Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ತಕ್ಷಣ ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು. ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, 17% ವತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಮಾ.01 : ಬೆಂಗಳೂರು ನಗರದಲ್ಲಿ ಬೇಕರಿ, ಕ್ಯಾಂಟಿನ್, ಹೋಟೆಲ್ ನಡೆಸುವವರಿಗೆ ಬೆದರಿಕೆ, ಹಲ್ಲೆ ಮಾಡುವ ಪ್ರಕರಣಗಳು ಆಗಾಗ್ಗೆ ನಡೆಯುತ್ತಲೇ ಇದ್ದು, ಇಂದು ಮತ್ತೆ ಅಂತಹದ್ದೊಂದು ಪ್ರಕರಣ ಮರುಕಳಿಸಿದೆ. ಕ್ಯಾಂಡಿಮೆಟ್ಸ್ ಗಾಜು ಪುಡಿಗೊಳಿಸಿ ದಾಂದಲೆ ನಡೆಸಲಾಗಿದೆ. ನಗರದ ನಾಗರಬಾವಿ ಸಮೀಪ ಮಾಳಗಾಳಾದಲ್ಲಿನ ಕುಂದಾಪುರ ಮೂಲದ ಸಹೋದರ ರಾಘುನಾಥ ಶೆಟ್ಟಿ ಹಾಗೂ ದಯಾನಂದ ಶೆಟ್ಟಿ ಎಂಬುವವರ ಮಧು ಕಾಂಡಿಮೆಂಟ್ಸ್’ಗೆ ಮಂಗಳವಾರ ಸಂಜೆ ಸಾಯಂಕಾಲ ಪ್ರಕಾಶ ಎನ್ನುವ ವ್ಯಕ್ತಿ ತೆರಳಿ 500ರೂಪಾಯಿ ನೀಡುವಂತೆ ಬೇಡಿಕೆ ಇರಿಸಿದ್ದಾನೆ. ಅಂಗಡಿ ಮಾಲಿಕ ಹಣ ನೀಡಲು ಸಾಧ್ಯವಿಲ್ಲ ಎಂದಾಗ ರಾತ್ರಿ ಹೊತ್ತು ಅವರ ಮನೆಗೆ ಬಂದು ಚಾಕು ತೋರಿಸಿ ಜೀವ ಬೆದರಿಕೆ ಹಾಕಿರುತ್ತಾನೆ. ಪುನಃ ಬುಧವಾರ ಬೆಳಿಗ್ಗೆ ಬಂದು ಅಂಗಡಿ ಮಾಲಿಕನಿಗೆ ಬೆದರಿಕೆ ಹಾಕಿದ್ದಲ್ಲದೇ, ಕಾಂಡಿಮೆಂಟ್ಸ್ ಗ್ಲಾಸ್ ಒಡೆದು ಬೆದರಿಕೆ ಹಾಕಿ ಅಲ್ಲಿಂದ ತೆರಳಿದ್ದಾನೆ. ಅಂಗಡಿಗೆ ಬಂದು ಗಾಜು ಒಡೆದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಯನ್ನು ಬಂಧಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ. ಘಟನೆಯನ್ನು ಖಂಡಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆಹರು ಯುವ ಕೇಂದ್ರ ಉಡುಪಿ ಹಾಗೂ ಯುವಕಾರ್ಯ ಕ್ರೀಡಾಲಯ ಇವರ ಪ್ರಾಯೋಜಕತ್ವದಲ್ಲಿ ಕುಂದಾಪುರ ಭoಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮೂರು ದಿನಗಳ ಯುವ ನಾಯಕತ್ವ ಮತ್ತು ಸಮುದಾಯ ಬೆಳವಣಿಗೆ ಶಿಬಿರ ಕಾಲೇಜಿನ ಎ ವಿ ಹಾಲ್ ನಲ್ಲಿ ಉದ್ಘಾಟನೆಗೊಂಡಿತು. ಕುಂದಾಪುರದ ಸಹಾಯಕ ಆಯುಕ್ತರಾದ ರಶ್ಮಿ ಆರ್. ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ನಾಯಕತ್ವ ಶಿಬಿರದ ಅಗತ್ಯತೆ ಹಾಗೂ ಅದರ ಉಪಯುಕ್ತತೆ ಬಗ್ಗೆ ಶಿಬಿರಾರ್ಥಿಗಳಿಗೆ ತಿಳಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ ಪ್ರಭು ಇವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ. ಎಸ್. ಹಾಗೂ ರಾಮಚಂದ್ರ ಆಚಾರ್ ಸಭೆಯಲ್ಲಿಯಲ್ಲಿ ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.28: 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಮುಷ್ಕರಕ್ಕೆ ಸರಕಾರಿ ನೌಕರರು ಮುಂದಾಗಿದ್ದಾರೆ. ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಸರ್ಕಾರಿ ಸಂಘದ ನೌಕರರಲ್ಲಿ ಯಾವುದೇ ಒಡಕಿಲ್ಲ. ಎಲ್ಲ ಸರ್ಕಾರಿ ನೌಕರರು ಒಗ್ಗಟ್ಟಾಗಿದ್ದೇವೆ ಎಂದರು. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗುತ್ತೇವೆ ಎಂದು 40 ಸಂಘಟನೆಗಳ 10 ಲಕ್ಷ ನೌಕರರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಘದ ನಿಯೋಗದ ಜೊತೆ ಸಭೆ ನಡೆಸಿ, ಸಂಧಾನಕ್ಕೆ ಯತ್ನಿಸಿದರು. ಬೇಡಿಕೆ ಈಡೇರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಸರ್ಕಾರಿ ನೌಕರರು ಒಪ್ಪದ ಕಾರಣ ಸಂಧಾನ ಸಭೆ ವಿಫಲವಾಗಿದೆ. ಪರಿಸ್ಥಿತಿ ವಿಷಮ ಆಗದಂತೆ ತಡೆಯಲು ಮಂಗಳವಾರ ರಾತ್ರಿ 9:30ಕ್ಕೆ ಸಿಎಂ ಬೊಮ್ಮಾಯಿತುರ್ತುಸಭೆ ಕರೆದಿದ್ದಾರೆ. ಒಂದೊಮ್ಮೆ ಸಂಧಾನ ವಿಫಲವಾದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತೀರಾ ಗ್ರಾಮೀಣ ಭಾಗದಲ್ಲಿ ಸಂಪರ್ಕ ಸಾಧನೆಗಳ ಕೊರತೆ ಇದ್ದರೂ ಕಲೆ ಸಾಹಿತ್ಯ ಸಾಂಸ್ಕೃತಿಕ ಸಂವಹನಕ್ಕೆ ಕೊರತೆಯಾಗದಂತೆ ಶ್ರಮಿಸುತ್ತಿರುವ ಇಲ್ಲಿನ ಪ್ರತಿಭೆಗಳು ಹಾಗೂ ಸಂಘಟಕರ ಸಾಧನೆ ಅನನ್ಯವಾದುದು ಎಂದು ಉದ್ಯಮಿ ರವೀಂದ್ರ ಕಿಣಿ ಕಂಚಿಕಾನು ಹೇಳಿದರು. ಅವರು ಸಂಚಲನ ರಿ. ಹೊಸೂರು ಆಶ್ರಯದಲ್ಲಿ ಆಯೋಜಿಸಲಾದ 3 ದಿನಗಳ ರಾಜ್ಯಮಟ್ಟದ ನಾಟಕೋತ್ಸವ ರಂಗ ಸಂಚಲನ – 2023 ಉದ್ಘಾಟಿಸಿ ಮಾತನಾಡಿದರು. ಸ್ಪಂದನಾ ರಿ. ನಾಗರ ನಾಟಕ ತಂಡದ ನಿರ್ದೇಶಕಿ ಎಂ.ವಿ ಪ್ರತಿಭಾ ಶುಭಾಶಂಸನೆಗೈದರು. ಸಂಚಲನ ಕಾರ್ಯಾಧ್ಯಕ್ಷ ತಿಮ್ಮ ಮರಾಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಲ್ಲಿಬಾರು ಶಾಲೆಯ ಮುಖ್ಯ ಶಿಕ್ಷಕ ಎಸ್. ಮಹಾಬಲೇಶ್ವರ್, ಅತ್ಯಾಡಿ ಶಾಲಾ ಮುಖ್ಯ ಶಿಕ್ಷಕ ಹಾಲೇಶ್ ಡಿ.ಆರ್., ಉದ್ಯಮಿ ಮಹಾದೇವ ಪೂಜಾರಿ ಕಿಸ್ಮತಿ, ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಮಹಾದೇವ ಮರಾಠಿ ಅಧ್ಯಕ್ಷತೆ ವಹಿಸಿದ್ದರು. ಸಂಚಲನ ರಿ. ಹೊಸೂರು ಇದರ ಸಂಚಾಲಯ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಜು ಮರಾಠಿ ಸ್ವಾಗತಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದಾಯ ಕುಂದಾಪುರದ ತಿಂಗಳ ಓದು ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಸಾಹಿತಿ ಕೆವಿ ತಿರುಮಲೇಶ್ ರವರಿಗೆ ನುಡಿ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕೆವಿ ತಿರುಮಲೇಶ್ ರವರ ಆರ್ತರು, ಕೀರ್ತನೆ, ರಾಜಧಾನಿಯ ಭಾಷೆ, ನೂರು ಮಂದಿ ಮನುಷ್ಯರು, ಮುಖಾಮುಖಿ, ಹಾಸಿಗೆ, ಮಂಡೂಕ ರಾಜ್ಯ, ಸರ್ಕಸ್, ಪೆಂಟಯ್ಯನ ಅಂಗಿ ಮುಂತಾದ ಕವಿತೆಗಳನ್ನು ಸಮುದಾಯ ಕುಂದಾಪುರದ ಸದಸ್ಯರು ವಾಚಿಸಿದರು. ಸಾಹಿತಿ ಮುರುಳಿಧರ ಉಪಾಧ್ಯಾಯ ಅವರು ಕೆ ವಿ ತಿರುಮಲೇಶ್ ರವರ ಕವಿತೆಗಳು ಬದುಕು ಮತ್ತು ಬರಹ ವಿಮರ್ಶೆ ಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಅನೇಕ ಸಾಹಿತಿಗಳು ಸಾಹಿತ್ಯ ಅಭಿಮಾನಿಗಳು ಭಾಗವಹಿಸಿದ್ದರು. ಸಮುದಾಯ ಕುಂದಾಪುರದ ಅಧ್ಯಕ್ಷರಾದ ಡಾ. ಸದಾನಂದ ಬೈಂದೂರು ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು. ಕಾರ್ಯದರ್ಶಿ ವಾಸುದೇವ ಗಂಗೇರ ಕಾರ್ಯಕ್ರಮ ನಿರೂಪಣೆ ಮಾಡಿ ಧನ್ಯವಾದಗೈದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಭಿನಯ ವಿಶಾರದ, ರಂಗಸ್ಥಳದ ರಾಜ ಮೊದಲಾದ ಬಿರುದುಗಳಿಂದ ಖ್ಯಾತರಾಗಿರುವ ಯಕ್ಷಗಾನದ ಸವ್ಯಸಾಚಿ ಕಲಾವಿದ 7 ದಶಕಗಳ ವೃತ್ತಿಪರ ತಿರುಗಾಟ ನಡೆಸಿರುವ ಅರುವ ಕೊರಗಪ್ಪ ಶೆಟ್ಟಿ ಅವರು ಪುನರೂರಿನಲ್ಲಿ ಮಾ.5 ರಂದು ನಡೆಯುವ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯಕ್ಷಗಾನ ಕಲಾವಿದರಿಗೆ, ಕಲೆಗೆ ಗೌರವ ನೀಡುವುದಕ್ಕೆ ಮತ್ತು ರಂಗದಲ್ಲಿ ಅರುವ ಅವರ ಆಶು ಸಾಹಿತ್ಯಕ್ಕೆ ಗೌರವವಾಗಿ ಈ ಆಯ್ಕೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಡಾ.ಶೇಖರ ಅಜೆಕಾರು ತಿಳಿಸಿದ್ದಾರೆ. 84 ರ ಹರೆಯದ ಅವರು ಪ್ರಸ್ತುತ ಕಿಶನ್ ಹೆಗ್ಡೆ ಅವರ ಸಂಚಾಲಕತ್ವದ ಹಿರಿಯಡ್ಕ ಮೇಳದ ಪ್ರಧಾನ ಕಲಾವಿದರಾಗಿದ್ದಾರೆ. ತೆಂಕುತಿಟ್ಟಿನ ಪ್ರತಿನಾಯಕ ಪಾತ್ರಧಾರಿಯಾಗಿ ತುಳು ಮತ್ತು ಕನ್ನಡ ಭಾಷೆಯ ಪ್ರದರ್ಶನಗಳಲ್ಲಿ ಅದ್ಬುತ ಪ್ರತಿಭೆ ಮೆರೆದಿದ್ದಾರೆ. ಬಬ್ಬಯ್ಯ ಶೆಟ್ಟಿ ಮತ್ತು ಕಾಂತಕ್ಕೆ ದಂಪತಿಯ ಸುಪುತ್ರರಾಗಿ ಅರುವದಲ್ಲಿ 1940 ನವಂಬರ್ 24 ರಂದು ಜನಿಸಿದರು. ಕೊರಗಪ್ಪ ಶೆಟ್ಟರು ಪ್ರಾಥಮಿಕ ಹಂತದವರೆಗೆ ಶಿಕ್ಷಣ ಪಡೆದಿದ್ದು ಅನುಭವಿ ಕಲಾವಿದರಾಗಿ ಮೆರೆಯುತ್ತಿದ್ದಾರೆಬಾಲ್ಯದಲ್ಲಿ ಯಕ್ಷಗಾನದತ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಳದ ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ದಿನಾಂಕ 30-04-2023 ರಿಂದ 11-05-2023ರ ತನಕ ನಡೆಸುವು ಬಗ್ಗೆ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು ದೇವಳದ ಆಡಳಿತ ಕಛೇರಿಯಲ್ಲಿ ಹಮ್ಮಿಕೊಂಡ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು 1972ರಲ್ಲಿ ಹಾಗೂ 30 ವರ್ಷಗಳ ನಂತರ 2002ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲಾಗಿತ್ತು. ಇದೀಗ 21 ವರ್ಷಗಳ ನಂತರ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲು ಸಮಯ ಒದಗಿ ಬಂದಿದೆ. ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಸಬೇಕೆಂದು ಶಾಸ್ತ್ರ ಹೇಳುತ್ತದೆ. ಅನಿವಾರ್ಯ ಕಾರಣಗಳಿಂದ ಅಷ್ಟಬಂಧ ನಡೆಸಲು ಸಾಧ್ಯವಾಗಿರಲಿಲ್ಲ ಈಗ ಕಾಲ ಕೂಡಿ ಬಂದಿದೆ. ಕ್ಷೇತ್ರದ ತಂತ್ರಿಗಳು, ಅರ್ಚಕರು, ಉಪಾಧಿವಂತ ಕ್ಷೇತ್ರ ಪುರೋಹಿತರು, ಇಲಾಖಾ ಆಗಮ ಪಂಡಿತರು ಹಾಗೂ ಊರ ಪರ ಊರ ಭಕ್ತರ ಸಲಹೆ-ಸೂಚನೆಯನ್ನು ಪಡೆದು ಮಾನ್ಯ ಜಿಲ್ಲಾಧಿಕಾರಿಯವರ, ಮಾನ್ಯ ಧಾರ್ಮಿಕ ದತ್ತಿ ಆಯುಕ್ತರ ಹಾಗೂ ಸರ್ಕಾರದಿಂದ…

Read More

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಮರವಂತೆಯಲ್ಲಿ ಫೆ.25ರಂದು ನಡೆದ ಅಪಘಾತದಿಂದಾಗಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರೀಯವಾಗಿದ್ದ ಉಪ್ಪುಂದ ಮಡಿಕಲ್ ನಿವಾಸಿ, ಶಿಕ್ಷಕಿ ಶಿಲ್ಪಾ ಪ್ರಸನ್ನ ಕುಮಾರ್ (44ವ) ಅವರ ಸಾವಿನ ನೋವಿನ ನಡುವೆಯೂ, ಅವರ ಕುಟುಂಬದ ಸಕಾಲಿಕ ನಿರ್ಧಾರದಿಂದಾಗಿ 6 ಮಂದಿಯ ಜೀವ ಉಳಿಸಲು ಸಾಧ್ಯವಾಗಿದೆ. ಘಟನೆಯ ವಿವರ:ಮರವಂತೆ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿದ್ದ ಶಿಲ್ಪಾ ಅವರು ಶಾಲೆ ಮುಗಿಸಿ ತಮ್ಮ ಸ್ಕೂಟಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾರಿಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆ ಬಳಿಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ರಕ್ಷಿಸಲು ಎಲ್ಲಾ ಪ್ರಯತ್ನದ ನಡುವೆಯೂ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಬಳಿಕ ಮಾನವ ಅಂಗಾಂಗ ಕಸಿ ಕಾಯ್ದೆ 1994ರ ಅನುಸಾರ ಶಿಲ್ಪಾ ಅವರನ್ನು ಎರಡು ಭಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. 6 ಮಂದಿಗೆ ಜೀವದಾನ:ಮೆದುಳು ನಿಷ್ಕ್ರೀಯಗೊಂಡಿರುವುದನ್ನು ವೈದ್ಯರು ಘೋಷಿಸಿದ ಬಳಿಕ ಅವರ ಪತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.27: ತಾಲೂಕಿನ ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂವತ್ತುಮುಡಿ ಬಳಿಯ ಹೆದ್ದಾರಿಯಲ್ಲಿ ರಿಕ್ಷಾ ಹಾಗೂ ಪಿಕಪ್ ನಡುವಿನ ಅಪಘಾತದಲ್ಲಿ ಗಾಯಾಳುವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹೆಮಾಡಿ ಗ್ರಾ.ಪಂ. ಸದಸ್ಯೆ ಕುಸುಮಾ (48) ಸಾವನ್ನಪ್ಪಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಸೊಂಟ, ಬೆನ್ನಿಗೆ, ಮೈಕೈಗೆ ಗಂಭೀರ ಗಾಯಗೊಂಡಿದ್ದ ಕುಸುಮಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫೆ. 26ರಂದು ಸಾವನ್ನಪ್ಪಿದ್ದಾರೆ. ಅವರು ಹೆಮ್ಮಾಡಿ ಗ್ರಾ.ಪಂ.ನ ಎರಡನೇ ವಾರ್ಡ್ ಆಗಿರುವ ಸಂತೋಷ್ನಗರ ಭಾಗದ ಸದಸ್ಯೆಯಾಗಿದ್ದರು. ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಫೆ. 25ರ ಸಂಜೆ 4 ಗಂಟೆಯ ಸುಮಾರಿಗೆ ತಾಸಿ ಕಡೆಯಿಂದ ಕುಂದಾಪುರ ಹೆದ್ದಾರಿಯ ಕನ್ನಡಕುದು ಬಳಿ ಆಟೋ ರಿಕ್ಷಾಗೆ ತಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ದರ್ಶನ್ ಚಲಾಯಿಸುತ್ತಿದ್ದ ಪಿಕಪ್ ವಾಹನ ಢಿಕ್ಕಿಯಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ನಾರಾಯಣ, ಪ್ರಯಾಣಿಸುತ್ತಿದ್ದ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದರು. ಇವರೊಂದಿಗಿದ್ದ ಪತಿ ಚಂದ್ರಶೇಖರ ಮೆಂಡನ್, ಮಕ್ಕಳಾದ ಚಿರಾಗ್ (17) ಹಾಗೂ ಜಾಹ್ನವಿ…

Read More