್ಯಾಭಿಮಾನಿಗಳಿಂದ ಅಪೂರ್ವ ಬೆಂಬಲ ವ್ಯಕ್ತವಾಗಿ ಪ್ರತಿನಿತ್ಯ ಸುಮಾರು ಹತ್ತು ಪುಸ್ತಕಗಳನ್ನು ಪುಸ್ತಕ ದಾನಿಗಳ ನೆರವಿನೊಂದಿಗೆ ವಿತರಿಸಲಾಯಿತು. ಈ ಯೋಜನೆಗೆ ಸಾರ್ವಜನಿಕರು, ಪುಸ್ತಕ ಪ್ರಿಯರಿಂದ ರೂ. 28,110 ಸಂಗ್ರಹಗೊಂಡು, ದಿನಕ್ಕೆ 10 ಪುಸ್ತಕದಂತೆ ಒಟ್ಟು 312 ಪುಸ್ತಕಗಳನ್ನು ಜನವರಿ ತಿಂಗಳಿನಲ್ಲಿ ಕಾರ್ಕಳವಲ್ಲದೆ ದೂರದ ಸುಳ್ಯ, ಪುತ್ತೂರಿನ ಶಾಲೆಗಳನ್ನೂ ಆಯ್ಕೆಮಾಡಿ ಪುಸ್ತಕ ವಿತರಿಸಲಾಗಿದೆ. ಪುಸ್ತಕ ಸ್ವೀಕರಿಸಿದ ವಿದ್ಯಾರ್ಥಿಗಳೇ ಸ್ವತಃ…

Read More