Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ರಶ್ಮಿ ಎಸ್. ಆರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಮೂಲತಃ ಮಂಗಳೂರಿನವರಾದ ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. ಬಳಿಕ 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದು, ಪ್ರಸ್ತುತ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಕುಂದಾಪುರದ ಉವವಿಭಾಗಾಧಿಕಾರಿಯಾಗಿದ್ದ ಕೆ. ರಾಜು ಅವರು ಮಂಗಳೂರು ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಕುಂದಾಪುರದ ತಿಂಗಳ ಓದು ಕಾರ್ಯಕ್ರಮ ಇತ್ತಿಚಿಗೆ ಜನಪ್ರತಿನಿಧಿ ಪತ್ರಿಕೆಯ ಸಹಯೋಗದೊಂದಿಗೆ ನಡೆಯಿತು. ಈ ತಿಂಗಳ ಓದು ಕಾರ್ಯಕ್ರಮ ನಮ್ಮನ್ನೆಲ್ಲಾ ಅಗಲಿರುವ ಸಂವೇದನಾಶೀಲ ಬರಹಗಾರ್ತಿ, ನಾಡೋಜ ಸಾರಾ ಅಬೂಬಕ್ಕರ್ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮವಾಗಿತ್ತು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕಿ ಅಶ್ವಿನಿ ಕನ್ನಂತ ಸಾರಾ ಅಬೂಬಕ್ಕರ್ ಅವರ ನಿಯಮ ನಿಯಮಗಳ ನಡುವೆ ಎಂಬ ಕತೆಯನ್ನು ಓದಿನೊಂದಿಗೆ ಕಥೆಯ ತಿರುಳು ಕೇಳುಗರ ಮನದಲ್ಲಿ ಒಂದು ಸುಂದರ ಅನುಭವವಾಗುವಂತೆ ಓದಿದರು. ಸರಕಾರಿ ಪ್ರೌಢಶಾಲೆ ಹೆಸ್ಕತ್ತೂರ ಮುಖ್ಯೋಪಾಧ್ಯಾಯರಾದ ಅಬ್ದುಲ್ ರವೂಫ್ ರವರು ಸಾರಾ ಅಬೂಬಕ್ಕರ್ ಅವರ ಬದುಕು ಬರಹ ಕಥೆ ನಾಟಕ ಅವರ ಸಾಧನೆ ಇವುಗಳ ಬಗ್ಗೆ ಮಾತನಾಡಿದರು. ಹಾಲಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರೋಷನ್ ಬೀಬಿಯವರು ತಮ್ಮನ್ನು ಒಳಗೊಂಡಂತೆ ಮುಸ್ಲಿಂ ಸಮುದಾಯದ ಮಹಿಳಾ ಲೇಖಕಿಯರ ಮೇಲೆ ಹಾಗೂ ಎಲ್ಲಾ ವರ್ಗದ ಲೇಖಕ ಲೇಖಕಿಯರ ಮೇಲೆ ಸಾರಾ ಅಬೂಬಕ್ಕರ್ ಅವರ ಬರಹ ಬದುಕಿನ ಪ್ರಭಾವದ ಕುರಿತು ಮಾತನಾಡಿದರು. ಜನಪ್ರತಿನಿಧಿ ಪತ್ರಿಕಾ ಸಂಪಾದಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಇತ್ತಿಚಿಗೆ ಹಳೆಯ ವಿದ್ಯಾರ್ಥಿಗಳ ಸಮಾಗಮ ಜರುಗಿತು. ಈ ಸಂಭ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು, ಶಿಕ್ಷಕರು, ಹಾಗೂ ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. 25 ವರ್ಷಗಳನ್ನು ಪೂರೈಸಿದ ಸಂಸ್ಥೆಯ ಸಂಭ್ರಮಾಚರಣೆಗೆ ಈ ಕಾರ್ಯಕ್ರಮವು ಮುನ್ನುಡಿಯಾಯಿತು. ಸಂಸ್ಥೆಯಲ್ಲಿ ಕಟ್ಟಿಸಿರುವ ‘ರೌಪ್ಯ’ ನಾಮಾಂಕಿತ ನೂತನ ಸಭಾ ಮಂದಿರದ ಉದ್ಘಾಟನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು, ಹಳೆಯ ವಿದ್ಯಾರ್ಥಿಗಳ ಸಂಘ TERES-IAA ಇದರ ಲಾಂಛನ ಅನಾವರಣದೊಂದಿಗೆ ಮುಂದುವರೆಯಿತು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೇತೃತ್ವವನ್ನು ಸಂಸ್ಥೆಯ ಹಳೆಯ ವಿದ್ಯಾರ್ಥಿಯಾದ ಅಕ್ಷಯ್ ಅವರಿಗೆ ಮುಂದಿನ ಎರಡು ವರ್ಷಗಳವರೆಗೆ ವಹಿಸಲಾಯಿತು. ಹಾಗೆಯೇ ಈ ಸಮಾಗಮದಲ್ಲಿ ಸಂಸ್ಥೆಯ ಏಳಿಗೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದಲ್ಲಿ ನೂತನ ಬದಲಾವಣೆಗಳ ಬಗ್ಗೆ ಚಿಂತನೆ ನಡೆಸಲಾಯಿತು. ನಂತರ ನೆರೆದ ಪ್ರತಿಭೆಗಳಿಂದ ಮನೋರಂಜನಾ ಕಾರ್ಯಕ್ರಮಗಳು ನೆರೆವೇರಿತು. ಇದರಲ್ಲಿ ಪ್ರಮುಖವಾಗಿ ನಂದನ್ ಉಡುಪ, ಚರಿತಾ, ಲಾಸ್ಯ, ಆದಿತ್ಯ ಇವರುಗಳು ತಮ್ಮ ಕಂಠಸಿರಿಯಿಂದ ಸರ್ವರನ್ನು ರಂಜಿಸಿದರು.ನಂತರ ಹಳೆಯ ವಿದ್ಯಾರ್ಥಿಗಳಿಗಾಗಿ ಅದೃಷ್ಟ ಕುರ್ಚಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ 71ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಕರ್ನಾಟಕ ವಾಲಿಬಾಲ್ ತಂಡದ ನಾಯಕನಾಗಿ ಕುಂದಾಪುರದ ಅನೂಪ್ ಡಿ’ಕೋಸ್ಟಾ ಆಯ್ಕೆಯಾಗಿದ್ದಾರೆ. ಗುವಾಹಟಿಗೆ ತೆರಳಿರುವ 12 ಮಂದಿಯ ಕರ್ನಾಟಕ ತಂಡದಲ್ಲಿ ಕೋಟೇಶ್ವರ ಸಮೀಪದ ಕಟ್ಕೇರಿಯ ಚಂದನ್ ಆಚಾರ್ಯ ಹಾಗೂ ಭಟ್ಕಳದ ನವೀದ್ ಖಾನ್ ಕೂಡ ಸ್ಥಾನ ಪಡೆದಿದ್ದಾರೆ. ಪಂದ್ಯಾವಳಿಯು ಫೆಬ್ರವರಿ 8ರ ತನಕ ನಡೆಯಲಿದೆ. ವಾಲಿಬಾಲ್ ತಂಡದ ನಾಯಕನಾಗಿರುವ ಅನೂಪ್ ಡಿ’ಕೋಸ್ಟಾಹೈದರಾಬಾದ್ ನಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭಾರತೀಯ ಜೂನಿಯರ್ ತಂಡದ ನಾಯಕನಾಗಿ, ಸೀನಿ ಯರ್ ತಂಡದ ಆಟ ಗಾರನಾಗಿ ದೇಶವನ್ನು ಪ್ರತಿ ನಿಧಿಸಿರುವ ಅನುಭವ ಹೊಂದಿರುವ ಇವರು, ಕಳೆದ 15 ವರ್ಷಗಳಿಂದ ಕರ್ನಾಟಕ ತಂಡ ವನ್ನು ಪ್ರತಿನಿಧಿಸುತ್ತಿದ್ದಾರೆ. 13 ಬಾರಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಕರ್ನಾಟಕ ತಂಡದ ಪರ ಆಡಿರುವ ಹೆಗ್ಗಳಿಕೆ ಇವರದು. ರಾಷ್ಟ್ರೀಯ ಟೂರ್ನಿಯೊಂದರಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ತಂಡವನ್ನು ಮುನ್ನ ಡೆಸುವ ಅವಕಾಶ ಪಡೆದಿದ್ದಾರೆ. ಅತ್ಯುತ್ತಮ_ವಾಲಿಬಾಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೋದ ಮಠ ಸ್ವಾಮೀಜಿ ಅನುಗ್ರಹದಲ್ಲಿ ಗುರುಸಾರ್ವಭೌಮ ಶ್ರೀ ವಾದಿರಾಜ ಜೀವನ ಆಧಾರಿತ ಕನ್ನಡ ಚಲನಚಿತ್ರ ನಿರ್ಮಾಣವಾಗುತ್ತಿದ್ದು, ಅನುಭವಿ ನಿರ್ದೇಶಕ, ವಾದಿರಾಜರ ಭಕ್ತ ಹಯವದನ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಉತ್ತಮ ರೀತಿಯಲ್ಲಿ ಚಿತ್ರಿಸುವ ಭರವಸೆ ಸಿಕ್ಕಿರುವುದರಿಂದ ಸಿನಿಮಾ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಸೋದೆ ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಗುರುವಾರ ಹೂವಿನಕರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ವಾದಿರಾಜರು ಸಮಾಜಕ್ಕೆ ಕೊಟ್ಟ ಕೊಡುಗೆ, ಅವರ ವ್ಯಕ್ತಿತ್ವ ಹಾಗೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ಸಿನಿಮಾ ನಿರ್ಮಾಣ ಆಗಬೇಕು ಎನ್ನುವ ಆಶಯ ವ್ಯಕ್ತಪಡಿಸಿದಾಗ ನಿರ್ದೇಶಕರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ನಮಗೆ ಚಲನಚಿತ್ರದ ಬಗ್ಗೆ ಗಂಧಗಾಳಿಯೂ ಇಲ್ಲ, ಹೇಳಿಸಿದ ಕೆಲಸವೂ ಅಲ್ಲ. ಹೀಗೆ ಆಗಬೇಕು ಅಂಥ ಹೇಳಬಹುದು ಅಷ್ಟೇ ಎಂದರು. ಶ್ರೀ ವಾದಿರಾಜ ಗುರು ಸಾರ್ವಭೌಮರು 15, 16ನೇ ಶತಮಾನದಲ್ಲಿ ಬಂದ ಮೇರು ವ್ಯಕ್ತಿ. 120 ವರ್ಷ ಜೀವಿಸಿದ್ದು, ಬಹುಮುಖ ವ್ಯಕ್ತಿತ್ವದ ಜತೆಗೆ ಸಂದೇಶ ನೀಡಿದ್ದಾರೆ. ಅನೇಕ ಭಾಷೆಗಳ ಪಾಂಡಿತ್ಯ, 120 ವರ್ಷದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಪ್ರೀತಿ, ವಿಶ್ವಾಸ, ಸಹಬಾಳ್ವೆಯ ಬದುಕು ಸಂಘಟನೆಗಳ ಧ್ಯೇಯವಾಗಬೇಕು. ಸಂಘಟಿತರಾಗಿ ಬಾಳುವುದರಿಂದ ಸಮಾಜದ ಏಳಿಗೆ ಸಾಧಿಸಬಹುದು ಎಂದು ಮಹಿಳಾ ಸಂರಕ್ಷಣಾ ಸಮಿತಿ ಮತ್ತು ರಾಜ್ಯ ಪ್ರಜಾತತ್ವ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷೆ ಪ್ರೇಮಾ ರಾಮಮೂರ್ತಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ನೂತನ ಅಸ್ತಿತ್ವದ ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ಸಬಲೀಕರಣದಿಂದ ಸ್ವಾವಲಂಬಿ ಜೀವನ ಸಾಧ್ಯ. ಸಮಾಜಮುಖಿ ವ್ಯಕ್ತಿತ್ವದೊಂದಿಗೆ ಮಾನವೀಯ ಗುಣದಿಂದ ಸಂಸ್ಕೃತಿ ರಕ್ಷಣೆ ಮಾಡಬಹುದು. ಮಹಿಳೆಯರು ಸಮಾಜ ಸೇವೆ ಮಾಡುವುದರ ಮೂಲಕ ಸಮಷ್ಠಿಯ ಹಿತ ಕಾಪಾಡುವ ಜವಾಬ್ದಾರಿಯ ಜ್ಞಾನ ಬೆಳೆಯುತ್ತದೆ ಎಂದರು. ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘದ ಅಧ್ಯಕ್ಷ ಮೋಹನ ಸುಬ್ರಾಯ ರೇವಣಕರ್ ಅಧ್ಯಕ್ಷತೆ ವಹಿಸಿದ್ದರು. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. 2021-22ನೇ ಸಾಲಿನ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಅಸೋಸಿಯೇಷನ್, ಶಿವಮೊಗ್ಗದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ ನಾಗರಾಜ ಖಾರ್ವಿ ಮತ್ತು ಕೃಪಾ ದಂಪತಿ ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 200 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 4×50 ಮೀ. ಫ್ರೀ ಸ್ಟೈಲ್ ರಿಲೇ ಚಿನ್ನದ ಪದಕ ಪಡೆದಿದ್ದಾರೆ. ಅವರ ಪತ್ನಿ, ಶಿಕ್ಷಕಿ ಕೃಪಾ ಖಾರ್ವಿ 50 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ, 200 ಮೀ. ಬ್ರೆಸ್ಟ್ ಸ್ಟ್ರೋಕ್ ಚಿನ್ನದ ಪದಕ 4×50 ಮೀ. ಮೆಡ್ಲೆ ರೀಲೆಯಲ್ಲಿ ಬೆಳ್ಳಿಪದಕ ಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 2020ರಲ್ಲಿ ನಾಗರಾಜ ಖಾರ್ವಿಯವರು ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು, ಬೀಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೈ ಒವ್ನ್ ಗಾರ್ಮೆಂಟ್ಸ್‌ನ 3ನೇ ಮಳಿಗೆಯನ್ನು ಇಂದು ಗಂಗೊಳ್ಳಿಯ ಮುಖ್ಯ ರಸ್ತೆಯ್ಲಲಿರುವ ಸೆಂಟ್ರಲ್ ಪ್ಲಾಜಾದಲ್ಲಿ ಶುಭಾರಂಭಗೊಂಡಿತು. ಈ ವೇಳೆ ಜರುಗಿದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕುಂದಾಪುರ ಖ್ಯಾತ ವಕೀಲರಾದ ರವಿಕಿರಣ್ ಮುರುಡೇಶ್ವರ ಅವರು ಕಲ್ಪವೃಕ್ಷಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಗಂಗೊಳ್ಳಿಯ ಜಮತುಲ್ ಮುಸ್ಲಿಮೀನ್ ಕಮೀಟಿಯ ಅಧ್ಯಕ್ಷರಾದ ಜನಾಬ್ ಹಸೈನಾರ್ ಪಿಎಂ ರವರು ಮಾತನಾಡಿ ಶುಭಹಾರೈಸಿದರು. ಮೈ ಒವ್ನ್ ಗ್ರಾಮೆಂಟ್ಸ್ ಗಂಗೊಳ್ಳಿಯ ಮಳಿಗೆಯ ಉದ್ಘಾಟನೆಯನ್ನು ಗಂಗೊಳ್ಳಿ ಜುಮಾ ಮಸೀದಿಯ ಖತೀಬರಾದ ಮುಝಮ್ಮಿಲ್ ಮೌಲಾನಾ, ಗಂಗೊಳ್ಳಿ ಚರ್ಚ್ ನ ಧಾರ್ಮ ಗುರುಗಳಾದ ರೇ.ಫಾ.ಥಾಮಸ್ ರೋಷನ್ ಡಿಸೋಜಾ, ಕುಂದಾಪುರದ ಉದಯ ಜ್ಯುವೆಲ್ಸ್ ಮಾಲಕರಾದ ಉದಯ ಶೇಟ್ ಹಾಗೂ ಜೈ ಭೀಮ್ ಗಂಗೊಳ್ಳಿಯ ಅಧ್ಯಕ್ಷರಾದ ಜಗದೀಶ್ ಗಂಗೊಳ್ಳಿ ಯವರು ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಗಂಗೊಳ್ಳಿಯ ಸುಲ್ತಾನ್ ಮಸೀದಿಯ ಖತೀಬರಾದ ಮೌಲಾನಾ ಮೊಹಮ್ಮದ್ ಷರೀಫ್ ಸಹಾದಿ, ಬೈಂದೂರು ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಸುಧಾಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಬೈಂದೂರಿನ ಸುರಭಿ ಸಂಸ್ಥೆ ಪ್ರತಿವರ್ಷದಂತೆ ನಾಲ್ಕು ದಿನಗಳ ರಂಗ ಹಬ್ಬವನ್ನು ಆಯೋಜಿಸಿದೆ. ಫೆಬ್ರವರಿ 04ರಿಂದ 07ರ ವರೆಗೆ ಪ್ರತಿದಿನ ಸಂಜೆ ಗಂಟೆ 6-30ಕ್ಕೆ ಬೈಂದೂರು ಶಾರದಾ ವೇದಿಕೆಯಲ್ಲಿ ನಾಟಕೋತ್ಸವ ನಡೆಯಲಿದೆ. ಫೆ.04ರಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಉತ್ಸವಕ್ಕೆ ಚಾಲನೆ ನೀಡಲಿದ್ದು, ಸಾಹಿತ್ಯ ಸಮುದಾಯ ಶಿವಮೊಗ್ಗದ ಕಾರ್ಯದರ್ಶಿ ಕೆ. ಪ್ರಭಾಕರನ್ ಜ್ಯೋತಿ ಪ್ರಜ್ವಲನಗೈಯಲಿದ್ದಾರೆ. ಕಾರ್ಯಕ್ರಮದ ನಾಲ್ಕು ದಿನಗಳ ಕಾಲ ರಂಗಭೂಮಿ ಚಿತ್ರನಟಿ ಚಂದ್ರಕಲಾ ರಾವ್, ಹಿರಿಯ ರಂಗನಟ ಗಣೇಶ್ ಕಾರಂತ್, ರಂಗನಟ ಹಾಗೂ ಚಲನಚಿತ್ರ ನಟ ರಘು ಪಾಂಡೇಶ್ವರ, ರಂಗನಟ ಯತೀಶ್ ಕೊಳ್ಳೆಗಾಲ ಅವರನ್ನು ಸನ್ಮಾನಿಸಲಾಗುತ್ತದೆ. ಫೆಬ್ರವರಿ 04ರ ಶನಿವಾರ ನಟ ಮಿತ್ರರು ತೀರ್ಥಹಳ್ಳಿ (ರಿ.) ಪ್ರಸ್ತುತಿಯ ನಾಟಕ ತುರುಬ ಕಟ್ಟುವ ಹದನ’ (ರಚನೆ : ಪಂಪ – ರನ್ನ – ಕುಮಾರವ್ಯಾಸ – ಪುರಂದರದಾಸರು, ಪರಿಕಲ್ಪನೆ/ನಿರ್ದೇಶನ: ಶ್ರೀಕಾಂತ್ ಕುಮಟಾ), ಫೆಬ್ರವರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಪ್ರಾಯೋಜಿತ ಮಧುಸೂದನ ಡಿ ಕುಶೆ ಪ್ರೌಢಶಾಲೆ ವಡೆರಹೋಬಳಿ ಕುಂದಾಪುರ ಇದರ ಇಂಟರಾಕ್ಟ್ ಕ್ಲಬ್ ವತಿಯಿಮಧ ಹತ್ತನೆ ತರಗತಿಯ ವಿದ್ಯಾರ್ಥಿಯರಿಗೆ 2022-23ನೇ ಸಾಲಿನ ಪರಿಕ್ಷೆ ಎದುರಿಸುವ ಕುರಿತು ಮಾಹಿತಿ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರೊ. ಕುಮಾರ್ ಎಸ್ ಕಾಂಚನ್ ಪರೀಕ್ಷೆ ಭಯ, ಪರೀಕ್ಷೆ ಎದುರಿಸುವ ರೀತಿ, ಪರೀಕ್ಷೆಗೆ ತಯಾರಿ ಮತ್ತು ಶಿಕ್ಷಣದ ಬಗ್ಗೆ ಸುದೀರ್ಘವಾಗಿ ಮಕ್ಕಳ ಮನಸ್ಸು ನಾಟುವ ರೀತಿಯಲ್ಲಿ ಮಾತನಾಡಿ ಶುಭ ಹಾರೈಸಿದರು. ರೋಟರಿ ಕುಂದಾಪುರದ ಅಧ್ಯಕ್ಷರು ರೊ.ವೆಂಕಟೇಶ್ ನಾವುಂದ ಇಂಟರಾಕ್ಟ್ ಚೇರ್ಮನ್ ರೊ ರಾಘವೇಂದ್ರ ಗೋಪಾಡಿ ಶುಭಾಶಯಗೈದರು. ಮುಖ್ಯ ಶಿಕ್ಷಕಿ ತೇಜಸ್ವಿನಿ ಸ್ವಾಗತಿಸಿದರು, ಶಿಕ್ಷಕಿ ಜ್ಯೋತಿ ಧನ್ಯವಾದ ಮಾಡುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

Read More