Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.26: ಶಾಲಾ ಕಟ್ಟದ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್ ಸೂಚನೆ ನೀಡಿದರು. ಅವರು ನಗರದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಕಳೆದ ಮೂರು ವರ್ಷಗಳ ನಿರ್ಮಾಣ ಹಾಗೂ ದುರಸ್ಥಿ ಕಾಮಗಾರಿಗಳ ಪ್ರಗತಿ ವಿವರಗಳನ್ನು ಪರಿಶೀಲಿಸಿದ ಅವರು, ಬೇರೆ ಬೇರೆ ಅನುದಾನಗಳನ್ನು ಒಗ್ಗೂಡಿಸಿ ಕಾಮಗಾರಿ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿಗಳಿಗೆ ತಿಳಿಸಿದರು. ವಿವೇಕಾ ಶಾಲಾ ಕಾಮಗಾರಿಯಲ್ಲಿ ೧೫೦ ಕಾಮಗಾರಿಗಳಿಗೆ ಪಿ.ಡಬ್ಲ್ಯೂ.ಡಿ ಹಾಗೂ ೩೮ ಕಾಮಗಾರಿಗಳಿಗೆ ಕೆ.ಆರ್.ಐ.ಡಿ.ಎಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪುತ್ತಿಗೆಯ ಶ್ರೀ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಸೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಅಧ್ಯಕ್ಷ ಹಾಗೂ ಭಾರತ್ ಸೌಟ್ಸ್ ಗೈಡ್ಸ್ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ ಮೋಹನ್ ಆಳ್ವರಿಗೆ ಸೌಟ್ಸ್ ಮತ್ತು ಗೈಡ್ಸ್ ಅತ್ಯುನ್ನತ ಪ್ರಶಸ್ತಿಯಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಈ ಸಂದರ್ಭ ಭಾರತ್ ಸೌಟ್ಸ್ ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಅವರು ಸೇರಿದಂತೆ ಹಲವು ಅತಿಥಿ ಗಣ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.26: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ೮೧೨೨ ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗಧಿಪಡಿಸಿರುವ ನಿಗಧಿತ ದಿನಾಂಕಗಳಂದು ನೊಂದಣಿ ಮಾಡಲು ಆದ್ಯತೆ ನೀಡುವಂತೆ ಹೇಳಿದರು. ಅವರು ಇಂದು ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಪ್ರಸ್ತುತ ಪರಿಷ್ಕರಣೆ ಅವಧಿಯಲ್ಲಿ ಮತದಾರರ ಸೇರ್ಪಡೆ,ತಿದ್ದುಪಡಿ ಕುರಿತ ಎಲ್ಲಾ ಸಂಕ್ಷಿಪ್ತ ವಿವರಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡುವಂತೆ ತಿಳಿಸಿದ ಅವರು, ಪರಿಷ್ಕರಣೆ ಅವಧಿಯಲ್ಲಿ ಸಾರ್ವನಿಕರಿಂದ ಸ್ವೀಕರಿಸಿರುವ ಎಲ್ಲಾ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ, ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಹಾಗೂ ಅಂತಿಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಾನವನಲ್ಲಿ ಸಹಾಯ ಪ್ರವೃತ್ತಿ ಮುಖ್ಯ. ಸೌಟ್ಸ್ -ಗೈಡ್ಸ್ ಸಂಸ್ಥೆ ಮಗುವಿಗೆ ಸಹಾಯ ಮನೋಭಾವ ಬೆಳೆಸುವಲ್ಲಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಜಾಂಬೂರಿ ಸಾರ್ಥಕತೆ ಪಡೆದಿದೆ ಎಂದು ಭಾರತ್ ಸ್ಕೌಟ್ಸ್-ಗೈಡ್ಸ್ ಸಂಸ್ಥೆಯ ಕರ್ನಾಟಕ ರಾಜ್ಯ ಆಯುಕ್ತ ಪಿ.ಜಿ ಆರ್ ಸಿಂಧ್ಯಾ ಹೇಳಿದರು ಪುತ್ತಿಗೆಯ ಶ್ರೀ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಸೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಸಮಾರೋಪ ಭಾಷಣದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಸೌಟ್ಸ್ ಗೈಡ್ಸ್ ಸಂಸ್ಥೆ ಆರಂಭವಾಗಿ ೧೫೦ ವ? ಕಳೆದವು ಆದರೆ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಭಾರತದಲ್ಲಿ ನಡೆದಿದೆ. ಸಹಸ್ರಾರು ಮಂದಿ ಶಿಬಿರಾರ್ಥಿಗಳಿಗೆ ಹಲವು ಮೇಳಗಳ ಮೂಲಕ ಸಂಸ್ಕೃತಿಯ ಅನಾವರಣ ಸಾಧ್ಯವಾಗಿದೆ. ವಿಶ್ವ ಭ್ರಾತೃತ್ವ ಸಾರಲು ಇದಕ್ಕಿಂತ ದೊಡ್ಡ ವೇದಿಕೆ ದೊರೆಯಲು ಸಾಧ್ಯವಿಲ್ಲ. ಇಂತಹ ಯಶಸ್ಸು ಸ್ಕೌಟ್ಸ್ – ಗೈಡ್ಸ್ ಇತಿಹಾಸದಲ್ಲಿ ಹೊಸ ಮೈಲುಗಳು ಸೃಷ್ಟಿಸಿದೆ. ಇಂತಹ ಯಶಸ್ಸಿಗೆ ಬಹು ದೊಡ್ಡ ಮಟ್ಟದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ ಡಿ.26: ಮಂಗಳೂರು ವಿವಿ ವತಿಯಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ಆಶ್ರಯದಲ್ಲಿ ಆಯೋಜಿಸಿದ್ದ ಅಂತರಕಾಲೇಜು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಪ್ರಥಮ ಬಿಬಿಎ ವಿದ್ಯಾರ್ಥಿ, ಆಳ್ವಾಸ್ ಸ್ಪೋರ್ಟ್ಸ್ ಕರಾಟೆ ತರಬೇತಿ ಕೇಂದ್ರದ ವೃಂದಾ – 55, ಕೆಜಿ ವಿಭಾಗದ ಕುಮಿಟೆ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕದೊಂದಿಗೆ ತೃತೀಯ ಬಹುಮಾನ ಮತ್ತು ಟೀಮ್ ಕುಮಿಟೆಯಲ್ಲಿ ಬೆಳ್ಳಿ ಪದಕದೊಂದಿಗೆ ದ್ವಿತೀಯ ಬಹುಮಾನ ವಿಜೇತರಾಗಿದ್ದಾರೆ. ವೃಂದಾ ಇವರು ಶಿವರಾಮ ಪ್ರಭು ಮತ್ತು ರೇಷ್ಮಾ ಎಸ್. ಪ್ರಭು ದಂಪತಿಯ ಸುಪುತ್ರಿ, ಪ್ರಸ್ತುತ ಆಳ್ವಾಸ್ ಸ್ಪೋರ್ಟ್ಸ್ ಕರಾಟೆ ತರಬೇತಿ ಕೇಂದ್ರದ ರಾಷ್ಟ್ರೀಯ ಕರಾಟೆಪಟು, ತರಬೇತುದಾರರಾದ ಆತ್ರಾಡಿ ಪ್ರಮೋದ್ ಶೆಟ್ಟಿ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯ ಇವರ ಚೊಚ್ಚಲ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ, ಟ್ರಸ್ಠಿ ವಿವೇಕ್ ಆಳ್ವ, ಪ್ರಾಂಶುಪಾಲರಾದ ಡಾ. ಕುರಿಯನ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ತಿಲಕ್ ಶೆಟ್ಟಿ ಇವರು ಶುಭಹಾರೈಸಿದ್ದಾರೆ.

Read More

ಐಶ್ವರ್ಯ ಕೋಣನ | ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಕರಕುಶಲ ವಸ್ತು ಪ್ರದರ್ಶನದಲ್ಲಿ ಖ್ಯಾತನಾಮರ ಚಿತ್ರಗಳು ತೆಂಗಿನ ಕಾಯಿಯಲ್ಲಿ ಮೂಡಿದ್ದವು. ಅಬ್ದಲ್ ಕಲಾಂ, ಬುದ್ಧ, ಬಸವಣ್ಣ, ಶಿವಾಜಿಯ ಕೆತ್ತನೆಗಳು, ಪರಮೇಶ್ವರ ಸ್ವರೂಪ ವಿನ್ಯಾಸಗಳು ವಿಶೇಷವೆನ್ನಿಸಿದವು. ಅಲ್ಲದೇ ಜೋಕರ್, ಎತ್ತಿನ ಗಾಡಿ ಮತ್ತು ಪ್ರಾಣಿಗಳ ವಿನ್ಯಾಸಗಳು ತೆಂಗಿನ ಕಾಯಿ ಕೆತ್ತನೆಯಲ್ಲಿ ಕಾಣಿಸಿಕೊಂಡವು. ತೆಂಗಿನಕಾಯಿಯ ವಿನೂತನ ವಿನ್ಯಾಸಗಳಲ್ಲಿ, ಶಿವ, ಗಣೇಶ, ಹಾಗೂ ಇನ್ನಿತರ ತೆಂಗಿನಕಾಯಿಯ ಮೂರ್ತಿಗಳು ಗಮನಸೆಳೆದವು, ಧಾರವಾಡದ ಜಗದೀಶ್ ಅವರು ತೆಂಗಿನ ಕಾಯಿಯಲ್ಲಿ ವಿವಿಧ ಬಗೆಯ ಕಲಾಕೃತಿಗಳನ್ನು ರೂಪಿಸುವುದರ ಮೂಲಕ ಹಲವರ ಗಮನ ಸೆಳೆದಿದ್ದಾರೆ. ತಾವು ಹಿರಿಯರಿಂದ ಕಲಿತ ಕೌಶಲ್ಯವನ್ನು ಹೊಸ ಪೀಳಿಗೆಗೂ ದಾಟಿಸಬೇಕು ಎಂಬ ಆಶಯದೊಂದಿಗೆ ತೆಂಗಿನ ಕಾಯಿಯ ಚಿತ್ರಗಳನ್ನು ಕೆತ್ತಿ ಮಾರಾಟ ಮಾಡುತ್ತಿದ್ದಾರೆ. ತೆಂಗಿನಕಾಯಿಯಲ್ಲಿ ಮೂಡಿರುವ ಈ ವಿಶೇಷ ವಿನ್ಯಾಸ ನೋಡಲು ಸಾವಿರಾರು ಜನ ಬರುತಿದ್ದಾರೆ. ತೆಂಗಿನಕಾಯಿಯಂದರೆ ಅಡುಗೆಗೆ ಅಥವಾ ಎಳನೀರಿಗೆ ಅಷ್ಟೇ ಎಂದು ತಿಳಿದಿದ್ದವರು ಇಲ್ಲಿಗೆ ಭೇಟಿ ನೀಡಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪ್ರತಿನಿತ್ಯ ಸಾವಿರಾರು ವಿಧ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಇಲ್ಲಿ ಸುಭದ್ರತೆಯನ್ನು ಕಾಯ್ದುಕೊಳ್ಳಲು ಅಗ್ನಿ ಶಾಮಕ ದಳದ ಸೇವಕರು ಸಕಲ ಸಿದ್ದತೆಗಳೊಂದಿಗೆ ಕಾರ್ಯನಿರತರಾಗಿದ್ದರು. ಜಾಂಬೂರಿಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರತಿ ಕ್ಷಣದ ಕಾರ್ಯಚರಣೆಗೆ ಸ್ಪಂದಿಸಲು 8 ಫೈರ್ ಎಂಜಿನ್, 9 ಅಗ್ನಿ ಬೈಕ್‌ಗಳು ಹಾಗೂ ಎರಡು ಕ್ಯು.ಆರ್.ವಿ ವಾಹನದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಗಳೂರಿನ ಮುಖ್ಯ ಅಗ್ನಿ ಶಾಮಕ ಅಧಿಕಾರಿ ಜಿ.ತಿಪ್ಪೆಸಾಮಿ ಮಾರ್ಗದರ್ಶನದಲ್ಲಿ ಮಂಗಳೂರು, ಉಡುಪಿ ಮತ್ತು ಮೈಸೂರು ವಿಭಾಗದ ಏಳು ಡಿ.ಎಫ್.ಒ ಅಧಿಕಾರಿಗಳು ಸತತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟೂ ೯೮ ಅಗ್ನಿ ಸೇವಕ ಸಿಬ್ಬಂದಿಗಳು ಯಾವುದೇ ಕಠಿಣ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧರಾಗಿದ್ದರು. ತುರ್ತು ಪರಿಸ್ಥತಿಯಲ್ಲಿ ಮಾಹಿತಿ ದೊರಕಲು ಒಂದು ಮುಖ್ಯ ಕಂಟ್ರೋಲ್ ರೂಂ ಮತ್ತು ಎಂಟು ಫೈರ್ ಎಂಜಿನ್ ಜೊತೆಗೆ ಎಂಟು ಅಗ್ನಿ ಬೈಕ್‌ಗಳು ವಿದ್ಯಾಗಿರಿಯ ಎಂಟು ಪ್ರಮುಖ ಸ್ಥಳಗಳಲ್ಲಿ ಸಿದ್ಧಪಡಿಸಲಾಗಿದೆ. ಕಿರಿದಾದ ಸ್ಥಳದಲ್ಲಿಯೂ ಸರಾಗವಾಗಿ ಸಂಚರಿಸುವ ಕ್ಯು.ಆರ್.ವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ ಅಂತರಿಕ್ಷರಂಗದಲ್ಲಿ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರ. ‘ವಿಕ್ರಮ್ ಸಾರಾಬಾಯಿ’ ರನ್ನು ಪಡೆದ ಹೆಮ್ಮೆಯ ದೇಶ. ಅವರ ಪರಿಕಲ್ಪನೆಯಂತೆ ಭಾರತದಲ್ಲಿ ರಾಕೆಟ್ ತಂತ್ರಜ್ಞಾನ ಅಭಿವೃದ್ದಿ ಪಥದತ್ತ ಸಾಗಿದ್ದನ್ನು ನಾವು ಕಂಡಿದ್ದೇವೆ ಪ್ರಪಂಚದಾದ್ಯಂತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸಾಧಿಸಲು ನವೀನ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇವೆ. ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ಅಳವಡಿಸಿಕೊಂಡು ಇಂದು ಸ್ವದೇಶಿ ವಸ್ತುಗಳ ಬಳಕೆಯ ಮೂಲಕ ರಾಕೆಟ್ ಗಳನ್ನು ತಯಾರಿಸುತ್ತಿದೆ. ಅಂತಹದ್ದೇ ಪ್ರಯತ್ನವನ್ನು ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮಾಡಿ ತೋರಿಸಿದ್ದಾರೆ. ಅರೇಏನಿದು ಆವಿಷ್ಕಾರ ಅಂತೀರಾ ಇಲ್ಲಿದೆ ನೋಡಿ. ಇದು ‘ಅಗ್ನಿಹೋತ್ರಿ’ ಏರೋಸ್ಪೇಸ್ ಮಾದರಿ. ಆಡ್ಯಾರು ಸಹ್ಯಾದ್ರಿ ಕಾಲೇಜಿನ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ವಿದ್ಯಾರ್ಥಿ ಮಹಾಭಲೇಶ್ವರ ಭಟ್ ಅಭಿವೃದ್ದಿಪಡಿಸಿದ್ದಾರೆ. ಇಂದು ದಿನಕ್ಕೊಂದರಂತೆ ರಾಕೆಟ್‌ಗಳನ್ನು ಉಡಾಯಿಸಲಾಗುತ್ತಿದೆ. ರಾಕೆಟ್‌ಗಳನ್ನು ತಯಾರಿಸಲು ತಗುಲುವ ವೆಚ್ಚ ಹೆಚ್ಚಾಗುತ್ತಿದೆ. ರಾಕೆಟ್ ಲಾಂಚರ್‌ಗಳನ್ನು ನಿರ್ಮಾಣ ಮಾಡಲು ವಿಮಾನಕ್ಕೆ ತಗುಲುವ ವೆಚ್ಚವೇ ಅಧಿಕ. ಈ ಅಧಿಕ ವೆಚ್ಚವನ್ನು ತಗ್ಗಿಸುವ ಉದ್ದೇಶವನ್ನಿಟ್ಟುಕೊಂಡು ನಿರ್ಮಿಸಿಲಾದ ವಿಶೇಷ ಮಾದರಿ ಇದಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಾಂಬೂರಿ ಕೇವಲ ಜನಜಾತ್ರೆಯಾಗದೇ ಸ್ಕೌಟ್ಸ್ ಗೈಡ್ಸ್ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ವೇದಿಕೆಯನ್ನಾಗಿ ನಿರ್ಮಿಸಲಾಗಿತ್ತು. ವಿದ್ಯಾರ್ಥಿಗಳಿಗಷ್ಟೇ ಮೀಸಲಾಗಿರಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಭಾಗವಹಿಸುವಂತೆ ಮಾಡಲಾಗಿದೆ. ಪರಿಣಾಮವಾಗಿ ಏಳು ದಿನಗಳ ಉತ್ಸವದಲ್ಲಿ ಲಕ್ಷಾಂತರ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ಕೌಟ್ಸ್ ಗೈಡ್ಸ್ ಮಹತ್ವ ಅರಿಯುವ ಜೊತೆಗೆ, ಸಾಂಸ್ಕೃತಿಕ ಸೊಬಗನ್ನು ಸವಿಯುವಂತಾಯಿತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಡಿಮೆ ಅವಧಿಯಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜನೆ ಸವಾಲೇ ಆದರೂ, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿರುವ ಒಂದಿಷ್ಟು ಮೂಲಭೂತ ಸೌಕರ್ಯದ ಕಾರಣದಿಂದ ಆಯೋಜನೆ ಸುಲಭಸಾಧ್ಯವಾಯಿತು. 60,000 ಕ್ಕೂ ಅಧಿಕ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು, 13,000 ದಷ್ಟು ಅಧಿಕಾರಿಗಳು, ಸ್ವಯಂ ಸೇವಕರು ಜಾಂಬೂರಿಯಲ್ಲಿ ಭಾಗವಹಿಸಿದ್ದರು. ಅಲ್ಲದೇ ಪ್ರತ್ಯೇಕವಾಗಿ ಸಾವಿರಾರು ಸಾರ್ವಜನಿಕರು ಜಾಂಬೂರಿಯ ಸವಿಯನ್ನು ಸವಿದಿದ್ದಾರೆ. ಶನಿವಾರ – ಭಾನುವಾರ ಎರಡೂ ದಿನ 1 ಲಕ್ಷಕ್ಕೂ ಅಧಿಕ ಮಂದಿ ಸಾರ್ವಜನಿಕರು ಭೇಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ನಡುವೆ ಹಲವಾರು ಎಲೆ ಮರೆ ಕಾಯಿಯಂತೆ ಸಾಧಕರಿದ್ದು ಅವರ ಸಾಧನೆಯ ಹೆಜ್ಜೆ ಅನಾವರಣವಾಗುವ ಕೆಲಸವಾಗಿ ಅವರು ಮುಖ್ಯ ವಾಹಿನಿಗೆ ಬರುವಂತಾಗಬೇಕು. ದತ್ತಿ ಪುರಸ್ಕಾರದ ಮೂಲಕ ಸಾಧಕರನ್ನು ಸಮಾಜದ ಗುರುತಿಸುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಯಕ್ಷ ನಿರ್ದೇಶಕ, ಶಿಕ್ಷಕ ಕೊಕೂರು ಸೀತರಾಮ ಶೆಟ್ಟಿ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ|| ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ|| ಶಿವರಾಮ ಕಾರಂತ ಅನೌಪಚಾರಿಕ ಶಿಕ್ಷಣ ಕೇಂದ್ರ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಡೆದ ಕಾರಂತರ ಇಪ್ಪತ್ತೈದನೇ ಪುಣ್ಯ ಸ್ಮರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ -ಸಾಹಿತ್ಯಿಕ ರಸಗವಳ ಅನೂಹ್ಯ-2022 (ನಾವೀನ್ಯದ ಗೌಜಿ) ಎರಡನೇ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ದಿ.ಉಪೇಂದ್ರ ಐತಾಳ್ ಸ್ಮಾರಕ ‘ಕೃಷಿ ಪರಿಶ್ರಮ ಪುರಸ್ಕಾರಕ್ಕೆ ಸದಾಶಿವ ಐತಾಳ್, ದಿ.ರಾಘವೇಂದ್ರ ಉರಾಳ ಸ್ಮಾರಕ…

Read More