Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ತೆರಳಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕದ್ದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ಬಂಧಿತ ಆರೋಪಿ. ಜೂ.4ರಂದು ಸುರತ್ಕಲ್ ನಿವಾಸಿ ಪ್ರವೀಣ್ ಎನ್ನುವರು ಪತ್ನಿಯೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದು, ಈ ವೇಳೆ ಚಿನ್ನಾಭರಣವನ್ನು ತಮ್ಮೊಂದಿಗೆ ಕೊಂಡೊಯ್ದುದ್ದಾರೆ. ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿಟ್ಟುಕೊಂಡಿದ್ದರು. ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ವ್ಯಾನಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿತ್ತ. ಒಟ್ಟು 13 ½ ಪವನ್ ಚಿನ್ನ [4 ಲಕ್ಷದ 75 ಸಾವಿರ ರೂ. ಮೌಲ್ಯ] ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಕೊಲ್ಲೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾಸಗಿ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. ದೇವಸ್ಥಾನಕ್ಕೆ ಬಂದಿದ್ದ ವೇಳೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಡಿಸ್ಟಿಕ್ 317ಸಿ ರೀಜನ್ 6, ವಲಯ 2ರ 2023-24ನೇ ಸಾಲಿನ ವಲಯಾಧ್ಯಕ್ಷರಾಗಿ ಶಂಕರ ಶೆಟ್ಟಿ ಬವಲಾಡಿ ಆಯ್ಕೆಯಾಗಿದ್ದಾರೆ. ಎಸ್ಸಿಡಿಸಿಸಿ ಬ್ಯಾಂಕ್ ಉಪ್ಪುಂದ ಶಾಖೆಯಲ್ಲಿ ಶಾಖಾ ಪ್ರಬಂಧಕರಾಗಿರುವ ಶಂಕರ ಶೆಟ್ಟಿ ಅವರು ತೆಕ್ಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಜಿಲ್ಲಾ ಕ್ಯಾಬಿನೆಟ್ನ ವಿಷನ್ ಕೇರ್ ಡಿಸ್ಟಿಕ್ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿರುತ್ತಾರೆ.

Read More

ಸಾಸ್ತಾನ ಕೋಡಿ, ಹಂಗಾರಕಟ್ಟೆ, ಕಾಪು ಮೂಳೂರು ಕಡಲಕೊರೆತ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ ಭೇಟಿ, ಪರಿಶೀಲನೆ. ಶಾಶ್ವತ ಯೋಜನೆ ರೂಪಿಸುವ ಆಶ್ವಾಸನೆ ಹಿಂದೂಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ಸೊರಕೆ, ಮೊಗವೀರ ಸಮುದಾಯದ ಮುಖಂಡ ಜಿ. ಶಂಕರ್, ಇಲಾಖಾ ಅಧಿಕಾರಿಗಳ ಉಪಸ್ಥಿತಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 6 ತಿಂಗಳ ಅವಧಿಯಲ್ಲಿ ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ, ಸ್ವಚ್ಛತಾ ಅಭಿಯಾನ, ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಮಹನೀಯರನ್ನು ಗುರುತಿಸಿ ಸನ್ಮಾನ, ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹ, ಶಾಲಾ ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಿ ಪ್ರೋತ್ಸಾಹ ಹೀಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿ ಮೆಚ್ಚುಗೆ ಪಡೆದ ಜೆಸಿಐ ಚಿತ್ತೂರು ಮಾರಣಕಟ್ಟೆ ವಲಯದ ಉತ್ತಮ ಘಟಕ ಪ್ರಶಸ್ತಿಯ ಜೊತೆಗೆ ಹಲವು ಪ್ರಶಸ್ತಿಗಳಿಗೆ ಭಾಜನವಾಗಿದೆ. ಘಟಕದ ಅಧ್ಯಕ್ಷರಾದ ಜೆಸಿಐ ಗುರುಪ್ರಸಾದ್ ದೇವಾಡಿಗ ಮಾರಣಕಟ್ಟೆ ಹಾಗೂ ಕಾರ್ಯದರ್ಶಿ ವಿಜಯ ಆಚಾರ್ಯ ಮಾರಣಕಟ್ಟೆ ಪ್ರಶಸ್ತಿ ಪಡೆಯುವಲ್ಲಿ ಶ್ರಮಿಸಿದ ಸ್ಥಾಪಕ ಅಧ್ಯಕ್ಷರು, ಪೂರ್ವಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ನಮ್ಮ ಘಟಕದೊಂದಿಗೆ ಕೈ ಜೋಡಿಸಿದ ಸರ್ವರನ್ನು ಸ್ಮರಿಸಿದರು.

Read More

ರಾಜ್ಯದಲ್ಲಿ ವರ್ಗಾವಣೆ ದಂದೆ ಆರಂಭವಾಗಿದೆ. ಬಿಜೆಪಿ ಸರಕಾರದ ಮೇಲೆ ಗೂಬೆ ಕೂರಿಸೋದು ಬೇಡ – ಯಾವುದೇ ತನಿಕೆ ಎದುರಿಸಲು ಸಿದ್ದರಿದ್ದೇವೆ – ಎಂಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿಗೆ ಸಮೀಪದ ನಾಗೋಡಿಯ ಕಂಚಿಕೆರೆ ಎಂಬಲ್ಲಿ ಸ್ಥಳೀಯ ನಿವಾಸಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕಂಚಿಕೆರೆಯ ಗಣೇಶ್ ದಾಳಿಯಿಂದ ಗಂಭೀರ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಗಣೇಶ್ ಅವರ ಮನೆ ಅಂಗಳಕ್ಕೆ ಚಿರತೆ ಬಂದ ವೇಳೆ ನಾಯಿಗಳು ಏಕಾಏಕಿ ಬೊಗಳಲಾರಂಭಿಸಿವೆ. ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಆಕ್ರೋಶಗೊಂಡ ಚಿರತೆ ಗಣೇಶ್ ಮೇಲೆಯೇ ಎಗರಿದೆ.ಗಾಯಗೊಂಡ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯವರ ಕೂಗಾಟಕ್ಕೆ ಅಕ್ಕಪಕ್ಕದವರು ಓಡಿ ಬಂದಾಗ ಚಿರತೆ ಗಣೇಶ್ ಅವರನ್ನು ಬಿಟ್ಟು ಓಡಿ ಹೋಗಿದ್ದು ಇದುವರೆಗೆ ನಾಯಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಮನುಷ್ಯರ ಮೇಲೂ ಎರಗಲು ಆರಂಭಿಸಿದ್ದು ಜನತೆ ಕಂಗಾಲಾಗಿದ್ದಾರೆ. ಕಾಡುಪ್ರಾಣಿಗಳು ಆಹಾರ ಅರಸಿ ಕಾಡು ಬಿಟ್ಟು ನಾಡಿಗೆ ಬರುತ್ತಿದ್ದು, ಈ ಪೈಕಿ ಚಿರತೆ ಹೆಚ್ಚಿಗಿ ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಕುಂದಾಪುರ ಶಾಸಕರರಾದ ಎ. ಕಿರಣ್ ಕುಮಾರ್ ಕೊಡ್ಗಿ ಯವರ ಅಧಿಕೃತ ಕಛೇರಿ ಇಂದು ಕುಂದಾಪುರ ತಾಲ್ಲೂಕು ಪಂಚಾಯತ್ ಕಟ್ಟದದಲ್ಲಿ ಆರಂಭಗೊಂಡಿತು. ಮಾಜಿ ಶಾಸಕ, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ ಅಪ್ಪಣ ಹೆಗ್ಗಡೆಯವರು ಕಛೇರಿಯನ್ನು ಉದ್ಘಾಟಿಸಿದರು. ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಂದಾಪುರ ಹೃದಯ ಭಾಗ ಶಾಸ್ತ್ರೀ ವೃತ್ತದಲ್ಲಿ ಶಾಸಕರ ಕಚೇರಿ ಉದ್ಘಾಟನೆಗೊಂಡಿದ್ದು ಕ್ಷೇತ್ರದ ಜನರಿಗೆ ಇಲ್ಲಿ ಭೇಟಿ ನೀಡಿ ಅಹವಾಲು ನೀಡಲು ಸುಲಭವಾಗುತ್ತದೆ. ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಅಭಿವೃದ್ಧಿ ಹಾದಿಯಲ್ಲಿ ಹಾಲಿ ಶಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಸಕರ ಕಚೇರಿಯ ಮೂಲಕ ಜನರ ಕಡತಗಳ ಸುಲಭ ವಿಲೇವಾರಿಯಾಗಿ ಸರಕಾರಿ ಕೆಲಸಗಳು ಶೀಘ್ರವಾಗಿ ನಡೆಯಬೇಕು. ಇದೊಂದು ಅಭಿವೃದ್ಧಿ ಕೇಂದ್ರವಾಗಿ ಸಾಮಾನ್ಯ ಜನರ ಕಾರ್ಯಾಲಯವಾಗಲಿ ಎಂದು ಆಶಿಸಿದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಯವರು ಮಾತನಾಡಿ, ಇದು ಸರಕಾರಿ ಕಚೇರಿಯಾಗಿದ್ದು ಜನ ಸಾಮಾನ್ಯರಿಗೆ ಆಗಬೇಕಾದ ಕೆಲಸ ಕಾರ್ಯಗಳು ಶೀಘ್ರವಾಗಿ ಪೂರೈಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು (ಈದುಲ್ ಅಝಾ) ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಕುಂದಾಪುರ ಬೈಂದೂರು, ಹೆಬ್ರಿ, ಕಾರ್ಕಳ, ಉಡುಪಿ, ಕಾಪು, ಬ್ರಹ್ಮಾವರ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಮಸೀದಿಯ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಝ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಾಲಾಡಿ ರಸ್ತೆಗೆ ಅಡ್ಡಲಾಗಿ ಬಿದ್ದದ್ದ ಮರವೊಂದನ್ನು ತೆರಳವುಗೊಳಿಸುತ್ತಿದ್ದ ಸಂದರ್ಭ, ಇನ್ನೊಂದು ಮರ ಉರುಳಿ ಬಿದ್ದಿದ್ದು ಬೈಂದೂರು ಶಾಸಕರು ಹಾಗೂ ಬೆಂಬಲಿಗರು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಕಾರ್ಯ ನಿಮಿತ್ತ ಹಾಲಾಡಿ ಮಾರ್ಗವಾಗಿ ತೆರಳುತ್ತಿದ್ದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ತಮ್ಮ ಬೆಂಬಲಿಗರೊಂದಿಗೆ ಮರ ತೆರವು ಕಾರ್ಯಕ್ಕೆ ಕೈಜೋಡಿಸಿದರು. ಈ ವೇಳೆ ಮತ್ತೊಂದು ಮರ ಅಲ್ಲಿಯೇ ಉರುಳಿ ಬಿದ್ದಿದೆ. ಮರ ಬೀಳುವುದನ್ನು ಕಂಡ ಶಾಸಕರು ಮತ್ತು ಬೆಂಬಲಿಗರು ಪಕ್ಕಕ್ಕೆ ಓಡಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ ಎರಡೂ ಮರವನ್ನು ತೆರವುಗೊಳಿಸಿ ಮುಂದೆ ಸಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಮನುಷ್ಯನನ್ನು ಮನುಷ್ಯನಾಗಿ ಬದುಕಲು ಕಲಿಸದ ಧರ್ಮ ಯಾಕೆ? ಎಂಬುದು ’ಘಾಂದ್ರುಕ್’ ಕೃತಿಯ ಒಳನೋಟವೂ ಹೌದು’ ಎಂದು ಕಾದಂಬರಿಕಾರ ಸತೀಶ್ ಚಪ್ಪರಿಕೆ ಹೇಳಿದರು. ಅವರು ಮುಂದುವರಿದ ಮಾತನಾಡಿ ಧರ್ಮ ಇಂದು ವ್ಯಾಪಾರಿ ಸರಕಾಗುತ್ತಿದೆ. ಮನುಕುಲದ ಉದ್ಧಾರಕ್ಕಾಗಿ ಬಳಕೆಯಾಗುತ್ತಿಲ್ಲ. ಒಕ್ಕಲೆಬ್ಬಿಸುವುದೂ ಹಿಂಸೆ. ಜಾಗತಿಕ ಮಟ್ಟದಲ್ಲಿ ಏನಾಗುತ್ತಿದೆ ಎಂದು ತಿಳಿದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ತಮ್ಮ ’ಘಾಂದ್ರುಕ್’ ಕಾದಂಬರಿ ಅವಲೋಕನ – ಸಂವಾದ ಕಾರ್ಯಕ್ರಮದಲ್ಲಿ ಅವರು ಪ್ರತಿಕ್ರಿಯಿಸಿದರು. ಕೃತಿಕಾರನ ಬದುಕು ಆತನ ಬರಹದಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬಿಂಬಿತವಾಗಿರುತ್ತದೆ. ’ಇಲ್ಲ’ ಎನ್ನುವುದಾದದರೆ, ಆತ ಸುಳ್ಳು ಹೇಳುತ್ತಿರಬಹುದು ಅಥವಾ ಬರಹ ಕದ್ದಿರಬಹುದು ಎಂದರು. ಪುಸ್ತಕದ? ದೊಡ್ಡ ಆಸ್ತಿ ಬೇರೆ ಇಲ್ಲ. ಪುಸ್ತಕ ಓದಿ. ಬರಹ ತೃಪ್ತಿ ನೀಡುತ್ತದೆ. ಬರೆಯಿರಿ, ಓದಿ. ನಿಮ್ಮ ಪರಿಸರ ನಿಮ್ಮ…

Read More