ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತದ ಚಂದ್ರಯಾನ – 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ISRO ಎಂಬ ವಿನ್ಯಾಸವನ್ನು ರಚಿಸಿ ಅಭಿನಂದನೆ ಸಲ್ಲಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯು ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಚದುರಂಗ (ಚೆಸ್) ಸ್ಪರ್ಧೆಯಲ್ಲಿ ವಿಜೇತಳಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಕುಡಿಯುವ ನೀರು ಒದಗಿಸುವ ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ ಜನರಿಗೆ ಕುಡಿಯುವ ನೀರು ಒದಗಿಸಲು ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಜಿಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ನೀರಾವರಿ ನಿಗಮದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಾರಾಹಿ ಕುಡಿಯುವ ನೀರು ಯೋಜನಾ ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅವರು ಈ ಸೂಚನೆ ನೀಡಿದರು. ವಾರಾಹಿ ಯೋಜನೆಯ ಶಿಂಬ್ರಾ, ಆರೂರು, ಕೊಕ್ಕರ್ಣೆ, ಆವರ್ಸೆ ಹಾಗೂ ಹಾಲಾಡಿ ಗಳಿಗೆ ಭೇಟಿ ನೀಡಿದ ಅವರು ಕಾಮಗಾರಿಗಳ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಕಾಮಗಾರಿಯ ಮಾಹಿತಿ ನೀಡಿ, ಪೂರ್ವನಿಗದಿಯಂತೆ 2023ರ ಡಿಸೆಂಬರ್ ತಿಂಗಳೊಳಗೆ ವಾರಾಹಿ ಕುಡಿಯುವ ನೀರು ಯೋಜನಾ ಕಾಮಗಾರಿ ಮುಗಿದು ನೀರು ಜನರಿಗೆ ಸಿಗಬೇಕಾಗಿತ್ತು. ಆದರೆ ವಿವಿಧ ಕಾರಣಗಳಿಂದ ಕಾಮಗಾರಿ ತೀರಾ ನಿಧಾನ ಗತಿಯಲ್ಲಿ ಸಾಗುತ್ತಿದೆ. ಕೇವಲ ಪೈಪ್ಲೈನ್ ಅಳವಡಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರಿನಲ್ಲಿ ಮೈಲಾರ (ಖಂಡೋಬ) ದೇವರ ಎರಡು ವಿಗ್ರಹ ಪತ್ತೆಯಾಗಿದೆ. ಮೈಲಾರ ದೇವರ ಆರಾಧನೆ ಕರಾವಳಿ ಭಾಗದಲ್ಲಿ ವಿರಳವಾಗಿ ಕಂಡು ಬರುತ್ತದೆ. ಆದರೆ ಬಸ್ರೂರಿನಲ್ಲಿ ಮೈಲಾರ ದೇವರ ಆರಾಧನೆ ಹಿಂದೆ ನಡೆಯುತ್ತಿದ್ದ ಬಗ್ಗೆ ಈ ವಿಗ್ರಹದ ಮೂಲಕ ದಾಖಲೆ ದೊರೆತಂತಾಗಿದೆ. 1.ಮೈಲಾರ ದೇವರ ವಿಗ್ರಹಕುದುರೆ ಏರಿದಂತ ವೀರ ಯೋಧನಂತೆ ಕಂಡು ಬಂದಿದ್ದು, ಕೈಯಲ್ಲಿ ಕಡ್ಗದಂತೆ ಕಂಡು ಬಂದಿದೆ. ಎದೆಗೆ ವೀರ ಯೋಧ ತೊಡುವಂತೆ ರಕ್ಷಾ ಕವಚ ಕೂಡಾ ಕಾಣಲ್ಪಟ್ಟಿದೆ. ಅಲಂಕಾರಗೊಂಡ ಕುದುರೆ ಕಾಲು ಸ್ವಲ್ಪ ಮಡಿಚಿದ ರೀತಿಯಲ್ಲಿದೆ .ಕ್ರಿ.ಶ 15 ರಿಂದ 16ನೇ ಶತಮಾನಕ್ಕೆ ಹೋಲುವಂತಿದೆ. 2.ಮೈಲಾರ ದೇವರ ಶಿಲಾ ಫಲಕಶ್ರೀ ದೇವಾನಂದ ಶೆಟ್ಟಿ ಹಳ್ನಾಡು ಇವರ ಕೆರೆಯ ಹೂಳು ಎತ್ತುವಾಗ ವಿಗ್ರಹ ಸಿಕ್ಕಿರುವ ವಿಚಾರ ತಿಳಿಸಿರುತ್ತಾರೆ. ಇದು ಮೈಲಾರ ದೇವರ ಶಿಲಾ ಫಲಕವಾಗಿದೆ.ಇಲ್ಲಿ ಸ್ತ್ರೀ ಪುರಷ ಕುದುರೆ ಏರಿ ಖಡ್ಗ ಹಿಡಿದ ಶಿಲ್ಪವಿದೆ. ಈ ಶಿಲ್ಪ ಕ್ರಿ.ಶ 16ನೇ ಶತಮಾನಕ್ಕೆ ಹೋಲುವಂತಿದೆ. ಬಸ್ರೂರಿನಲ್ಲಿ ಸಿಕ್ಕಿರುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನಗಳ್ಳಿ ಗ್ರಾಮ ಪಂಚಾಯತ್ನ 2ನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಚ್. ಕೆ. ಸವಿತಾ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಉದಯ ಪೂಜಾರಿ ಆಯ್ಕೆಯಾಗಿದ್ದಾರೆ. ಆನಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಟ್ಟು 8 ಸ್ಥಾನಗಳ ಪೈಕಿ 3 ಕಾಂಗ್ರೆಸ್ ಬೆಂಬಲಿತ, 3 ಬಿಜೆಪಿ ಬೆಂಬಲಿತ, 2 ಪಕ್ಷೇತರ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಹಿಂ.ವ.ಅ(ಮ) ಹಾಗೂ ಉಪಾಧ್ಯಕ್ಷ ಸ್ಥಾನ ಸಾಮನ್ಯ ಸ್ಥಾನಕ್ಕೆ ಮೀಸಲಾಗಿತ್ತು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಕಾಂಗ್ರೆಸ್ ಆಭ್ಯರ್ಥಿಗೆ 4 ಮತ ಮತ್ತು ಬಿಜೆಪಿ ಬೆಂಬಲಿತ ಆಭ್ಯರ್ಥಿ 4 ಮತಗಳನ್ನು ಸಮಬಲವಾಗಿ ಪಡೆದುಕೊಂಡಿದ್ದರು. ಇಬ್ಬರು ಆಭ್ಯರ್ಥಿಗಳಿಗೂ ಸಮಬಲವಾಗಿ ಮತ ಚಲಾವಣೆಯಾದ್ದರಿಂದ ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಪ್ರಕ್ರಿಯೆ ಕೈಗೊಂಡಾಗ ಅಧ್ಯಕ್ಷ ಸ್ಥಾನ ಎನ್ನುವುದು ಕಾಂಗ್ರೆಸ್ ಬೆಂಬಲಿತ ಆಭ್ಯರ್ಥಿ ಎಚ್ ಕೆ ಸವಿತಾ ಇವರ ಪಾಲಾಯಿತು. ಉಪಾಧ್ಯಕ್ಷರಾಗಿ ಉದಯ ಪೂಜಾರಿ ಇವರು ಅವಿರೋಧವಾಗಿ ಆಯ್ಕೆಯಾದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಲ್ಪಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನೊಂದಿಗೆ ಸಂಗ್ರಹಿಸಲಾದ ಒಟ್ಟು ರೂ.71,110 ಮೊತ್ತದ ಸಹಾಯಧನವನ್ನು ಇಬ್ಬರು ಮಕ್ಕಳ ಚಿಕಿತ್ಸೆಗಾಗಿ ನೀಡಲಾಯಿತು. ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಾಪುರ ಖಾರ್ವಿಕೇರಿಯ ಪುಟಾಣಿಯಾದ ಆರೂಷಿ ಹಾಗೂ ಕೋಟೇಶ್ವರದ ಆರ್ಯನ್ ಪಾಪು ಚಿಕಿತ್ಸೆಗಾಗಿ ತಲಾ 35,555 ರೂ ಗಳಂತೆ ರೂಪಾಯಿ ಸಹಾಯಧನ ವನ್ನು ಹೆಲ್ಪಿಂಗ್ ಹ್ಯಾಂಡ್ಸ್ ಟೃಸ್ಟ್ ನ ಪಧಾಧಿಕಾರಿಗಳು ಹಾಗೂ ಕೋಟಿಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಸದಸ್ಯರ ಸಮಕ್ಷಮದಲ್ಲಿ, ದೇವರಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪೋಷಕರ ಚೆಕ್ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ದೇವಸ್ಥಾನ ಸಮಿತಿಯ ಶಾರದಾ ಹಳವಳ್ಳಿ, ಉಷಾ ಬಂಗೇರ ಮಾರ್ಕೊಡು ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ಗೌರವಾಧ್ಯಕ್ಷರಾದ ರವೀಂದ್ರ ರಟ್ಟಾಡಿ, ಜ್ಞಾನಾನಂದ ಐರೋಡಿ, ಅಧ್ಯಕ್ಷರಾದ ಪ್ರದೀಪ್ ಕೋಟೇಶ್ವರ, ಕೋಷಾಧಿಕಾರಿಗಳಾದ ಸುನೀಲ್ಖಾರ್ವಿ ತಲ್ಲೂರು, ಕಮಿಟಿಯ ಸದಸ್ಯರಾದ ಮಣೀಶ್ ಶ್ರೀಯಾನ್, ರಾಘವೇಂದ್ರ ಕೋಡಿ, ಅವಿನಾಶ್ ಹೇರಿಕುದ್ರು,ಶರತ್ ಹೊದ್ರಾಳಿ, ನಾಗರಾಜ್ ಹೊದ್ರಾಳಿ,ರತನ್ ಹೇರಿಕುದ್ರು, ಸಚಿನ್ ಕೋಡಿ, ಕಿಶೋರ್ ಕೋಡಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಜಡ್ಕಲ್ ಶಾಲೆಗೆ ಸುಣ್ಣ ಬಣ್ಣ, ವಿದ್ಯಾರ್ಥಿಗಳಿಗೆ ಸಮವಸ್ತ್ರ, ಆಟದ ಸಾಮಗ್ರಿಗಳು, ಪುಸ್ತಕ, ಅಂಗನವಾಡಿ ಮಕ್ಕಳಿಗೆ ಪುಸ್ತಕ, ಲೇಖನಿಗಳನ್ನು ವಿತರಿಸಲಾಯಿತು. ಶಾಲೆಯ ಶಿಕ್ಷಕರ ಕೊರತೆ ನೀಗಿಸಲು ಖಾಸಗಿ ಶಿಕ್ಷಕರನ್ನು ನೇಮಕ ಮಾಡಿ ಅವರ ಒಂದು ವರ್ಷದಿಂದ ಸಂಬಳವನ್ನು ನೀಡುವ ಕಾರ್ಯವನ್ನೂ ಮಾಡಲಾಗುತ್ತಿದೆ. ಸ್ವಯಂಸೇವಕರ ಸಹಾಯದಿಂದ ಶಾಲೆಗೆ ಸುಣ್ಣ ಬಣ್ಣ ಬಳಿದು, ಚಿತ್ರ ಬಿಡಿಸಿ, ಬಣ್ಣದಿಂದ ಅಲಂಕಾರಗೊಳಿಸಿದ್ದಲ್ಲದೇ, ಸ್ವಾತ್ರಂತ್ರ್ಯೋತ್ಸವದಂದು ಮಕ್ಕಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ಮತ್ತು ಸಿಹಿತಿಂಡಿಗಳನ್ನು ವಿತರಿಸಲಾಯಿತು. ಈ ವೇಳೆ ಶಾಲಾ ಮುಖ್ಯೋಪಧ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು, ಪಂಚಾಯತ್ ಅಧ್ಯಕ್ಷರು, ಸ್ವಯಂಸ್ಪೂರ್ತಿ ಫೌಂಡೇಶನ್ ಪ್ರತಿನಿಧಿಗಳು ವಿದ್ಯಾರ್ಥಿಗಳು, ಪೋಷಕರು ಮತ್ತು ಊರವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇವರು ನಮಗೆ ನೀಡಿದ ವರ, ಚಿನ್ನ, ಬೆಳ್ಳಿ, ಕಾರು, ಬಂಗಲೆ ಅಲ್ಲ. ಮುಖ್ಯವಾಗಿ ನಮಗೆ ನೀಡಿದ ವರ, ಸಮಯ. ಈ ಸಮಯವನ್ನು ಸರಿಯಾಗಿ ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಬೇರೆ ಎಲ್ಲಾ ರೀತಿಯ ಸಂಪತ್ತನ್ನು ಗಳಿಸಬಹುದು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ನಡೆ-ನುಡಿ, ಗುರಿ ಸಾಧನೆಯ ಹಾದಿ, ಎಲ್ಲ ವಿಷಯಗಳಲ್ಲೂ ಪರಿಪೂರ್ಣತೆ ಪಡೆಯಲು ಶಿಸ್ತು, ಶ್ರದ್ಧೆಯಿಂದ ಶ್ರಮಿಸಬೇಕು. ದೇವರ ಮೇಲೆ ವಿಶ್ವಾಸವಿಟ್ಟು, ಗುರು ಹಿರಿಯರಲ್ಲಿ ಗೌರವ ಇಟ್ಟು, ಮಾತಾ ಪಿತಾರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಯಶಸ್ಸು ಖಂಡಿತ ಎಂದು ಉಡುಪಿ ಕುಂಜಿಬೆಟ್ಟು ಶಾರದಾ ವಸತಿ ಶಾಲೆಯ ನಿರ್ದೇಶಕರಾದ ವಿದ್ಯಾವಂತ ಆಚಾರ್ಯ ಹೇಳಿದರು. ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜಿ.ಎಸ್.ಬಿ. ದೇವಾಲಯಗಳ ಒಕ್ಕೂಟ ಮಂಗಳೂರು ಸಂಘಟನೆಯ ಕುಂದಾಪುರ ವಲಯದ ಸುಕೃತ ಸಮಾವೇಶ ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡುತ್ತಾ ನನ್ನಿಂದ ಸಾಧ್ಯವಿದೆ ಎಂಬ ಆತ್ಮ ವಿಶ್ವಾಸವಿರಿಸಿಕೊಂಡು ಯುವಕರು ಮುನ್ನಡೆದರೆ ಗುರಿ ಸಾಧನೆ ಮಾಡಲು ಸಾಧ್ಯ ಎಂದು ಹಲವು ನಿದರ್ಶನಗಳನ್ನು ನೀಡಿದ ಅವರು,…
ಸಮಕಾಲೀನ ಜಗತ್ತನ್ನು ದರ್ಶಿಸುವುದು ಸಾಹಿತ್ಯದ ತುರ್ತು – ರಾಜ್ ಆಚಾರ್ಯ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾತಿ, ವರ್ಣ, ವರ್ಗಗಳ ಮೇಲಿನ ಸಂಘರ್ಷಕ್ಕೆ ಶತಮಾನಗಳ ಇತಿಹಾಸವಿದೆ. ಈ ಸಂಘರ್ಷದಲ್ಲಿ ನಮ್ಮೊಳಗಿನ ಜೀವದ್ರವ್ಯ ಆಕುಂಚನವಾಗದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಎಂದಿಗಿಂತಲೂ ಇಂದು ತುಸು ಹೆಚ್ಚೇ ಇದೆ ಎಂದು ಕವಿ, ಸಾಹಿತಿ ರಾಜ್ ಆಚಾರ್ಯ ಪುಣೆ ಹೇಳಿದರು. ಅವರು ರವಿವಾರ ಜನಪ್ರತಿನಿಧಿ ಕುಂದಾಪುರದಲ್ಲಿ ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿದ ಕವಿ, ಲೇಖಕ ಶ್ರೀರಾಜ್ ವಕ್ವಾಡಿಯವರ ಕಿರು ಕಾದಂಬರಿ ಅತ್ತ ನಕ್ಷತ್ರ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಸ್ತು, ವಿಷಯ, ವ್ಯಕ್ತಿ ಈ ಮೂರರ ನೆಲೆಯಲ್ಲಿ ತಾರ್ಕಿಕ ಅಂಶಗಳನ್ನು, ಸಾಂಕೇತಿಕವಾಗಿ ಭಾಷೆ ಸಂಜ್ಞೆಗಳನ್ನು ಪರಿಣಾಮಕಾರಿಯಾಗಿ ಸಾಹಿತ್ಯದಲ್ಲಿ ಬಳಸಿಕೊಳ್ಳುವುದು ಅಗತ್ಯ. ಸಾಹಿತ್ಯಮುಖಿಯ ವೈಯಕ್ತಿಕ ನೆಲೆಗಟ್ಟಿನಲ್ಲಿ ವ್ಯಕ್ತವಾಗುವ ನೀತಿಸತ್ಯಗಳು ಸಾಮಾಜಿಕ ನೆಲೆಯಲ್ಲಿ ಪರಿಗಣನೆಗೆ ಬಂದರೆ ಅದು ಸಾಹಿತಿಯೊಬ್ಬನ ಗೆಲುವು. ಸಮಕಾಲೀನ ಜಗತ್ತನ್ನು ತೆರೆದಿಡುವ ತುರ್ತು ಅಗತ್ಯ ಸಾಹಿತ್ಯಕ್ಕಿದೆ. ವ್ಯಕ್ತಿಕೇಂದ್ರೀಕೃತ ನೆಲೆಯಿಂದಲೇ ಸಮಕಾಲೀನ ಜಗತ್ತಿನ ದರ್ಶನ ಹೊರಗೆಡಹಲು ಸಾಧ್ಯ…
ಬೈಂದೂರು ಕ್ಷೇತ್ರದ ಕೃಷಿ, ಮೀನುಗಾರಿಕೆ, ನೀರಾವರಿ, ಹೆದ್ದಾರಿ, ಗೋಶಾಲೆ – ಶಾಸಕರಾದ ಗುರುರಾಜ ಗಂಟಿಹೊಳೆ ಏನಂತಾರೆ?
