Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಳಿವುದು ಕಾಯ, ಉಳಿಯುವುದು ಕೀರ್ತಿ. ಸಿಕ್ಕ ಕಿರು ಅವಧಿಯಲ್ಲಿಯೇ ಸಮಾಜಕ್ಕೆ ಅಗಾಧ ಕೊಡುಗೆ ನೀಡಿ ಇಹಲೋಕ ತ್ಯಜಿಸಿ ಅಮರನಾದ ಶ್ರೀನಿಧಿ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಅಸಾಧಾರಣ ವ್ಯಕ್ತಿತ್ವ ತೋರಿದವರು. ಅವಸರವಸರವಾಗಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಅವಸರವಸರವಾಗಿಯೇ ಬದುಕಿನಿಂದ ನಿರ್ಗಮಿಸಿದ್ದು ಸಮಾಜಕ್ಕೆ ದೊಡ್ಡ ನಷ್ಟ ಎಂದು ಮಾಜಿ ಅಸಿಸ್ಟೆಂಟ್ ಗವರ್ನರ್‌ ರೊ. ಚಂದ್ರಶೇಖರ ಮೆಂಡನ್ ಪುಷ್ಪನಮನ ಸಲ್ಲಿಸಿ ಸಂಸ್ಮರಣಾ ನುಡಿಗಳನ್ನಾಡಿದರು. ಅವರು ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ, ರೋಟರಿ ಕ್ಲಬ್ ಕೋಟ ಸಿಟಿ, ಆನ್ಸ್ ಕ್ಲಬ್ ಕೋಟ ಸಿಟಿ ಹಾಗೂ ಮಹಂಕಾಳಿ ಫ್ರೆಂಡ್ಸ್ ಕೊರವಡಿ ಇವರ ಸಂಯುಕ್ತ ಆಶ್ರಯದಲ್ಲಿ ʼಸ್ಮೃತಿಗಳಲ್ಲಿ ಶ್ರೀನಿಧಿ’ ಶ್ರೀನಿಧಿ ಉಪಾಧ್ಯ ಸಂಸ್ಮರಣೆಯಲ್ಲಿ ರೋಟರಿ ಕ್ಲಬ್ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಮೃತರ ಸಮಾಜಿಕ ಕಾರ್ಯಗಳನ್ನು ಸ್ಮರಿಸಿದರು. ಭಗವಂತನ ಸೇವೆಗಾಗಿ ಮಂತ್ರಾಲಯ ಕ್ಷೇತ್ರ ಸಂದರ್ಶನ ಮಾಡಿ, ಸ್ನೇಹಿತ ಬಂಧು ಬಳಗದವನ್ನು ಮಾತನ್ನಾಡಿಸುತ್ತಿರುವಾಗಲೇ ಭಂಗವಂತನಲ್ಲಿ ಐಕ್ಯರಾದ ಶ್ರೀನಿಧಿ ದೇವನಿಗೆ ಪ್ರಿಯರಾದವರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬೇಡಿ ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ. ರಾಜ್ಯ ರಾಷ್ಟ್ರ ಮಟ್ಟದಲ್ಲೂ ಹೆಸರು ಮಾಡಿ ಎಂದು ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಅಭಿಪ್ರಾಯಿಸಿದರು. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮೀಸಲಾತಿಯನ್ನು ಬಳಸಿಕೊಂಡು ಉದ್ಯೋಗ ಪಡೆಯುವಂತೆ ಪ್ರೇರೆಪಿಸಿದರು. ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜೀವನ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನತಾ ವಿದ್ಯಾ ಸಂಸ್ಥೆ ಅನೇಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ನೀಡಿದೆ. ಆ ಮೂಲಕ ಜನತಾ ಕಾಲೇಜು ರಾಜ್ಯ ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಹೆಜ್ಜೆ ಗುರುತು ಮೂಡಿಸಿದೆ ಎಂದರು. ಕಾರ್ಯಕ್ರಮದಲ್ಲಿ ಕ್ರೀಡಾಪಟು ಸಚಿನ್ ಸುವರ್ಣ ರನ್ನು ಸನ್ಮಾನಿಸಲಾಯಿತು. ಕ್ರೀಡಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550 ವರ್ಷಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ 550 ದಿನಗಳ ಶ್ರೀ ರಾಮನಾಮ ಜಪ ಅಭಿಯಾನದ ಅಂಗವಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಗಂಗಾರಾಮ: ಜಪ ಕೇಂದ್ರದಲ್ಲಿ ರಾಮನಾಮ ಜಪ ಅಭಿಯಾನ 550 ದಿನ ಪೂರ್ಣಗೊಂಡ ಹಿನ್ನಲೆಯಲ್ಲಿ ಶ್ರೀರಾಮ ನಗರೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರೀ ರಾಮ ನಾಮ ಮಹಾ ಜಪ ಅಭಿಯಾನ ನಡೆಯಿತು. ಮಧ್ಯಾಹ್ನ ಪೂಜೆ, ಸಮಾರಾಧನೆ, ಸಂಜೆ ಶ್ರೀರಾಮ ನಗರೋತ್ಸವ ನಡೆಯಿತು. ದೇವಸ್ಥಾನದಿಂದ ಹೊರಟ ದೇವರ ನಗರೋತ್ಸವ ಪುರಮೆರವಣಿಗೆ ಬಂದರು ಪೋರ್ಟ್ ಆಫೀಸಿನವರೆಗೆ ಸಾಗಿ ಮರಳಿ ಮುಖ್ಯರಸ್ತೆ ಮೂಲಕ ಎಸ್.ವಿ. ಜ್ಯೂನಿಯರ್ ಕಾಲೇಜಿವರೆಗೆ ತೆರಳಿ ದೇವಸ್ಥಾನದ ಬಳಿ ಸಮಾಪನಗೊಂಡಿತು. ರಾತ್ರಿ ದೇವರಿಗೆ ದೀಪಾರಾಧನೆ, ವಿಶೇಷ ಪೂಜೆ, 108 ರಾಮನಾಮ ಜಪ ಪಠಣ ನಡೆದು ಶ್ರೀ ರಾಮ ದೇವರಿಗೆ ಮಹಾಮಂಗಳಾರತಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ವತಿಯಿಂದ ಗರ್ಭಿಣಿ / ಬಾಣಂತಿ ಮಹಿಳೆಯರಿಗಾಗಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಮೊದಲ ಪ್ರಸವದ ಗರ್ಭಿಣಿ/ ಬಾಣಂತಿ ಮಹಿಳೆಯರಿಗೆ 5000 ರೂ.ಗಳ ಸಹಾಯಧನ ಲಭ್ಯವಿದ್ದು, ಮೊದಲ ಪ್ರಸವದ ಗರ್ಭಿಣಿಯು ಎಲ್.ಎಂ.ಪಿ ದಿನಾಂಕದಿಂದ 150 ದಿನಗಳ ಒಳಗೆ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಮೊದಲನೇ ಕಂತಿನ ಅರ್ಜಿಯನ್ನು ನೋಂದಾಯಿಸಬೇಕು ಹಾಗೂ ಎರಡನೇ ಕಂತಿನಲ್ಲಿ ಮಗುವಿನ ಜನನದ ನೋಂದಣಿ ಮತ್ತು 3 ನೇ ಚುಚ್ಚುಮದ್ದು ಪೂರ್ಣಗೊಂಡ ಬಳಿಕ ಅರ್ಜಿಯನ್ನು ನೋಂದಾಯಿಸಬಹುದಾಗಿದೆ. ಮೊದಲನೆ ಕಂತಿನಲ್ಲಿ ರೂ.3000 ಹಾಗೂ ಎರಡನೇ ಕಂತಿನಲ್ಲಿ ರೂ. 2000 ನ್ನು (ಮಗುವಿನ ಜನನದ ನಂತರ 3 ನೇ ಚುಚ್ಚುಮದ್ದು ಪೂರ್ಣಗೊಂಡ ನಂತರ) ಫಲಾನುಭವಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಮೂಲಕ ವರ್ಗಾಯಿಸಲಾಗುವುದು. 2 ನೇ ಪ್ರಸವದ ಬಾಣಂತಿ ಮಹಿಳೆಯರಿಗೆ ಹೆಣ್ಣು ಮಗು ಜನಿಸಿದಲ್ಲಿ ರೂ. 6000 ಸಹಾಯಧನ ದೊರೆಯಲಿದ್ದು, ಜನನದ ನಂತರ ಒಂದನೇ ಕಂತಿನಲ್ಲಿ ನೇರ ನಗದು ವರ್ಗಾವಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ. ಜೀವನದಲ್ಲಿ ಮಾನಸಿಕವಾಗಿ ಕುಗ್ಗಿದ ಮನಸ್ಸುಗಳಿಗೆ ಯಕ್ಷಗಾನವು ಔಷಧೋಪಚಾರದಂತೆ. ಪರಂಪರೆಯ ಯಕ್ಷಗಾನದ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸುವಲ್ಲಿ ಮಕ್ಕಳ ಯಕ್ಷಗಾನದ ಪ್ರದರ್ಶನಗಳು ಹೆಚ್ಚು ಫಲಪ್ರದ. ಮಕ್ಕಳ ಮನಸ್ಸು ಕಲ್ಮಶವಿರದ ಶುದ್ಧ ಮನಸ್ಸು. ಹಾಗಾಗಿ ಮಕ್ಕಳ ಪ್ರದರ್ಶನಗಳಲ್ಲಿ ಯಾವುದೇ ಅಪಸವ್ಯಗಳು ಕಾಣಿಸಿಕೊಳ್ಳುವುದಿಲ್ಲ ಎಂದು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವದಿಸಿದರು. ಅವರು ಕೋಟದ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ಮಕ್ಕಳ ಮೇಳದ 50ರ ಸಂಭ್ರಮದ ಸುವರ್ಣ ಪರ್ವ ಸಮಾರೋಪ ಸಮಾರಂಭವನ್ನು ಚಂಡೆ ನುಡಿಸಿ, ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಯಕ್ಷಗಾನವು ವಾಣಿಜ್ಯೀಕರಣವಾದಾಗ ಅದರ ಮೂಲ ಸ್ವರೂಪಕ್ಕೆ ಧಕ್ಕೆ ಬಂದಿದೆ. ಕಲಾವಿದರ ವೈಯಕ್ತಿಕ ಮಾತುಕತೆಗಳೇ ರಂಗದ ಸಂಭಾಷಣೆಗಳಾಗಿ ಮೂಡಿಬರುತ್ತಿವೆ. ಇಂಥವುಗಳಿಗೆ ಕಡಿವಾಣ ಹಾಕಬೇಕು. ಯುವಜನತೆ ಸಮಾಜ ಬಾಹಿರ ಕೆಲಸದಲ್ಲಿ ತೊಡಗಿ ಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಮಕ್ಕಳು ಯಕ್ಷಗಾನದಲ್ಲಿ ತೊಡಗಿಸಿ ಕೊಂಡಾಗ ಅವರಲ್ಲಿ ಉತ್ತಮ ಸಂಸ್ಕಾರ ಮೂಡುವುದಕ್ಕೆ ಸಾಧ್ಯ. ಉಡುಪ ಮತ್ತು ಹಂದೆಯವರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳು ಡಿಜಿಟಲ್ ವ್ಯವಸ್ಥೆಯ ಅಡಿಯಲ್ಲಿ ನಡೆಯುತ್ತಿದ್ದು ಗ್ರಾಹಕನು ಅತ್ಯಂತ ಜಾಗರೂಕನಾಗಿ ಬ್ಯಾಂಕಿಂಗ್ ವ್ಯವಹಾರ ನಡೆಸದೇ ಇದ್ದ ಪಕ್ಷದಲ್ಲಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಾನೆ. ಹಾಗಾಗಿ ಎಚ್ಚೆತ್ತ ಗ್ರಾಹಕ ಗುರಿಯತ್ತ ಸಾಗುವನೆಂದು ನಿವೃತ್ತ ಬ್ಯಾಂಕ್ ಅಧಿಕಾರಿ ವಿ. ಮೊಹನ್ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ ನುಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ನಡೆದ ಬ್ಯಾಂಕ್ ವ್ಯವಹಾರದಲ್ಲಿ ಜಾಗೃತೆ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕನು ನೈಪುಣ್ಯತೆಯೊಂದಿಗೆ ವ್ಯವಹರಿಸದಿಲ್ಲಿ ಮೋಸದ ಬಲೆಗೆ ಬೀಳದೆ ಇರಲು ಸಾಧ್ಯ ಎಂದು ನುಡಿದರು. ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಮುಖ್ಯಸ್ಥರಾದ ಡಾ. ಶೇಖರ ಬಿ. ಅವರು ಪ್ರಾಸ್ತಾವಿಕ ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ಇಂಜಿನೀಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಅಂತರಾಷ್ಟ್ರೀಯ ಪ್ರತಿಷ್ಠಾನದ ವೇದಿಕೆ ಕೊಡಲ್ಪಡುವ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಲೋಕಾಯುಕ್ತ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಡಾ. ಎಂ. ಸಂತೋಷ್ ಹೆಗ್ಡೆ ಅವರು ವಾಸ್ತುತಜ್ಞ, ಪ್ರಸಂಗಕರ್ತ ಡಾ. ಬಸವರಾಜ್ ಶೆಟ್ಟಿಗಾರ್‌ ಅವರಿಗೆ ಪ್ರದಾನ ಮಾಡಿದರು. ಮಾಜಿ ಲೋಕಾಯುಕ್ತರಾದ ಡಾ. ಎಂ. ಸಂತೋಷ್ ಹೆಗ್ಡೆ ಅವರು ಇತ್ತೀಚಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದವರಿಗೆ ಮತ್ತಷ್ಟು ಜವಾಬ್ದಾರಿ ಹೆಚ್ಚುತ್ತದೆ ಅಲ್ಲದೇ 42 ವರ್ಷಗಳಿಂದ ವಿವಿಧ 16 ಕ್ಷೇತ್ರಗಳಲ್ಲಿ ಸಾಧನೆ ಮಾಡಿ 50 ಕ್ಷೇತ್ರಗಳ ಅಧ್ಯಯನ ಮಾಡಿ 50 ಕ್ಷೇತ್ರ ಮಹಾತ್ಮೆ ಪ್ರಸಂಗವನ್ನು ರಚಿಸಿ ಜಾಗತಿಕ ದಾಖಲೆ ನಿರ್ಮಿಸಿದ ವಾಸ್ತುತಜ್ಞ ಡಾ. ಬಸವರಾಜ್ ಶೆಟ್ಟಿಗಾರ್‌ರವರಿಗೆ ಪ್ರಶಸ್ತಿಯನ್ನು ನೀಡಿರುವುದರಿಂದ ಸಂಸ್ಥೆಯ ಗೌರವ ಮತ್ತಷ್ಟು ಹೆಚ್ಚಿದಂತಾಗಿದೆ ಎಂದು ಶುಭ ಹಾರೈಸಿದರು. ಸಮಾರಂಭವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2025-26ನೇ ಶೈಕ್ಷಣಿಕ ಸಾಲಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಮುಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯ ಜೊತೆ ನಿರಂತರ ಒಡನಾಟ ಇಟ್ಟುಕೊಂಡಾಗ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ನೂತನ ಪ್ರಾಕ್ತನ ವಿದ್ಯಾರ್ಥಿ ಸಂಘದ ಪರಿಕಲ್ಪನೆಯಲ್ಲಿ ಮೂಡಿ ಬರಲಿರುವ ಪ್ರಾಕ್ತನಯಾನ ಹಾಗೂ ಯಶೋದೀಪ ಯೋಜನೆಗೆ ಚಾಲನೆ ನೀಡಿದರು. ಉಪ-ಪ್ರಾಂಶುಪಾಲ ಡಾ. ಚೇತನ ಶೆಟ್ಟಿ ಕೋವಾಡಿ ಆಶಯದ ನುಡಿಗಳನ್ನಾಡಿದರು ಮತ್ತು ಆಡಳಿತ ನಿಕಾಯಕ ರಕ್ಷಿತ್ ರಾವ್ ಗುಜ್ಜಾಡಿ ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ವಿಭಿನ್ನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಾಕ್ತನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಕೊಯಮತ್ತೂರಿನ ಭಾರತೀಯಾರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೊತ್ಸಾಹಿಸಲು ಬಾಲ ಪ್ರತಿಭೆ (8 ವರ್ಷ ದಿಂದ 14 ವರ್ಷದ ಒಳಗಿರುವ), ಕಿಶೋರ ಪ್ರತಿಭೆ (14 ವರ್ಷದಿಂದ 18 ವರ್ಷದೊಳಗಿರುವ) ಹಾಗೂ ಯುವಪ್ರತಿಭೆ (18 ವರ್ಷದಿಂದ 30 ವರ್ಷದ ಒಳಗಿರುವ) ಗಳಿಗೆ ಕಲಾಪ್ರತಿಭೋತ್ಸವವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯು ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡುವುದರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರನ್ನು ವಲಯಮಟ್ಟಕ್ಕೆ, ವಲಯಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ತಾವು ವ್ಯಾಸಂಗ ಮಾಡುತ್ತಿರುವ ವಿದ್ಯಾ ಸಂಸ್ಥೆಯಿಂದ ಪಡೆದು ಅರ್ಜಿಯ ಜೊತೆಗೆ (ಅರ್ಜಿಗೆ ನಿಗದಿತ ನಮೂನೆ ಇರುವುದಿಲ್ಲ: ಬಿಳಿ ಹಾಳೆಯಲ್ಲಿ ಸ್ವವಿವರಗಳನ್ನು ಬರೆದಿರಬೇಕು.) ಲಗತ್ತಿಸಬೇಕು. ಚಿತ್ರಕಲಾ ಸ್ಪರ್ಧಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕರಾವಳಿಯ ಜೀವನಾಡಿ ಮೀನುಗಾರಿಕೆ ಅದೆಷ್ಟೊ ಕುಟುಂಬಗಳು ಅದರ ಆಯಾಮದ ಮೇಲೆ ಜೀವನ ಕಂಡುಕೊಂಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಪಚ್ಚಿಲೆ ಸೇರಿದಂತೆ ಮುತ್ತು ಕೃಷಿಯ ಮೂಲಕ ಯುವ ಸಮೂಹ ಹೊಸ ಭಾಷ್ಯ ಬರೆಯುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಸಾಸ್ತಾನದಲ್ಲಿ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ICAR –CCARI) ಗೋವಾ, ಜಲಾನಯನ ಅಭಿವೃದ್ಧಿ ಇಲಾಖೆ-ಬೆಂಗಳೂರು, ಜಿಲ್ಲಾ ಪಂಚಾಯತ್-ಉಡುಪಿ, ಕೃಷಿ ಇಲಾಖೆ-ಉಡುಪಿ, ಮೀನುಗಾರಿಕೆ ಇಲಾಖೆ ಉಡುಪಿ, ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ-ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣೆ ಸಮನ್ವಯ ಸಮಿತಿ, ಸ್ಕೋಡವೆಸ್ ಸಂಸ್ಥೆ, ಆಯುಶ್ಮಾನ್ ಭವ ಸಂಸ್ಥೆ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಮತ್ತು ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಜಂಟಿಯಾಗಿ ಆಯೋಜಿಸಿರುವ ಮುತ್ತು ಕೃಷಿ ಮಾಹಿತಿ ಕಾರ್ಯಾಗಾರ ಮನೆ ಮನೆಯಲ್ಲೂ ಮುತ್ತು ಕೃಷಿ ಹಾಗೂ ಯುಕೆ  ಪರ್ಲ್ ಮಾರ್ಟ್‌…

Read More