ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯವರು ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ. ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ, ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಡ್ ಕಾಂ ಸುದ್ದಿ.ಬೆಂಗಳೂರು, ಅ.06: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು. ಮರಳು ಬ್ಲಾಕ್ಗೆ ಅನುಮತಿ ಪತ್ರ ನೀಡುವ ಪ್ರಕ್ರಿಯೆಯನ್ನು ವಿಳಂಬಗೊಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು. ಹೊಸ ಮರಳು ನೀತಿ 2020ನ್ನು ಡಿಸೆಂಬರ್ 2021ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್ ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿಯನ್ನೂ ಕಾಪಾಡಬೇಕಿದೆ ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕನ್ನಡ ಕಿರುತೆರೆ, ಸಿನಿಮಾ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕನ್ನಡ ಅಭಿಮಾನಿಗಳ ಹೃದಯ ಗೆದ್ದಿರುವ ನಟಿ ದಿವ್ಯಾ ಉರುಡುಗ ಇದೀಗ ಗುಡ್ ನ್ಯೂಸ್ ಎನ್ನುತ್ತಾ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ರೇಷ್ಮೆ ಸೀರೆ, ಮಲ್ಲಿಗೆ ಹೂ… ಮದುಮಗಳ ಹಾಗೆ ಕಂಗೊಳಿಸುತ್ತಾ ದಿವ್ಯಾ ಸದ್ಯದಲ್ಲೇ ಅನೌನ್ಸ್ ಮಾಡುತ್ತೀವಿ ಎನ್ನುವ ವಿಚಾರ ಬಹಿರಂಗ ಪಡಿಸಿದ್ದಾರೆ. ವಿಡಿಯೋ ನೋಡಿದ್ರೆ ಪಕ್ಕಾ ಮದುವೆ ಸುದ್ದಿ ನೀಡುತ್ತಾರೆ ಎನ್ನುವ ಅನುಮಾನ ಮೂಡಿಸಿದೆ. ಅಂದಹಾಗೆ ದಿವ್ಯಾ ಉರುಡುಗ ಅಂದಕ್ಷಣ ಅರವಿಂದ್ ಕೆಪಿ ಹೆಸರು ಕೂಡ ಪಕ್ಕದಲ್ಲೇ ತಗಲಾಕೊಂಡಿರುತ್ತೆ. ಬೈಕ್ ರೇಸರ್ ಅರವಿಂದ್ ಕೆಪಿ ಕೂಡ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು. ದಿವ್ಯಾ ಮತ್ತು ಅರವಿಂದ್ ಮೊದಲ ಬಾರಿಗೆ ಭೇಟಿಯಾಗಿದ್ದು ಬಿಗ್ ಬಾಸ್ ಶೋನಲ್ಲಿ. ಬಿಗ್ ಮನೆಯಲ್ಲಿ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದ ಈ ಜೋಡಿ ಶೋ ಮುಗಿದ ಬಳಿಕವು ಅಷ್ಟೇ ಕ್ಲೋಸ್ ಆಗಿ ಇದ್ದಾರೆ. ಸದಾ ಜೊತೆಯಲ್ಲೇ ಕಾಣಿಸಿಕೊಳ್ಳುವ ಈ ಜೋಡಿ ಇದೀಗ ಸಿಹಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.5: ಜಿಲ್ಲೆಯಲ್ಲಿ ಎದುರಾಗಿರುವ ಮರಳು, ಕೆಂಪು ಕಲ್ಲು ಗಣಿಗಾರಿಕೆ – ಸಾಗಾಟ ಹಾಗೂ ಇನ್ನಿತರೇ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ತಿಳಿಸಿದ್ದಾರೆ. ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಕೊಠಡಿ ಸಂಖ್ಯೆ -313ರಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದ ಜಿಲ್ಲೆಯ ಉಭಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು, ಜಲ್ಲಿ ಹಾಗೂ ಇನ್ನಿತರ ಕಟ್ಟಡ ಸಾಮಾಗ್ರಿಗಳ ಅಕ್ರಮ ಸಾಗಾಟಕ್ಕೆ ತಡೆ ಬಿದ್ದ ಬೆನ್ನಲ್ಲೇ ಲಾರಿ ಚಾಲಕ ಮಾಲೀಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022 – 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತ್ ಆಯ್ಕೆಯಾಗಿದ್ದು, ಅ.2ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಾಂಧಿ ಜಯಂತಿ ದಿನ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಕಾಲ್ತೋಡು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಬಿ. ಅಣ್ಣಪ್ಪ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿಯು ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಪಂಚಾಯತ್ ರಾಜ್ ಇಲಾಖೆಯ ಉಮಾಮದೇವನ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2022 – 23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯಿತಿಗೆ ದೊರೆತಿದೆ. ಗಾಂಧಿ ಜಯಂತಿ ದಿನ ಹಮ್ಮಿಕೊಂಡ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಮೆಂಡನ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್ ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಶಸ್ತಿಯು ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಮದೇವನ್ ದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ಇಲ್ಲಿನ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರಿಗಾರ್ (42) ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಚಿಕ್ಕನಸಾಲು ರಸ್ತೆ ಬಳಿ ನಡೆದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಡ್ರೈವ್ ಮಾಡುತ್ತಿದ್ದ ರಾಘವೇಂದ್ರ ಹಾಗೂ ಎದುರಿನ ಕಾರಿನ ಡ್ರೈವರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ಎದುರಿನ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರಿಗೆ ಚೂರಿ ಇರಿದಿದ್ದರು. ಬಳಿಕ ಚೂರಿ ಇರಿತಕ್ಕೊಳಗಾದ ರಾಘು ಅವರ ತಕ್ಷಣ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಗೆ ಪೂರ್ವ ದ್ವೇಷ ಕಾರಣ ಅನ್ನುವ ಮಾತುಗಳು ಕೇಳಿಬಂದಿದ್ದು ಈ ನಿಟ್ಟಿನಲ್ಲಿ ಆರೋಪಿ ಪತ್ತೆಗಾಗಿ ತನಿಕೆ ಹಾಗೂ ಡಿವೈಎಸ್ಪಿ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢ ಶಾಲೆಯಲ್ಲಿ ಜಂಟಿಯಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಕಾಲೇಜು ಹಾಗೂ ಪ್ರೌಢಶಾಲೆಯ ಸಿಬ್ಬಂದಿಗಳು ಗಾಂಧೀಜಿ ಹಾಗೂ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಹಾಗೂ ತತ್ವಾದರ್ಶಗಳ ಕುರಿತು ಮಾತನಾಡಿದರು.ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವರ ಸ್ವಾಗತಿಸಿ ವಂದಿಸಿದರು. ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು,ಪ್ರೌಢಶಾಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಹಾಗೂ ಉಭಯ ಸಂಸ್ಥೆಗಳ ವಿದ್ಯಾರ್ಥಿಗಳು ಜನತಾ ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹುಬ್ಬಳ್ಳಿಯಲ್ಲಿ ಜರುಗಿದ 14ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ವಿಜೇತಳಾದ ಬ್ರಹ್ಮಾವರ ಲಿಟಲ್ರಾಕ್ ಇಂಡಿಯನ್ ಸ್ಕೂಲ್ನ 6ನೇ ತರಗತಿ ವಿದ್ಯಾರ್ಥಿನಿ ಶಿಖಾ ಬಿಜೂರು ರಾಷ್ಟ್ರ ಮಟ್ಟದ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಕುಂದಾಪುರದ ಇವೊಲ್ಯೂಷನ್ ಅಕಾಡೆಮಿ ಆಫ್ ಮೆಟೀರಿಯಲ್ ಆರ್ಟ್ಸ್ & ಫಿಟ್ನೆಸ್ ಸಂಸ್ಥೆಯಲ್ಲಿ ಗುರು ಗ್ರಷಮೇಶ್ ಕುಂದರ್ ಅವರಲ್ಲಿ ತರಬೇತಿ ಪಡೆಯುತ್ತಿರುವ ಶಿಖಾ ಬಿಜೂರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಯೋಜಿಸಿದ ರಾಜ್ಯ ಮಟ್ಟದ ಸ್ವರ್ಧೆಯಲ್ಲಿ 10 ವರ್ಷದೊಳಗಿನ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಳು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆಗೈದಿರುವ ಶಿಖಾ, ಶ್ರೀಧರ್ ಬಿಜೂರು ಹಾಗೂ ದೀಪಿಕಾ ಅವರ ಪುತ್ರಿ
