Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವುಗಳನ್ನು ಕಳವು ಮಾಡಿ ಗೋಮಾಂಸ ತಯಾರಿಸುತ್ತಿದ್ದ ದಂಧೆಯನ್ನು ಬೇಧಿಸಿದ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾವ್ರಾಡಿ ಗ್ರಾಮದ ಕಂಡ್ಲೂರು ಕರಾಣಿ ಅಬು ಮೊಹಮ್ಮದ್ ಎಂಬವರ ಮನೆಯ ಹಿಂಬದಿಯ ಶೆಡ್‌ನಲ್ಲಿ ಝಾಕೀರ್ ಹುಸೇನ್ ಮತ್ತು ಕರಾಣಿ ಶಾಕೀರ್ ಎಂಬ ವ್ಯಕ್ತಿಗಳು ಕಳವು ಮಾಡಿದ ಗೋವುಗಳನ್ನು ತಂದು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಬುಧವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿದ್ದ ಇಬ್ಬರು ವ್ಯಕ್ತಿಗಳು ಅಲ್ಲಿದ್ದ ಕಾಲ್ಕಿತ್ತಿದ್ದಾರೆ. ಪರಾರಿಯಾರಿದ್ದ ಮೊದಲ ಆರೋಪಿ ಝಾಕೀರ್ ಹುಸೇನ್ ಎಂಬಾತನನ್ನು ಕೊನೆಗೆ ಬಂಧಿಸಿದ್ದಾರೆ. ದಾಳಿ ನಡೆಸಿದಾಗ ಶೆಡ್ಡಿನಲ್ಲಿದ್ದ ಪ್ಲಾಸ್ಟಿಕ್ ಟಬ್‌ನಲ್ಲಿದ್ದ 152 ಕೆ.ಜಿ ಗೋವಿನ ಮಾಂಸವಿರುವುದು ಕಂಡುಬಂದಿದೆ. ಎಲ್ಲವನ್ನು ಸೀಜ್ ಮಾಡಲಾಗಿದ್ದು ಇನ್ನೋರ್ವ ಆರೋಪಿಯ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪವನ್ ನಾಯಕ್ ಅವರ ನೇತೃತ್ವದಲ್ಲಿ, ಇನ್ವೆಸ್ಟಿಗೇಷನ್ ಪಿಎಸ್ಐ ನೂತನ, ಎ.ಎಸ್.ಐ ವಿಶ್ವನಾಥ ಹಾಗೂ ಸಿಬ್ಬಂದಿಯವರು ದಾಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕನ್ನಡ ಕಿರುತೆರೆ, ಸಿನಿಮಾ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕನ್ನಡ ಅಭಿಮಾನಿಗಳ ಹೃದಯ ಗೆದ್ದಿರುವ ನಟಿ ದಿವ್ಯಾ ಉರುಡುಗ ಇದೀಗ ಅರ್ದಂಬರ್ಧ ಪ್ರೇಮಕತೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ಟೀಸರ್ ಮತ್ತು ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರುವ “ಅರ್ದಂಬರ್ಧ” ಪ್ರೇಮಕಥೆ ಸಿನಿಮಾತಂಡ ಈಗ ಮೊದಲ ಹಾಡಿನ ಮೂಲಕ ಅಭಿಮಾನಿಗಳ ಜೊತೆಯಾಗಿ ವಿಭಿನ್ನ ರೀತಿಯಲ್ಲಿ ಎಂಟ್ರಿಕೊಟ್ಟಿದ್ದಾರೆ….. ‘ಹುಚ್ಚು ಮನಸೇ..’ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡು ಅಭಿಮಾನಿಗಳಿಂದ ರಿಲೀಸ್ ಆಗಿದ್ದು ವಿಶೇಷ. ಅರ್ದಂಬರ್ಧ ಪ್ರೇಮಕಥೆ ಈಗಾಗಲೇ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದು ಸದ್ಯ ಹಾಡಿನ ಮೂಲಕ ಅಭಿಮಾನಿಗಳಲ್ಲಿ ಹುಚ್ಚು ಹಿಡಿಸಿದೆ. ಇದೀಗ ರಿಲೀಸ್ ಆಗಿರುವ ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ನಿರ್ದೇಶಕ ಅರವಿಂದ್ ಕೌಶಿಕ್ ಅವರೇ ಈ ಹಾಡಿಗೆ ಸಾಹಿತ್ಯ ರಚಿಸಿದ್ದು ಗಾಯಕ ವಾಸಕಿ ವೈಭವ್ ಮತ್ತು ಪೃಥ್ವಿ ಭಟ್ ಧ್ವನಿ ಧ್ವನಿಯಲ್ಲಿ ಈ ಹಾಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಮುಳ್ಳಿಕಟ್ಟೆ ನಡುವೆ ರಾಷ್ಟ್ರೀಯ ಹೆದ್ದಾರಿ 66ರರಲ್ಲಿ ಪಲ್ಟಿಯಾಗಿ 18ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಕುಂದಾಪುರದಿಂದ ಹೊರಟ ಲೋಕಲ್‍ ಬಸ್ಸು ಅರಾಟೆ ಸೇತುವೆ ದಾಟಿದ ಬಳಿಕ ಚಾಲಕನ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿದ್ದು, ಡಿವೈಡರ್ ಏರಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ. ಇದೇ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಅಘಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 18ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಅಪಘಾತ ನಡೆದ ತಕ್ಷಣ ಬಸ್ಸಿನ ಚಾಲಕ ಪರಾರಿಯಾಗಿದ್ದಾನೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡವರ ನಿಖರ ಸಂಖ್ಯೆ ಇನ್ನಷ್ಟೇ ತಿಳಿದುಬರಬೇಕಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು, ಬುಧವಾರ ಕೊಲ್ಲೂರು ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು “ರಜತ ಸಂಭ್ರಮ”ದ ಪೋಸ್ಟರ್ ಅನಾವರಣಗೊಳಿಸಿದರು. ಡಿಸೆಂಬರ್ 25ರ ಬೆಳಿಗ್ಗೆ 8ರಿಂದ ಮರುದಿನ ಬೆಳಿಗ್ಗೆ 8ರ ತನಕ ವಿವಿಧ ಕಾರ್ಯಕ್ರಮಗಳು ರಜತ ಸಂಭ್ರಮದ ಅಂಗವಾಗಿ ನಡೆಯಲಿದೆ. ಪೋಸ್ಟರ್ ಅನಾವರಣಗೊಳಿಸಿ ಬಳಿಕ ಅವರು ಮಾತನಾಡಿ, ದೇವಳದ ವತಿಯಿಂದ ನಡೆಸಲಾಗುತ್ತಿರುವ ಪ್ರೌಢಶಾಲೆ ಮೌಲ್ಯದಾರಿತ ಶಿಕ್ಷಣದ ಮೂಲಕ ನೂರಾರು ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪಜೆಯಾಗಿ ರೂಪಿಸಿದೆ. ಸಂಸ್ಥೆಯಿಂದ ಶಿಕ್ಷಣ ಪಡೆದವರೆಲ್ಲರೂ ಒಂದಾಗಿ ಈ ಸಂಭ್ರಮವನ್ನು ಆಚರಿಸಬೇಕಿದೆ. ಹಳೆ ವಿದ್ಯಾರ್ಥಿಗಳು, ಊರವರು, ಶಿಕ್ಷಕರು ಹಾಗೂ ಸಮಿತಿಯ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು. ಹಳೇ ವಿದ್ಯಾರ್ಥಿ ಸಂಘದ ಅದ್ಯಕ್ಷರಾದ ಕೆ. ಎಲ್. ಜಯರಾಮ್ ಶೆಟ್ಟಿ ಕಾನಬೇರು ಅವರು ಮಾತನಾಡಿ ಡಿಸೆಂಬರ್ 25ರ ಬೆಳಿಗ್ಗೆ 8ರಿಂದ ಮರುದಿನ 8ರ ತನಕ ನಿರಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಜತ ಮಹೋತ್ಸವದ ನೆನಪಿಗಾಗಿ ವಾಹನ ವ್ಯವಸ್ಥೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ಸಿನಿಮಾಗೆ ಕ್ಯಾಪ್ಚರ್ ಎಂದು ಟೈಟಲ್ ಇಡಲಾಗಿದೆ. ಸದ್ಯ ಕ್ಯಾಪ್ಚರ್ ತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅಭಿಮಾನಿಗಳ ಮಧ್ಯೆ ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷವಾಗಿತ್ತು. ಸ್ಯಾಂಡಲ್ವುಡ್ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ ಪೋಸ್ಟರ್ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ಖುಷಿಯ ವಿಚಾರವಾದ್ರೆ ಮತ್ತೊಂದು ಕಡೆ ಕನ್ನಡ ಸಿನಿಮಾರಂಗದಲ್ಲಿಯೇ ಇದೊಂದು ವಿನೂತನವಾದ ಪ್ರಯತ್ನವಾಗಿದೆ .. ವಿಶೇಷ ಎಂದರೆ ಈ ಸಿನಿಮಾಗೆ ಮಮ್ಮಿ, ದೇವಕಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್ನ 3ನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 37ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಅ.20ರಿಂದ 23ರ ತನಕ ವಿಜೃಂಭಣೆಯಿಂದ ಜರುಗಲಿದೆ. ಅ.20ರ ಬೆಳಿಗ್ಗೆ ಶ್ರೀ ಶಾರದಾಂಬೆಯನ್ನು ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅಂದು ಸಂಜೆ ನವಚಂಡಿಕಾ ಯಾಗ ನಡೆಯಲಿದೆ. ಅದೇ ದಿನ ಮಕ್ಕಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಜೊತೆಗೆಯಲ್ಲಿ, ಭಗವದ್ಗೀತಾ ಪಠಣ ಸ್ಪರ್ಧೆ, ಭಜನಾ ಕುಣಿತ ಸ್ಪರ್ಧೆಗಳು ಇರಲಿದೆ. ಅ.21ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದ್ದು ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಅಂದು ರಾಮಕ್ಷತ್ರಿಯ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಬಳಿಕ ನೃತ್ಯನಿಕೇತನ ಕೊಡವೂರು ತಂಡದಿಂದ ನೃತ್ಯ ಸಿಂಚನ ಜರುಗಲಿದೆ. ಅ.22ರ ಸಭಾ ಕಾರ್ಯಕ್ರಮದಲ್ಲಿಯೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆಗಳು ಜರುಗಲಿದೆ. ಅ.23ರಂದು ವೈಭವದ ನಗರೋತ್ಸವ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವವನ್ನು ಈ ಭಾರಿಯೂ ಅದ್ದೂರಿಯಾಗಿ ನಡೆಸಲಾಗುತ್ತಿದ್ದು, ಹಲವು ಕಾರ್ಯಕ್ರಮಗಳನ್ನು ಒಳಗೊಂಡಿದೆ ಎಂದು ಕುಂದಾಪ್ರ ಕನ್ನಡ ಬಳಗದ ಮುಂದಾಳು ಎನ್.ರಘುರಾಮ ದೇವಾಡಿಗ ರಘುರಾಮ ದೇವಾಡಿಗ ಹೇಳಿದರು. ಅಕ್ಟೋಬರ್ 29ರಂದು ಯುಎಇ ಅಜ್ಮನ್ ನಗರದಲ್ಲಿ ಬೆಳಿಗ್ಗೆ 11ರಿಂದ ಸಂಜೆ 6 ಗಂಟೆಯ ತನಕ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಗಲ್ಫ್ ದೇಶದಲ್ಲಿ ಮಂದರ್ತಿ ಮೇಳದಿಂದ ಮೊದಲ ಭಾರಿಗೆ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಮೇಳದ ಕಲಾವಿದರು ಹಾಗೂ ಅನಿವಾಸಿ ಭಾರತೀಯ ಕಲಾವಿದರಿಂದ ‘ಪಾಪಣ್ಣ ವಿಜಯ – ಗುಣಸುಂದರಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಂದು ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು ಕುಂದಗನ್ನಡ ಉತ್ಸವದಲ್ಲಿ ಮೂವರು ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪಡುಕೋಣೆಯ ಖ್ಯಾತ ನಾಟಿ ವೈದ್ಯ ಮ್ಯಾಕ್ಸಿಮ್ ಒಲಿವೆರಾ, ಗೋಪ್ರೇಮಿ ಸಮಾಜ ಸೇವಕ ಸಂಜೀವ ದೇವಾಡಿಗ ಹಾಗೂ ಜೀವರಕ್ಷಕ ಮುಳುಗುತಜ್ಞ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಜೆ ಸಿ ಐ ಉಪ್ಪುಂದ, ಫ್ರೆಂಡ್ಸ್ ಕ್ಲಬ್ ಉಪ್ಪುಂದ, ಜೇಸಿಐ ಬೈಂದೂರು ಸಿಟಿ, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ ಸಂಘ (ರಿ), ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಉಪ್ಪುಂದ , ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನ ಟ್ರಸ್ಟ್ ರಿ ಉಪ್ಪುಂದ, ಆನೆ ಗಣಪತಿ ಆಟೋ ರಿಕ್ಷಾ ಮಾಲಕ ಚಾಲಕರ ಸಂಘ ಅಂಬಾಗಿಲು , ಆಸರೆ ಬಳಗ ಫಿಶರೀಸ್ ಕಾಲೋನಿ ಉಪ್ಪುಂದ, ಲಯನ್ಸ್ ಕ್ಲಬ್ ಉಪ್ಪುಂದ- ಬೈಂದೂರು, ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರುಗಳ ಸಹಯೋಗದಲ್ಲಿ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇವರ ಸಹಕಾರದೊಂದಿಗೆ ಕೆಎಂಸಿ ಮಣಿಪಾಲ ಆಸ್ಪತ್ರೆಯ ವೈದ್ಯರುಗಳಿಂದ ಉಪ್ಪುಂದದ ರೈತ ಸಿರಿ ಸಭಾಭವನದಲ್ಲಿ ಬೃಹತ್ ಉಚಿತ ಹೃದಯ ತಪಾಸಣೆ, ಬಾಯಿ ಸ್ತನ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಶಿಬಿರ ಬಿಪಿ ಶುಗರ್, ಜನರಲ್ ಮೆಡಿಸನ್ ತಪಾಸಣಾ ಸೌಲಭ್ಯದೊಂದಿಗೆ ನಡೆಯಿತು. ಕಂಬದಕೋಣೆ ರೈತರ ಸೇವಾ ಸಹಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೂರು ಬೈಕ್‌ಗಳು ಮುಖಮುಖಿಯಾಗಿ ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಕೋಡಿ ಕನ್ಯಾಣ ಅಂಗನವಾಡಿ ಸಮೀಪ ನಡೆದಿದೆ. ಘಟನೆಯಲ್ಲಿ ಪಾರಂಪಳ್ಳಿಯ ರವೀಂದ್ರ ಪೂಜಾರಿ (30) ಮೃತಪಟ್ಟಿದ್ದಾರೆ. ಕೋಡಿ ಕನ್ಯಾಣದಿಂದ ಪಾರಂಪಳ್ಳಿಗೆ ಹೋಗುತ್ತಿದ್ದ ಎರಡು ಬೈಕ್ಗಳು ಪಾರಂಪಳ್ಳಿಯಿಂದ ಬರುತ್ತಿದ್ದ ಬೈಕ್ಗೆ ಮುಖಮುಖಿ ಡಿಕ್ಕಿ ಸಂಭವವಿಸಿದ ಹಿನ್ನಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೆ ಅಪಘಾತ ನಡೆದ ಸ್ಥಳದ ವಿರುದ್ದ ದಿಕ್ಕಿನಲ್ಲಿ ಯಾವುದೇ ಪಾರ್ಕಿಂಗ್ ಸಿಗ್ನಲ್ ಇಲ್ಲದೆ ರಸ್ತೆ ಬದಿಯಲ್ಲಿ ಕಾರೊಂದು ಪಾರ್ಕಿಂಗ್ ಮಾಡಿದ್ದು ಬೈಕ್ ಸವಾರರಿಗೆ ಮುಂದೆ ಬರುತ್ತಿದ್ದ ಬೈಕ್ ಕಾಣಿಸದೆ ಇರುವುದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಪಘಾತದ ತೀವ್ರತೆಯು ಬೈಕ್ ಮುಖಮುಖಿ ಡಿಕ್ಕಿಯಾಗಿ ನಿಂತ ಕಾರಿಗೆ ಅಪ್ಪಳಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡರು. ಮೃತ ಯುವಕ ಕೋಟ ಮೂರಕೈ ಸಮೀಪ ಟೂ-ವೀಲರ್ ಗ್ಯಾರೇಜ್ ಹೊಂದಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಸ್ಥಳೀಯ ಚರಣ್ ಹಾಗೂ ಪ್ರಶಾಂತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಎಂಟು ವರ್ಷಗಳಿಂದ ವಿಭಿನ್ನವಾಗಿ ಯಕ್ಷಗಾನ ಸಂಘಟನೆ ಮಾಡುತ್ತಿರುವ ಜೊತೆಗೆ ಹಲವು ಸಮಾಜಮುಖಿ ಕಾರ್ಯಗಳಿಗೆ ಮಾದರಿಯಾದ ಯಕ್ಷರಾತ್ರಿ, ಈ ಬಾರಿ ಡಿಸೆಂಬರ್ 2ರ ಶನಿವಾರ ಕುಂದಾಪುರದ ನೆಹರೂ ಮೈದಾನದಲ್ಲಿ ನಡೆಯಲಿದ್ದು ಈ ವೇಳೆ ಸಾಧಕರಿಗೆ ಗೌರವ ಪುರಸ್ಕಾರ, ಕಲಾ ಪುರಸ್ಕಾರ ನೀಡಲಾಗುತಿದೆ. ಯಕ್ಷಕಾಶಿಯ ಮೊದಲ ಆಟ ‘ಯಕ್ಷರಾತ್ರಿ’ಯಲ್ಲಿ ಗೌರವ ಪುರಸ್ಕಾರವನ್ನು ಮುಳುಗು ತಜ್ಞ ಸಮಾಜಸೇವಕ ಈಶ್ವರ ಮಲ್ಪೆ ಹಾಗೂ ಸ್ವಾವಲಂಬಿ ಬದುಕು ನಡೆಸುವ ರಾಜ್ಯದ ಪ್ರಥಮ ಮಂಗಳಮುಖಿ ರಿಕ್ಷಾ ಚಾಲಕಿ ಕಾವೇರಿ ಮೇರಿ ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ. ಯಕ್ಷರಾತ್ರಿ ಕಲಾ ಪುರಸ್ಕಾರವಾಗಿ ಬಡಗಿನ ಪ್ರಸಿದ್ದ ಸ್ತ್ರೀ ವೇಷಧಾರಿ ಸುಧೀರ್ ಉಪ್ಪೂರು ಅವರನ್ನು ಆಯ್ಕೆಮಾಡಲಾಗಿದೆ. ಶ್ರೀ ಪೆರ್ಡೂರು ಮೇಳದವರಿಂದ ಪ್ರೊ. ಪವನ್ ಕಿರಣಕೆರೆ ವಿರಚಿತ ಗಂಗೆ- ತುಂಗೆ-ಕಾವೇರಿ ಎನ್ನುವ ನೂತನ ಸಾಮಾಜಿಕ ಪ್ರಸಂಗವನ್ನು ಕುಂದಾಪುರದಲ್ಲಿ ಮೊಟ್ಟಮೊದಲ ಭಾರಿಗೆ ಆಯೋಜಿಸಲಾಗಿದೆ ಎಂದು ಸಂಘಟಕ ಗಜೇಂದ್ರ ಆಚಾರ್ ಕೋಣಿ ತಿಳಿಸಿದ್ದಾರೆ ಯಕ್ಷರಾತ್ರಿ ಜೊತೆಗೆ ಸಾಧಕರಿಗೆ ಪುರಸ್ಕಾರ, ವಿದ್ಯಾರ್ಥಿ ವೇತನ,…

Read More