ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಚುನಾವಣಾ ಆಯೋಗ ನೀಡಿರುವ ಮಾರ್ಗದರ್ಶನವನ್ನು ಏಪ್ರಿಲ್ 26ರಂದು ನಡೆಯುವ ಮತದಾನ ಕೇಂದ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚಾಚು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿಗೆ ಅವರು ತಿಳಿಸಿದರು. ಅವರು ಉಡುಪಿ ನಗರದ ಸೇಂಟ್ ಸಿಸಿಲಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ ದಿನದಂದು ಕರ್ತವ್ಯಕ್ಕೆ ಆಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮೊದಲನೇ ಸುತ್ತಿನ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯು ಪಾರದರ್ಶಕವಾಗಿ ಮತ್ತು ಮುಕ್ತ, ನ್ಯಾಯಸಮ್ಮತವಾಗಿ ನಡೆಯಬೇಕು ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಚುನಾವಣಾ ಕರ್ತವ್ಯದಲ್ಲಿ ಯಾವುದೇ ಒಂದು ಸಣ್ಣ ದೋಷ ವಾಗದಂತೆ, ಜಾಗರೂಕತೆಯಿಂದ ತಮ್ಮ ಕಾರ್ಯಗಳನ್ನು ನಿರ್ವಹಿಸಬೇಕು.ಮತದಾನ ಕೇಂದ್ರದಲ್ಲಿ ಅಳವಡಿಸಿರುವ ವೆಬ್ ಕಾಸ್ಟ್ ನಿಂದ ವಿಡಿಯೋ ಚಿತ್ರೀಕರಣವನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ವೀಕ್ಷಣೆ ಮಾಡುತ್ತಿರುತ್ತಾರೆ . ಎಚ್ಚರದಿಂದ ಕಾರ್ಯನಿರ್ವಹಿಸಬೇಕು ಎಂದರು. ರಾಜ್ಯಮಟ್ಟದ ಚುನಾವಣಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡ ನಾಡು-ನುಡಿ. ನೆಲ-ಜಲ ಸಂಸ್ಕೃತಿ ಮೊದಲಾದ ಕ್ಷೇತ್ರಗಳಲ್ಲಿ ಅನವರತವಾಗಿ ಶ್ರಮಿಸುತ್ತಿರುವ ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಹಾಗೂ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಇತ್ತಿಚಿಗೆ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಸಂಗೀತ ಕ್ಷೇತ್ರದ ಸಾಧಕ ಅನುರಾಗ್ ನಾಯಕ್ ನಾಗರಮಠ ಇವರಿಗೆ ರಾಜ್ಯಮಟ್ಟದ ಬಾಲಜ್ಞಾನಶ್ರೀ ಪುರಸ್ಕಾರ ಪ್ರದಾನಿಸಲಾಯಿತು. ಅನುರಾಗ್ ಇವರು ಪ್ರಸ್ತುತ ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಉದ್ಯಮಿ ರಘುನಂದನ ನಾಯಕ್ ಹಾಗೂ ಅಂಜಲಿ ನಾಯಕ್ ಇವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೊಂದ ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ, ಪಕ್ಷದ ಆಂತರಿಕ ಸಮಸ್ಯೆಯನ್ನು ಶುದ್ದೀಕರಣಗೊಳಿಸಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುವುದೇ ನನ್ನ ಗುರಿ. ಯಾರೇ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ಬೈಂದೂರು ಉಪ್ಪುಂದ ಪರಿಚಯ ಹೋಟೆಲ್ ದೇವಕಿ ಸಣ್ಣಯ ಸಭಾಂಗಣದಲ್ಲಿ ಬೈಂದೂರಿನ ರಾಷ್ಟ್ರಭಕ್ತರ ಬಳಗ ಆಯೋಜಿಸಿದ ಬೈಂದೂರು ಹೋಬಳಿ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ ರಾಜ್ಯದಲ್ಲಿ ಯಡಿಯೂರಪ್ಪನವರ ಕಾರಣದಿಂದಾಗಿ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸುತ್ತಿದೆ. ಅವರಿಗೆ ದೇಶದ ಹಾಗೂ ಕಾರ್ಯಕರ್ತರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಗಿದೆ. ಯಡಿಯೂರಪ್ಪ ಆಪ್ತರಿಗೆ ಕಾರ್ಯಕರ್ತರ ವಿರೋಧ ಇದ್ದರೂ ಟಿಕೆಟು ಸಿಗುತ್ತದೆ. ಪಕ್ಷಕ್ಕಾಗಿ, ಹಿಂದುತ್ವಕ್ಕಾಗಿ ಹೋರಾಟ ಮಾಡಿದವರನ್ನು ಮೂಲೆಗುಂಪು ಮಾಡಲಾಗುತ್ತದೆ. ಕಾರ್ಯಕರ್ತರ ಭಾವನೆಗಳಿಗೆ ಬೆಲೆ ಕೊಡದೆ ಕುಟುಂಬ ರಾಜಕಾರಣವನ್ನು ಮುಂದುವರಿಸುವ ಪರಿಪಾಠ ಅಪಾಯಕಾರಿಯಾದುದು ಈ ಚುನಾವಣೆಯಲ್ಲಿ ಗೆದ್ದು ಪ್ರಧಾನಿ ನರೇಂದ್ರ ಮೋದಿಯರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕನ್ನಡ ಸಾಹಿತ್ಯಲೋಕದಲ್ಲೇ ‘ಅತ್ಯಂತ ಪಾರದರ್ಶಕ ಸ್ಪರ್ಧೆ ಮತ್ತು ಪುರಸ್ಕಾರ’ವಾದ ‘ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ ಮತ್ತು ಕಾದಂಬರಿ ಪುರಸ್ಕಾರ- 2024’ಕ್ಕೆ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಈ ಸ್ಪರ್ಧೆಯಲ್ಲಿ ರೂ. 2 ಲಕ್ಷ 69 ಸಾವಿರ ಬಹುಮಾನವನ್ನೂ ಘೋಷಿಸಲಾಗಿದೆ. ತಾವುಗಳು ಈ ಸುದ್ದಿಯನ್ನು ನಿಮ್ಮ ಮಾಧ್ಯಮಗಳಲ್ಲಿ ಪ್ರಕಟಿಸಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ. ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ” ಹಾಗೂ 2023ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2023ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುವುದು. ಕಥಾ ಸ್ಪರ್ಧೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಏಳು ದಶಕಗಳಿಂದ ವಸ್ತ್ರ ವ್ಯಾಪಾರ ಮೂಲಕ ಕರಾವಳಿ, ಮಲೆನಾಡಿನಲ್ಲಿ ಮನ ಮಾತಾಗಿರುವ, ಗ್ರಾಹಕರ ಪ್ರೀತಿಗೆ ಪಾತ್ರವಾದ ಬ್ರಹ್ಮಾವರ, ತೀರ್ಥಹಳ್ಳಿ ಮತ್ತು ಕೊಪ್ಪದಲ್ಲಿ ರುವ ಸತ್ಯನಾಥ ಸ್ಟೋರ್ಸ್ 75ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಅಮೃತ ಮಹೋತ್ಸವದ ಶುಭ ಘಳಿಗೆಯಲ್ಲಿ ಸಂಸ್ಥೆಯ ಎಲ್ಲ ವಸ್ತ್ರಮಳಿಗೆಗಳಲ್ಲಿ ಗ್ರಾಹಕರಿಗೆ “ದಂಪತಿಗಳ ಮಧುಚಂದ್ರ ಪ್ರವಾಸ ಕೂಪನ್” ಕೊಡುಗೆಯನ್ನು ಆಯೋಜಿಸಲಾಗಿದೆ. ಮದುವೆಯ ಜವಳಿ ಖರೀದಿಸುವ ಗ್ರಾಹಕರಿಗೆ ಕೂಪನ್ ನೀಡಲಾಗುತ್ತದೆ. ಅದೃಷ್ಟಶಾಲಿ ವಿಜೇತರಿಗೆ ಮಧುಚಂದ್ರ ಪ್ರವಾಸ ಯೋಜನೆಯನ್ನು ಕಲ್ಪಿಸಲಿದೆ. ಈ ವರ್ಷ ಜುಲೈ ತಿಂಗಳಲ್ಲಿ ಅದೃಷ್ಟಶಾಲಿಗಳ ಡ್ರಾ ನಡೆಯಲಿದೆ. ತೀರ್ಥಹಳ್ಳಿ, ಬ್ರಹ್ಮಾವರ, ಕೊಪ್ಪ ಎಲ್ಲ ಮಳಿಗೆಗಳಲ್ಲಿ ಕೂಪನ್ ನೀಡಲಾಗುತ್ತದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಸ್ತ್ರಗಳಿಗೆ ಭರಪೂರ ರಿಯಾಯಿತಿ ನೀಡಲಾಗುತ್ತಿದೆ. ಪ್ರಮುಖ ಕಂಪನಿಗಳ ಬ್ರಾಂಡೆಡ್, ಸಾಂಪ್ರದಾಯಿಕ, ಆಧುನಿಕ ಶೈಲಿಯ ಬಟ್ಟೆಬರೆಗಳು ಎಲ್ಲ ವಯಸ್ಸಿನ ವರಿಗೆ ಒಪ್ಪುವ ನವೀನ ಬಟ್ಟೆಗಳ ಪರಿಪೂರ್ಣ ಮಳಿಗೆಗೆ ಸತ್ಯನಾಥ ಸ್ಟೋರ್ಸ್ ಪ್ರಖ್ಯಾತಿ ಪಡೆದಿದೆ. ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಅಪಾರ ಸಂಗ್ರಹದ ಪರಿಪೂರ್ಣ ಮದುವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ʼನಲ್ಲಿ ಎಪ್ರಿಲ್ 1 ರಿಂದ ಚೆಸ್ ತರಬೇತಿ ಪುನರಾರಂಭಗೊಳ್ಳಲಿದ್ದು, ರಾಷ್ಟ್ರೀಯ ತರಬೇತುದಾರರಾದ ನರೇಶ್ ರಾವ್ ಮತ್ತು ಗುರುರಾಜ್ ಶೆಟ್ಟಿಯವರು ತರಬೇತಿಯನ್ನು ನೀಡಲಿದ್ದಾರೆ. ಈಗಾಗಲೇ ಕುಂದಾಪುರ ತಾಲ್ಲೂಕಿನ ಒಟ್ಟು 958 ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದು ಜಮ್ ಶೆಡ್ ಪುರದಲ್ಲಿ ನಡೆದ ಟಾಟಾ ಸ್ಟೀಲ್ ಏಷ್ಯನ್ ಜೂನಿಯರ್ ಓಪನ್ ಮತ್ತು ಗರ್ಲ್ಸ್ ಚೆಸ್ ಚಾಂಪಿಯನ್ಶಿಪ್-2023 ರಲ್ಲಿ ನಮ್ಮ ವಿದ್ಯಾರ್ಥಿಗಳಾದ ದಿಶಾ ಯು.ಎ ( ಉಡುಪಿ), ದಿವ್ಯಾ ( ಕುಂದಾಪುರ) ತೇಜಸ್ ಕೆ ( ಬೆಂಗಳೂರು)ಮತ್ತು ನಿಶಾಂತ್ ಡಿಸೋಜಾ (ಕೋಡಿ, ಕುಂದಾಪುರ) ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದರು ಪ್ರಸಕ್ತ ವರ್ಷದಲ್ಲಿ ಕ್ರಿಸಲ್ ವಿಯೊಲಾ ವಾಸ್ (ಮಂಗಳೂರು) ಪ್ರದೀಪ್ ಪಾಟೀಲ್(ಕಲಬುರಗಿ), ಓಸ್ವಿನ್ ಜೋಶುವಾ ಡಿಮೆಲ್ಲೊ (ಕೋಡಿ,ಕುಂದಾಪುರ) ತೇಜಸ್ ಎಂ ಶೆಣೈ (ತೀರ್ಥಹಳ್ಳಿ) ಕಾರ್ತಿಕ್ ಆರ್ (ಕುಂದಾಪುರ) ದಿಶಾ ಯು.ಎ ( ಉಡುಪಿ) ಮತ್ತು ಛಾಯ ಸಿ ಪೂಜಾರಿ (ಕುಂದಾಪುರ) ರಾಷ್ಟಮಟ್ಟದ ಶಾಲಾ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಕಾರಾತ್ಮಕ ಅಂಶಗಳೇ ಕೇಳಿಬರುತ್ತಿದ್ದ ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಮೂಲಕ ಸುವರ್ಣ ಯಾತ್ರೆಯಲ್ಲಿ ಆರಂಭವಾಗಿದೆ. ಇಂದು ಜಗತ್ತು ಭಾರತವನ್ನು ನೋಡುತ್ತಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಜರುಗಿದ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೂತನ ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರ ಸಂಕಲ್ಪ, ತಪಸ್ಸು ಮುಂದೆ ದೇಶಕ್ಕೆ ಮತ್ತಷ್ಟು ಒಳ್ಳೆಯದನ್ನೇ ಮಾಡಲಿದೆ. ಅವರು ದೇಶಕ್ಕಾಗಿ ಕಂಡ ಕನಸು ನನಸಾಗಬೇಕಿದ್ದರೆ ಪ್ರತಿ ಕಾರ್ಯಕರ್ತನೂ ನಿಷ್ಠೆಯಿಂದ ತೊಡಗಿಸಿಕೊಂಡ ಈ ಚುನಾವಣೆಯಲ್ಲಿ ಗೆದ್ದುಬರಬೇಕಾಗಿದೆ ಎಂದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಲಾಯಿತು. ಈ ವೇಳೆ ಮಂಡಲದ ನೂತನ ಅಧ್ಯಕ್ಷರಿಗೆ ಪಕ್ಷದ ಧ್ವಜ ಹಸ್ತಾಂತರಿಸಲಾಯಿತು. ಪದಾಧಿಕಾರಿಗಳನ್ನು ಶಾಲು ಹಾಕಿ ಅಭಿನಂದಿಸಲಾಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬಿಜೆಪಿಯ ನೂತನ ಪದಾಧಿಕಾರಿಗಳ ತಂಡವು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಇತ್ತಿಚಿಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಸಲಹೆ ಸೂಚನೆ ಪಡೆದುಕೊಂಡಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಭೇಟಿ ಬಳಿಕ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬಿಜೆಪಿ ಯುವ ಪಡೆ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿಯಾಗಿರುವು ಮತ್ತು ಕುತೂಹಲ ಹುಟ್ಟುಹಾಕಿದೆ. ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಕುಂದಾಪುರ, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪಕ್ಷದ ಮುಖಂಡರಾದ ಸಂಪತ್ ಶೆಟ್ಟಿ ಶಾನಾಡಿ, ಪ್ರವೀಣ್ ಶೆಟ್ಟಿ ವಂಡಾರು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶದಲ್ಲಿ ಶುಕ್ರವಾರ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಿಂದ ಹೊರಟು ನಾಯ್ಕನಕಲ್ಲು ಎಂಬಲ್ಲಿ ತೆರಳಿ ಸಮುದ್ರದ ಮಧ್ಯೆಯೇ ಜಿಲ್ಲಾಧಿಕಾರಿಗಳು ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ಕುಮಾರಿ, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಸಹಾಯಕ ಚುನಾವಣಾಧಿಕಾರಿ ಮಂಜುನಾಥ್, ಬೈಂದೂರು ತಹಶಿಲ್ದಾರ್ ಪ್ರದೀಪ್ ಅವರು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸ್ಥಳಿಯರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಮುದ್ರದಲ್ಲಿ ಸ್ಕೂಭಾ ಡೈವಿಂಗ್ ಮೂಲಕ ತೆರಳಿ ಮತದಾನ ಜಾಗೃತಿಯ ಬಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಮತದಾನ ಜಾಗೃತಿ ಬೋರ್ಡುಗಳನ್ನು ಪ್ರದರ್ಶಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕೊಡಮಾಡುವ ಡಾ. ಶಿವರಾಮ ಕಾರಂತ ವಿಶೇಷ ಸಾಧಕ ಸ್ತ್ರೀ ಪುರಸ್ಕಾರಕ್ಕೆ ಕುಂದಾಪುರದ ವಿಶೇಷ ಚೇತನ ಯುವತಿ ಸೃಜನಾ ಎಸ್ ಪಿ ಅವರನ್ನು ಆಯ್ಕೆ ಮಾಡಲಾಗಿದೆ. ಹುಟ್ಟು ಕಿವುಡುತನದೊಂದಿಗೆ ಮೂಕಿಯಾಗಿರುವ ದಿಟ್ಟ ಹುಡುಗಿಯೊಬ್ಬಳು ತನ್ನ ಅಹರ್ನಿಶಿ ಶ್ರಮದೊಂದಿಗೆ ತನ್ನ ಕನಸನ್ನು ಬೆನ್ನೇರಿಕೊಂಡು ಸಾಧನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಕ್ರಿಕೆಟ್ ಎಂದರೆ ಪ್ರಾಣಕ್ಕಿಂತಲೂ ಹೆಚ್ಚಾಗಿ ಪ್ರೀತಿಸುವ ಈಕೆ ಹರಿಯಾಣದಲ್ಲಿ ನಡೆಯಲಿರುವ ಟಿ-10 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ ಆಗುವುದರ ಮೂಲಕ ವಿಶೇಷ ಚೇತನ ಮಕ್ಕಳಿಗೆಲ್ಲ ರೋಲ್ ಮಾಡಲ್ ಆಗುವುದರ ಮೂಲಕ ಪ್ರಯತ್ನಕ್ಕಿಂತ ದೊಡ್ಡದು ಯಾವುದು ಇಲ್ಲ ಎಂಬ ಸಾಧನೆಯ ಮೂಲಕ ಆಲ್ ಇಂಡಿಯಾ ಸ್ಪೋರ್ಟ್ಸ್ ಕೌನ್ಸಿಲ್ ಆಫ್ ದಿ ಡೆಫ್ ಆಯೋಜಿಸಿರುವ ಪ್ರಥಮ ರಾಜ್ಯ ಮಟ್ಟದ ಟಿ-10 ಮಹಿಳೆಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ…
