Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಂಗಳೂರಿನ ಯುನಿವರ್ಸಲ್ ಸ್ಕೂಲ್ ಆಫ್a ಎಡ್ಮಿನಿಸ್ಟ್ರೇಶನ್ ಸಂಸ್ಥೆಯ ಉಪನ್ಯಾಸಕರಾದ ಶ್ರೀ ಪ್ರಭುಲಿಂಗ ಅವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಆಡಳಿತಾತ್ಮಕ ಕಛೇರಿಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ. ಅವರು ಧನ್ಯವಾದ ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಸ್ತೆ ಹೊಂಡಗಳ ಜೊತೆ ಬಿಜೆಪಿ ನಾಯಕರುಗಳು ಸೆಲ್ಫಿ ತೆಗೆದುಕೊಳ್ಳುವಾಗ ಅವರ ಶಾಸಕರು ಹಾಗೂ ಸಂಸದರನ್ನು ಹೊಂಡದ ಪಕ್ಕದಲ್ಲಿ ನಿಲ್ಲಿಸಿ ಫೋಟೋ ತೆಗೆಯುವುದು ಉತ್ತಮವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಕ್ರಮವಹಿಸಬೇಕಾದದ್ದು ಶಾಸಕರು ಹಾಗೂ ಸಂಸದರ ಕರ್ತವ್ಯ. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಮಟ್ಟಿಗೆ ಹೇಳಬೇಕೆಂದರೆ ಕಳೆದ ಆರು ಅವಧಿಯಿಂದ ಇಲ್ಲಿ ಬಿಜೆಪಿ ಶಾಸಕರು ಅಧಿಕಾರಲ್ಲಿದ್ದಾರೆ, ಇವತ್ತು ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣವಾಗಲು ಶಾಸಕರ ಬೇಜವಾಬ್ದಾರಿ ಕೂಡ ಕಾರಣ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷದ ಜನಪ್ರತಿನಿದಿನಗಳ ನಿರ್ಲಕ್ಷದಿಂದ ಕುಳಿ ಬಿದ್ದಿರುವ ರಸ್ತೆಗಳಲ್ಲಿ ನಿಂತು ಸೆಲ್ಫಿ ತೆಗೆದುಕೊಂಡು ರಾಜ್ಯ ಸರ್ಕಾರವನ್ನು ಟೀಕಿಸುವುದು ಬಿಜೆಪಿ ಪಕ್ಷದವರ ರಾಜಕೀಯ ದಿವಾಳಿತನದ ಪರಮಾವದಿಯಾಗಿದೆ. ಬಿಜೆಪಿ ಪಕ್ಷದ ಜನಪ್ರತಿನಿದಿನಗಳಿಗೆ ಅಭಿವೃದ್ಧಿಯ ಚಿಂತನೆಯಿದ್ದರೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ರಾಜ್ಯಕ್ಕೆ ಬಾರದೆ ಇರುವ ನಮ್ಮ ತೆರಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಉಡುಪಿ ಜಿಲ್ಲೆ) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋಬಾಲ್ ಪಂದ್ಯಾಟವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಉಡುಪಿ ಜಿಲ್ಲೆ ಇದರ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಕ್ರೀಡಾ ಸ್ಪೂರ್ತಿಯಿಂದ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ  ಕ್ರೀಡೆಯ ಮೆರುಗನ್ನು ಹೆಚ್ಚಿಸುವಂತಾಗಬೇಕು ಎಂದು ಆಶಿಸಿದರು.     ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ, ಸೋಲೇ ಗೆಲುವಿನ ಮೆಟ್ಟಿಲು. ಸೋಲು ತಾತ್ಕಾಲಿಕ ಸೋಲು. ಮುಂದಿನ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ದೈಹಿಕ ಶಿಕ್ಷಣ ಸಂಘದ ಸಂಯೋಜಕರಾದ ರಾಮ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುಲ್ವಾಡಿ ಗ್ರಾಮದ ಅರೆಕಲ್ಲು ಹುಣ್ಣೆಮನೆ ಎಂಬಲ್ಲಿ ನಡೆಯುತ್ತಿದ್ದ ಅಂದರ್-ಬಹರ್ ಇಸ್ಪೀಟ್‌ ಜುಗಾರಿ ಅಡ್ಡೆಗೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಚಂದ್ರಕಲಾ ಪತ್ತಾರ ಹಾಗೂ ಪೋಲಿಸರು ದಾಳಿ ನಡೆಸಿದ್ದಾರೆ. ಆರೋಪಿಗಳಾದ ಸಮರ್ಥ ಕಾರ್ಕಳ (27), ಕಿಶನ್ ತಗ್ಗರ್ಸೆ (45), ಪ್ರದೀಪ್ ಮಂಗಳೂರು (42), ನಿಸಾರ್ ಶೇಖ್ ಗುಲ್ವಾಡಿ (42) ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆಟದಲ್ಲಿ ಭಾಗಿಯಾಗಿದ್ದ ಕೆಲವರು ತಪ್ಪಿಸಿಕೊಂಡಿದ್ದಾರೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 11,620 ರೂಪಾಯಿ, 4 ಮೊಬೈಲ್, 1 ಕಾರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ನಿವಾಸಿ ನಾರಾಯಣ ಶೆಟ್ಟಿ ಅವರ ಮೊಬೈಲ್ ಹ್ಯಾಕ್ ಮಾಡಿ ಅವರ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಿದ ಬಗ್ಗೆ ಇತ್ತೀಚಿಗೆ ಪ್ರಕರಣ ದಾಖಲಾಗಿದೆ. ಸೆ.17ರಂದು ಮೊಬೈಲ್‌ಗೆ ಬಂದ ಕರೆಯನ್ನು ಸ್ವೀಕರಿಸಿದಾಗ ರಾಹುಲ್ ಎಂಬಾತ ಹಿಂದಿಯಲ್ಲಿ ಮಾತನಾಡಿದ್ದು, ರಾಂಗ್ ನಂಬರ್ ಎಂದು ಕರೆ ಕಟ್ ಮಾಡಲಾಗಿತ್ತು. ಬಳಿಕ ಮೊಬೈಲ್‌ಗೆ ಓಟಿಪಿ ನಂಬ್ರವಿರುವ ಮೆಸೆಜ್ ಬಂದಿತ್ತು. ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಕೇವಲ 54ರೂ. ಇರುವುದಾಗಿ ಹಿಂದಿಯಲ್ಲಿ ಕಂಡುಬಂದಿದೆ. ಖಾತೆಯಲ್ಲಿದ್ದ 1.27ಲಕ್ಷ ಹಣದಲ್ಲಿ 54 ರೂ.ಬಿಟ್ಟು ಉಳಿದ ಹಣ ಬೇರೆಯ ವರ ಬ್ಯಾಂಕ್ ಖಾತೆಗೆ ವರ್ಗಾವಣೆಗೊಂಡಿತ್ತು. 1930 ನಂಬ್ರಕ್ಕೆ ಫೋನ್ ಮಾಡಿದ ಬಳಿಕ 27000 ರೂ. ಹಣ ಖಾತೆಗೆ ಮರು ಜಮೆಯಾಗಿದೆ. ಎಸ್ ಡಿಸಿಸಿ ಬ್ಯಾಂಕ್‌ನಲ್ಲಿರುವ ತಂದೆ ಅವರ ಖಾತೆಗೆ ನನ್ನ ಮೊಬೈಲ್ ಲಿಂಕ್ ಆಗಿದ್ದು ರಾಹುಲ್ ಹೆಸರಿನ ವ್ಯಕ್ತಿ 9008081056 ನಂಬ್ರದಿಂದ ಕರೆ ಮಾಡಿ ನನ್ನ ಮೊಬೈಲ್ ಹ್ಯಾಕ್ ಮಾಡಿ 1ಲಕ್ಷ ರೂ. ಹಣವನ್ನು ಮೋಸದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಅಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ (SCTPL)ನ ಹೊಸ ಘಟಕವನ್ನು ಉದ್ಘಾಟಿಸಲಾಯಿತು. ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, “ಇಂತಹ ಅಂತರರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು. ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಟೈ ((TiE),), ಸಿಐಐ ((CII)) ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು. SCTPL ನಿರ್ದೇಶಕ ಹರ್ಷಿತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ, ಉತ್ತಮ ಸಂವಹನ ಕೌಶಲ್ಯ ಹಾಗೂ ವಿಮಾ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹರು ಸಂದರ್ಶನ ನಡೆಯುವ ದಿನದಂದು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಜೀವವಿಮೆ ಅಭಿವೃದ್ಧಿ ಅಧಿಕಾರಿ, ಉಡುಪಿ ಅಂಚೆ ವಿಭಾಗ ಮೊ.ನಂ: 9482914676 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಶಯದೇವಿಸುತೆ ಮರವಂತೆ (ಡಾ. ಜ್ಯೋತಿ ಜೀವನ್‌ಸ್ವರೂಪ್) ಅವರ ಮಹಾ ಕಾದಂಬರಿಯು ವಿನೋದ್‌ಕುಮಾರ್ ಪಿ. ಅವರ ಪರಿಕಲ್ಪನೆಯಲ್ಲಿ ಸಿನಿಮಾ ಶೈಲಿಯ ಬರಹದೊಂದಿಗೆ ಪುನಃ ಸಿದ್ಧತೆಗೊಂಡಿದ್ದು, ಕೃತಿಯನ್ನು ಇತ್ತೀಚೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ತಮ್ಮ ಸ್ವಗೃಹದಲ್ಲಿ ಲೋಕಾರ್ಪಣೆಗೊಳಿಸಿದರು. ಚಲನಚಿತ್ರ ನಿರ್ಮಾಣದಲ್ಲಿ ಚಿತ್ರಕಥೆ ಹಾಗೂ ಸಂಭಾಷಣೆ ಸಮಯದಲ್ಲಿ ಸಹ ಬರಹಗಾರರಾಗಿ ಚಲನಚಿತ್ರ ನಿರ್ದೇಶಕ ಪನ್ನಗ ಸೋಮ್‌ಶೇಖರ್ ಹಾಗೂ ಕಲಾವಿದ ರಂಗಾಯಣ ಜಗನ್‌ ಅವರು ಡಾ. ಶಯದೇವಿಸುತೆ ಮರವಂತೆ ಅವರಿಗೆ ಬಲು ವಿಶೇಷವಾಗಿ ಸಹಕರಿಸಿದ್ದು, ಸಿನಿಮಾ ಕಾದಂಬರಿಯನ್ನು ಸಿನಿಮಾ ನಿರ್ಮಾಪಕ ಆದಿತ್ಯ ವಿನೋದ್‌ ಅವರ ಹೆಸರಿಗೆ ಕಾನೂನುಬದ್ಧವಾಗಿ ಹಸ್ತಾಂತರಿಸಿಕೊಡಲಾಯ್ತು. ಸದ್ಯದಲ್ಲಿಯೇ, ಅಪ್ರಮೇಯ ಫಿಲಂಸ್‌ ಅವರ ಪ್ರೊಡಕ್ಷನ್‌ನಲ್ಲಿ “ಕೆಂದಾವರೆ” – ಎಂಬ ಇದೇ ಮಹಾ ಕಾದಂಬರಿಯ ಹೆಸರಿನ ಶೀರ್ಷಿಕೆಯಡೀಯಲ್ಲಿ ಕಾದಂಬರಿ ಆಧಾರಿತ ಕನ್ನಡ ಭಾಷೆಯ ಹೊಸ ಚಲನಚಿತ್ರವೊಂದು ನಿರ್ಮಾಣವಾಗಿದ್ದು ಅತೀ ಶೀಘ್ರದಲ್ಲಿಯೇ ಅದನ್ನು ಬೆಳ್ಳಿತೆರೆ ಮೇಲೆ ತರಲು ಕೆಲಸಗಳು ಪ್ರಗತಿಯಲ್ಲಿವೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟು ಹಬ್ಬದ ಸಲುವಾಗಿ ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘ ತ್ರಾಸಿ ಇವರ ವತಿಯಿಂದ ನಾರಾಯಣ ವಿಶೇಷ ಮಕ್ಕಳ ಶಾಲೆ, ತಲ್ಲೂರು ಮತ್ತು ಚೈತನ್ಯ ಸ್ಪೆಶಲ್ ಸ್ಕೂಲ್, ವಡೇರ ಹೋಬಳಿ ಕುಂದಾಪುರ ಇವರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ ಮೊವಾಡಿ ತ್ರಾಸಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಘುರಾಮ ದೇವಾಡಿಗ ಸಹಿತ ಅಭಿಮಾನಿಗಳಾದ ಮಿಥುನ್ ಎಂ. ಡಿ. ಬಿಜೂರು, ರವಿ ಶೆಟ್ಟಿಗಾರ್, ತ್ರಾಸಿ., ಪಾಂಡುರಂಗ ದೇವಾಡಿಗ, ಗಣೇಶ ದೇವಾಡಿಗ, ಮಹೇಶ ದೇವಾಡಿಗ, ಕಿರಣ್ ದೇವಾಡಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ  ಇಂಡಕ್ಷನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗವರ್ನ್‌ಮೆಂಟ್ ಟೆಕ್ ಕೆಪಿಎಮ್‌ಜಿ ಇಂಡಿಯಾದ ಸಹಾಯಕ ನಿರ್ದೇಶಕರಾದ ಡಾ. ರತನ್ ಮುರಳೀದರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಒಬ್ಬ ವಿದ್ಯಾರ್ಥಿಯಾಗಿ, ನಿಮ್ಮ ಸುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ನಿಮ್ಮ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು, ಆ ನಿಟ್ಟಿನಲ್ಲ್ ವಿದ್ಯಾರ್ಥಿಗಳು ಪ್ರಯತ್ನ ಪಡುತ್ತಲೇ ಇರಬೇಕು ಎಂದು ಪ್ರೋತ್ಸಾಹಿಸಿದರು.” ವಿವಿಧ ವಿಭಾಗದ ಡೀನ್ ಅವರು ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ ನೀಡಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಬ್ರ್ಯಾಂಡ್ ಬಿಲ್ಡಿಂಗ್ ವಿಭಾಗದ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಈಗ ಕೇವಲ ವ್ಯಕ್ತಿಗಳಲ್ಲ, ನಮ್ಮ ಸಂಸ್ಥೆಯ ಪ್ರತಿನಿಧಿಗಳು ಎನ್ನುತ್ತ ತಾವು ಶಿಸ್ತನ್ನು ಕಾಪಾಡಿಕೊಳ್ಳುವುದು, ಬಲವಾದ ವೈಯಕ್ತಿಕ ಬ್ರ್ಯಾಂಡ್ ಅನ್ನು ಅಭಿವೃದ್ಧಿಪಡಿಸುವುದು ಮತ್ತು ನಾಯಕತ್ವ, ಆತ್ಮವಿಶ್ವಾಸ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯಂತಹ…

Read More