ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಕಡಲ ಕೋರೆತದಿಂದಾಗಿ ಮೀನುಗಾರಿಕಾ ರಸ್ತೆ, ಮನೆಗಳಿಗೆ ಹಾನಿಯಾಗಿರುವ ಜೊತಗೆ ಮೀನುಗಾರರು ಆತಂಕದಲ್ಲಿ ಬದುಕು ಸ್ಥಿತಿ ಇದೆ. ಆದ್ಯತೆ ಮೇರೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ರಾಜ್ಯದ ಮೀನುಗಾರಿಕಾ ಸಚಿವರಿಗೂ ಮನವಿ ಮಾಡಲಾಗಿದೆ. ಜು.26ರಂದು ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದ್ದಾರೆ ಎಂದು ಸಂಸದ ಬಿ.ವೈ. ರಾಗವೇಂದ್ರ ಹೇಳಿದರು. ಅವರು ಶುಕ್ರವಾರ ಮರವಂತೆ ಸಮುದ್ರ ತೀರಕ್ಕೆ ಭೇಟಿ ನೀಡಿ ತೌಕ್ತೇ ಚಂಡಮಾರುತದಿಂದ ಉಂಟಾಗಿರುವ ಹಾನಿಯ ಹಾಗೂ ಕಡಲ ಕೊರೆತದ ಬಗ್ಗೆ ಪರಿಶೀಲನೆ ನಡೆಸಿ ಬಳಿಕ ಮಾತನಾಡಿ, ಹಾನಿಯ ಬಗ್ಗೆ ತಕ್ಷಣ ಪರೀಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ► ಕಡಲ್ಕೊರೆತದಿಂದಾಗಿ ಮರವಂತೆ ಫಿಷರೀಸ್ ರಸ್ತೆಯಲ್ಲಿ ಕಾಣಿಸಿಕೊಂಡ ಬಿರುಕು – https://kundapraa.com/?p=67133 . ಮರವಂತೆ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 54 ಕೋಟಿ ವೆಚ್ಚ ಮಾಡಲಾಗಿತ್ತು. ಮುಂದುವರಿದ ಕಾಮಗಾರಿಗೆ 80 ಕೋಟಿ ಟೆಂಡರ್ ಆಗಿದ್ದು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ರೋಟರಿ ಕಲಾಮಂದಿರಲ್ಲಿ ಆಯೋಜಿಸಲಾಗಿತ್ತು. ಕುಂದಾಪುರ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಉಪ ನಿರೀಕ್ಷಕರಾದ ಪ್ರಸಾದ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಗಳ ಪರಿಣಾಮ ಮತ್ತು ಅವುಗಳಿಂದ ಆಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಸಹ ಶಿಕ್ಷಕ ಗಣೇಶ್ ಕಾಂಚನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕುಂದಾಪುರದ ಹಾಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಇವರಿಗೆ ಕುಂದಾಪುರ ಜೂನಿಯರ್ ( ಬೋರ್ಡ್ ಹೈಸ್ಕೂಲ್) ಕಾಲೇಜಿನ ಆಡಳಿತ ಸಮಿತಿ ಮತ್ತು ಉಪನ್ಯಾಸಕ ವೃಂದದವರಿಂದ ಸನ್ಮಾನಿಸಲಾಯಿತು. ಜೂನಿಯರ್ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ, ಹಿರಿಯ ಉಪನ್ಯಾಸಕ ಭುಜಂಗ ಶೆಟ್ಟಿ, ಪ್ರೌಢಶಾಲಾ ಹಿರಿಯ ಶಿಕ್ಷಕಿ ವಿನುತಾ ಗಾಂವ್ಕರ್, ಉದಯ್ ಕುಮಾರ್ ಶೆಟ್ಟಿ , ಕಾಲೇಜು ಅಭಿವೃದ್ಧಿ ಸಮಿತಿಯ ಅನಂತ್ ಕೃಷ್ಣ ಕೊಡ್ಗಿ, ಮೋಹನದಾಸ್ ಶೆಣೈ ಕೆ ನಾರಾಯಣ್, ಪ್ರೌಢಶಾಲಾ ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ 9 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೈಂದೂರು ಬಿಜೆಪಿ ವತಿಯಿಂದ ಉಪ್ಪುಂದ ಕಂಚಿಕಾನುವಿನಲ್ಲಿ ಏರ್ಪಡಿಸಿದ್ದ “ಸಾರ್ವಜನಿಕ ಸಂಪರ್ಕ ಅಭಿಯಾನ ಮತ್ತು ನಾಗೂರು ಲಲಿತಕೃಷ್ಣ ಸಭಾಂಗಣದಲ್ಲಿ ಏರ್ಪಡಿಸಿದ್ದ ವರ್ತಕರ ಸಭೆ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೋಳೆ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ಪಕ್ಷದ ಮುಖಂಡರು ಮತ್ತು ವರ್ತಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಷ್ಠಿತ ರೋಟರಿ ಕ್ಲಬ್ ಬೈಂದೂರು ಇದರ 2023-24ನೇ ಸಾಲಿನ ಅಧ್ಯಕ್ಷರಾಗಿ ಶಿರೂರಿನ ಯುವ ಉದ್ಯಮಿ ರೊ. ಪ್ರಸಾದ ಪ್ರಭು ಅವರು ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಶಿಕ್ಷಕ, ಸಂಘಟಕ ರೊ.ಸುಬ್ರಹ್ಮಣ್ಯ ಜಿ.ಉಪ್ಪುಂದ ರವರು ಆಯ್ಕೆಯಾಗಿರುತ್ತಾರೆ ಎಂದು 2022-23 ನೇ ಸಾಲಿನ ಅಧ್ಯಕ್ಷ ರೊ.ಎಚ್. ಉದಯ ಆಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂತನ ಸರಕಾರವು ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡುವ ಜೊತೆಗೆ ಗ್ರಾಮೀಣ ಭಾಗದಲ್ಲಿನ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿಕೊಡಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ. ನಗರ ಪ್ರದೇಶದ ಸರ್ಕಾರಿ ಶಾಲೆಗಳು ಸೂಕ್ತ ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಪ್ರೋತ್ಸಾಹದಿಂದ ಮೂಲಭೂತ ಸೌಕರ್ಯ, ಕಂಪ್ಯೂಟರ್, ಅಗತ್ಯ ಶಿಕ್ಷಕರು, ವಾಹನ ವ್ಯವಸ್ಥೆಯನ್ನು ಹೊಂದುತ್ತಿವೆ ಇದು ಉತ್ತಮ ಬೆಳವಣಿಗೆ ಆದರೆ ಇಂತಹ ವ್ಯವಸ್ಥೆಗಳು ಇಲ್ಲದ ಹಳ್ಳಿ ಪ್ರದೇಶದ ಶಾಲೆಗಳು ಬಾಗಿಲು ಮುಚ್ಚುವ ಪರಿಸ್ಥಿತಿ ಬಂದಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ನಡುವೆ ವಿದ್ಯಾರ್ಥಿಗಳ ಸೇರ್ಪಡೆಗೆ ಪೈಪೋಟಿ ನಡೆಯುತ್ತಿದೆ. ಪಟ್ಟಣದ ಶಾಲೆಗಳ ಗುಣಮಟ್ಟ ಗ್ರಾಮೀಣ ಭಾಗದ ಕೆಲವು ಶಾಲೆಗಲ್ಲಿ ಇಲ್ಲದ ಕಾರಣ ಇಂತಹ ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ವಿಶೇಷವಾಗಿ ನಕ್ಸಲ್ ಪೀಡಿತ ಪ್ರದೇಶದ, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡ ಗ್ರಾಮದ ವಿವಿದೆಡೆಗೆ ಸರಕಾರಿ ಬಸ್ಸು ಓಡಿಸಲು ಹಾಗೂ ಮರವಂತೆ ಮಹಾರಾಜ ಸ್ವಾಮಿ ಬಳಿ ಬಸ್ ನಿಲುಗಡೆಗೆ ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ಪಡುಕೋಣೆ ಘಟಕ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಬೈಂದೂರು ತಾಲೂಕು ವತಿಯಿಂದ ನಾಡ ಗ್ರಾ.ಪಂ ಎದುರು ಪ್ರತಿಭಟನೆ ಜರುಗಿತು. ಈ ವೇಳೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಏಕಸ್ವಾಮ್ಯದಿಂದಾಗಿ ಸರಕಾರಿ ಬಸ್ಗಳ ಸಂಖ್ಯೆ ಕಡಿಮೆಯಿದೆ. ಖಾಸಗಿ ಬಸ್ ಮಾಲಕರು ಅವಿಭಜಿತ ದ.ಕ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ನಿಯಂತ್ರಿಸುತ್ತಿದ್ದಾರೆ. ನಾಡ-ಪಡುಕೋಣೆಯಲ್ಲಿ ಎದ್ದ ಸರಕಾರಿ ಬಸ್ ವಿಚಾರದ ಧ್ವನಿ ಇಡೀ ಕರಾವಳಿ ಹೆಣ್ಣುಮಕ್ಕಳ ಪರವಾದ ಧ್ವನಿಯಾಗಬೇಕು. ಇದು ಆರಂಭದ ಹೋರಾಟವಾಗಿದ್ದು ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಮುಂದೆ, ಆ ಬಳಿಕವೂ ಈಡೇರದಿದ್ದರೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ಕಚೇರಿ ಎದುರು ಧರಣಿ ಕುಳಿತುಕೊಳ್ಳಲಾಗುವುದು ಎಂದರ. ಸಾರಿಗೆ ಅವ್ಯವಸ್ಥೆಯ ವಿರುದ್ದ ಡಿವೈಎಫ್ಐ ಸಂಘಟನೆ ನಾಲ್ಕು ದಶಕಗಳಿಂದ ಹೋರಾಟಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ ಬಗ್ಗೆ ನಮ್ಮ ಚಿಂತನೆ ಜೀವನದಲ್ಲಿ ರೂಢಿಯಾದರೆ ಯಾವುದೇ ಸಿದ್ಧ ಚೌಕಟ್ಟನ್ನು ಮುರಿದು ಬೆಳೆಯಬಹುದು. ಸೃಜನಾತ್ಮಕ ಚಿಂತನೆ ವಿದ್ಯಾರ್ಥಿಗಳಿಗೆ ಅಗತ್ಯ ಎಂದು ಶಿಕ್ಷಣ ತಜ್ಞ, ನಿವೃತ್ತ ಪ್ರಾಂಶುಪಾಲ ಡಾ| ಎಂ. ಮಹಾಬಲೇಶ್ವರ ರಾವ್ ಹೇಳಿದರು. ಕುಂದಾಪುರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ನಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯ, ಬೈಂದೂರು ವಕೀಲರ ಸಂಘ (ರಿ) ಬೈಂದೂರು ಹಾಗೂ ಅಭಿಯೋಗ ಇಲಾಖೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾಯಿತು. ಬೈಂದೂರು ನ್ಯಾಯಾಲಯದ ನ್ಯಾಯಾಧೀಶರಾದ ವಿದ್ಯಾ ಅವರು ಮಾತನಾಡಿ ಯೋಗಾಭ್ಯಾಸದಿಂದ ಆರೋಗ್ಯದ ವೃದ್ಧಿಯೊಂದಿಗೆ ಮನಸ್ಸಿನ ನಿಗ್ರಹ ಕೂಡ ಸಾಧ್ಯ ಎಂದರು. ಮುಖ್ಯ ಅತಿಥಿ ಹನುಮಂತ ಜಿ ಮಾತನಾಡಿ ಯೋಗದ ಪ್ರಾಮುಖ್ಯತೆ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ, ಸಹಾಯಕ ಅಭಿಯೋಜಕರಾದ ಇಂದಿರಾ ನಾಯ್ಕ, ಹಾಗೂ ಮುಖ್ಯ ಅತಿಥಿಯಾಗಿ ಯೋಗ ಪಟು ಹನುಮಂತ ಜಿ ಅವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಯೋಗ ಪಟು ಹನುಮಂತ ಜಿ ಅವರು ಯೋಗ ತರಬೇತಿ ನೀಡಿದರು. ಬೈಂದೂರು ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೂನ್ ತಿಂಗಳು ಮಗಿಯುತ್ತಾ ಬಂದರೂ ಕಣ್ಣಾಮುಚ್ಚಾಲೆಯಾಡುತ್ತಿದ್ದ ಮಳೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಕೆಲ ಹೊತ್ತು ಸುರಿದಿದೆ. ಮಳೆಯ ವಿಳಂಬದಿಂದಾಗಿ ಕಂಗಾಲಾಗಿದ್ದ ರೈತಾಪಿ ವರ್ಗ ಮತ್ತೆ ಕೃಷಿ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಜೂನ್ 1 ರಿಂದ ವಾಡಿಕೆಯಂತೆ 100ಮೀ. ಮೀ ಮಳೆಯಾಗಬೇಕಿದ್ದು, ಈತನಕ ಕೇವಲ 30ಮಿ.ಮೀ. ಮಳೆಯಾಗಿದೆ. ನೀರಿನ ಮೂಲಗಳು ಬತ್ತಿದ್ದು ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿತ್ತು. ಮಳೆಗಾಲ ಆರಂಭಗೊಂಡರೂ ನಿರೀಕ್ಷಿತ ಮಳೆಯಾಗದೇ ಇದ್ದುದರಿಂದ ಬೀಜ ಬಿತ್ತನೆಯೂ ಕಷ್ಟವಾಗಿತ್ತು. ಕೆಲವೆಡೆ ಕೃತಕ ನೀರಿನ ಮೂಲಗಳನ್ನು ಬಳಸಿ ಬಿತ್ತನೇ ಮಾಡಿದ್ದರೂ, ನಾಟಿ ಕಾರ್ಯಕ್ಕೆ ಮಳೆ ನಿರೀಕ್ಷೆಯಲ್ಲಿದ್ದರು. ಇದೀಗ ಮಳೆಯ ಛಾಯೆ ಕಾಣಿಸಿಕೊಂಡಿರುವುದು ರೈತರಲ್ಲಿ ಕೊಂಚ ನೆಮ್ಮದಿ ಕಾಣುವಂತಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
